Homeಕರೋನಾ ತಲ್ಲಣವೃದ್ಧರಿಗೆ ಸರಿಯಾಗಿ ಪಿಂಚಣಿ, ವೃದ್ಧಾಶ್ರಮದಲ್ಲಿರುವವರಿಗೆ ಮಾಸ್ಕ್ ಪಿಪಿಇ ವಿತರಿಸಿ: ಸುಪ್ರೀಂ ಕೋರ್ಟ್

ವೃದ್ಧರಿಗೆ ಸರಿಯಾಗಿ ಪಿಂಚಣಿ, ವೃದ್ಧಾಶ್ರಮದಲ್ಲಿರುವವರಿಗೆ ಮಾಸ್ಕ್ ಪಿಪಿಇ ವಿತರಿಸಿ: ಸುಪ್ರೀಂ ಕೋರ್ಟ್

- Advertisement -
- Advertisement -

ಕೊರೊನಾ ಸಮಯದಲ್ಲಿ ವಯಸ್ಸಾದವರಿಗೆ ಸಮಯಕ್ಕೆ ಸರಿಯಾಗಿ ಪಿಂಚಣಿ ವಿತರಿಸಬೇಕು, ದೇಶಾದ್ಯಂತ ವೃದ್ಧಾಶ್ರಮಗಳಲ್ಲಿ ವಾಸಿಸುವವರಿಗೆ ನಿರಂತರವಾಗಿ ರಕ್ಷಣಾತ್ಮಕ ಉಪಕರಣಗಳು (ಪಿಪಿಇ), ಸ್ಯಾನಿಟೈಸರ್ ಮತ್ತು ಫೇಸ್ ಮಾಸ್ಕ್‌ಗಳನ್ನು ಒದಗಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ವೃದ್ದರು ಬಳಲುತ್ತಿದ್ದರೆ, ಅಥವಾ ಅವರಿಂದ ಮನವಿ ಬಂದಾಕ್ಷಣ ಬೇಗನೇ ಸ್ಪಂದಿಸಿ ಅವರ ಚಿಕಿತ್ಸೆಗೆ ಮುಂದಾಗಬೇಕು ಎಂದು ಉನ್ನತ ನ್ಯಾಯಾಲಯ ತಿಳಿಸಿದೆ.

ಅಧಿಕಾರಿಗಳು ಅವರಿಗೆ ಪಿಂಚಣಿ ಸಕಾಲಿಕವಾಗಿ ವಿತರಿಸುವುದನ್ನು ಖಚಿತಪಡಿಸಿಕೊಳ್ಳಬೇಕು ಮತ್ತು ವೃದ್ಧಾಶ್ರಮದಲ್ಲಿರುವ ವೃದ್ಧರಿಗೆ ಪಿಪಿಇ ಕಿಟ್‌ಗಳನ್ನು ನೀಡಬೇಕು ಎಂದು ಉನ್ನತ ನ್ಯಾಯಾಲಯ ತಿಳಿಸಿದೆ.

ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ವಕೀಲ ಅಶ್ವನಿ ಕುಮಾರ್ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠವು ಸಾಂಕ್ರಾಮಿಕ ಸಮಯದಲ್ಲಿ, ವಯಸ್ಸಾದವರಿಗೆ ಪಿಂಚಣಿ ಸಮಯಕ್ಕೆ ತಲುಪುವುದು ಅವಶ್ಯಕ ಎಂದು ಸೂಚಿಸಿದೆ.

ಕೋಟ್ಯಂತರ ವೃದ್ಧರು ಏಕಾಂಗಿಯಾಗಿ ವಾಸಿಸುತ್ತಿದ್ದಾರೆ. ಈಗಾಗಲೇ ಗುರುತಿಸಲ್ಪಟ್ಟ ಮತ್ತು ಅದಕ್ಕೆ ಅರ್ಹರಾಗಿರುವವರಿಗೆ ಪಿಂಚಣಿ ತಲುಪುವಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅಶ್ವನಿ ಕುಮಾರ್ ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು.

ಈ ನಿಟ್ಟಿನಲ್ಲಿ ರಾಜ್ಯಗಳು ಈಗಾಗಲೇ ಪ್ರಯತ್ನಗಳನ್ನು ಮಾಡುತ್ತಿವೆ ಮತ್ತು ಇದು ವಿರೋಧಿಸುವ ವಿಷಯವಲ್ಲ ಎಂದು ಕೇಂದ್ರ ಸರ್ಕಾರದ ಪರ ಹಾಜರಾದ ಹಿರಿಯ ವಕೀಲ ವಿ. ಮೋಹನಾ ನ್ಯಾಯಪೀಠಕ್ಕೆ ತಿಳಿಸಿದರು.

ಮನವಿಗೆ ಉತ್ತರ ಸಲ್ಲಿಸಲು ವಿ. ಮೋಹನಾ ಒಂದು ವಾರ ಕೋರಿದಾಗ, ಅಶ್ವನಿ ಕುಮಾರ್ ಇದನ್ನು ವಿರೋಧಿಸಿ ಈ ವಿಷಯದಲ್ಲಿ ತುರ್ತು ಕ್ರಮಗಳ ಅಗತ್ಯವಿದೆ ಎಂದು ಹೇಳಿದರು.

