Homeಕರೋನಾ ತಲ್ಲಣಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ಸರ್ಕಾರ ಹಣ ಲೂಟಿ ಮಾಡುತ್ತ ಹಬ್ಬ ಆಚರಿಸುತ್ತಿದೆ: ರಿಜ್ವಾನ್ ಹರ್ಷದ್ ಆರೋಪ

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ.

- Advertisement -
- Advertisement -

ಕೊರೊನ ಸೋಂಕಿನಿಂದ ಜನರು ನರಳುತ್ತಿದ್ದು ಸಾವಿರಾರು ಮಂದಿ ಮೃತಪಟ್ಟರೂ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರ, ಹಣ ಲೂಟಿ ಮಾಡುತ್ತ ಹಬ್ಬವ ಆಚರಿಸುತ್ತಿದೆ. ಕೋಟ್ಯಂತರ ರೂಪಾಯಿ ಹಗರಣದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಮುಖಂಡ ರಿಜ್ವಾನ್ ಹರ್ಷದ್ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾ ಸಾವಿನ ಸಂಖ್ಯೆ ಮತ್ತು ಸೋಂಕಿನ ಸಂಖ್ಯೆ ಹೆಚ್ಚಾಗಿ ಪರಿಸ್ಥಿತಿ ಕೈಮೀರುತ್ತಿದ್ದಂತೆಯೇ ಎಲ್ಲವೂ ದೇವರೆ ನೋಡಿಕೊಳ್ಳಬೇಕು ಎಂದು ಅಸಹಾಯಕತೆ ವ್ಯಕ್ತಪಡಿಸಿದರು. ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನಮ್ಮ ಕೈಮೀರಿದೆ ಎಂದು ಕೈಚೆಲ್ಲಿದರು. ಇದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ದೂರಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಎರಡೂವರೆ ತಿಂಗಳು ಲಾಕ್ ಡೌನ್ ಘೋಷಿಸಿದರು. ಆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮುಂದಿನ ಕ್ರಮಗಳ ಕುರಿತು ಯಾವುದೇ ಸಿದ್ದತೆ ಮಾಡಿಕೊಳ್ಳಲಿಲ್ಲ. ಖಾಸಗಿ ನರ್ಸಿಂಗ್ ಹೋಂಗಳ ಜೊತೆ ಒಂದು ಸಭೆಯನ್ನು ಮಾಡಲಿಲ್ಲ. ಸೋಂಕು ಹೆಚ್ಚಾದಾಗ ಮೊನ್ನೆಯಷ್ಟೇ ಖಾಸಗಿ ವೈದ್ಯರ ಜೊತೆ ಮಾತುಕತೆ ಮಾಡುತ್ತಾರೆ. ಇದು ಸರ್ಕಾರದ ಬೇಜವಾಬ್ದಾರಿತನವನ್ನು ಎತ್ತಿತೋರಿಸುತ್ತದೆ ಎಂದು ಕಿಡಿಕಾರಿದರು.

ಕೋವಿಡ್-19 ಮತ್ತು ನಾನ್ ಕೋವಿಡ್‌ಗೆ ಮೃತರಾದವರ ಸಂಖ್ಯೆ ಏರುತ್ತಿದೆ. ಆಂಬುಲೆನ್ಸ್ ಸಿಗದೆ ಕೂಡ ಸೋಂಕಿತರು ಮೃತಪಟ್ಟ ನಿದರ್ಶನಗಳೂ ನಮ್ಮ ಮುಂದಿವೆ. ಪೂರ್ವ ಸಿದ್ದತೆ ಮಾಡಿಕೊಳ್ಳದ ಪರಿಣಾಮ ಇಂತಹ ಸಾವುಗಳು ಸಂಭವಿಸಲು ಕಾರಣ. ಸೋಂಕಿತರು ಆಸ್ಪತ್ರೆಗೆ ದಾಖಲಿಸಲು ಖಾಸಗಿಯವರ ಬಳಿ ಬೆಡ್‌ಗಳನ್ನು ಸರ್ಕಾರ ನಿಗದಿಪಡಿಸಲಿಲ್ಲ. ಯಾರು ಹೆಚ್ಚು ಕಮೀಷನ್ ಕೊಡುತ್ತಾರೋ ಎಂಬುದಕ್ಕೆ ಸರ್ಕಾರ ಕಾದುಕುಳಿತು ಕಮಿಷನ್ ಲೂಟಿ ಮಾಡಿತು ಎಂದಿದ್ದಾರೆ.

