Homeಮುಖಪುಟತೆರೆಯ ಮೇಲೆ ರಾಯರ ಪ್ರಭಾವಳಿ; ಶಶಿಧರ ಚಿತ್ರದುರ್ಗ ಬರಹ

ತೆರೆಯ ಮೇಲೆ ರಾಯರ ಪ್ರಭಾವಳಿ; ಶಶಿಧರ ಚಿತ್ರದುರ್ಗ ಬರಹ

- Advertisement -
- Advertisement -

ಕನ್ನಡ, ತಮಿಳು, ತೆಲುಗು ಭಾಷೆಗಳಲ್ಲಿ ರಾಯರ ಜೀವನ-ಪವಾಡಗಳ ಕುರಿತ ಸಿನಿಮಾಗಳು ತಯಾರಾಗಿವೆ. ಖ್ಯಾತನಾಮ ಸಿನಿಮಾ ತಾರೆಯರು ಹಾಗೂ ತಂತ್ರಜ್ಞರು ಈ ಮೂಲಕ ರಾಯರಿಗೆ ಭಕ್ತಿ ಅರ್ಪಿಸಿದ್ದಾರೆ. ಮಂತ್ರಾಲಯದಲ್ಲಿ ಆರಾಧನಾ ಮಹೋತ್ಸವ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ತೆರೆಯ ಮೇಲೆ ರಾಯರ ಕತೆ ಹಾಗೂ ಪಾತ್ರಗಳ ಕುರಿತ ಲೇಖನವಿದು.

ಕನ್ನಡ ಮತ್ತು ತಮಿಳು ಚಿತ್ರರಂಗಗಳಲ್ಲಿ ರಾಯರ ಭಕ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ತೆರೆಯ ಮೇಲೆ ರಾಯರ ಜೀವನಗಾಥೆ, ಪವಾಡಗಳು ಅನಾವರಣಗೊಂಡಿವೆ. ಸಾಮಾಜಿಕ, ಕೌಟುಂಬಿಕ ಚಿತ್ರಗಳಲ್ಲೂ ರಾಯರ ಭಕ್ತಿಗೀತೆಗಳು ಜನಪ್ರಿಯವಾಗಿವೆ. ಜಾತಿ, ಮತ, ಧರ್ಮಗಳನ್ನು ಮೀರಿದ ರಾಯರ ಪ್ರಭಾವಳಿಯೇ ಇದಕ್ಕೆ ಕಾರಣವಾಗಿರಬಹುದು.

ಕನ್ನಡ ಚಿತ್ರರಂಗದ ಚಟುವಟಿಕೆಗಳು ಚೆನ್ನೈನಲ್ಲಿ ನಡೆಯುತ್ತಿದ್ದ ದಿನಗಳಲ್ಲೇ ರಾಯರ ಆರಾಧನೆ ಆರಂಭವಾಗಿತ್ತು. ಹಿರಿಯ ತಂತ್ರಜ್ಞರಾದ ಬಿ. ಆರ್. ಪಂತುಲು, ಸಿಂಗ್ ಠಾಕೂರ್ ಚಿತ್ರ ನಿರ್ಮಾಣಕ್ಕೆ ಮುನ್ನ ಮಂತ್ರಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಬಿಡುಗಡೆ ಮಾಡುವ ಮುನ್ನ ಇವರು ತಮ್ಮ ಚಿತ್ರದ ಪ್ರಥಮ ಪ್ರತಿಯನ್ನು ಬೃಂದಾವನದಲ್ಲಿಟ್ಟು ಪೂಜಿಸುತ್ತಿದ್ದರಂತೆ.

ಕನ್ನಡದ ಮೇರು ನಟ ಡಾ.ರಾಜ್‌ಕುಮಾರ್, ತಮಿಳು ಸ್ಟಾರ್ ರಜನೀಕಾಂತ್, ನಿರ್ದೇಶಕರಾದ ಹುಣಸೂರು ಕೃಷ್ಣಮೂರ್ತಿ, ದ್ವಾರಕೀಶ್, ನಟ ಶಿವರಾಂ ಹಾಗೂ ಇವರ ಸಮಕಾಲೀನರೇನಕರು ಶುಭ ಕಾರ್ಯಕ್ಕೆ ಮುನ್ನ ರಾಯರ ಅನುಗ್ರಹ ಪಡೆಯುವುದು ಕಡ್ಡಾಯವಾಗಿತ್ತು.