ಮಾರಕ ವೈರಸ್‌ನಿಂದ ರಕ್ಷಿಸಲು ಹಿರಿಯರಿಗೆ ಫೇಸ್‌ಮಾಸ್ಕ್, ಸ್ಯಾನಿಟೈಸರ್ ಮತ್ತು ಪಿಪಿಇ ಒದಗಿಸುವ ಅಗತ್ಯತೆಯ ಬಗ್ಗೆ ಅರ್ಜಿದಾರರು ಎತ್ತಿದರು.

ಯಾವುದೇ ತಾರತಮ್ಯವಿಲ್ಲದೆ ಕೊರೊನಾ ವೈರಸ್‌ ತಗುಲಿದ ವೃದ್ಧರ ಚಿಕಿತ್ಸೆಗೆ ನಿರ್ದೇಶನ ಕೋರಿರುವ ಮತ್ತೊಂದು ಅರ್ಜಿಯನ್ನೂ ನ್ಯಾಯಪೀಠವು ಪರಿಗಣಿಸಿದೆ.

ಮನವಿಯಲ್ಲಿ ರಾಜ್ಯಗಳು ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸುವಂತೆ ಕೇಳಿದ ನ್ಯಾಯಪೀಠ, ದೇಶದಲ್ಲಿ ಚಾಲ್ತಿಯಲ್ಲಿರುವ ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ವಿಷಯದಲ್ಲಿ 2018 ರ ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಜಾರಿಗೊಳಿಸಿದ ನಿರ್ದೇಶನಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.

ಅರ್ಜಿಗಳ ಪ್ರತಿಗಳನ್ನು ರಾಜ್ಯಗಳಿಗೆ ಪೂರೈಸಬೇಕು ಎಂದು ಅದು ಹೇಳಿದೆ.

ಭಾರತದಲ್ಲಿ 10 ಕೋಟಿಗೂ ಹೆಚ್ಚು ವೃದ್ಧರ ಶಾಸನಬದ್ಧ ಹಕ್ಕುಗಳನ್ನು ಗುರುತಿಸಿ ಜಾರಿಗೆ ತರಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಡಿಸೆಂಬರ್ 2018 ರ ತೀರ್ಪಿನಲ್ಲಿ ತಿಳಿಸಿತ್ತು.

ಪ್ರತಿ ಜಿಲ್ಲೆಯ ವೃದ್ಧಾಶ್ರಮಗಳ ಸಂಖ್ಯೆಯ ಬಗ್ಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಮಾಹಿತಿ ಪಡೆಯುವಂತೆ ಅದು ಕೇಂದ್ರಕ್ಕೆ ನಿರ್ದೇಶನ ನೀಡಿತ್ತು ಮತ್ತು ವೃದ್ಧರಿಗೆ ಪಿಂಚಣಿಯನ್ನು ಸಮರ್ಪಕವಾಗಿ ವಿತರಿಸಲಾಗುತ್ತಿದೆಯೇ ಎಂದು ನೋಡುವಂತೆ ಸೂಚಿಸಿದೆ.

ಸಾಮಾಜಿಕ ನ್ಯಾಯದ ಅಂಶಕ್ಕೆ ಒತ್ತು ನೀಡಿದ ಸುಪ್ರೀಂ ಕೋರ್ಟ್, ವೃದ್ಧರು ಸೇರಿದಂತೆ ನಾಗರಿಕರ ಘನತೆ, ಆಶ್ರಯ ಮತ್ತು ಆರೋಗ್ಯದೊಂದಿಗೆ ಬದುಕುವ ಹಕ್ಕನ್ನು ರಕ್ಷಿಸಲು ಮಾತ್ರವಲ್ಲದೆ ಜಾರಿಗೊಳಿಸಲು ಸಹಕಾರಿಯಾಗಿದೆ ಎಂದು ಹೇಳಿದೆ.

ಪ್ರತಿ ಜಿಲ್ಲೆಯ ಹಿರಿಯ ನಾಗರಿಕರಿಗೆ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು ಮತ್ತು ಜೆರಿಯಾಟ್ರಿಕ್ ಆರೈಕೆಯ ಬಗ್ಗೆ ಎಲ್ಲಾ ರಾಜ್ಯಗಳಿಂದ ಮಾಹಿತಿ ಪಡೆಯುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿತ್ತು.

ಕೇಂದ್ರವು ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ, ವೃದ್ಧರಿಗೆ ಅವರ ಸಾಂವಿಧಾನಿಕ ಮತ್ತು ಶಾಸನಬದ್ಧ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಪೋಷಕರ ನಿರ್ವಹಣೆ ಮತ್ತು ಕಲ್ಯಾಣ ಮತ್ತು ಹಿರಿಯ ನಾಗರಿಕರ ಕಾಯ್ದೆ 2007 ರ ನಿಬಂಧನೆಗಳಿಗೆ ಪ್ರಚಾರ ನೀಡಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಅದು ಹೇಳಿದೆ.


ಓದಿ: Fact check: ಭಾವುಕರಾಗಿ ಅಳುವ 93ರ ಈ ವೃದ್ದ ಕೊರೊನಾದಿಂದ ಚೇತರಿಸಿದ ವ್ಯಕ್ತಿಯೇ


ವಿಡಿಯೋ ನೋಡಿ: 

ಪರಮಾತ್ಮ ಪೊಲಿಟಿಕಲ್ ಮ್ಯಾಜಿಕ್ ಶೋ 1 – ಚಿಲ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...