Homeಅಂತರಾಷ್ಟ್ರೀಯಟಿಕ್‌ಟಾಕ್‌ ಖರೀದಿಗೆ ಟ್ರಂಪ್‌ ಜೊತೆ ಮೈಕ್ರೋಸಾಫ್ಟ್‌‌ ಮಾತುಕತೆ: ಸತ್ಯ ನಾದೆಲ್ಲಾ

ಟಿಕ್‌ಟಾಕ್‌ ಖರೀದಿಗೆ ಟ್ರಂಪ್‌ ಜೊತೆ ಮೈಕ್ರೋಸಾಫ್ಟ್‌‌ ಮಾತುಕತೆ: ಸತ್ಯ ನಾದೆಲ್ಲಾ

ಮೈಕ್ರೋಸಾಫ್ಟ್ ಹೇಳಿಕೆಯು ಟ್ರಂಪ್ ಒಪ್ಪಂದವನ್ನು ಅಂಗೀಕರಿಸುತ್ತಾರೆಯೆ ಅಥವಾ ಟಿಕ್‌ಟಾಕ್ ನಿಷೇಧವನ್ನು ತ್ಯಜಿಸುತ್ತಾರೆಯೆ ಎಂದು ಸ್ಪಷ್ಟವಾಗಿ ಹೇಳಲಿಲ್ಲ, ಆದರೂ ಮೈಕ್ರೋಸಾಫ್ಟ್ ಟ್ರಂಪ್ ಅವರೊಂದಿಗೆ ಚರ್ಚೆಯಲ್ಲಿದೆ ಎಂದು ಹೇಳಿದೆ.

- Advertisement -
- Advertisement -

ಅಮೆರಿಕಾದಲ್ಲಿ ಕಾರ್ಯನಿರ್ವಹಿಸುವ ಟಿಕ್‌ಟಾಕ್‌ ಅಪ್ಲಿಕೇಶನ್ ಅನ್ನು ಖರೀದಿಸಲು ಆಡಳಿತದ ಬೆಂಬಲವನ್ನು ಹೇಗೆ ಪಡೆದುಕೊಳ್ಳಬಹುದು ಎಂಬುದರ ಕುರಿತು ಮೈಕ್ರೋಸಾಫ್ಟ್ ಕಾರ್ಪ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯ ನಾದೆಲ್ಲಾ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು ಎನ್ನಲಾಗಿದೆ.

ಮೈಕ್ರೋಸಾಫ್ಟ್ ಅಮೆರಿಕಾ ಸೇರಿದಂತೆ ಕೆನಡಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗಳಲ್ಲಿ ಟಿಕ್‌ಟಾಕ್‌ ಅನ್ನು  ಖರೀದಿಸುವ ಮಾತುಕತೆ ದೃಡಪಡಿಸಿದೆ ಮತ್ತು ಸೆಪ್ಟೆಂಬರ್ 15 ರ ನಂತರ ಒಪ್ಪಂದವನ್ನು ಪೂರ್ಣಗೊಳಿಸುವ ಗುರಿ ಹೊಂದಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ತಿಂಗಳುಗಳಲ್ಲಿ ಹೆಚ್ಚುತ್ತಿರುವ ಅಮೆರಿಕಾ-ಚೀನಾ ಉದ್ವಿಗ್ನತೆಗಳಲ್ಲಿ ಟಿಕ್‌ಟಾಕ್ ಕೂಡಾ ಕೇಂದ್ರ ಬಿಂದುವಾಗಿದೆ. ಅಮೆರಿಕನ್ ಬಳಕೆದಾರರ ಡೇಟಾವನ್ನು ಬೀಜಿಂಗ್‌ಗೆ ಹಸ್ತಾಂತರಿಸಲು, 165 ಮಿಲಿಯನ್ ಅಮೆರಿಕನ್ನರ ಮೇಲೆ ಪ್ರಭಾವ ಬೀರಲು ಟಿಕ್ ಟಾಕ್‌ ಅಪ್ಲಿಕೇಶನ್ ಅನ್ನು ಬಳಸಬಹುದೆಂದು ಅಮರಿಕಾ ರಾಜಕಾರಣಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಜಾಗತಿಕವಾಗಿ 2 ಶತಕೋಟಿಗಿಂತ ಹೆಚ್ಚು ಬಳಕೆದಾರರು ಆಪ್‌ ಅನ್ನು ಡೌನ್‌ಲೋಡ್ ಮಾಡಿದ್ದಾರೆ. ಟ್ರಂಪ್ ವಿರೋಧಿ ಕಾರ್ಯಕರ್ತರು ಪ್ರಚಾರ ಚಟುವಟಿಕೆಗಳನ್ನು ನಡೆಸಲು ಈ ವೇದಿಕೆಯನ್ನು ಬಳಸಿದ ನಂತರ ಅಪ್ಲಿಕೇಶನ್ ಅಮೆರಿಕಾ ಅಧ್ಯಕ್ಷರ ಕೆಂಗಣ್ಣಿಗೆ ಗುರಿಯಾಗಿದೆ.

