Homeಕರ್ನಾಟಕಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!

ಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!

ಗ್ರಾಮಾಂತರ ಪ್ರದೇಶಗಳಲ್ಲೂ ಹಳ್ಳಿಯ ಜನರು ಕುಡಿಯುವ ನೀರಿಗೆ ಶುಲ್ಕ ತೆರಬೇಕಾಗುತ್ತದೆ. ಪ್ರತಿ ಮನೆಯವರೂ 30 ರೂಪಾಯಿಯಿಂದ 50 ರೂಪಾಯಿ ಕಟ್ಟಬೇಕಾಗಿ ಬರಬಹುದು.

- Advertisement -
- Advertisement -

ಜಲ ಜೀವನ್ ಮಿಷನ್ ಯೋಜನೆ ಹೊಸದಾಗಿ ಜಾರಿಗೆ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವ ಯೋಜನೆ ಇದಾಗಿದ್ದು, ಜಲಸಂಪನ್ಮೂಲ ಹೆಚ್ಚಿರುವ ಪ್ರದೇಶಗಳಲ್ಲಿ ಈ ಯೋಜನೆ ಜಾರಿಗೊಳಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ಆಗಸ್ಟ್ 2ರಂದು ಎಲ್ಲಾ ಪತ್ರಿಕೆಗಳಲ್ಲೂ ಜಾಹೀರಾತು ನೀಡಲಾಗಿದೆ. ಮನೆ ಮನಗೆ ನೀರು ಹರಿಸುವುದು ಯೋಜನೆಯ ಉದ್ದೇಶವಾಗಿದೆ. ಮನೆಮನೆಗೂ ಗಂಗೆ, ವಸೂಲಿ ಹೆಂಗೆ ಎನ್ನುವ ಗೇಲಿಗೂ ಒಳಗಾಗಿದೆ.

ಮುಂದಿನ ಮೂರು ವರ್ಷಗಳಲ್ಲಿ ಇಡೀ ರಾಜ್ಯಾದ್ಯಂತ ಎಲ್ಲ ಮನೆಗಳಿಗೂ ಕುಡಿಯುವ/ಬಳಸುವ ನೀರು ಪೂರೈಕೆ ಉದ್ದೇಶ ಹೊಂದಿರುವ ಯೋಜನೆ ಇದಾಗಿದೆ. ಪ್ರತಿಯೊಬ್ಬರಿಗೂ ನೀರು ಕೊಡಬೇಕೆಂಬುದು ಒಳ್ಳೆಯದೇ ಆದರೂ ನೀರು ಎಲ್ಲಿಂದ ತರುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಜಲ ಜೀವನ್ ಯೋಜನೆಯಲ್ಲಿ ಇದೆಯೇ ಎಂಬ ಬಗ್ಗೆ ಮಾಹಿತಿ ಇಲ್ಲ.

ಸಧ್ಯಕ್ಕೆ ಕರ್ನಾಟಕ ರಾಜ್ಯದಲ್ಲಿ ಸ್ವಚ್ಛ ಗ್ರಾಮೋದಯಕ್ಕೆ ನಮ್ಮ ಸೂತ್ರ ಎಂಬ ಯೋಜನೆಯಡಿ ಜಲ ಜೀವನ್ ಮಿಷನ್ ಯೋಜನೆಯನ್ನೂ ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಪ್ರಕಾರ ಪ್ರತಿಯೊಬ್ಬರಿಗೂ ಪ್ರತಿನಿತ್ಯ 35 ಲೀಟರ್ ನೀರು ಪೂರೈಕೆಗೆ ಕ್ರಮ ವಹಿಸುವುದು, ಶುದ್ಧ ನೀರಿನ ಘಟಕಗಳ ಸ್ಥಾಪನೆ ಮಾಡುವುದು, ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ 77 ಸುವ್ಯವಸ್ಥಿತ ಪ್ರಯೋಗಾಲಯಗಳ ಸ್ಥಾಪನೆ ಮಾಡುವ ಉದ್ದೇಶ ಹೊಂದಿದೆ.

