Homeಕರೋನಾ ತಲ್ಲಣಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

ಬಿಜೆಪಿ ಜೊತೆಗೆ ಆರೆಸ್ಸೆಸ್ ಮುಖಂಡರು ಕೂಡಾ ಕೊರೊನಾ ಹಗರಣದಲ್ಲಿ ಬಾಗಿ: ಡಿ.ಕೆ. ಸುರೇಶ್

- Advertisement -
- Advertisement -

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದರೂ ಆರೆಸ್ಸೆಸ್ ಮುಖಂಡರು ಮೌನ ವಹಿಸಿರುವುದು ನೋಡಿದರೆ ಅವರು ಇದರಲ್ಲಿ ಭಾಗಿಯಾಗಿರುವ ಅನುಮಾನ ಮೂಡಿದೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯ ಡಿ.ಕೆ. ಸುರೇಶ್ ಹೇಳಿದ್ದಾರೆ.

ಸ್ಪೀಕ್ ಅಪ್ ಕರ್ನಾಟಕ ಕಾರ್ಯಕ್ರಮದ ಭಾಗವಾಗಿ ಮಾಜಿ ಸಂಸದರಾದ ಬಿ.ಎನ್ ಚಂದ್ರಪ್ಪ ಅವರೊಂದಿಗೆ ಸಂಸದ ಡಿ.ಕೆ ಸುರೇಶ್ ಪತ್ರಿಕಾಗೋಷ್ಠಿ ನಡೆಸಿ, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಹಾಸನ ಜಿಲ್ಲೆಯಲ್ಲಿ 2 ಸಾವಿರಕ್ಕಿಂತ ಹೆಚ್ಚು ಮಂದಿ ಸೋಂಕಿತರಾಗಿದ್ದು, ಈ ಜಿಲ್ಲೆ ಸೇರಿದಂತೆ ರಾಜ್ಯ ಹಾಗೂ ರಾಷ್ಟ್ರದಲ್ಲಿ ಸೋಂಕು ತೀವ್ರವಾಗಿದೆ. ದೇಶದಲ್ಲಿ 38 ಸಾವಿರಕ್ಕೂ ಹೆಚ್ಚು ಜನ ಸತ್ತಿದ್ದಾರೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಕೋವಿಡ್ ಹೆಸರಲ್ಲಿ ಭ್ರಷ್ಟಾಚಾರ ನಡೆಸುತ್ತಿದ್ದು, ಇದನ್ನು ಜನರ ಮುಂದೆ ಇಡಲು ಕಾಂಗ್ರೆಸ್ ಮುಂದಾಗಿದೆ ಎಂದರು.

“ಮಾರ್ಚ್ 23 ರಂದು ಪ್ರಧಾನಿಗಳು 21 ದಿನ ಲಾಕ್‌ಡೌನ್ ಮಾಡುವುದಾಗಿ ಘೋಷಣೆ ಮಾಡಿದಾಗ ಎಲ್ಲರೂ ಸಹಕಾರ ಕೊಟ್ಟಿದ್ದೇವೆ. ಅವರು 21 ದಿನದಲ್ಲಿ ಕೊರೋನಾ ಹೋಗಲಾಡಿಸುತ್ತೇವೆ ಎಂದು ಹೇಳಿದಾಗ ಅವರ ಮಾತಿನ ಮೇಲೆ ಎಲ್ಲರೂ ಭರವಸೆ ಇಟ್ಟಿದ್ದರು. ಆದರೆ ಇಂದು ನಿಮ್ಮ ಜೀವ ನಿಮ್ಮ ಕೈಯಲ್ಲಿದೆ, ನೀವೇ ಕಾಪಾಡಿಕೊಳ್ಳಬೇಕು ಅಂತಾ ಕರೆ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

“120 ದಿನಗಳು ಕಳೆದರೂ ಸೋಂಕು ನಿಯಂತ್ರಣ ಮಾಡಲು ಸಾಧ್ಯವಾಗಿಲ್ಲ. ಲಾಕ್‌‌ಡೌನ್ ಮಾಡಿದರೂ ಸರಿಯಾದ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಕೊರೋನಾ ನಿಯಂತ್ರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಾಗೂ ಆಡಳಿತ ಯಂತ್ರ ಸಂಪೂರ್ಣವಾಗಿ ವಿಫಲವಾಗಿವೆ. ಲಾಕ್ ಡೌನ್ ಸಂದರ್ಭದಲ್ಲಿ ಮಲಗಿದ್ದ ಸರ್ಕಾರ 120 ದಿನ ಆದಮೇಲೆ ಹಾಸಿಗೆ ಬೇಕು, ವೆಂಟಿಲೇಟರ್ ಬೇಕು ಅಂತಾ ಈಗ ಹುಡುಕಾಟ ನಡೆಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೊದಲ 90 ದಿನಗಳ ಮಹತ್ವದ ಕಾಲಘಟ್ಟದಲ್ಲಿ ಸೋಂಕು ನಿಯಂತ್ರಣದ ಜತೆಗೆ ಜನರ ಭವಿಷ್ಯದ ಬಗ್ಗೆ ಚಿಂತಿಸಬೇಕಿತ್ತು. ಆದರೆ ಸರ್ಕಾರ ಭ್ರಷ್ಟಾಚಾರ ಮಾಡುವುದರಲ್ಲಿ ಮುಳುಗಿತ್ತು. ಬಿಜೆಪಿ ಹಾಗೂ ಅದರ ಮಂತ್ರಿಗಳು ಸತ್ತ ಹೆಣದ ಮೇಲೆ ಹಣ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ಅವರು ಹೇಳಿದ್ದಾರೆ.

