Homeಅಂತರಾಷ್ಟ್ರೀಯಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ

ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಟ್ರಂಪ್ ಸಹಿ

- Advertisement -
- Advertisement -

ಕೊರೋನಾ ಮತ್ತು ಆ ಕಾರಣದಿಂದ ಉಂಟಾದ ಲಾಕ್‌ಡೌನ್‌ಗೆ ಇಡೀ ವಿಶ್ವದ ಆರ್ಥಿಕತೆ ತತ್ತರಿಸಿ ಹೋಗಿದೆ. ಪರಿಣಾಮ ವಿಶ್ವದ ದೊಡ್ಡಣ್ಣ ಎಂದು ಕರೆಯಲಾಗುವ ಅಮೆರಿಕದಲ್ಲೂ ನಿರುದ್ಯೋಗದ ಸಮಸ್ಯೆ ತಲೆದೋರಿದೆ ಎಂದರೆ ಆರ್ಥಿಕತೆಯ ಮೇಲೆ ಕೊರೋನಾ ಉಂಟು ಮಾಡಿರುವ ಆಘಾತವನ್ನು ಊಹಿಸಬಹುದು. ಹೀಗಾಗಿ ಅಮೆರಿಕದ ಉದ್ಯೋಗವನ್ನು ಅಮೆರಿಕದ ಯುವಕರಿಗೆ ನೀಡುವ ಸಲುವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಹೆಚ್‌1ಬಿ ಫೆಡರಲ್‌ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಸಹಿಹಾಕಿದ್ದಾರೆ.‌

ಸಾಮಾನ್ಯವಾಗಿ ಅಮೆರಿಕದಂತಹ ದೇಶಗಳಿಗೆ ಫೆಡರಲ್ ಏಜೆನ್ಸಿಗಳು ಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ನೇಮಿಸುತ್ತದೆ. ಬಹುತೇಕ ಸಾಫ್ಟ್‌ವೇರ್‌ ಕಂಪೆನಿಗಳಿಗೆ ಈ ಮಾದರಿಯಲ್ಲೇ ಉದ್ಯೋಗಿಗಳನ್ನು ನೇಮ ಮಾಡಲಾಗಿರುತ್ತದೆ. ಇದಕ್ಕೆ ಹೆಚ್‌1ಬಿ ವೀಸಾವನ್ನು ಬಳಸಲಾಗಿರುತ್ತದೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ವಿದೇಶಿ ಕಾರ್ಮಿಕರನ್ನು ಫೆಡರಲ್ ಏಜೆನ್ಸಿಗಳಿಗೆ ನೇಮಿಸಿಕೊಳ್ಳುವುದನ್ನು ತಡೆದಿದ್ದಾರೆ. ಈ ಆದೇಶಕ್ಕೆ ಸೋಮವಾರ ಸಹಿ ಹಾಕಿದ್ದಾರೆ.

ಟ್ರಂಪ್‌ ಆಡಳಿತ ಕಳೆದ ಜೂನ್ 23 ರಂದೇ ಎಚ್ -1 ಬಿ ವೀಸಾಗಳನ್ನು ರದ್ದು ಮಾಡಿ ಆದೇಶಿಸಿದ್ದರು. ಈ ಮೂಲಕ ಲಕ್ಷಾಂತರ ಭಾರತೀಯ ಟೆಕ್ಕಿಗಳು ಕೆಲಸ ಕಳೆದುಕೊಳ್ಳುವ ಬೀತಿಯನ್ನು ಈಗಲೂ ಎದುರಿಸುತ್ತಿದ್ದಾರೆ. ಕೊರೋನಾ ಕಾರಣಕ್ಕೆ ಭಾರತಕ್ಕೆ ವಾಪಾಸ್‌ ಆಗಿದ್ದವರು ಹೆಚ್‌1ಬಿ ವೀಸಾ ರದ್ದಾದ ಕಾರಣ ಅನಿವಾರ್ಯವಾಗಿ ಭಾರತದಲ್ಲೇ ಉಳಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಡೊನಾಲ್ಡ್‌ ಟ್ರಂಪ್ ಫೆಡರಲ್ ಏಜೆನ್ಸಿಗಳ ವೀಸಾವನ್ನು ರದ್ದು ಮಾಡಿರುವುದು, ಇದೀಗ ಮತ್ತಷ್ಟು ಭಾರತೀಯ ಉದ್ಯೋಗಿಗಳು ಅತಂತ್ರಕ್ಕೆ ಸಿಲುಕುವಂತೆ ಮಾಡಿದೆ.

