Homeಕರೋನಾ ತಲ್ಲಣಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ.

- Advertisement -
- Advertisement -

ಕೊರೊನ ಸೋಂಕಿನಿಂದ ಜನರು ನರಳುತ್ತಿದ್ದು ಸಾವಿರಾರು ಮಂದಿ ಮೃತಪಟ್ಟರೂ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರ, ಹಣ ಲೂಟಿ ಮಾಡುತ್ತ ಹಬ್ಬವ ಆಚರಿಸುತ್ತಿದೆ. ಕೋಟ್ಯಂತರ ರೂಪಾಯಿ ಹಗರಣದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಮುಖಂಡ ರಿಜ್ವಾನ್ ಹರ್ಷದ್ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾ ಸಾವಿನ ಸಂಖ್ಯೆ ಮತ್ತು ಸೋಂಕಿನ ಸಂಖ್ಯೆ ಹೆಚ್ಚಾಗಿ ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ಎಲ್ಲವೂ ದೇವರೆ ನೋಡಿಕೊಳ್ಳಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನಮ್ಮ ಕೈಮೀರಿದೆ ಎಂದು ಕೈಚೆಲ್ಲಿದರು. ಇದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ದೂರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎರಡೂವರೆ ತಿಂಗಳು ಲಾಕ್ ಡೌನ್ ಘೋಷಿಸಿದರು. ಆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮುಂದಿನ ಕ್ರಮಗಳ ಕುರಿತು ಯಾವುದೇ ಸಿದ್ದತೆ ಮಾಡಿಕೊಳ್ಳಲಿಲ್ಲ. ಖಾಸಗಿ ನರ್ಸಿಂಗ್ ಹೋಂಗಳ ಜೊತೆ ಒಂದು ಸಭೆಯನ್ನು ಮಾಡಲಿಲ್ಲ. ಸೋಂಕು ಹೆಚ್ಚಾದಾಗ ಮೊನ್ನೆಯಷ್ಟೇ ಖಾಸಗಿ ವೈದ್ಯರ ಜೊತೆ ಮಾತುಕತೆ ಮಾಡುತ್ತಾರೆ. ಇದು ಸರ್ಕಾರದ ಬೇಜವಾಬ್ದಾರಿತನವನ್ನು ಎತ್ತಿತೋರಿಸುತ್ತದೆ ಎಂದು ಕಿಡಿಕಾರಿದರು.

ಕೋವಿಡ್-19 ಮತ್ತು ನಾನ್ ಕೋವಿಡ್‌ಗೆ ಮೃತರಾದವರ ಸಂಖ್ಯೆ ಏರುತ್ತಿದೆ. ಆಂಬುಲೆನ್ಸ್ ಸಿಗದೆ ಕೂಡ ಸೋಂಕಿತರು ಮೃತಪಟ್ಟ ನಿದರ್ಶನಗಳೂ ನಮ್ಮ ಮುಂದಿವೆ. ಪೂರ್ವ ಸಿದ್ದತೆ ಮಾಡಿಕೊಳ್ಳದ ಪರಿಣಾಮ ಇಂತಹ ಸಾವುಗಳು ಸಂಭವಿಸಲು ಕಾರಣ. ಸೋಂಕಿತರು ಆಸ್ಪತ್ರೆಗೆ ದಾಖಲಿಸಲು ಖಾಸಗಿಯವರ ಬಳಿ ಬೆಡ್‌ಗಳನ್ನು ಸರ್ಕಾರ ನಿಗದಿಪಡಿಸಲಿಲ್ಲ. ಯಾರು ಹೆಚ್ಚು ಕಮೀಷನ್ ಕೊಡುತ್ತಾರೋ ಎಂಬುದಕ್ಕೆ ಸರ್ಕಾರ ಕಾದುಕುಳಿತು ಕಮಿಷನ್ ಲೂಟಿ ಮಾಡಿತು ಎಂದಿದ್ದಾರೆ.

ಪಿಪಿಇ ಕಿಟ್ ಗಳ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ. ಒಂದು ಪಿಪಿಇ ಕಿಟ್ ಬೆಲೆ ಛತ್ತೀಸ್‌ಘಡದಲ್ಲಿ 550 ರೂ. ಮಹಾರಾಷ್ಟ್ರದಲ್ಲಿ 520, ಗುಜರಾತ್ ನಲ್ಲಿ 480 ರೂ ಇದ್ದರೆ ಕರ್ನಾಟಕ ಸರ್ಕಾರ 1180 ರೂಪಾಯಿಗೆ ಖರೀದಿ ಮಾಡಿದೆ. ಇದ್ಯಾಕೆ ಇಷ್ಟೊಂದು ಬೆಲೆ ನೀಡಬೇಕಾಗಿ ಬಂತು? ನಾವು ಬೇರೆ ದೇಶದಲ್ಲಿದ್ದೇವೆಯೇ? ದುಪ್ಪಟ್ಟು ಬೆಲೆ ನೀಡುವಂತಹ ಪರಿಸ್ಥಿತಿ ಏಕೆ ಬಂದು ಎಂದು ಪ್ರಶ್ನಿಸಿದ್ದಾರೆ.

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ. ಅಂದರೆ ಹತ್ತು ಪಟ್ಟು ಹೆಚ್ಚು ಬೆಲೆ ನೀಡಿದ್ದು ಇದರಲ್ಲಿ ಭಾರೀ ಪ್ರಮಾಣದ ಅವ್ಯಹಾರ ನಡೆದಿದೆ ಎಂದು ದೂರಿದ್ದಾರೆ.

ನಾವು ದಾಖಲೆಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದೇವೆ. ಆದರೂ ಬಿಜೆಪಿ ಸರ್ಕಾರ ಚಕಾರ ಎತ್ತುತ್ತಿಲ್ಲ. ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ಕೋವಿಡ್-19 ನಿಯಂತ್ರಣಕ್ಕೆ ಏನು ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬ ಬಗ್ಗೆ ಮಾಹಿತಿ ನೀಡಿ. ಜೆ.ಸಿ.ಮಾಧುಸ್ವಾಮಿ ಅವರು ಎಷ್ಟು ಮೀಟಿಂಗ್ ಮಾಡಿದ್ದಾರೆ? ಎಷ್ಟಯ ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದಾರೆ ಎಂಬುದನ್ನು ಮಾಧ್ಯಮಗಳ ಮುಂದೆ ಹೇಳಲಿ ಎಂದು ಸವಾಲು ಹಾಕಿದರು.

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಟಿ. ಬಿ. ಜಯಚಂದ್ರ, ಮುಖಂಡರಾದ ಶಿವಶಂಕರ ರೆಡ್ಡಿ, ಮುರಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಮಾಜಿ ಅಧ್ಯಕ್ಷ ಷಫಿ ಅಹಮದ್, ಮಾಜಿ ಶಾಸಕ ರಫೀಕ್ ಅಹಮದ್ ಮೊದಲಾದವರು ಉಪಸ್ಥಿತರಿದ್ದರು.


ಓದಿ: ಕೊರೊನಾ ಪಾಸಿಟಿವ್: ಆಸ್ಪತ್ರೆಗೆ ದಾಖಲಾದ ಗೃಹಸಚಿವ ಅಮಿತ್ ಷಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...