Homeಕರೋನಾ ತಲ್ಲಣಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

ಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

- Advertisement -
- Advertisement -

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದರೂ ಆರೆಸ್ಸೆಸ್ ಮುಖಂಡರು ಮೌನ ವಹಿಸಿರುವುದು ನೋಡಿದರೆ ಅವರು ಇದರಲ್ಲಿ ಭಾಗಿಯಾಗಿರುವ ಅನುಮಾನ ಮೂಡಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಹೇಳಿದ್ದಾರೆ.

ಸ್ಪೀಕ್ ಅಪ್ ಕರ್ನಾಟಕ ಕಾರ್ಯಕ್ರಮದ ಭಾಗವಾಗಿ ಮಾಜಿ ಸಂಸದರಾದ ಬಿ.ಎನ್ ಚಂದ್ರಪ್ಪ ಅವರೊಂದಿಗೆ ಸಂಸದ ಡಿ.ಕೆ ಸುರೇಶ್ ಪತ್ರಿಕಾಗೋಷ್ಠಿ ನಡೆಸಿ, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಹಾಸನ ಜಿಲ್ಲೆಯಲ್ಲಿ 2 ಸಾವಿರಕ್ಕಿಂತ ಹೆಚ್ಚು ಮಂದಿ ಸೋಂಕಿತರಾಗಿದ್ದು, ಈ ಜಿಲ್ಲೆ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರದಲ್ಲಿ ಸೋಂಕು ತೀವ್ರವಾಗಿದೆ. ದೇಶದಲ್ಲಿ 38 ಸಾವಿರಕ್ಕೂ ಹೆಚ್ಚು ಜನ ಸತ್ತಿದ್ದಾರೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಕೋವಿಡ್ ಹೆಸರಲ್ಲಿ ಭ್ರಷ್ಟಾಚಾರ ನಡೆಸುತ್ತಿದ್ದು, ಇದನ್ನು ಜನರ ಮುಂದೆ ಇಡಲು ಕಾಂಗ್ರೆಸ್ ಮುಂದಾಗಿದೆ ಎಂದರು.

“ಮಾರ್ಚ್ 23 ರಂದು ಪ್ರಧಾನಿಗಳು 21 ದಿನ ಲಾಕ್‌ಡೌನ್ ಮಾಡುವುದಾಗಿ ಘೋಷಣೆ ಮಾಡಿದಾಗ ಎಲ್ಲರೂ ಸಹಕಾರ ಕೊಟ್ಟಿದ್ದೇವೆ. ಅವರು 21 ದಿನದಲ್ಲಿ ಕೊರೋನಾ ಹೋಗಲಾಡಿಸುತ್ತೇವೆ ಎಂದು ಹೇಳಿದಾಗ ಅವರ ಮಾತಿನ ಮೇಲೆ ಎಲ್ಲರೂ ಭರವಸೆ ಇಟ್ಟಿದ್ದರು. ಆದರೆ ಇಂದು ನಿಮ್ಮ ಜೀವ ನಿಮ್ಮ ಕೈಯಲ್ಲಿದೆ, ನೀವೇ ಕಾಪಾಡಿಕೊಳ್ಳಬೇಕು ಅಂತಾ ಕರೆ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“120 ದಿನಗಳು ಕಳೆದರೂ ಸೋಂಕು ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ. ಲಾಕ್‌‌ಡೌನ್ ಮಾಡಿದರೂ ಸರಿಯಾದ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಕೊರೋನಾ ನಿಯಂತ್ರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಾಗೂ ಆಡಳಿತ ಯಂತ್ರ ಸಂಪೂರ್ಣವಾಗಿ ವಿಫಲವಾಗಿವೆ. ಲಾಕ್ ಡೌನ್ ಸಂದರ್ಭದಲ್ಲಿ ಮಲಗಿದ್ದ ಸರ್ಕಾರ 120 ದಿನ ಆದಮೇಲೆ ಹಾಸಿಗೆ ಬೇಕು, ವೆಂಟಿಲೇಟರ್ ಬೇಕು ಅಂತಾ ಈಗ ಹುಡುಕಾಟ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲ 90 ದಿನಗಳ ಮಹತ್ವದ ಕಾಲಘಟ್ಟದಲ್ಲಿ ಸೋಂಕು ನಿಯಂತ್ರಣದ ಜತೆಗೆ ಜನರ ಭವಿಷ್ಯದ ಬಗ್ಗೆ ಚಿಂತಿಸಬೇಕಿತ್ತು. ಆದರೆ ಸರ್ಕಾರ ಭ್ರಷ್ಟಾಚಾರ ಮಾಡುವುದರಲ್ಲಿ ಮುಳುಗಿತ್ತು. ಬಿಜೆಪಿ ಹಾಗೂ ಅದರ ಮಂತ್ರಿಗಳು ಸತ್ತ ಹೆಣದ ಮೇಲೆ ಹಣ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ಅವರು ಹೇಳಿದ್ದಾರೆ.