ಕಳೆದ ವರ್ಷ ಹೆಚ್‌1ಬಿ ವೀಸಾ ಪಡೆದಿದ್ದ ಶೇ70 ರಷ್ಟು ಭಾರತೀಯರ ಕೆಲಸ ಇದೀಗ ಅತಂತ್ರವಾಗಿದೆ. ಆದರೆ, ಈ ಕುರಿತು ಪ್ರಕಟಣೆ ಹೊರಡಿಸಿರುವ ಅಮೆರಿಕ ಶ್ವೇತ ಭವನ‌, “ಫೆಡರಲ್‌ ಉದ್ಯೋಗದಾತರು ಅರ್ಹ ಅಮೆರಿಕನ್ನರನ್ನು ಬಿಟ್ಟು ವಿದೇಶಿ ಉದ್ಯೋಗಿಗಳಿಗೆ ಅವಕಾಶ ಮಾಡಿಕೊಡುವ ಮೂಲಕ ದೇಶಕ್ಕೆ ಅನ್ಯಾಯ ಮಾಡುತ್ತಿವೆ. ಅಲ್ಲದೆ, ವಿದೇಶಿ ನಾಗರೀಕರು ಸಹ ಹೆಚ್‌1ಬಿ ವೀಸಾವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಕಂಡು ಬಂದಿದೆ.

ಆದರೆ, ಕಡಿಮೆ-ವೆಚ್ಚದ ವಿದೇಶಿ ಕಾರ್ಮಿಕರ ಬದಲಿಗೆ ಅರ್ಹ ಅಮೆರಿಕನ್ ಕಾರ್ಮಿಕರನ್ನು ಬದಲಿಸುವ ಉದ್ದೇಶವನ್ನು ಈ ಆದೇಶ ಹೊಂದಿಲ್ಲ. ಬದಲಿಗೆ ಉನ್ನತ-ನುರಿತ ಜನರನ್ನು ಅಮೆರಿಕಕ್ಕೆ ಕರೆತರುವ ಮತ್ತು ಅಮೆರಿಕನ್ನರಿಗೆ ಅವಕಾಶಗಳನ್ನು ಸೃಷ್ಟಿಸುವ ಮೆರಿಟ್ ಆಧಾರಿತ ವಲಸೆ ವ್ಯವಸ್ಥೆಯನ್ನು ಡೊನಾಲ್ಡ್‌ ಟ್ರಂಪ್ ಬೆಂಬಲಿಸಿದ್ದಾರೆ” ಎಂದು ತಿಳಿಸಿದೆ.

ಫೆಡರಲ್ ಒಡೆತನದ ಟೆನ್ನೆಸ್ಸೀ ವ್ಯಾಲಿ ಪ್ರಾಧಿಕಾರವು ತನ್ನ ತಂತ್ರಜ್ಞಾನದ ಶೇ.20ರಷ್ಟು ಉದ್ಯೋಗಗಳನ್ನು ವಿದೇಶಗಳಲ್ಲಿರುವ ಕಂಪನಿಗಳಿಗೆ ಹೊರಗುತ್ತಿಗೆ ನೀಡಲಿದೆ ಎಂಬ ಘೋಷಣೆಯಿಂದಾಗಿ ಅಮೆರಿಕ ಆಡಳಿತ ಇಂತಹ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...