Homeಕರೋನಾ ತಲ್ಲಣವೃದ್ಧರಿಗೆ ಸರಿಯಾಗಿ ಪಿಂಚಣಿ, ವೃದ್ಧಾಶ್ರಮದಲ್ಲಿರುವವರಿಗೆ ಮಾಸ್ಕ್ ಪಿಪಿಇ ವಿತರಿಸಿ: ಸುಪ್ರೀಂ ಕೋರ್ಟ್

ವೃದ್ಧರಿಗೆ ಸರಿಯಾಗಿ ಪಿಂಚಣಿ, ವೃದ್ಧಾಶ್ರಮದಲ್ಲಿರುವವರಿಗೆ ಮಾಸ್ಕ್ ಪಿಪಿಇ ವಿತರಿಸಿ: ಸುಪ್ರೀಂ ಕೋರ್ಟ್

- Advertisement -
- Advertisement -

ಕೊರೊನಾ ಸಮಯದಲ್ಲಿ ವಯಸ್ಸಾದವರಿಗೆ ಸಮಯಕ್ಕೆ ಸರಿಯಾಗಿ ಪಿಂಚಣಿ ವಿತರಿಸಬೇಕು, ದೇಶಾದ್ಯಂತ ವೃದ್ಧಾಶ್ರಮಗಳಲ್ಲಿ ವಾಸಿಸುವವರಿಗೆ ನಿರಂತರವಾಗಿ ರಕ್ಷಣಾತ್ಮಕ ಉಪಕರಣಗಳು (ಪಿಪಿಇ), ಸ್ಯಾನಿಟೈಸರ್ ಮತ್ತು ಫೇಸ್ ಮಾಸ್ಕ್‌ಗಳನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವೃದ್ದರು ಬಳಲುತ್ತಿದ್ದರೆ, ಅಥವಾ ಅವರಿಂದ ಮನವಿ ಬಂದಾಕ್ಷಣ ಬೇಗನೇ ಸ್ಪಂದಿಸಿ ಅವರ ಚಿಕಿತ್ಸೆಗೆ ಮುಂದಾಗಬೇಕು ಎಂದು ಉನ್ನತ ನ್ಯಾಯಾಲಯ ತಿಳಿಸಿದೆ.

ಅಧಿಕಾರಿಗಳು ಅವರಿಗೆ ಪಿಂಚಣಿ ಸಕಾಲಿಕವಾಗಿ ವಿತರಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ವೃದ್ಧಾಶ್ರಮದಲ್ಲಿರುವ ವೃದ್ಧರಿಗೆ ಪಿಪಿಇ ಕಿಟ್‌ಗಳನ್ನು ನೀಡಬೇಕು ಎಂದು ಉನ್ನತ ನ್ಯಾಯಾಲಯ ತಿಳಿಸಿದೆ.

ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ವಕೀಲ ಅಶ್ವನಿ ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠವು ಸಾಂಕ್ರಾಮಿಕ ಸಮಯದಲ್ಲಿ, ವಯಸ್ಸಾದವರಿಗೆ ಪಿಂಚಣಿ ಸಮಯಕ್ಕೆ ತಲುಪುವುದು ಅವಶ್ಯಕ ಎಂದು ಸೂಚಿಸಿದೆ.

ಕೋಟ್ಯಂತರ ವೃದ್ಧರು ಏಕಾಂಗಿಯಾಗಿ ವಾಸಿಸುತ್ತಿದ್ದಾರೆ. ಈಗಾಗಲೇ ಗುರುತಿಸಲ್ಪಟ್ಟ ಮತ್ತು ಅದಕ್ಕೆ ಅರ್ಹರಾಗಿರುವವರಿಗೆ ಪಿಂಚಣಿ ತಲುಪುವಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅಶ್ವನಿ ಕುಮಾರ್ ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು.

ಈ ನಿಟ್ಟಿನಲ್ಲಿ ರಾಜ್ಯಗಳು ಈಗಾಗಲೇ ಪ್ರಯತ್ನಗಳನ್ನು ಮಾಡುತ್ತಿವೆ ಮತ್ತು ಇದು ವಿರೋಧಿಸುವ ವಿಷಯವಲ್ಲ ಎಂದು ಕೇಂದ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ವಿ. ಮೋಹನಾ ನ್ಯಾಯಪೀಠಕ್ಕೆ ತಿಳಿಸಿದರು.

ಮನವಿಗೆ ಉತ್ತರ ಸಲ್ಲಿಸಲು ವಿ. ಮೋಹನಾ ಒಂದು ವಾರ ಕೋರಿದಾಗ, ಅಶ್ವನಿ ಕುಮಾರ್ ಇದನ್ನು ವಿರೋಧಿಸಿ ಈ ವಿಷಯದಲ್ಲಿ ತುರ್ತು ಕ್ರಮಗಳ ಅಗತ್ಯವಿದೆ ಎಂದು ಹೇಳಿದರು.

