Homeಕರ್ನಾಟಕಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!

ಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!

ಗ್ರಾಮಾಂತರ ಪ್ರದೇಶಗಳಲ್ಲೂ ಹಳ್ಳಿಯ ಜನರು ಕುಡಿಯುವ ನೀರಿಗೆ ಶುಲ್ಕ ತೆರಬೇಕಾಗುತ್ತದೆ. ಪ್ರತಿ ಮನೆಯವರೂ 30 ರೂಪಾಯಿಯಿಂದ 50 ರೂಪಾಯಿ ಕಟ್ಟಬೇಕಾಗಿ ಬರಬಹುದು.

- Advertisement -
- Advertisement -

ಜಲ ಜೀವನ್ ಮಿಷನ್ ಯೋಜನೆ ಹೊಸದಾಗಿ ಜಾರಿಗೆ ಬಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವ ಯೋಜನೆ ಇದಾಗಿದ್ದು, ಜಲಸಂಪನ್ಮೂಲ ಹೆಚ್ಚಿರುವ ಪ್ರದೇಶಗಳಲ್ಲಿ ಈ ಯೋಜನೆ ಜಾರಿಗೊಳಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ಆಗಸ್ಟ್ 2ರಂದು ಎಲ್ಲಾ ಪತ್ರಿಕೆಗಳಲ್ಲೂ ಜಾಹೀರಾತು ನೀಡಲಾಗಿದೆ. ಮನೆ ಮನಗೆ ನೀರು ಹರಿಸುವುದು ಯೋಜನೆಯ ಉದ್ದೇಶವಾಗಿದೆ. ಮನೆಮನೆಗೂ ಗಂಗೆ, ವಸೂಲಿ ಹೆಂಗೆ ಎನ್ನುವ ಗೇಲಿಗೂ ಒಳಗಾಗಿದೆ.

ಮುಂದಿನ ಮೂರು ವರ್ಷಗಳಲ್ಲಿ ಇಡೀ ರಾಜ್ಯಾದ್ಯಂತ ಎಲ್ಲ ಮನೆಗಳಿಗೂ ಕುಡಿಯುವ/ಬಳಸುವ ನೀರು ಪೂರೈಕೆ ಉದ್ದೇಶ ಹೊಂದಿರುವ ಯೋಜನೆ ಇದಾಗಿದೆ. ಪ್ರತಿಯೊಬ್ಬರಿಗೂ ನೀರು ಕೊಡಬೇಕೆಂಬುದು ಒಳ್ಳೆಯದೇ ಆದರೂ ನೀರು ಎಲ್ಲಿಂದ ತರುತ್ತಾರೆ ಎಂಬ ಪ್ರಶ್ನೆಗೆ ಉತ್ತರ ಜಲ ಜೀವನ್ ಯೋಜನೆಯಲ್ಲಿ ಇದೆಯೇ ಎಂಬ ಬಗ್ಗೆ ಮಾಹಿತಿ ಇಲ್ಲ.

ಸಧ್ಯಕ್ಕೆ ಕರ್ನಾಟಕ ರಾಜ್ಯದಲ್ಲಿ ಸ್ವಚ್ಛ ಗ್ರಾಮೋದಯಕ್ಕೆ ನಮ್ಮ ಸೂತ್ರ ಎಂಬ ಯೋಜನೆಯಡಿ ಜಲ ಜೀವನ್ ಮಿಷನ್ ಯೋಜನೆಯನ್ನೂ ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಪ್ರಕಾರ ಪ್ರತಿಯೊಬ್ಬರಿಗೂ ಪ್ರತಿನಿತ್ಯ 35 ಲೀಟರ್ ನೀರು ಪೂರೈಕೆಗೆ ಕ್ರಮ ವಹಿಸುವುದು, ಶುದ್ಧ ನೀರಿನ ಘಟಕಗಳ ಸ್ಥಾಪನೆ ಮಾಡುವುದು, ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಗಾಗಿ 77 ಸುವ್ಯವಸ್ಥಿತ ಪ್ರಯೋಗಾಲಯಗಳ ಸ್ಥಾಪನೆ ಮಾಡುವ ಉದ್ದೇಶ ಹೊಂದಿದೆ.

