Homeಮುಖಪುಟಕಂಗಾಲು ಮೋದಿಯ ಕಳಾ ವೃದ್ಧಿಗೆ ನಮೋ ಯಜ್ಞ

ಕಂಗಾಲು ಮೋದಿಯ ಕಳಾ ವೃದ್ಧಿಗೆ ನಮೋ ಯಜ್ಞ

- Advertisement -
- Advertisement -

ಶುದ್ಧೋದನ |

ಸಂಘಪರಿವಾರದಲ್ಲಿ ಶುರುವಿಟ್ಟುಕೊಂಡಿರುವ ನಡುಕ ದಿನಗಳೆದಂತೆ ಜೋರಾಗುತ್ತದೆ. ಹಿಂದಿ ಹೃದಯ ಭೂಮಿಯ ಅಸೆಂಬ್ಲಿ ಚುನಾವಣೆಗಳಲ್ಲಿ ಬಿಜೆಪಿ ಮಕಾಡೆ ಮಲಗುತ್ತಿದ್ದಂತೆಯೇ ಮೋದಿ ಮಹಾತ್ಮನ ಮಂಕುಬೂದಿ ಕಳೆ ಕಳೆದುಕೊಂಡಿರುವ ಭೀತಿ ಸಂಘ ಪರಿವಾರವನ್ನು ಆವರಿಸಿಬಿಟ್ಟಿದೆ. ಹಿಂದುತ್ವದ ಹಿಡನ್ ಅಜೆಂಡಾಗಳನ್ನೆಲ್ಲ ಜಾರಿಗೊಳಿಸಲು ಮೋದಿಯಂಥ “ಬದಲಿ ಶೂದ್ರ” ಸದ್ಯಕ್ಕಂತೂ ಆರೆಸೆಸ್-ವಿಎಚ್‍ಪಿ ಬಳಗಕ್ಕೆ ಸಿಗುವಹಾಗಿಲ್ಲ. ಹಾಗಾಗಿ ಹೇಗಾದರೂ ಮಾಡಿ ಸುಳ್ಳುಗಳಿಗೆ ಕಲಾತ್ಮಕವಾಗಿ ಹೂಳಪು ಕೊಡಲು ಚೆಡ್ಡಿ-ಕಾವಿ ತಂಡ ತರಹೇವಾರಿ ಮಸಲತ್ತು ಮಾಡಲಾರಂಭಿಸಿದೆ.
ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕರು, ಅಮಾಯಕ ಮಹಿಳೆಯರಿಗೆಲ್ಲ ನಿರಂತರ ಮೋಸ, ವಂಚನೆ ಮಾಡುತ್ತ ದೇಶದ ನೆಮ್ಮದಿ ಕೆಡಿಸಿದ ಪಾಪಕ್ಕೆ ಫಲವಾಗಿ ಅಧಃಪತನದ ಅಂಚಿಗೆ ಬಂದು ನಿಂತಿರುವ ಬಿಜೆಪಿ ಮನುವಾದಿಗಳೀಗ ಮೋದಿ ಕಳಾ ವೃದ್ಧಿಗೆ ಯಜ್ಞದ ಮೊರೆ ಹೋಗಿದ್ದಾರೆ. ಮೌಢ್ಯ ತುಂಬುವ ಹೋಮ-ಹವನ, ಯಜ್ಞ-ಯಾಗ, ಮಡಿ-ಮೈಲಿಗೆ, ಮೋಸ-ಸುಳ್ಳುಗಳ ಪೇಟೆಂಟ್ ಸಂಘಪರಿವಾರ ಪಡೆದುಕೊಂಡು ಅದ್ಯಾವುದೋ ಕಾಲವಾಗಿಹೋಗಿದೆ! ಆದರೆ ಈ ಆನಾಹುತಕಾರಿ ತಂತ್ರಗಳೇ ಸಂಘ ಪರಿವಾರದ ಕೈಗೊಂಬೆ ಮೋದಿಗೆ ತಿರುಗುಬಾಣ ಆಗುತ್ತಿವೆ. ಧನಾತ್ಮಕವಾಗಿ ಜನರ ಮನಸ್ಸು ಗೆಲ್ಲಲಾಗದ ಮೋದಿ ಶಿಷ್ಯಸಂಕುಲ, ಮತ್ತದೇ ವಾಮಮಾರ್ಗಕ್ಕೆ ಬಿದ್ದಿದೆ. ಯಜ್ಞ-ತಂತ್ರದಿಂದ ಜನರ ಮರುಳುಗೊಳಿಸಿ ಆಸ್ತಿತ್ವ ಉಳಿಸಿಕೊಳ್ಳಲು ತಿಣುಕಾಡುತ್ತಿದೆ.