ರಾಯರ ಪಾತ್ರದಲ್ಲಿ ರಾಜ್

ಚಿತ್ರ ನಿರ್ಮಾಪಕರಲ್ಲಿದ್ದ ರಾಯರೆಡೆಗಿನ ಭಕ್ತಿ – ಭಾವ ತೆರೆ ಮೇಲೆ ಮೂಡಲು ಹೆಚ್ಚು ಸಮಯ ಬೇಕಾಗಲಿಲ್ಲ. ಸಿಂಗ್ ಠಾಕೂರ್ `ಮಂತ್ರಾಲಯ ಮಹಾತ್ಮೆ’ (1966) ನಿರ್ದೇಶಿಸಿದರು. ಡಾ. ರಾಜ್ ರಾಯರ ಪಾತ್ರಕ್ಕೆ ಜೀವ ತುಂಬಿದ್ದರು. ಚಿತ್ರದಲ್ಲಿ ರಾಯರೇ ರಚಿಸಿದ್ದ `ಇಂದು ಎನಗೆ ಗೋವಿಂದ…’ ಗೀತೆ ಬಳಕೆಯಾಗಿತ್ತು. 1980ರಲ್ಲಿ ಹುಣಸೂರು ಕೃಷ್ಣಮೂರ್ತಿ `ಗುರು ಸಾರ್ವಭೌಮ ಶ್ರೀ ರಾಘವೇಂದ್ರ ಕರುಣೆ’ ನಿರ್ದೇಶಿಸಿದ್ದರು.

ಸರಿಸುಮಾರು ಇದೇ ಸಮಯದಲ್ಲಿ `ರಾಘವೇಂದ್ರ ವೈಭವ’ ಚಿತ್ರವೂ ತಯಾರಾಗಿತ್ತು. ಈ ಸಿನಿಮಾದಲ್ಲಿ ನಟ ಶ್ರೀನಾಥ್ ರಾಯರ ಪಾತ್ರದಲ್ಲಿ ನಟಿಸಿದ್ದರು. ಮುಂದೆ 2011ರಲ್ಲಿ `ಶ್ರೀ ರಾಘವೇಂದ್ರ ಸ್ವಾಮಿ’ ಕನ್ನಡ ಚಿತ್ರ ತೆರೆಕಂಡಿತ್ತು. ಕೃಷ್ಣಚಂದ್ರ ನಿರ್ದೇಶನದಲ್ಲಿ ತಯಾರಾದ ಚಿತ್ರದ ಶಿರ್ಷಿಕೆ ಪಾತ್ರವನ್ನು ರವೀಂದ್ರ ಗೋಪಾಲ ನಿರ್ವಹಿಸಿದ್ದರು.

ರಜನೀ ಸಿನಿಮಾ

ತಮಿಳು ಚಿತ್ರರಂಗದ ಜನಪ್ರಿಯ ನಟ ರಜನೀಕಾಂತ್ ರಾಯರ ಪರಮ ಭಕ್ತ. 1985 ರಲ್ಲಿ ಅವರು ಶಿರ್ಷಿಕೆ ಪಾತ್ರದಲ್ಲಿ ನಟಿಸಿದ್ದ `ಶ್ರೀ ರಾಘವೇಂದ್ರ’ ತಮಿಳು ಚಿತ್ರ ಮೂಡಿಬಂದಿತ್ತು. ರಜನಿಗೆ ಇದು ವೃತ್ತಿ ಜೀವನದ 100 ನೇ ಸಿನಿಮಾ. ಎಸ್. ಪಿ. ಮುತ್ತುರಾಮನ್ ನಿರ್ದೇಶನದಲ್ಲಿ ತಯಾರಾದ ಚಿತ್ರ `ಶ್ರೀ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಹಾತ್ಯಂ’ ಶಿರ್ಷಿಕೆಯಡಿ ತೆಲುಗಿಗೂ ಡಬ್ ಆಗಿತ್ತು. ತಾವು ರಾಯರ ಪಾತ್ರದಲ್ಲಿ ನಟಿಸಲು ಡಾ. ರಾಜ್ ಪ್ರೇರಣೆ ಎಂದು ಹಿಂದೊಮ್ಮೆ ರಜನಿ ಹೇಳಿಕೊಂಡಿದ್ದರು.

ಬಿಡೆನು ನಿನ್ನ ಪಾದ…

ಭಕ್ತಿಪ್ರಧಾನ ಚಿತ್ರಗಳ ಹೊರತಾಗಿ ಇತರೆ ಪ್ರಯೋಗಗಳಲ್ಲೂ ರಾಯರ ಗೀತೆಗಳನ್ನು ನಾವು ನೋಡಬಹುದು. ಡಾ.ರಾಜ್‌ರ `ಪೂಜಿಸಲೆಂದೇ ಹೂಗಳ ತಂದೆ…’ (ಎರಡು ