Homeಕರೋನಾ ತಲ್ಲಣಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ.

- Advertisement -
- Advertisement -

ಕೊರೊನ ಸೋಂಕಿನಿಂದ ಜನರು ನರಳುತ್ತಿದ್ದು ಸಾವಿರಾರು ಮಂದಿ ಮೃತಪಟ್ಟರೂ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರ, ಹಣ ಲೂಟಿ ಮಾಡುತ್ತ ಹಬ್ಬವ ಆಚರಿಸುತ್ತಿದೆ. ಕೋಟ್ಯಂತರ ರೂಪಾಯಿ ಹಗರಣದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಮುಖಂಡ ರಿಜ್ವಾನ್ ಹರ್ಷದ್ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾ ಸಾವಿನ ಸಂಖ್ಯೆ ಮತ್ತು ಸೋಂಕಿನ ಸಂಖ್ಯೆ ಹೆಚ್ಚಾಗಿ ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ಎಲ್ಲವೂ ದೇವರೆ ನೋಡಿಕೊಳ್ಳಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನಮ್ಮ ಕೈಮೀರಿದೆ ಎಂದು ಕೈಚೆಲ್ಲಿದರು. ಇದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ದೂರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎರಡೂವರೆ ತಿಂಗಳು ಲಾಕ್ ಡೌನ್ ಘೋಷಿಸಿದರು. ಆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮುಂದಿನ ಕ್ರಮಗಳ ಕುರಿತು ಯಾವುದೇ ಸಿದ್ದತೆ ಮಾಡಿಕೊಳ್ಳಲಿಲ್ಲ. ಖಾಸಗಿ ನರ್ಸಿಂಗ್ ಹೋಂಗಳ ಜೊತೆ ಒಂದು ಸಭೆಯನ್ನು ಮಾಡಲಿಲ್ಲ. ಸೋಂಕು ಹೆಚ್ಚಾದಾಗ ಮೊನ್ನೆಯಷ್ಟೇ ಖಾಸಗಿ ವೈದ್ಯರ ಜೊತೆ ಮಾತುಕತೆ ಮಾಡುತ್ತಾರೆ. ಇದು ಸರ್ಕಾರದ ಬೇಜವಾಬ್ದಾರಿತನವನ್ನು ಎತ್ತಿತೋರಿಸುತ್ತದೆ ಎಂದು ಕಿಡಿಕಾರಿದರು.

ಕೋವಿಡ್-19 ಮತ್ತು ನಾನ್ ಕೋವಿಡ್‌ಗೆ ಮೃತರಾದವರ ಸಂಖ್ಯೆ ಏರುತ್ತಿದೆ. ಆಂಬುಲೆನ್ಸ್ ಸಿಗದೆ ಕೂಡ ಸೋಂಕಿತರು ಮೃತಪಟ್ಟ ನಿದರ್ಶನಗಳೂ ನಮ್ಮ ಮುಂದಿವೆ. ಪೂರ್ವ ಸಿದ್ದತೆ ಮಾಡಿಕೊಳ್ಳದ ಪರಿಣಾಮ ಇಂತಹ ಸಾವುಗಳು ಸಂಭವಿಸಲು ಕಾರಣ. ಸೋಂಕಿತರು ಆಸ್ಪತ್ರೆಗೆ ದಾಖಲಿಸಲು ಖಾಸಗಿಯವರ ಬಳಿ ಬೆಡ್‌ಗಳನ್ನು ಸರ್ಕಾರ ನಿಗದಿಪಡಿಸಲಿಲ್ಲ. ಯಾರು ಹೆಚ್ಚು ಕಮೀಷನ್ ಕೊಡುತ್ತಾರೋ ಎಂಬುದಕ್ಕೆ ಸರ್ಕಾರ ಕಾದುಕುಳಿತು ಕಮಿಷನ್ ಲೂಟಿ ಮಾಡಿತು ಎಂದಿದ್ದಾರೆ.

ಪಿಪಿಇ ಕಿಟ್ ಗಳ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ. ಒಂದು ಪಿಪಿಇ ಕಿಟ್ ಬೆಲೆ ಛತ್ತೀಸ್‌ಘಡದಲ್ಲಿ 550 ರೂ. ಮಹಾರಾಷ್ಟ್ರದಲ್ಲಿ 520, ಗುಜರಾತ್ ನಲ್ಲಿ 480 ರೂ ಇದ್ದರೆ ಕರ್ನಾಟಕ ಸರ್ಕಾರ 1180 ರೂಪಾಯಿಗೆ ಖರೀದಿ ಮಾಡಿದೆ. ಇದ್ಯಾಕೆ ಇಷ್ಟೊಂದು ಬೆಲೆ ನೀಡಬೇಕಾಗಿ ಬಂತು? ನಾವು ಬೇರೆ ದೇಶದಲ್ಲಿದ್ದೇವೆಯೇ? ದುಪ್ಪಟ್ಟು ಬೆಲೆ ನೀಡುವಂತಹ ಪರಿಸ್ಥಿತಿ ಏಕೆ ಬಂದು ಎಂದು ಪ್ರಶ್ನಿಸಿದ್ದಾರೆ.

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ. ಅಂದರೆ ಹತ್ತು ಪಟ್ಟು ಹೆಚ್ಚು ಬೆಲೆ ನೀಡಿದ್ದು ಇದರಲ್ಲಿ ಭಾರೀ ಪ್ರಮಾಣದ ಅವ್ಯಹಾರ ನಡೆದಿದೆ ಎಂದು ದೂರಿದ್ದಾರೆ.

ನಾವು ದಾಖಲೆಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದೇವೆ. ಆದರೂ ಬಿಜೆಪಿ ಸರ್ಕಾರ ಚಕಾರ ಎತ್ತುತ್ತಿಲ್ಲ. ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ಕೋವಿಡ್-19 ನಿಯಂತ್ರಣಕ್ಕೆ ಏನು ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬ ಬಗ್ಗೆ ಮಾಹಿತಿ ನೀಡಿ. ಜೆ.ಸಿ.ಮಾಧುಸ್ವಾಮಿ ಅವರು ಎಷ್ಟು ಮೀಟಿಂಗ್ ಮಾಡಿದ್ದಾರೆ? ಎಷ್ಟಯ ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದಾರೆ ಎಂಬುದನ್ನು ಮಾಧ್ಯಮಗಳ ಮುಂದೆ ಹೇಳಲಿ ಎಂದು ಸವಾಲು ಹಾಕಿದರು.

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಟಿ. ಬಿ. ಜಯಚಂದ್ರ, ಮುಖಂಡರಾದ ಶಿವಶಂಕರ ರೆಡ್ಡಿ, ಮುರಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಮಾಜಿ ಅಧ್ಯಕ್ಷ ಷಫಿ ಅಹಮದ್, ಮಾಜಿ ಶಾಸಕ ರಫೀಕ್ ಅಹಮದ್ ಮೊದಲಾದವರು ಉಪಸ್ಥಿತರಿದ್ದರು.


ಓದಿ: ಕೊರೊನಾ ಪಾಸಿಟಿವ್: ಆಸ್ಪತ್ರೆಗೆ ದಾಖಲಾದ ಗೃಹಸಚಿವ ಅಮಿತ್ ಷಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...