ಕೇಂದ್ರ ಸರ್ಕಾರ ಶೇಕಡ 75ರಷ್ಟು ಮತ್ತು ರಾಜ್ಯ ಸರ್ಕಾರಗಳು ಶೇ.25ರಷ್ಟು ಹಣವನ್ನು ಈ ಯೋಜನೆಗೆ ಭರಿಸುತ್ತವೆ. ರಾಜ್ಯ ಸರ್ಕಾರ ನೇರವಾಗಿಯಲ್ಲದಿದ್ದರೂ ಸ್ಥಳೀಯ ಸಂಸ್ಥೆಗಳಾದ ಗ್ರಾಮ ಪಂಚಾಯಿತಿ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿಗಳು ಈ ಯೋಜನೆಗೆ ಹಣ ಬಳಸುತ್ತವೆ. ಕೇಂದ್ರ ಸರ್ಕಾರ ಶೇ 75ರಷ್ಟು ಹಣವನ್ನು ಬಿಡುಗಡೆ ಮಾಡುತ್ತದೆ. ಈ ಹಣವನ್ನು ಬಳಸಿಕೊಂಡು ರಾಜ್ಯ ಸರ್ಕಾರ ಜನರಿಗೆ ಕುಡಿಯುವ ನೀರು ಮತ್ತು ಬಳಸುವ ನೀರು ಪೂರೈಕೆ ಮಾಡುತ್ತದೆ.

ಜಲ ಜೀವನ್ ಮಿಷನ್ ಯೋಜನೆಗೆ ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳನ್ನು ಆಯ್ದುಕೊಳ್ಳಲಾಗಿದೆ. ಕಾವೇರಿ ಮತ್ತು ಹೇಮಾವತಿ ನದಿ ನೀರು ಪೂರೈಕೆಯಾಗುವ ಈ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಈ ಐದು ಜಿಲ್ಲೆಗಳ ಮನೆಮನೆಗೂ ನಲ್ಲಿ ಸಂಪರ್ಕಗಳನ್ನು ಕಲ್ಪಿಸಿ ನೀರು ಪೂರೈಕೆ ಮಾಡುವ ಬಗ್ಗೆ ಪ್ಲಾನ್ ಸಿದ್ದ ಮಾಡಿಟ್ಟುಕೊಳ್ಳಲಾಗಿದೆ.

ಮನೆಮನೆಗೂ ನೀರು ಪೂರೈಸುವ ಜೊತೆಗೆ ಒಂದು ಮನೆಗೆ ತಿಂಗಳಿಗೆ 30 ರಿಂದ 50 ರೂಪಾಯಿ ನೀರಿನ ಶುಲ್ಕ ನಿಗದಿ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ. ಮನೆಮನೆಗೂ ಗಂಗೆ ಹರಿದರೆ ಹಾಗೆಯೇ ಸರ್ಕಾರಕ್ಕೂ ಹಣದ ಹರಿವೂ ಹೆಚ್ಚಾಗಲಿದೆ. ಜನರು ಕೊರೊನ ಸಂದರ್ಭದಲ್ಲಿ ದುಡಿಮೆಯಿಲ್ಲದೆ, ಹಣವಿಲ್ಲದೆ ತತ್ತರಿಸಿಹೋಗಿರುವ ವೇಳೆಯಲ್ಲಿ ಪ್ರತಿಮನೆಗೂ ಪ್ರತಿ ತಿಂಗಳಿಗೆ 50 ರೂಪಾಯಿ ನೀರಿನ ಕರ ವಸೂಲಿಗೆ ಸರ್ಕಾರ ರಹಸ್ಯವಾಗಿ ತೀರ್ಮಾನ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ನಗರ ನಲ್ಲಿಗಳಿಗೆ ಮೀಟರ್ ಅಳವಡಿಸಿ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಈಗಾಗಲೇ ತುಮಕೂರು ನಗರದಲ್ಲಿ ನಲ್ಲಿಗಳಿಗೆ ಮೀಟರ್ ಅಳವಡಿಸಿ ನೀರು ಲೀಕೇಜ್ ಆಗುವುದನ್ನು ಪರೀಕ್ಷೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರಗಳಲ್ಲಿ ಮುಂದಿನ ದಿನಗಳಲ್ಲಿ ನಲ್ಲಿಗಳಿಗೆ ಮೀಟರ್ ಅಳವಡಿಸುವ ಕಾರ್ಯಕ್ಕೆ ಚಾಲನೆ ದೊರೆಯಲಿದೆ. ಗ್ರಾಮಾಂತರ ಪ್ರದೇಶಗಳಲ್ಲೂ ಹಳ್ಳಿಯ ಜನರು ಕುಡಿಯುವ ನೀರಿಗೆ ಶುಲ್ಕ ತೆರಬೇಕಾಗುತ್ತದೆ. ಪ್ರತಿ ಮನೆಯವರೂ 30 ರೂಪಾಯಿಯಿಂದ 50 ರೂಪಾಯಿ ಕಟ್ಟಬೇಕಾಗಿ ಬರಬಹುದು.