ಲೋಕಸಭಾ ಚುನಾವಣೆ ಎದುರಾಗಿರುವ ಈ ಯುದ್ಧಕಾಲದಲ್ಲಿ ಸೇನಾಧಿಪತಿಯೇ ಕಾಲು ಮುರಿದುಕೊಂಡು ಕೂತಂತಾಗಿದೆ ಬಿಜೆಪಿ ಪರಿಸ್ಥಿತಿ. ಹುಸಿ ವೀರಾವೇಷದ ಭಾಷಣ ಎರಚುವ ಮೋದಿಯ ಮನಮುರಕು ಮಾತುಗಳನ್ನು ಕೇಳುವ ಸ್ಥಿತಿಯಲ್ಲೀಗ ಜನರಿಲ್ಲ ಎಂಬುವುದು ಪರಿವಾರ ಪುರೋಹಿತರಿಗೆ ಪಕ್ಕಾ ಆಗಿದೆ. ರಾಮಮಂದಿರ-ಹಿಂದೂತ್ವದ ಶಾರ್ಟ್‍ಕಟ್ ದಾರಿಯಲ್ಲಿ ದಿಲ್ಲಿ ಸಿಂಹಾಸನ ತಲುಪಿದ್ದ ಮೋದಿಗೆ ಪ್ರಧಾನಿಯಾಗಿ ನಾಲ್ಕುವರೆ ವರ್ಷ ಕಳೆದರೂ ಅಯೋಧ್ಯೆ, ರಾಮಮಂದಿರ ನೆನಪಾಗಲೇ ಇಲ್ಲ. ಕಟ್ಟರ್ ಹಿಂದೂತ್ವದ ಹುಡುಗರಿಗೂ ಅಯೋಧ್ಯೆಯ ರಾಮಮಂದಿರ ಅನ್ನೋದು, ಬಿಜೆಪಿಯು ಎಲೆಕ್ಷನ್ ಗೆಲುವಿನ ಸಲುವಾಗಿ ಹುಟ್ಟುಹಾಕುವ ಅತಿದೊಡ್ಡ ವಂಚನೆ ಅನ್ನೋದು ನಿಸ್ಸಂಶಯವಾಗಿ ಅರ್ಥವಾಗಿಬಿಟ್ಟಿದೆ! ಆ ಕಾರಣಕ್ಕೇ 1992ರಲ್ಲಿ ಬಾಬ್ರಿ ಮಸೀದಿ ಧ್ವಂಸವಾದಾಗ ಹೊತ್ತಿ ಉರಿದಿದ್ದ ಮಧ್ಯಪ್ರದೇಶ, ರಾಜಸ್ಥಾನದಂತಹ ಉತ್ತರ ಭಾರತದ ಹಿಂದಿ ಹಾರ್ಟ್‍ಲ್ಯಾಂಡ್‍ಗಳಲ್ಲೇ ಕೇಸರಿ ಸಾಧುಗಳ ರಾಮಮಂದಿರ ಜನಾಗ್ರಹ ಸಮಾವೇಶಗಳು ಬಿಜೆಪಿಗೆ ಮತ ತಂದುಕೊಡುವಲ್ಲಿ ಸಂಪೂರ್ಣವಾಗಿ ಸೋತುಹೋಗಿವೆ.
