Homeಕರೋನಾ ತಲ್ಲಣಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ.

- Advertisement -
- Advertisement -

ಕೊರೊನ ಸೋಂಕಿನಿಂದ ಜನರು ನರಳುತ್ತಿದ್ದು ಸಾವಿರಾರು ಮಂದಿ ಮೃತಪಟ್ಟರೂ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರ, ಹಣ ಲೂಟಿ ಮಾಡುತ್ತ ಹಬ್ಬವ ಆಚರಿಸುತ್ತಿದೆ. ಕೋಟ್ಯಂತರ ರೂಪಾಯಿ ಹಗರಣದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಮುಖಂಡ ರಿಜ್ವಾನ್ ಹರ್ಷದ್ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾ ಸಾವಿನ ಸಂಖ್ಯೆ ಮತ್ತು ಸೋಂಕಿನ ಸಂಖ್ಯೆ ಹೆಚ್ಚಾಗಿ ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ಎಲ್ಲವೂ ದೇವರೆ ನೋಡಿಕೊಳ್ಳಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನಮ್ಮ ಕೈಮೀರಿದೆ ಎಂದು ಕೈಚೆಲ್ಲಿದರು. ಇದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ದೂರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎರಡೂವರೆ ತಿಂಗಳು ಲಾಕ್ ಡೌನ್ ಘೋಷಿಸಿದರು. ಆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮುಂದಿನ ಕ್ರಮಗಳ ಕುರಿತು ಯಾವುದೇ ಸಿದ್ದತೆ ಮಾಡಿಕೊಳ್ಳಲಿಲ್ಲ. ಖಾಸಗಿ ನರ್ಸಿಂಗ್ ಹೋಂಗಳ ಜೊತೆ ಒಂದು ಸಭೆಯನ್ನು ಮಾಡಲಿಲ್ಲ. ಸೋಂಕು ಹೆಚ್ಚಾದಾಗ ಮೊನ್ನೆಯಷ್ಟೇ ಖಾಸಗಿ ವೈದ್ಯರ ಜೊತೆ ಮಾತುಕತೆ ಮಾಡುತ್ತಾರೆ. ಇದು ಸರ್ಕಾರದ ಬೇಜವಾಬ್ದಾರಿತನವನ್ನು ಎತ್ತಿತೋರಿಸುತ್ತದೆ ಎಂದು ಕಿಡಿಕಾರಿದರು.

ಕೋವಿಡ್-19 ಮತ್ತು ನಾನ್ ಕೋವಿಡ್‌ಗೆ ಮೃತರಾದವರ ಸಂಖ್ಯೆ ಏರುತ್ತಿದೆ. ಆಂಬುಲೆನ್ಸ್ ಸಿಗದೆ ಕೂಡ ಸೋಂಕಿತರು ಮೃತಪಟ್ಟ ನಿದರ್ಶನಗಳೂ ನಮ್ಮ ಮುಂದಿವೆ. ಪೂರ್ವ ಸಿದ್ದತೆ ಮಾಡಿಕೊಳ್ಳದ ಪರಿಣಾಮ ಇಂತಹ ಸಾವುಗಳು ಸಂಭವಿಸಲು ಕಾರಣ. ಸೋಂಕಿತರು ಆಸ್ಪತ್ರೆಗೆ ದಾಖಲಿಸಲು ಖಾಸಗಿಯವರ ಬಳಿ ಬೆಡ್‌ಗಳನ್ನು ಸರ್ಕಾರ ನಿಗದಿಪಡಿಸಲಿಲ್ಲ. ಯಾರು ಹೆಚ್ಚು ಕಮೀಷನ್ ಕೊಡುತ್ತಾರೋ ಎಂಬುದಕ್ಕೆ ಸರ್ಕಾರ ಕಾದುಕುಳಿತು ಕಮಿಷನ್ ಲೂಟಿ ಮಾಡಿತು ಎಂದಿದ್ದಾರೆ.

ಪಿಪಿಇ ಕಿಟ್ ಗಳ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ. ಒಂದು ಪಿಪಿಇ ಕಿಟ್ ಬೆಲೆ ಛತ್ತೀಸ್‌ಘಡದಲ್ಲಿ 550 ರೂ. ಮಹಾರಾಷ್ಟ್ರದಲ್ಲಿ 520, ಗುಜರಾತ್ ನಲ್ಲಿ 480 ರೂ ಇದ್ದರೆ ಕರ್ನಾಟಕ ಸರ್ಕಾರ 1180 ರೂಪಾಯಿಗೆ ಖರೀದಿ ಮಾಡಿದೆ. ಇದ್ಯಾಕೆ ಇಷ್ಟೊಂದು ಬೆಲೆ ನೀಡಬೇಕಾಗಿ ಬಂತು? ನಾವು ಬೇರೆ ದೇಶದಲ್ಲಿದ್ದೇವೆಯೇ? ದುಪ್ಪಟ್ಟು ಬೆಲೆ ನೀಡುವಂತಹ ಪರಿಸ್ಥಿತಿ ಏಕೆ ಬಂದು ಎಂದು ಪ್ರಶ್ನಿಸಿದ್ದಾರೆ.

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ. ಅಂದರೆ ಹತ್ತು ಪಟ್ಟು ಹೆಚ್ಚು ಬೆಲೆ ನೀಡಿದ್ದು ಇದರಲ್ಲಿ ಭಾರೀ ಪ್ರಮಾಣದ ಅವ್ಯಹಾರ ನಡೆದಿದೆ ಎಂದು ದೂರಿದ್ದಾರೆ.

ನಾವು ದಾಖಲೆಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದೇವೆ. ಆದರೂ ಬಿಜೆಪಿ ಸರ್ಕಾರ ಚಕಾರ ಎತ್ತುತ್ತಿಲ್ಲ. ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ಕೋವಿಡ್-19 ನಿಯಂತ್ರಣಕ್ಕೆ ಏನು ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬ ಬಗ್ಗೆ ಮಾಹಿತಿ ನೀಡಿ. ಜೆ.ಸಿ.ಮಾಧುಸ್ವಾಮಿ ಅವರು ಎಷ್ಟು ಮೀಟಿಂಗ್ ಮಾಡಿದ್ದಾರೆ? ಎಷ್ಟಯ ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದಾರೆ ಎಂಬುದನ್ನು ಮಾಧ್ಯಮಗಳ ಮುಂದೆ ಹೇಳಲಿ ಎಂದು ಸವಾಲು ಹಾಕಿದರು.

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಟಿ. ಬಿ. ಜಯಚಂದ್ರ, ಮುಖಂಡರಾದ ಶಿವಶಂಕರ ರೆಡ್ಡಿ, ಮುರಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಮಾಜಿ ಅಧ್ಯಕ್ಷ ಷಫಿ ಅಹಮದ್, ಮಾಜಿ ಶಾಸಕ ರಫೀಕ್ ಅಹಮದ್ ಮೊದಲಾದವರು ಉಪಸ್ಥಿತರಿದ್ದರು.


ಓದಿ: ಕೊರೊನಾ ಪಾಸಿಟಿವ್: ಆಸ್ಪತ್ರೆಗೆ ದಾಖಲಾದ ಗೃಹಸಚಿವ ಅಮಿತ್ ಷಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...