ಮೈಕ್ರೋಸಾಫ್ಟ್ ತನ್ನ ಬ್ಲಾಗ್ ಪೋಸ್ಟ್‌ನಲ್ಲಿ, ಟಿಕ್‌ಟಾಕ್ ಅಪ್ಲಿಕೇಶನ್‌ಗೆ ಹೆಚ್ಚಿನ ಸುರಕ್ಷತೆ, ಗೌಪ್ಯತೆ ಮತ್ತು ಡಿಜಿಟಲ್ ಸುರಕ್ಷತಾ ರಕ್ಷಣೆಗಳನ್ನು ಸೇರಿಸಲು ಮತ್ತು ಅಮೆರಿಕನ್ನರ ಎಲ್ಲಾ ಖಾಸಗಿ ಡೇಟಾವನ್ನು ಅಮೆರಿಕಾಗೆ ಹಿಂತಿರುಗಿಸಲು ಮತ್ತು ದೇಶದ ಹೊರಗಿನ ಸರ್ವರ್‌ಗಳಿಂದ ಅಳಿಸುವುದನ್ನು ಖಚಿತಪಡಿಸಿಕೊಳ್ಳಲು ಭರವಸೆ ನೀಡಿದೆ. ಕಂಪನಿಯ ಅಲ್ಪ ಪಾಲನ್ನು ತೆಗೆದುಕೊಳ್ಳಲು ಅಮೆರಿಕದ ಇತರ ಹೂಡಿಕೆದಾರರನ್ನು ಆಹ್ವಾನಿಸಬಹುದು ಎಂದು ಕಂಪನಿ ಹೇಳಿದೆ.

ಮೈಕ್ರೋಸಾಫ್ಟ್ ಹೇಳಿಕೆಯು ಟ್ರಂಪ್ ಒಪ್ಪಂದವನ್ನು ಅಂಗೀಕರಿಸುತ್ತಾರೆಯೆ ಅಥವಾ ಟಿಕ್‌ಟಾಕ್ ನಿಷೇಧವನ್ನು ತ್ಯಜಿಸುತ್ತಾರೆಯೆ ಎಂದು ಸ್ಪಷ್ಟವಾಗಿ ಹೇಳಲಿಲ್ಲ, ಆದರೂ ಮೈಕ್ರೋಸಾಫ್ಟ್ ಟ್ರಂಪ್ ಅವರೊಂದಿಗೆ ಚರ್ಚೆಯಲ್ಲಿದೆ ಎಂದು ಹೇಳಿದೆ.

ಅದಾಗ್ಯೂ ಬೈಟೆಡೆನ್ಸ್ ಜಾಗತಿಕ ಕಂಪನಿಯಾಗಲು ಬದ್ಧವಾಗಿದೆ ಮತ್ತು ಸ್ಥಳೀಯ ಕಾನೂನುಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತದೆ ಎಂದು ಟಿಕ್‌ಟಾಕ್ ಮಾಲೀಕರು ಆನ್‌ಲೈನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಟಿಕ್‌ಟಾಕ್ ಅನ್ನು ಎರಡು ವರ್ಷಗಳ ಹಿಂದೆ ಅಮೆರಿಕದಲ್ಲಿ ಪ್ರಾರಂಭಿಸಲಾಯಿತು. ಟಿಕ್‌ಟಾಕ್ ಜನಪ್ರಿಯವಾಗುತ್ತಿದ್ದಂತೆ, ಅದರ ವಿರುದ್ಧ ಟೀಕೆಗಳು ಸಹ ಕೇಳಿಬಂದಿವೆ.


ಓದಿ: ಅಮೇರಿಕದಲ್ಲಿ ಟಿಕ್ ಟಾಕ್ ಬ್ಯಾನ್ ಮಾಡುತ್ತೇವೆ; ಡೋನಾಲ್ಡ್ ಟ್ರಂಪ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...