Homeಮುಖಪುಟಕೋವಿಡ್ ಸೋಂಕಿತ ಬಹುತೇಕ ರಾಜಕಾರಣಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ! ಏಕೆ?

ಕೋವಿಡ್ ಸೋಂಕಿತ ಬಹುತೇಕ ರಾಜಕಾರಣಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ! ಏಕೆ?

ಭಾರತಕ್ಕೆ ಕೊರೊನಾ ಕಾಲಿಟ್ಟು ಆರು ತಿಂಗಳಾಗಿದೆ. ಆದರೂ ಆಳುವ ಸರ್ಕಾರಗಳು ದಕ್ಷ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಕಟ್ಟುವಲ್ಲಿ ವಿಫಲರಾಗಿದ್ದಾರೆ ಅಥವಾ ಆ ಇಚ್ಛಾಶಕ್ತಿ ಅವರಲಿಲ್ಲ

- Advertisement -
- Advertisement -

ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಇದರ ರಭಸಕ್ಕೆ ತುತ್ತಾಗುತ್ತಿರುವವರಲ್ಲಿ ಸಿನಿಮಾ ತಾರೆಯರು ಸೇರಿಂದಂತೆ ರಾಜಕಾರಣಿಗಳು ಹೊರತಾಗಿಲ್ಲ. ಆದರೆ ನಾವು ಅತ್ಯುತ್ತಮ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಹೊಂದಿದ್ದೇವೆ ಎಂದು ಹೇಳಿಕೊಳ್ಳುವ ಆಳುವ ಸರ್ಕಾರಗಳ ಸಚಿವರು ಮಾತ್ರ ತಮಗೆ ವೈರಸ್ ತಗುಲಿದಾಗ ಸರ್ಕಾರಿ ಆಸ್ಪತ್ರೆ ಬಿಟ್ಟು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ! ಈ ಕುರಿತು ಸ್ಕ್ರೋಲ್‌.ಇನ್ ವಿಶೇಷ ವರದಿ ಮಾಡಿದೆ.

ನಿನ್ನೆ ಮಧ್ಯಾಹ್ನ ಗೃಹ ಸಚಿವ ಅಮಿತ್‌ ಷಾರವರು ತಮಗೆ ಸೋಂಕು ದೃಢಪಟ್ಟಿರುವುದಾಗಿ ತಿಳಿಸಿದ್ದರು. ತಮಗೆ ಯಾವುದೇ ರೋಗಲಕ್ಷಣಗಳು ಇಲ್ಲಿದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ಟ್ವೀಟ್‌ ಮಾಡಿ ಕೂಡಲೇ ಗುರ್ಗಾವ್‌ ಬಳಿಯ ಮೇದಂತ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಇದನ್ನೂ ಓದಿ: ಕೊರೊನಾ ಪಾಸಿಟಿವ್: ಆಸ್ಪತ್ರೆಗೆ ದಾಖಲಾದ ಗೃಹಸಚಿವ ಅಮಿತ್ ಷಾ 


ನಂತರ ಸಂಜೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಕೊರೊನಾ ಪಾಸಿಟಿವ್ ಆಗಿದ್ದಾರೆ. ಕೂಡಲೇ ಅವರು ಬೆಂಗಳೂರಿನ ಮಣಿಪಾಲ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದ್ದು, ಬಹಳ ಹತ್ತಿರದಿಂದ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಯಡಿಯೂರಪ್ಪನವರ ಮಗಳು ಸಹ ಕೋವಿಡ್ ಪಾಸಿಟಿವ್ ಆಗಿದ್ದಾರೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್ ಕೊರೊನಾ ಪಾಸಿಟಿವ್ ಆಗಿದ್ದು, ಅವರು ಭೋಪಾಲ್‌ ಚಿರಾಯು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಅಲ್ಲಿನ ರಾಜ್ಯ ಕಾಂಗ್ರೆಸ್ ಸರ್ಕಾರಿ ಆಸ್ಪತ್ರೆಯಲ್ಲಿ ಏಕೆ ಚಿಕಿತ್ಸೆ ಪಡಯುತ್ತಿಲ್ಲ ಎಂದು ಟೀಕಿಸಿದೆ.

ತಮಿಳುನಾಡಿನ ರಾಜ್ಯಪಾಲರಾದ ಭನ್ವರಿಲಾಲ್ ಪುರೋಹಿತ್ ಸಹ ಕೊರೊನಾ ಪಾಸಿಟಿವ್ ಆಗಿದ್ದಾರೆ. ಇವರಿಗೆ ಯಾವುದೇ ರೋಗಲಕ್ಷಣಗಳಿಲ್ಲದ ಕಾರಣ ಮನೆಯಲ್ಲಿಯೇ ಐಸೋಲೇಷನ್‌ನಲ್ಲಿರಲು ವೈದ್ಯರು ಸೂಚಿಸಿದ್ದಾರೆ. ಇವರಿಗೆ ಟೆಸ್ಟ್ ಸೇರಿದಂತೆ ಇತರ ಮಾರ್ಗದರ್ಶನಗಳನ್ನು ನೀಡುವ ಕೆಲಸವನ್ನು ಕಾವೇರಿ ಎಂಬ ಖಾಸಗಿ ಆಸ್ಪತ್ರೆ ನಿರ್ವಹಿಸುತ್ತಿದೆ.

