Homeಮುಖಪುಟಐಪಿಎಲ್‌ನ ಚೀನಾದ ಪ್ರಾಯೋಜಕತ್ವವನ್ನು ಮರುಪರಿಶೀಲಿಸಿ: ಸ್ವದೇಶಿ ಜಾಗರಣ ಮಂಚ್

ಐಪಿಎಲ್‌ನ ಚೀನಾದ ಪ್ರಾಯೋಜಕತ್ವವನ್ನು ಮರುಪರಿಶೀಲಿಸಿ: ಸ್ವದೇಶಿ ಜಾಗರಣ ಮಂಚ್

ಪ್ರಾಯೋಜಕತ್ವವನ್ನು ಬದಲಿಸುವ ನಿರ್ಧಾರ ತೆಗೆದುಕೊಳ್ಳದಿದ್ದರೆ ಭಾರತೀಯರು ಈ ಪ್ರಮುಖ ಕ್ರಿಕೆಟ್ ಸರಣಿಯನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.

- Advertisement -
- Advertisement -

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಅನ್ನು ಪ್ರಾಯೋಜಿಸಲು ಚೀನಾದ ಪ್ರಮುಖ ಕಂಪನಿ VIVOಗೆ ಅವಕಾಶ ನೀಡುವ ನಿರ್ಧಾರವನ್ನು ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಮರುಪರಿಶೀಲಿಸಬೇಕು ಎಂದು ಸ್ವದೇಶಿ ಜಾಗರಣ ಮಂಚ್ (ಎಸ್‌ಜೆಎಂ) ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಒತ್ತಾಯಿಸಿದೆ.

ಚೀನಾದ ಸರಕುಗಳನ್ನು ಬಹಿಷ್ಕರಿಸುವ ಅಭಿಯಾನದಲ್ಲಿ ಮುಂಚೂಣಿಯಲ್ಲಿದ್ದ ರಾಷ್ಟ್ರೀಯ ಸ್ವಯಂ ಸೇವಾಸಂಘದ (ಆರ್‌ಎಸ್‌ಎಸ್) ಅಂಗಸಂಸ್ಥೆಯಾದ ಎಸ್‌ಜೆಎಂ, ಚೀನಾದ ಪ್ರಾಯೋಜಕತ್ವವನ್ನು ಅನುಮತಿಸುವ ಬಿಸಿಸಿಐ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದೆ.

ಪ್ರಾಯೋಜಕತ್ವವನ್ನು ಬದಲಿಸುವ ನಿರ್ಧಾರ ತೆಗೆದುಕೊಳ್ಳದಿದ್ದರೆ ಭಾರತೀಯರು ಈ ಪ್ರಮುಖ ಕ್ರಿಕೆಟ್ ಸರಣಿಯನ್ನು ಬಹಿಷ್ಕರಿಸಬೇಕು ಎಂದು ಕರೆ ನೀಡಿದ್ದಾರೆ.

ಎಸ್‌ಜೆಎಂನ ರಾಷ್ಟ್ರೀಯ ಸಹ-ಸಂಚಾಲಕ ಅಶ್ವನಿ ಮಹಾಜನ್ ‘ಬಿಸಿಸಿಐ ನಿರ್ಧಾರವು ಪ್ರಸ್ತುತ ರಾಷ್ಟ್ರದ ಪರಿಸ್ಥಿತಿಗೆ ವಿರುದ್ಧವಾಗಿದೆ’ ಎಂದಿದ್ದಾರೆ.

“ಚೀನೀ ಸರಕುಗಳನ್ನು ಬಹಿಷ್ಕರಿಸುವ ಕರೆ ಇನ್ನು ಮುಂದೆ ಕೇವಲ ಎಸ್‌ಜೆಎಂನ ಕರೆಯಲ್ಲ. ಇದು ಭಾರತ ಮತ್ತು ಚೀನಾ ನಡುವೆ ಏನಾಯಿತು ಎಂಬುದರ ಹಿನ್ನೆಲೆಯಲ್ಲಿ ಸಾಮಾನ್ಯ ನಾಗರಿಕರ ಕರೆ” ಎಂದು ಅವರು ಹೇಳಿದರು.

ಕ್ರಿಕೆಟ್ ಮಂಡಳಿ ರಾಷ್ಟ್ರದ ವಿಷಯದಲ್ಲಿ ಸೂಕ್ಷ್ಮವಾಗಿರಬೇಕು, ಮತ್ತು ಅದು ಭದ್ರತಾ ಕಾಳಜಿಗಳನ್ನು ಹೊಂದಿರಬೇಕು ಎಂದು ಮಹಾಜನ್ ಹೇಳಿದರು.

“ಇಡೀ ಜಗತ್ತು ಚೀನಾವನ್ನು ಬಹಿಷ್ಕರಿಸುತ್ತಿದೆ, ಆದರೆ ಐಪಿಎಲ್ ಅವರಿಗೆ ಆಶ್ರಯ ನೀಡುತ್ತಿದೆ. ರಾಷ್ಟ್ರಕ್ಕಿಂತ ಯಾವುದು ದೊಡ್ಡದಲ್ಲ ಎಂದು ಅವರು ಅರ್ಥಮಾಡಿಕೊಳ್ಳಬೇಕು” ಎಂದಿದ್ದಾರೆ.

ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ನಡೆದ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು.

ಆರ್‌ಎಸ್‌ಎಸ್ ಮತ್ತು ಅದರ ಅಂಗಸಂಸ್ಥೆಗಳು ಚೀನಾವನ್ನು ಎದುರಿಸಲು ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳನ್ನು ಮರುಪರಿಶೀಲಿಸುವ ಅಭಿಯಾನವನ್ನು ತೀವ್ರಗೊಳಿಸಿವೆ.

ಚೀನಾದ ಸರಕುಗಳನ್ನು ಬಹಿಷ್ಕರಿಸುವ ಬೇಡಿಕೆಗೆ ಬೆಂಬಲ ನೀಡಿ, ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ಸುರೇಶ್ ಭೈಯಾಜಿ ಜೋಶಿ ಕಳೆದ ತಿಂಗಳು ಆರ್‌ಎಸ್‌ಎಸ್ ಪ್ರಕಟಣೆಯೊಂದಕ್ಕೆ ಮಾತನಾಡುತ್ತಾ, ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಅಭಿಯಾನವು ಸ್ವಾಭಾವಿಕವಾಗಿ ಸಂಭವಿಸಿದೆ ಎಂದಿದ್ದರು. ಪ್ರತಿಪಕ್ಷಗಳು ಕೂಡ ಬಿಸಿಸಿಐ ನಿರ್ಧಾರವನ್ನು ಟೀಕಿಸಿವೆ.


ಇದನ್ನೂ ಓದಿ: VIVO IPL 2020 ಹಾಗೂ ದೇಶಭಕ್ತಿ; ಸಾಮಾಜಿಕ ಜಾಲತಾಣದಲ್ಲಿ ’ಜಸ್ಟ್ ಆಸ್ಕಿಂಗ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...