ದೇಶದ ಬೆನ್ನೆಲುಬಾದ ರೈತರು ಬೆಳೆದ ಬೆಳೆಗೆ ಬೆಲೆ ಸಿಗದೆ ಆತ್ಮಹತ್ಯೆ ದಾರಿ ಹಿಡಿದಿದ್ದರೆ, ವರ್ಷಕ್ಕೆ 1 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದಿದ್ದ ಮೋದಿ ಇರೋ ಉದ್ಯೋಗಗಳನ್ನೇ ನಾಶ ಮಾಡುವ ಕೆಲಸಕ್ಕೆ ಹೈಹಾಕಿದ್ದಾರೆ. ಬ್ಯಾಂಕ್ ರಾಷ್ಟ್ರೀಕರಣದಿಂದ ಜನಮನ ಗೆದ್ದಿದ್ದ ಇಂದಿರಾ ಗಾಂಧಿಯಂತೆ ನೋಟ್ ಬ್ಯಾನ್ ಮಾಡಲು ಹೋಗಿ ಮೋದಿ ಇಡೀ ದೇಶದ ಆರ್ಥಿಕತೆಯೇ ಮುಗ್ಗರಿಸಿ ಬೀಳುವಂತೆ ಮಾಡಿದ್ದಾರೆ. ಕಪ್ಪುಹಣವನ್ನೂ ತರದೆ, ಪ್ರತಿ ಅಕೌಂಟಿಗೆ ಹದಿನೈದು ಲಕ್ಷವನ್ನೂ ಡೆಪಾಸಿಟ್ ಮಾಡದ ಮೋದಿಯ ವರ್ಚಸ್ಸೀಗ ಸಂಪೂರ್ಣ ಕುಸಿದುಬಿದ್ದಿದೆ. ಸಾಲದ್ದಕ್ಕೆ ಅಂಬಾನಿ-ಅದಾನಿಗಳ ಖಜಾನೆ ಹಿಗ್ಗಿಸಲು ಹೋಗಿ ರಫೇಲ್ ಭಾನ್ಗಡಿಯಲ್ಲಿ ಮೋದಿ ಮುಸುಡಿಯನ್ನೇ ಸಿಗಾಕಿಕೊಂಡು ಕೂತು ದೇಶದ ಮುಂದೆ ಬೆತ್ತಲಾಗಿದ್ದಾರೆ. ಮೊನ್ನೆ ನಡೆದ ಪಂಚರಾಜ್ಯ ಫಲಿತಾಂಶಗಳೇ ಇದಕ್ಕೆ ಸಾಕ್ಷಿ.
ಇಂಥಾ ಯಡವಟ್ಟುಗಳನ್ನು ಸರಿ ಮಾಡಿಕೊಂಡು ಜನರ ಮನಸ್ಸನ್ನು ಗೆಲ್ಲೋದು ಬಿಟ್ಟು, ಮೋದಿಯ ಪರಿವಾರದ ಪಟಾಲಮ್ಮು ಯಜ್ಞ, ಯಾಗ ಮಾಡಿ ವರ್ಚಸ್ಸು ವೃದ್ಧಿಗೆ ಕೈಹಾಕಿದೆ! ಆ ಮೂಲಕ ತಮ್ಮ ಹಾದಿಯೇನಿದ್ದರೂ ಪ್ರಗತಿಯತ್ತಲ್ಲ, ಹಳೇ ಶಿಲಾಯುಗದತ್ತ ಅನ್ನೋದನ್ನು ತಾನೇ ಸಾಬೀತು ಮಾಡಿಕೊಂಡಿದೆ. ಬಿಜೆಪಿಯ ಈ ಶಿಲಾಯುಗದ ನಿದರ್ಶನ ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ಗೋವಾ ಬಿಜೆಪಿ ಸರ್ಕಾರದ ಕೃಷಿ ಇಲಾಖೆ ವೇದ-ಮಂತ್ರ ಪಠಣದಿಂದ ರೈತರು ಬಂಪರ್ ಬೆಳೆ ತೆಗೆದು ಸುಖವಾಗಿ ಇರಬಹುದೆಂದು ಅಧೀಕೃತವಾಗೇ ಘೋಷಿಸಿದ್ದು ಓದುಗರಿಗೆ ನೆನಪಿರಬಹುದು.
