Homeಕರೋನಾ ತಲ್ಲಣಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ.

- Advertisement -
- Advertisement -

ಕೊರೊನ ಸೋಂಕಿನಿಂದ ಜನರು ನರಳುತ್ತಿದ್ದು ಸಾವಿರಾರು ಮಂದಿ ಮೃತಪಟ್ಟರೂ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರ, ಹಣ ಲೂಟಿ ಮಾಡುತ್ತ ಹಬ್ಬವ ಆಚರಿಸುತ್ತಿದೆ. ಕೋಟ್ಯಂತರ ರೂಪಾಯಿ ಹಗರಣದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಮುಖಂಡ ರಿಜ್ವಾನ್ ಹರ್ಷದ್ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾ ಸಾವಿನ ಸಂಖ್ಯೆ ಮತ್ತು ಸೋಂಕಿನ ಸಂಖ್ಯೆ ಹೆಚ್ಚಾಗಿ ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ಎಲ್ಲವೂ ದೇವರೆ ನೋಡಿಕೊಳ್ಳಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನಮ್ಮ ಕೈಮೀರಿದೆ ಎಂದು ಕೈಚೆಲ್ಲಿದರು. ಇದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ದೂರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎರಡೂವರೆ ತಿಂಗಳು ಲಾಕ್ ಡೌನ್ ಘೋಷಿಸಿದರು. ಆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮುಂದಿನ ಕ್ರಮಗಳ ಕುರಿತು ಯಾವುದೇ ಸಿದ್ದತೆ ಮಾಡಿಕೊಳ್ಳಲಿಲ್ಲ. ಖಾಸಗಿ ನರ್ಸಿಂಗ್ ಹೋಂಗಳ ಜೊತೆ ಒಂದು ಸಭೆಯನ್ನು ಮಾಡಲಿಲ್ಲ. ಸೋಂಕು ಹೆಚ್ಚಾದಾಗ ಮೊನ್ನೆಯಷ್ಟೇ ಖಾಸಗಿ ವೈದ್ಯರ ಜೊತೆ ಮಾತುಕತೆ ಮಾಡುತ್ತಾರೆ. ಇದು ಸರ್ಕಾರದ ಬೇಜವಾಬ್ದಾರಿತನವನ್ನು ಎತ್ತಿತೋರಿಸುತ್ತದೆ ಎಂದು ಕಿಡಿಕಾರಿದರು.

ಕೋವಿಡ್-19 ಮತ್ತು ನಾನ್ ಕೋವಿಡ್‌ಗೆ ಮೃತರಾದವರ ಸಂಖ್ಯೆ ಏರುತ್ತಿದೆ. ಆಂಬುಲೆನ್ಸ್ ಸಿಗದೆ ಕೂಡ ಸೋಂಕಿತರು ಮೃತಪಟ್ಟ ನಿದರ್ಶನಗಳೂ ನಮ್ಮ ಮುಂದಿವೆ. ಪೂರ್ವ ಸಿದ್ದತೆ ಮಾಡಿಕೊಳ್ಳದ ಪರಿಣಾಮ ಇಂತಹ ಸಾವುಗಳು ಸಂಭವಿಸಲು ಕಾರಣ. ಸೋಂಕಿತರು ಆಸ್ಪತ್ರೆಗೆ ದಾಖಲಿಸಲು ಖಾಸಗಿಯವರ ಬಳಿ ಬೆಡ್‌ಗಳನ್ನು ಸರ್ಕಾರ ನಿಗದಿಪಡಿಸಲಿಲ್ಲ. ಯಾರು ಹೆಚ್ಚು ಕಮೀಷನ್ ಕೊಡುತ್ತಾರೋ ಎಂಬುದಕ್ಕೆ ಸರ್ಕಾರ ಕಾದುಕುಳಿತು ಕಮಿಷನ್ ಲೂಟಿ ಮಾಡಿತು ಎಂದಿದ್ದಾರೆ.

ಪಿಪಿಇ ಕಿಟ್ ಗಳ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ. ಒಂದು ಪಿಪಿಇ ಕಿಟ್ ಬೆಲೆ ಛತ್ತೀಸ್‌ಘಡದಲ್ಲಿ 550 ರೂ. ಮಹಾರಾಷ್ಟ್ರದಲ್ಲಿ 520, ಗುಜರಾತ್ ನಲ್ಲಿ 480 ರೂ ಇದ್ದರೆ ಕರ್ನಾಟಕ ಸರ್ಕಾರ 1180 ರೂಪಾಯಿಗೆ ಖರೀದಿ ಮಾಡಿದೆ. ಇದ್ಯಾಕೆ ಇಷ್ಟೊಂದು ಬೆಲೆ ನೀಡಬೇಕಾಗಿ ಬಂತು? ನಾವು ಬೇರೆ ದೇಶದಲ್ಲಿದ್ದೇವೆಯೇ? ದುಪ್ಪಟ್ಟು ಬೆಲೆ ನೀಡುವಂತಹ ಪರಿಸ್ಥಿತಿ ಏಕೆ ಬಂದು ಎಂದು ಪ್ರಶ್ನಿಸಿದ್ದಾರೆ.

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ. ಅಂದರೆ ಹತ್ತು ಪಟ್ಟು ಹೆಚ್ಚು ಬೆಲೆ ನೀಡಿದ್ದು ಇದರಲ್ಲಿ ಭಾರೀ ಪ್ರಮಾಣದ ಅವ್ಯಹಾರ ನಡೆದಿದೆ ಎಂದು ದೂರಿದ್ದಾರೆ.

ನಾವು ದಾಖಲೆಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದೇವೆ. ಆದರೂ ಬಿಜೆಪಿ ಸರ್ಕಾರ ಚಕಾರ ಎತ್ತುತ್ತಿಲ್ಲ. ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ಕೋವಿಡ್-19 ನಿಯಂತ್ರಣಕ್ಕೆ ಏನು ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬ ಬಗ್ಗೆ ಮಾಹಿತಿ ನೀಡಿ. ಜೆ.ಸಿ.ಮಾಧುಸ್ವಾಮಿ ಅವರು ಎಷ್ಟು ಮೀಟಿಂಗ್ ಮಾಡಿದ್ದಾರೆ? ಎಷ್ಟಯ ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದಾರೆ ಎಂಬುದನ್ನು ಮಾಧ್ಯಮಗಳ ಮುಂದೆ ಹೇಳಲಿ ಎಂದು ಸವಾಲು ಹಾಕಿದರು.

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಟಿ. ಬಿ. ಜಯಚಂದ್ರ, ಮುಖಂಡರಾದ ಶಿವಶಂಕರ ರೆಡ್ಡಿ, ಮುರಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಮಾಜಿ ಅಧ್ಯಕ್ಷ ಷಫಿ ಅಹಮದ್, ಮಾಜಿ ಶಾಸಕ ರಫೀಕ್ ಅಹಮದ್ ಮೊದಲಾದವರು ಉಪಸ್ಥಿತರಿದ್ದರು.


ಓದಿ: ಕೊರೊನಾ ಪಾಸಿಟಿವ್: ಆಸ್ಪತ್ರೆಗೆ ದಾಖಲಾದ ಗೃಹಸಚಿವ ಅಮಿತ್ ಷಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...