ತುಮಕೂರು ಜಿಲ್ಲೆಯ ಉದಾಹರಣೆಯನ್ನೇ ತೆಗೆದುಕೊಂಡರೆ ಜಿಲ್ಲೆಗೆ ಬರಬೇಕಾದ 24 ಟಿಎಂಸಿ ನೀರು ಪೂರ ಬರುತ್ತಿಲ್ಲ. ತುಮಕೂರಿಗೆ ತನ್ನ ಪಾಲಿನ ಕುಡಿಯುವ ನೀರು ಹರಿಸಲು ಹಲವು ರೀತಿಯ ಅಡ್ಡಿಗಳಿವೆ. ತುಮಕೂರು ನಗರಕ್ಕೆ ಕುಡಿಯುವ ನೀರು ಸಾಲುತ್ತಿಲ್ಲ. ಹೇಮಾವತಿ ನದಿ ನೀರು ತಮಿಳುನಾಡಿಗೆ ಹರಿಸಿದರೆ  ಕುಡಿಯುವ ನೀರಿಗೂ ತತ್ವಾರ ಉಂಟಾಗುತ್ತದೆ. ಹಾಗಾಗಿಯೇ ನಗರಕ್ಕೆ ಮೈದಾಳ ಕೆರೆಯಿಂದಲೂ ನೀರು ಪೂರೈಕೆ ಮಾಡಿಕೊಳ್ಳಲಾಗುತ್ತಿದೆ.

ತುಮಕೂರು ಜಿಲ್ಲೆಯ ಪರಿಸ್ಥಿತಿಯೇ ಹೀಗಾದರೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪರಿಸ್ಥಿತಿ ಏನು ಎಂಬ ಪ್ರಶ್ನೆಗೆ ಉತ್ತರ ಯಾರ ಬಳಿಯೂ ಇಲ್ಲ. ರಾಜ್ಯ ಸರ್ಕಾರ ಕುಡಿಯು ನೀರು ಒದಗಿಸುವ ನೆಪದಲ್ಲಿ ಬಡವರು, ಕೂಲಿಕಾರರಿಂದ ಹಣ ವಸೂಲಿ ಮಾಡುವುದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದೆ. ಶಿಕ್ಷಣ, ಆರೋಗ್ಯ, ಕುಡಿಯುವ ನೀರನ್ನು ಉಚಿತವಾಗಿ ಪೂರೈಕೆ ಮಾಡುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ. ಹಾಗೆಂದು ಹಣ ವಸೂಲಿಗಾಗಿ ಯೋಜನೆ ರೂಪಿಸಿದರೆ ಅದು ಜನ ವಿರೋಧಿಯಾಗಲಿದೆ.

  • ಕೆ.ಈ ಸಿದ್ದಯ್ಯ, ತುಮಕೂರು.

ಇದನ್ನೂ ಓದಿ: ಯಡಿಯೂರಪ್ಪ ಅವರನ್ನು ಮುಟ್ಟದಿರಿ ಜೋಕೆ – ವೀರಶೈವ ಸ್ವಾಮೀಜಿಗಳ ಎಚ್ಚರಿಕೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...