ಟೀಮ್ ಮೋದಿ ತನ್ನ ಕಫ್ತಾನನ ವೈಫಲ್ಯಗಳನ್ನು ಮುಚ್ಚಿಹಾಕುವ ಸಲುವಾಗಿ ಮೌಢ್ಯದ ಯಜ್ಞ-ಮಂತ್ರ-ವೇದಗಳ ಮೊರೆಹೋಗಿರೋದನ್ನು ಕಂಡು ಜನ ನಗಾಡುತ್ತಿದ್ದಾರೆ. ದಕ್ಷಿಣ ಕನ್ನಡದ ಬದಿಯಡ್ಕ ಬಳಿಯ ಮಾನ್ಯ ಸಮೀಪದ ಮೇಗಿನಡ್ಕ ಎಂಬಲ್ಲಿ ಮೋದಿಯನ್ನು ಕಂಟಕದಿಂದ ಪಾರು ಮಾಡಲು ಯಜ್ಞ ಒಂದನ್ನು ಇದೇ ಡಿಸೆಂಬರ್ 28 ರಿಂದ 31ರವರೆಗೆ ನಡೆಸಲು ಚೆಡ್ಡಿಗಳು ನಿರ್ಧರಿಸಿದ್ದಾರೆ.
ಕರಾವಳಿಯ ದೇವಸ್ಥಾನಗಳ ಬ್ರಹ್ಮಕಲಶೋತ್ಸವ, ಕಳಾವೃದ್ಧಿ ಧಾರ್ಮಿಕ ದಗಲುಬಾಜಿತನದಿಂದಲೇ ಪ್ರವರ್ಧಮಾನಕ್ಕೆ ಬಂದ ಕಲ್ಲಡ್ಕ ಪ್ರಭಾಕರ ಭಟ್ಟ ಮತ್ತು ಬೆಂಕಿ ಬ್ರಾಂಡಿನ ಸಂಸದ ನಳಿನ್ ಕುಮಾರ್ ಕಟೀಲ್ ಗುರು-ಶಿಷ್ಯರ “ನಮೋ ಯಜ್ಞ” ಎಂಬ ಸರ್ಕಸ್ಸೇ ಈ ಲೇಟೆಸ್ಟ್ ಪ್ರಹಸನ. ನಾಲ್ಕು ದಿನ ನಮೋ, ಜ್ಞಾನ, ಭಕ್ತಿ ಮತ್ತು ಯಕ್ಷ ಯಜ್ಞಗಳೆಂಬ ಚತುರ್ವಿಧ ಹಿಕಮತ್ತಿನ ಮೂಲ ಉದ್ದೇಶ ಮೋದಿಗೆ ಅರ್ಥಾತ್ ಬಿಜೆಪಿಗೆ ಆಗುತ್ತಿರುವ ಡ್ಯಾಮೇಜ್ ಕಂಟ್ರೋಲ್ ಮಾಡೋದು!