ಹಾಸನದಲ್ಲಿ ಕೊರೊನಾ ನಿಯಂತ್ರಣ ಮಾಡಲು ಯಾರಾದರೂ ಸಚಿವರು ಉಸ್ತುವಾರಿ ವಹಿಸಿಕೊಳ್ಳಲು ಡಿಮ್ಯಾಂಡ್ ಮಾಡಿದ್ದಾರಾ? ಇಲ್ಲ. ಎಲ್ಲರಿಗೂ ಬೆಂಗಳೂರೇ ಬೇಕು. ಅಷ್ಟದಿಕ್ಪಾಲಕರಂತೆ ಎಂಟು ಮಂದಿ ಮಂತ್ರಿಗಳಿದ್ದಾರೆ ಎಂದು ವ್ಯಂಗ್ಯವಾಡಿದರು.

“ಇವತ್ತು ಹಾಸನ ಜಿಲ್ಲೆಯಲ್ಲಿ ಅಧಿಕಾರಿಗಳು ಸಾಯುತ್ತಿದ್ದಾರೆ. ಅವರಿಗೆ ರಕ್ಷಣೆ ಇಲ್ಲ. ಆರಂಭದಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹೂವ ಚೆಲ್ಲಿದ್ದೇ, ಚೆಲ್ಲಿದ್ದು. ಇವತ್ತು ಅವರ ತಮ್ಮ ಬೇಡಿಕೆ ಈಡೇರಿಸಿ ಅಂತಾ ಪ್ರತಿಭಟನೆ ಮಾಡಿದರೆ ಅವರ ಕಷ್ಟ ಏನು ಅಂತಾ ಕೇಳಲು ಯಾರೂ ಗತಿ ಇಲ್ಲ. ಇದರಿಂದ ಬಿಜೆಪಿ ತಮಗೆ ಬೇಕಾದಾಗ ಬಳಸಿಕೊಂಡು ನಂತರ ಬಿಸಾಡುವ ಸಂಸ್ಕೃತಿಯನ್ನು ತೋರಿಸುತ್ತಿದೆ.

ಆರೆಸ್ಸೆಸ್ ಭ್ರಷ್ಟಾಚಾರದ ವಿಚಾರವಾಗಿ ಅವರು ಬಾಯಿ ಬಿಡುತ್ತಿಲ್ಲ. ಅವರೂ ಕೂಡ ಇದರಲ್ಲಿ ಭಾಗಿಯಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಸಿದ್ದರಾಮಯ್ಯನವರ ಸರ್ಕಾರ ಇದ್ದಾಗ ಸಣ್ಣಪುಟ್ಟದಕ್ಕೆ ಸಿಬಿಐ ತನಿಖೆ ಮಾಡಿಸಿ ಅಂತಾ ಹೇಳುತ್ತಿದ್ದರು. ಈಗ ಒಂದೇ ಒಂದು ಮಾತು ಆಡುತ್ತಿಲ್ಲ. ಇದರಿಂದ ಅವರೂ ಪಾಲುದಾರರಾಗಿದ್ದಾರಾ ಎಂಬ ಅನುಮಾನ ಮೂಡಿದೆ” ಎಂದು ಡಿ. ಕೆ. ಸುರೇಶ್ ಹೇಳಿದರು.

ಈ ಸರ್ಕಾರದಿಂದ ನಮ್ಮ ಜೀವನ ರೂಪಿಸಿಕೊಳ್ಳುತ್ತೇವೆ ಎಂದು ಯಾರಾದರೂ ಭಾವಿಸಿದ್ದರೆ ಅದು ಎಳ್ಳಷ್ಟೂ ಸಾಧ್ಯವಿಲ್ಲ. ಸ್ವಾತಂತ್ರ್ಯ ಹೋರಾಟಗಾರರಿಗೆ ಪಿಂಚಣಿ ನೀಡದೆ ಹಣ ಲೂಟಿ ಮಾಡುವುದರಲ್ಲಿ ಸರ್ಕಾರ ಮುಳುಗಿದೆ. ಹಸಿರು ಶಾಲು ಹಾಕಿಕೊಂಡು ಬಂದ ಸರ್ಕಾರ ಇಂದು ರೈತರನ್ನು ಮರೆತಿದೆ. ಆಲೂಗೆಡ್ಡೆ ಬೆಲೆ ಬಿದ್ದಿದೆ. ಕೊಬ್ಬರಿಗೆ ಬೆಲೆ ಇಲ್ಲ. ಇದರ ಬಗ್ಗೆ ಮಾತನಾಡುವವರು ಯಾರು? ಎಂದು ಅವರು ಪ್ರಶ್ನಿಸಿದರು.


ಓದಿ: ಮುಂದಿನ ಮೂರು ವರ್ಷದಲ್ಲಿ ರಾಜ್ಯದ ಎಲ್ಲಾ ಮನೆಗಳಿಗೂ ನೀರು: ಮನೆಮನೆಗೆ ಗಂಗೆ, ವಸೂಲಿ ಹೆಂಗೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...