ಹಾಸನದಲ್ಲಿ ಕೊರೊನಾ ನಿಯಂತ್ರಣ ಮಾಡಲು ಯಾರಾದರೂ ಸಚಿವರು ಉಸ್ತುವಾರಿ ವಹಿಸಿಕೊಳ್ಳಲು ಡಿಮ್ಯಾಂಡ್ ಮಾಡಿದ್ದಾರಾ? ಇಲ್ಲ. ಎಲ್ಲರಿಗೂ ಬೆಂಗಳೂರೇ ಬೇಕು. ಅಷ್ಟದಿಕ್ಪಾಲಕರಂತೆ ಎಂಟು ಮಂದಿ ಮಂತ್ರಿಗಳಿದ್ದಾರೆ ಎಂದು ವ್ಯಂಗ್ಯವಾಡಿದರು.

“ಇವತ್ತು ಹಾಸನ ಜಿಲ್ಲೆಯಲ್ಲಿ ಅಧಿಕಾರಿಗಳು ಸಾಯುತ್ತಿದ್ದಾರೆ. ಅವರಿಗೆ ರಕ್ಷಣೆ ಇಲ್ಲ. ಆರಂಭದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹೂವ ಚೆಲ್ಲಿದ್ದೇ, ಚೆಲ್ಲಿದ್ದು. ಇವತ್ತು ಅವರ ತಮ್ಮ ಬೇಡಿಕೆ ಈಡೇರಿಸಿ ಅಂತಾ ಪ್ರತಿಭಟನೆ ಮಾಡಿದರೆ ಅವರ ಕಷ್ಟ ಏನು ಅಂತಾ ಕೇಳಲು ಯಾರೂ ಗತಿ ಇಲ್ಲ. ಇದರಿಂದ ಬಿಜೆಪಿ ತಮಗೆ ಬೇಕಾದಾಗ ಬಳಸಿಕೊಂಡು ನಂತರ ಬಿಸಾಡುವ ಸಂಸ್ಕೃತಿಯನ್ನು ತೋರಿಸುತ್ತಿದೆ.

ಆರೆಸ್ಸೆಸ್ ಭ್ರಷ್ಟಾಚಾರದ ವಿಚಾರವಾಗಿ ಅವರು ಬಾಯಿ ಬಿಡುತ್ತಿಲ್ಲ. ಅವರೂ ಕೂಡ ಇದರಲ್ಲಿ ಭಾಗಿಯಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಸಿದ್ದರಾಮಯ್ಯನವರ ಸರ್ಕಾರ ಇದ್ದಾಗ ಸಣ್ಣಪುಟ್ಟದಕ್ಕೆ ಸಿಬಿಐ ತನಿಖೆ ಮಾಡಿಸಿ ಅಂತಾ ಹೇಳುತ್ತಿದ್ದರು. ಈಗ ಒಂದೇ ಒಂದು ಮಾತು ಆಡುತ್ತಿಲ್ಲ. ಇದರಿಂದ ಅವರೂ ಪಾಲುದಾರರಾಗಿದ್ದಾರಾ ಎಂಬ ಅನುಮಾನ ಮೂಡಿದೆ” ಎಂದು ಡಿ. ಕೆ. ಸುರೇಶ್ ಹೇಳಿದರು.

ಈ ಸರ್ಕಾರದಿಂದ ನಮ್ಮ ಜೀವನ ರೂಪಿಸಿಕೊಳ್ಳುತ್ತೇವೆ ಎಂದು ಯಾರಾದರೂ ಭಾವಿಸಿದ್ದರೆ ಅದು ಎಳ್ಳಷ್ಟೂ ಸಾಧ್ಯವಿಲ್ಲ. ಸ್ವಾತಂತ್ರ್ಯ ಹೋರಾಟಗಾರರಿಗೆ ಪಿಂಚಣಿ ನೀಡದೆ ಹಣ ಲೂಟಿ ಮಾಡುವುದರಲ್ಲಿ ಸರ್ಕಾರ ಮುಳುಗಿದೆ. ಹಸಿರು ಶಾಲು ಹಾಕಿಕೊಂಡು ಬಂದ ಸರ್ಕಾರ ಇಂದು ರೈತರನ್ನು ಮರೆತಿದೆ. ಆಲೂಗೆಡ್ಡೆ ಬೆಲೆ ಬಿದ್ದಿದೆ. ಕೊಬ್ಬರಿಗೆ ಬೆಲೆ ಇಲ್ಲ. ಇದರ ಬಗ್ಗೆ ಮಾತನಾಡುವವರು ಯಾರು? ಎಂದು ಅವರು ಪ್ರಶ್ನಿಸಿದರು.


ಓದಿ: ಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...