ಕಾರ್ಯಕ್ರಮದ ಸಂಘಟಕರೇ ಹೇಳುವ ಹಾಗೆ ಇದೊಂದು ಮೋದಿಗೆ ಶಕ್ತಿ ತುಂಬುವ ಯಾಗ. ಅಲ್ಲಿಗೆ ಮೋದಿ ದುರ್ಬಲಗೊಂಡಿದ್ದಾರೆ ಅನ್ನೋದನ್ನು ಬಿಜೆಪಿಗರೇ ಒಪ್ಪಿಕೊಂಡಂತಾಯ್ತು! ಇಂಥದೊಂದು ಯಜ್ಞ ಮೋದಿಗಿಂತ ಹೆಚ್ಚಾಗಿ ಸೋಲಿನ ಭೀತಿಯಲ್ಲಿರುವ ಲೋಕಲ್ ಸಂಸದ ನಳಿನ್‍ಕುಮಾರ್ ಕಟೀಲ್‍ಗೆ ಬೇಕಾಗಿದೆ. ಪರಮ ಚೆಡ್ಡಿ ಸಾಹಿತಿಗಳಾದ ಎಸ್.ಎಲ್.ಭೈರಪ್ಪ, ಪ್ರಧಾನ್ ಗುರುದತ್ತ ಜತೆ ಸಂವಾದ ಕಾರ್ಯಕ್ರಮ ಹೆಣೆದಿರುವ ಕಲ್ಲಡ್ಕ, ನಳಿನ್‍ರ ಮುಖ್ಯಗುರಿ ಯುವಕರ ದಿಕ್ಕುತಪ್ಪಿಸಿ ಚುನಾವಣೆಗೆ ಅಣಿಯಾಗುವುದು. ಒಂದು ಕಾಲಕ್ಕೆ ಸುಶಿಕ್ಷಿತರ, ಪ್ರಜ್ಞಾವಂತರ ಜಿಲ್ಲೆಯೆಂದೇ ಹೆಸರಾಗಿದ್ದ ದಕ್ಷಿಣ ಕನ್ನಡದ ಮಂದಿ ಈಗ ಇಂಥಾ ಹುಚ್ಚಾಟಗಳಿಗೆ ಸಾಕ್ಷಿಯಾಗಬೇಕಾಗಿ ಬಂದಿರೋದು ದುರಂತ.
ತಮಾಷೆಯೆಂದರೆ, ತೆಲಂಗಾಣದ ಎಲೆಕ್ಷನ್ ಹೊತ್ತಲ್ಲಿ ಪ್ರಧಾನಿ ಮೋದಿಯು ಅಲ್ಲಿನ ಟಿಆರ್‍ಎಸ್ ಪಕ್ಷದ ಅಧಿನಾಯಕ ಕೆಸಿಆರ್‍ಗೆ ಸೋಲಿನ ಭೀತಿ ಆವರಿಸಿರೋದರಿಂದ ಜ್ಯೋತಿಷಿಗಳ ಮಾತುಕೇಳಿಕೊಂಡು ಹೋಮ-ಹವನ-ಪೂಜೆ ಮಾಡಿಸಿಕೊಂಡು ತಿರುಗಾಡುತ್ತಿದ್ದಾರೆಂದು ಗೇಲಿ ಮಾಡಿದ್ದುಂಟು!! ಈಗ ಮೋದಿ ಭಕ್ತರು ಅದೇ ಹಾದಿಯಲ್ಲಿದ್ದಾರೆ. ಅಂದಹಾಗೆ, ಎಲ್ಲರನ್ನೂ ಎಲ್ಲ ಕಾಲಕ್ಕೂ ಮೂರ್ಖರನ್ನಾಗಿ ಮಾಡಲು ಸಾಧ್ಯವಾ?
ಅಂತೂ ತಮ್ಮ ಪತನ ಪ್ರಾರಂಭವಾಗಿದೆ ಅನ್ನೋದನ್ನು ಮೋದಿ ಪರಿವಾರವೇ ಈ ಯಜ್ಞದ ಮೂಲಕ ಒಪ್ಪಿಕೊಂಡಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...