ಪಿಪಿಇ ಕಿಟ್ ಗಳ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಹಗರಣ ನಡೆದಿದೆ. ಒಂದು ಪಿಪಿಇ ಕಿಟ್ ಬೆಲೆ ಛತ್ತೀಸ್‌ಘಡದಲ್ಲಿ 550 ರೂ. ಮಹಾರಾಷ್ಟ್ರದಲ್ಲಿ 520, ಗುಜರಾತ್ ನಲ್ಲಿ 480 ರೂ ಇದ್ದರೆ ಕರ್ನಾಟಕ ಸರ್ಕಾರ 1180 ರೂಪಾಯಿಗೆ ಖರೀದಿ ಮಾಡಿದೆ. ಇದ್ಯಾಕೆ ಇಷ್ಟೊಂದು ಬೆಲೆ ನೀಡಬೇಕಾಗಿ ಬಂತು? ನಾವು ಬೇರೆ ದೇಶದಲ್ಲಿದ್ದೇವೆಯೇ? ದುಪ್ಪಟ್ಟು ಬೆಲೆ ನೀಡುವಂತಹ ಪರಿಸ್ಥಿತಿ ಏಕೆ ಬಂದು ಎಂದು ಪ್ರಶ್ನಿಸಿದ್ದಾರೆ.

ರ್‍ಯಾಪಿಡ್ ಆಂಟಿಜನ್ ಕಿಟ್ ಬೆಲೆ ಛತ್ತೀಸ್‌‌ಘಡದಲ್ಲಿ 120, ಮಹಾರಾಷ್ಟ್ರದಲ್ಲೂ 150 ರೂ, ಗುಜರಾತ್ ನಲ್ಲಿ 120 ರೂಪಾಯಿ ಆದರೆ ಕರ್ನಾಟಕದಲ್ಲಿ 1200 ರೂಪಾಯಿಗೆ ಖರೀದಿ ಮಾಡಲಾಗಿದೆ. ಅಂದರೆ ಹತ್ತು ಪಟ್ಟು ಹೆಚ್ಚು ಬೆಲೆ ನೀಡಿದ್ದು ಇದರಲ್ಲಿ ಭಾರೀ ಪ್ರಮಾಣದ ಅವ್ಯಹಾರ ನಡೆದಿದೆ ಎಂದು ದೂರಿದ್ದಾರೆ.

ನಾವು ದಾಖಲೆಗಳನ್ನು ಇಟ್ಟುಕೊಂಡು ಮಾತನಾಡುತ್ತಿದ್ದೇವೆ. ಆದರೂ ಬಿಜೆಪಿ ಸರ್ಕಾರ ಚಕಾರ ಎತ್ತುತ್ತಿಲ್ಲ. ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ಕೋವಿಡ್-19 ನಿಯಂತ್ರಣಕ್ಕೆ ಏನು ಕ್ರಮಗಳನ್ನು ಕೈಗೊಂಡಿದ್ದೀರಿ ಎಂಬ ಬಗ್ಗೆ ಮಾಹಿತಿ ನೀಡಿ. ಜೆ.ಸಿ.ಮಾಧುಸ್ವಾಮಿ ಅವರು ಎಷ್ಟು ಮೀಟಿಂಗ್ ಮಾಡಿದ್ದಾರೆ? ಎಷ್ಟಯ ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದಾರೆ ಎಂಬುದನ್ನು ಮಾಧ್ಯಮಗಳ ಮುಂದೆ ಹೇಳಲಿ ಎಂದು ಸವಾಲು ಹಾಕಿದರು.

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಟಿ. ಬಿ. ಜಯಚಂದ್ರ, ಮುಖಂಡರಾದ ಶಿವಶಂಕರ ರೆಡ್ಡಿ, ಮುರಳೀಧರ ಹಾಲಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ರಾಮಕೃಷ್ಣ, ಮಾಜಿ ಅಧ್ಯಕ್ಷ ಷಫಿ ಅಹಮದ್, ಮಾಜಿ ಶಾಸಕ ರಫೀಕ್ ಅಹಮದ್ ಮೊದಲಾದವರು ಉಪಸ್ಥಿತರಿದ್ದರು.


ಓದಿ: ಕೊರೊನಾ ಪಾಸಿಟಿವ್: ಆಸ್ಪತ್ರೆಗೆ ದಾಖಲಾದ ಗೃಹಸಚಿವ ಅಮಿತ್ ಷಾ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...