ಕೇಂದ್ರ ಸರ್ಕಾರ ಶೇಕಡ 75ರಷ್ಟು ಮತ್ತು ರಾಜ್ಯ ಸರ್ಕಾರಗಳು ಶೇ.25ರಷ್ಟು ಹಣವನ್ನು ಈ ಯೋಜನೆಗೆ ಭರಿಸುತ್ತವೆ. ರಾಜ್ಯ ಸರ್ಕಾರ ನೇರವಾಗಿಯಲ್ಲದಿದ್ದರೂ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳು ಈ ಯೋಜನೆಗೆ ಹಣ ಬಳಸುತ್ತವೆ. ಕೇಂದ್ರ ಸರ್ಕಾರ ಶೇ 75ರಷ್ಟು ಹಣವನ್ನು ಬಿಡುಗಡೆ ಮಾಡುತ್ತದೆ. ಈ ಹಣವನ್ನು ಬಳಸಿಕೊಂಡು ರಾಜ್ಯ ಸರ್ಕಾರ ಜನರಿಗೆ ಕುಡಿಯುವ ನೀರು ಮತ್ತು ಬಳಸುವ ನೀರು ಪೂರೈಕೆ ಮಾಡುತ್ತದೆ.

ಜಲ ಜೀವನ್ ಮಿಷನ್ ಯೋಜನೆಗೆ ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳನ್ನು ಆಯ್ದುಕೊಳ್ಳಲಾಗಿದೆ. ಕಾವೇರಿ ಮತ್ತು ಹೇಮಾವತಿ ನದಿ ನೀರು ಪೂರೈಕೆಯಾಗುವ ಈ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಈ ಐದು ಜಿಲ್ಲೆಗಳ ಮನೆಮನೆಗೂ ನಲ್ಲಿ ಸಂಪರ್ಕಗಳನ್ನು ಕಲ್ಪಿಸಿ ನೀರು ಪೂರೈಕೆ ಮಾಡುವ ಬಗ್ಗೆ ಪ್ಲಾನ್ ಸಿದ್ದ ಮಾಡಿಟ್ಟುಕೊಳ್ಳಲಾಗಿದೆ.

ಮನೆಮನೆಗೂ ನೀರು ಪೂರೈಸುವ ಜೊತೆಗೆ ಒಂದು ಮನೆಗೆ ತಿಂಗಳಿಗೆ 30 ರಿಂದ 50 ರೂಪಾಯಿ ನೀರಿನ ಶುಲ್ಕ ನಿಗದಿ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಮನೆಮನೆಗೂ ಗಂಗೆ ಹರಿದರೆ ಹಾಗೆಯೇ ಸರ್ಕಾರಕ್ಕೂ ಹಣದ ಹರಿವೂ ಹೆಚ್ಚಾಗಲಿದೆ. ಜನರು ಕೊರೊನ ಸಂದರ್ಭದಲ್ಲಿ ದುಡಿಮೆಯಿಲ್ಲದೆ, ಹಣವಿಲ್ಲದೆ ತತ್ತರಿಸಿಹೋಗಿರುವ ವೇಳೆಯಲ್ಲಿ ಪ್ರತಿಮನೆಗೂ ಪ್ರತಿ ತಿಂಗಳಿಗೆ 50 ರೂಪಾಯಿ ನೀರಿನ ಕರ ವಸೂಲಿಗೆ ಸರ್ಕಾರ ರಹಸ್ಯವಾಗಿ ತೀರ್ಮಾನ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ನಗರ ನಲ್ಲಿಗಳಿಗೆ ಮೀಟರ್ ಅಳವಡಿಸಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಈಗಾಗಲೇ ತುಮಕೂರು ನಗರದಲ್ಲಿ ನಲ್ಲಿಗಳಿಗೆ ಮೀಟರ್ ಅಳವಡಿಸಿ ನೀರು ಲೀಕೇಜ್ ಆಗುವುದನ್ನು ಪರೀಕ್ಷೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರಗಳಲ್ಲಿ ಮುಂದಿನ ದಿನಗಳಲ್ಲಿ ನಲ್ಲಿಗಳಿಗೆ ಮೀಟರ್ ಅಳವಡಿಸುವ ಕಾರ್ಯಕ್ಕೆ ಚಾಲನೆ ದೊರೆಯಲಿದೆ. ಗ್ರಾಮಾಂತರ ಪ್ರದೇಶಗಳಲ್ಲೂ ಹಳ್ಳಿಯ ಜನರು ಕುಡಿಯುವ ನೀರಿಗೆ ಶುಲ್ಕ ತೆರಬೇಕಾಗುತ್ತದೆ. ಪ್ರತಿ ಮನೆಯವರೂ 30 ರೂಪಾಯಿಯಿಂದ 50 ರೂಪಾಯಿ ಕಟ್ಟಬೇಕಾಗಿ ಬರಬಹುದು.

