Homeಕರೋನಾ ತಲ್ಲಣಕೊವಾಕ್ಸಿನ್ ಪ್ರಯೋಗಕ್ಕೆ ಒಳಪಟ್ಟವರಲ್ಲಿ 20% ಜನರು ಈಗಾಗಲೇ ಆಂಟಿಬಾಡಿ ಹೊಂದಿದ್ದಾರೆ!

ಕೊವಾಕ್ಸಿನ್ ಪ್ರಯೋಗಕ್ಕೆ ಒಳಪಟ್ಟವರಲ್ಲಿ 20% ಜನರು ಈಗಾಗಲೇ ಆಂಟಿಬಾಡಿ ಹೊಂದಿದ್ದಾರೆ!

ಇದರರ್ಥ ಅವರು ಈಗಾಗಲೇ ಸೋಂಕಿಗೆ ಒಳಗಾಗಿ ಯಾವುದೇ ರೋಗ ಲಕ್ಷಣಗಳನ್ನು ತೋರಿಸಿಕೊಳ್ಳದೇ ಚೇತರಿಸಿಕೊಂಡಿದ್ದಾರೆ. ಅವರ ಮೇಲೆ ಪ್ರಯೋಗ ನಡೆಸುವುದರಿಂದ ನಿರೀಕ್ಷಿತ ಫಲಿತಂಶಗಳನ್ನು ಪಡೆಯಲು ಸಾಧ್ಯವಿಲ್ಲ.

- Advertisement -
- Advertisement -

ಭಾರತದ ಮೊದಲ ಸ್ಥಳೀಯ ಕೊರೊನಾ ಲಸಿಕೆ, ಕೊವಾಕ್ಸಿನ್‌ ಕ್ಲಿನಿಕಲ್ ಪ್ರಯೋಗಗಳಿಗಾಗಿ ಏಮ್ಸ್ ದಾಖಲಾಗಲು ಮುಂದಾದವರಲ್ಲಿ ಸುಮಾರು 20% ರಷ್ಟು ಜನರು ಈಗಾಗಲೇ ಕೊರೊನಾ ವೈರಸ್ ವಿರುದ್ಧ ಪ್ರತಿಕಾಯಗಳನ್ನು (antibodies) ಹೊಂದಿದ್ದಾರೆಂದು ತಿಳಿದುಬಂದಿದೆ. ಹಾಗಾಗಿ ಅವರು ಪ್ರಯೋಗಗಳಿಗೆ ಅನರ್ಹರಾಗಿದ್ದಾರೆ.

ಏಮ್ಸ್ ಲಸಿಕೆ ಪ್ರಯೋಗಕ್ಕೆ ಭಾಗವಹಿಸುವವರನ್ನು ದಾಖಲಿಸಲು ಪ್ರಾರಂಭಿಸಿದ ಎರಡು ವಾರಗಳ ನಂತರ, ಸಂಸ್ಥೆಯು 80 ಕ್ಕೂ ಹೆಚ್ಚು ಸ್ವಯಂಸೇವಕರನ್ನು ಪರೀಕ್ಷಿಸಿದೆ. ಆದರೆ ಕೇವಲ 16 ಜನರನ್ನು ಮಾತ್ರ ಪ್ರಯೋಗಕ್ಕೆ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಹೃದಯ, ಮೂತ್ರಪಿಂಡ, ಪಿತ್ತಜನಕಾಂಗ ಅಥವಾ ಶ್ವಾಸಕೋಶದ ಕಾಯಿಲೆ ಮತ್ತು ಅನಿಯಂತ್ರಿತ ಮಧುಮೇಹ ಅಥವಾ ಅಧಿಕ ರಕ್ತದೊತ್ತಡವಿಲ್ಲದ 18 ರಿಂದ 55 ವರ್ಷದೊಳಗಿನವರು ಅಧ್ಯಯನಕ್ಕೆ ಅರ್ಹರಾಗಿದ್ದಾರೆ.

ನೇಮಕಾತಿಗೆ ಮುಂಚಿತವಾಗಿ ಸ್ವಯಂಸೇವಕರ ಮೇಲೆ ಯಕೃತ್ತು, ಮೂತ್ರಪಿಂಡದ ಕಾರ್ಯಕೊರೊನಾ ಪರೀಕ್ಷೆ ಮತ್ತು ಕ್ಷಿಪ್ರ ಪ್ರತಿಕಾಯ ಪರೀಕ್ಷೆಗಳಂತಹ (rapid antibody tests) ವಾಡಿಕೆಯ ತನಿಖೆ ನಡೆಸಲಾಗುತ್ತದೆ.