ಮಾರಕ ವೈರಸ್‌ನಿಂದ ರಕ್ಷಿಸಲು ಹಿರಿಯರಿಗೆ ಫೇಸ್‌ಮಾಸ್ಕ್, ಸ್ಯಾನಿಟೈಸರ್ ಮತ್ತು ಪಿಪಿಇ ಒದಗಿಸುವ ಅಗತ್ಯತೆಯ ಬಗ್ಗೆ ಅರ್ಜಿದಾರರು ಎತ್ತಿದರು.

ಯಾವುದೇ ತಾರತಮ್ಯವಿಲ್ಲದೆ ಕೊರೊನಾ ವೈರಸ್‌ ತಗುಲಿದ ವೃದ್ಧರ ಚಿಕಿತ್ಸೆಗೆ ನಿರ್ದೇಶನ ಕೋರಿರುವ ಮತ್ತೊಂದು ಅರ್ಜಿಯನ್ನೂ ನ್ಯಾಯಪೀಠವು ಪರಿಗಣಿಸಿದೆ.

ಮನವಿಯಲ್ಲಿ ರಾಜ್ಯಗಳು ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಕೇಳಿದ ನ್ಯಾಯಪೀಠ, ದೇಶದಲ್ಲಿ ಚಾಲ್ತಿಯಲ್ಲಿರುವ ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ವಿಷಯದಲ್ಲಿ 2018 ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಜಾರಿಗೊಳಿಸಿದ ನಿರ್ದೇಶನಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಅರ್ಜಿಗಳ ಪ್ರತಿಗಳನ್ನು ರಾಜ್ಯಗಳಿಗೆ ಪೂರೈಸಬೇಕು ಎಂದು ಅದು ಹೇಳಿದೆ.

ಭಾರತದಲ್ಲಿ 10 ಕೋಟಿಗೂ ಹೆಚ್ಚು ವೃದ್ಧರ ಶಾಸನಬದ್ಧ ಹಕ್ಕುಗಳನ್ನು ಗುರುತಿಸಿ ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಡಿಸೆಂಬರ್ 2018 ರ ತೀರ್ಪಿನಲ್ಲಿ ತಿಳಿಸಿತ್ತು.

ಪ್ರತಿ ಜಿಲ್ಲೆಯ ವೃದ್ಧಾಶ್ರಮಗಳ ಸಂಖ್ಯೆಯ ಬಗ್ಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಮಾಹಿತಿ ಪಡೆಯುವಂತೆ ಅದು ಕೇಂದ್ರಕ್ಕೆ ನಿರ್ದೇಶನ ನೀಡಿತ್ತು ಮತ್ತು ವೃದ್ಧರಿಗೆ ಪಿಂಚಣಿಯನ್ನು ಸಮರ್ಪಕವಾಗಿ ವಿತರಿಸಲಾಗುತ್ತಿದೆಯೇ ಎಂದು ನೋಡುವಂತೆ ಸೂಚಿಸಿದೆ.

ಸಾಮಾಜಿಕ ನ್ಯಾಯದ ಅಂಶಕ್ಕೆ ಒತ್ತು ನೀಡಿದ ಸುಪ್ರೀಂ ಕೋರ್ಟ್, ವೃದ್ಧರು ಸೇರಿದಂತೆ ನಾಗರಿಕರ ಘನತೆ, ಆಶ್ರಯ ಮತ್ತು ಆರೋಗ್ಯದೊಂದಿಗೆ ಬದುಕುವ ಹಕ್ಕನ್ನು ರಕ್ಷಿಸಲು ಮಾತ್ರವಲ್ಲದೆ ಜಾರಿಗೊಳಿಸಲು ಸಹಕಾರಿಯಾಗಿದೆ ಎಂದು ಹೇಳಿದೆ.

ಪ್ರತಿ ಜಿಲ್ಲೆಯ ಹಿರಿಯ ನಾಗರಿಕರಿಗೆ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು ಮತ್ತು ಜೆರಿಯಾಟ್ರಿಕ್ ಆರೈಕೆಯ ಬಗ್ಗೆ ಎಲ್ಲಾ ರಾಜ್ಯಗಳಿಂದ ಮಾಹಿತಿ ಪಡೆಯುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು.

ಕೇಂದ್ರವು ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ, ವೃದ್ಧರಿಗೆ ಅವರ ಸಾಂವಿಧಾನಿಕ ಮತ್ತು ಶಾಸನಬದ್ಧ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಪೋಷಕರ ನಿರ್ವಹಣೆ ಮತ್ತು ಕಲ್ಯಾಣ ಮತ್ತು ಹಿರಿಯ ನಾಗರಿಕರ ಕಾಯ್ದೆ 2007 ರ ನಿಬಂಧನೆಗಳಿಗೆ ಪ್ರಚಾರ ನೀಡಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಅದು ಹೇಳಿದೆ.


ಓದಿ: Fact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ


ವಿಡಿಯೋ ನೋಡಿ: 

ಪರಮಾತ್ಮ ಪೊಲಿಟಿಕಲ್ ಮ್ಯಾಜಿಕ್ ಶೋ 1 – ಚಿಲ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...