ತುಮಕೂರು ಜಿಲ್ಲೆಯ ಉದಾಹರಣೆಯನ್ನೇ ತೆಗೆದುಕೊಂಡರೆ ಜಿಲ್ಲೆಗೆ ಬರಬೇಕಾದ 24 ಟಿಎಂಸಿ ನೀರು ಪೂರ ಬರುತ್ತಿಲ್ಲ. ತುಮಕೂರಿಗೆ ತನ್ನ ಪಾಲಿನ ಕುಡಿಯುವ ನೀರು ಹರಿಸಲು ಹಲವು ರೀತಿಯ ಅಡ್ಡಿಗಳಿವೆ. ತುಮಕೂರು ನಗರಕ್ಕೆ ಕುಡಿಯುವ ನೀರು ಸಾಲುತ್ತಿಲ್ಲ. ಹೇಮಾವತಿ ನದಿ ನೀರು ತಮಿಳುನಾಡಿಗೆ ಹರಿಸಿದರೆ  ಕುಡಿಯುವ ನೀರಿಗೂ ತತ್ವಾರ ಉಂಟಾಗುತ್ತದೆ. ಹಾಗಾಗಿಯೇ ನಗರಕ್ಕೆ ಮೈದಾಳ ಕೆರೆಯಿಂದಲೂ ನೀರು ಪೂರೈಕೆ ಮಾಡಿಕೊಳ್ಳಲಾಗುತ್ತಿದೆ.

ತುಮಕೂರು ಜಿಲ್ಲೆಯ ಪರಿಸ್ಥಿತಿಯೇ ಹೀಗಾದರೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪರಿಸ್ಥಿತಿ ಏನು ಎಂಬ ಪ್ರಶ್ನೆಗೆ ಉತ್ತರ ಯಾರ ಬಳಿಯೂ ಇಲ್ಲ. ರಾಜ್ಯ ಸರ್ಕಾರ ಕುಡಿಯು ನೀರು ಒದಗಿಸುವ ನೆಪದಲ್ಲಿ ಬಡವರು, ಕೂಲಿಕಾರರಿಂದ ಹಣ ವಸೂಲಿ ಮಾಡುವುದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರನ್ನು ಉಚಿತವಾಗಿ ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ. ಹಾಗೆಂದು ಹಣ ವಸೂಲಿಗಾಗಿ ಯೋಜನೆ ರೂಪಿಸಿದರೆ ಅದು ಜನ ವಿರೋಧಿಯಾಗಲಿದೆ.

  • ಕೆ.ಈ ಸಿದ್ದಯ್ಯ, ತುಮಕೂರು.

ಇದನ್ನೂ ಓದಿ: ಯಡಿಯೂರಪ್ಪ ಅವರನ್ನು ಮುಟ್ಟದಿರಿ ಜೋಕೆ – ವೀರಶೈವ ಸ್ವಾಮೀಜಿಗಳ ಎಚ್ಚರಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...