ನಾವು ಆರೋಗ್ಯವಂತ ಸ್ವಯಂಸೇವಕರನ್ನು ಮಾತ್ರ ನೇಮಿಸಿಕೊಳ್ಳುವುದರಿಂದ ಅನರ್ಹರ ಪ್ರಮಾಣ ತುಂಬಾ ಹೆಚ್ಚಾಗಿದೆ. ನೊಂದಾಯಿಸಿಕೊಂಡ ಸ್ವಯಂಸೇವಕರಲ್ಲಿ ನಾವು ಸುಮಾರು 20%  ಪ್ರತಿಕಾಯ (ಆಂಟಿಬಾಡಿ) ಹೊಂದಿರುವವರನ್ನು ಕಂಡುಕೊಂಡಿದ್ದೇವೆ. ಇದರರ್ಥ ಅವರು ಈಗಾಗಲೇ ಸೋಂಕಿಗೆ ಒಳಗಾಗಿ ಯಾವುದೇ ರೋಗ ಲಕ್ಷಣಗಳನ್ನು ತೋರಿಸಿಕೊಳ್ಳದೇ ಚೇತರಿಸಿಕೊಂಡಿದ್ದಾರೆ. ಅವರ ಮೇಲೆ ಪ್ರಯೋಗ ನಡೆಸುವುದರಿಂದ ನಿರೀಕ್ಷಿತ ಫಲಿತಂಶಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಮಾನವ ಪ್ರಯೋಗಗಳಲ್ಲಿ ಭಾಗವಹಿಸಲು ವೈದ್ಯಕೀಯ ಸಂಸ್ಥೆಯು ಈವರೆಗೆ 3,500 ಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ. ಜುಲೈ 24 ರಂದು, 30 ವರ್ಷದ ಯುವಕನಿಗೆ ಕೋವಾಕ್ಸಿನ್‌ನ ಮೊದಲ ಪ್ರಮಾಣವನ್ನು ನೀಡಲಾಯಿತು. ಇಂಟ್ರಾಮಸ್ಕುಲರ್ ಇಂಜೆಕ್ಷನ್ ಮೂಲಕ ಅವರಿಗೆ 0.5 ಮಿಲಿ ನೀಡಲಾಯಿತು.

“ಲಸಿಕೆ ನೀಡಿ ಮೊದಲ ವಾರವನ್ನು ಪೂರ್ಣಗೊಳಿಸಲಾಗಿದೆ. ಮತ್ತು ಇಲ್ಲಿಯವರೆಗೆ ಯಾವುದೇ ಅಸ್ವಸ್ಥತೆಯನ್ನು ವರದಿ ಮಾಡಿಲ್ಲ. ಲಸಿಕೆಯ ಮುಂದಿನ ಪ್ರಮಾಣವನ್ನು ನೀಡುವ ಮೊದಲು ಮುಂದಿನ ಶುಕ್ರವಾರದವರೆಗೆ ನಾವು ಅವರನ್ನು ಮೇಲ್ವಿಚಾರಣೆ ಮಾಡುತ್ತೇವೆ” ಎಂದು ವೈದ್ಯರು ಹೇಳಿದರು.

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಸಹಯೋಗದೊಂದಿಗೆ ಹೈದರಾಬಾದ್ ಮೂಲದ ಔಷಧ ಕಂಪನಿ ಭಾರತ್ ಬಯೋಟೆಕ್ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ.

ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ಈ ಮೊದಲು I ಮತ್ತು IIನೇ ಹಂತದ ಮಾನವ ಕ್ಲಿನಿಕಲ್ ಪ್ರಯೋಗಗಳನ್ನು ಅನುಮೋದಿಸಿತು.


ಇದನ್ನೂ ಓದಿ: 370 ನೇ ವಿಧಿ ರದ್ಧತಿಯ ಮೊದಲ ವಾರ್ಷಿಕೋತ್ಸವಕ್ಕೆ ಮುಂಚೆಯೇ ಶ್ರೀನಗರದಲ್ಲಿ ಮತ್ತೆ ಕರ್ಫ್ಯೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...