ತಮಿಳುನಾಡಿನ ಇಂಧನ ಸಚಿವ ಪಿ ತಂಗಮಣಿ ಅಪೋಲೊ ಆಸ್ಪತ್ರೆಯಲ್ಲಿ, ಶಿಕ್ಷಣ ಸಚಿವ ಕೆ.ಪಿ ಅನ್ಬುಗಳಂ ಮತ್ತು ಸಹಕಾರ ಸಚಿವ ಸೆಲ್ಲೂರು ಕೆ.ರಾಜ್ ಮದ್ರಾಸ್ ಇನ್ಸ್ಟಿಟ್ಯೂಟ್ ಆಫ್ ಆರ್ಥೋಪೆಡಿಕ್ ಅಂಡ್ ಟ್ರಾಮಾಲಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಪಂಜಾಬ್‌ನ ಗ್ರಾಮೀಣಾಭಿವೃದ್ದಿ ಸಚಿವ ತ್ರಿಪಾಠ್ ಸಿಂಗ್ ಭಾಜ್ವಾ ಕೊರೊನಾ ಪಾಸಿಟಿವ್ ಆಗಿದ್ದು ಅವರು ಮೊಹಾಲಿಯ ಫೋರ್ಟಿಸ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೆಹಲಿಯ ಆರೋಗ್ಯ ಸಚಿವ ಸತ್ಯೆಂದರ್ ಜೈನ್ ಕೊರೊನಾ ಪಾಸಿಟಿವ್ ಆದಾಗ ಜೂನ್ 15 ರಂದು ಸರ್ಕಾರಿ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಜೂನ್ 16 ರಂದು ಅವರನ್ನು ದೆಹಲಿಯ ಮಾಕ್ಸ್‌ ಆಸ್ಪತ್ರೆಗೆ ವರ್ಗಾಹಿಸಲಾಯಿತು. ಅವರಿಗೆ ಪ್ಲಾಸ್ಲಾ ಚಿಕಿತ್ಸೆ ಅಗತ್ಯವಿದ್ದು, ಅದನ್ನು ಮಾಡಲು ಸರ್ಕಾರಿ ಆಸ್ಪತ್ರೆಗೆ ಅನುಮತಿ ಸಿಗದಿದ್ದ ಕಾರಣಕ್ಕೆ ಮಾತ್ರ ಅವರನ್ನು ವರ್ಗಾಹಿಸಲಾಗಿತ್ತು ಎಂದು ಹೇಳಲಾಗಿದೆ.

ಉತ್ತರ ಪ್ರದೇಶದ ವೃತ್ತಿಪರ ಶಿಕ್ಷಣ ಸಚಿವೆ ಕಮಲ್ ರಾಣಿ ವರುಣ್ ಕೊರೊನಾ ಪಾಸಿಟಿವ್ ಆದಾಗ ಲಕ್ನೋದ ಸಂಜಯ್ ಗಾಂಧಿ ಪೋಸ್ಟ್‌ ಗ್ರಾಜುಯೇಟ್ ಇನ್ಸ್ಟಿಟ್ಯೂಟ್‌ ಆಫ್‌ ಮೆಡಿಕಲ್ ಸೈನ್ಸನ್ಸ್‌ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅವರು ಆಗಸ್ಟ್ 2 ರಂದು ನಿಧನ ಹೊಂದಿದ್ದರು.

ಇವಿಷ್ಟು ಉದಾಹರಣೆಗಳಾದರೆ ಇನ್ನು ಹಲವಾರು ರಾಜಕಾರಣಿಗಳು, ಚಿತ್ರನಟರು ಕೊರೊನಾಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಆಳುವ ಸರ್ಕಾರಗಳಿಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ನಂಬಿಕೆ ಇಲ್ಲ ಎಂದರೆ ಏನರ್ಥ?

ಈ ಎಲ್ಲರೂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಾಗಿದ್ದರೆ ಒಂದಷ್ಟು ಮೂಲಸೌಕರ್ಯ ಹೆಚ್ಚುತ್ತಿತ್ತು ಮತ್ತು ವೈದ್ಯರು, ಸಿಬ್ಬಂದಿ ಇನ್ನಷ್ಟು ದಕ್ಷತೆಯಿಂದ ಕೆಲಸ ಮಾಡುತ್ತಿದ್ದರು ಎಂದು ಟ್ವಿಟ್ಟರ್ ಬಳಕೆದಾರರೊಬ್ಬರು ಒತ್ತಾಯಿಸಿದ್ದಾರೆ.

ಭಾರತಕ್ಕೆ ಕೊರೊನಾ ಕಾಲಿಟ್ಟು ಆರು ತಿಂಗಳಾಗಿದೆ. ಆದರೂ ಆಳುವ ಸರ್ಕಾರಗಳು ದಕ್ಷ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಕಟ್ಟುವಲ್ಲಿ ವಿಫಲರಾಗಿದ್ದಾರೆ ಅಥವಾ ಆ ಇಚ್ಛಾಶಕ್ತಿ ಅವರಲಿಲ್ಲ ಎಂಬುದು ತಿಳಿಯುತ್ತದೆ. ಎಲ್ಲಿಯವರೆಗೆ ಅತ್ಯುತ್ತಮ ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆ ಖಾತ್ರಿಯಾಗುವುದಿಲ್ಲವೋ ಅಲ್ಲಿಯವರೆಗೆ ದೇಶದ ಜನಸಾಮಾನ್ಯರು ನೆಮ್ಮದಿಯಿಂದ ಇರಲು ಸಾಧ್ಯವಾಗುವುದಿಲ್ಲ.


ಇದನ್ನೂ ಓದಿ: ಕೊರೊನಾದಿಂದ ಸಾವನಪ್ಪಿದ ಉತ್ತರಪ್ರದೇಶದ ಸಚಿವೆ ಕಮಲ್ ರಾಣಿ ವರುಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...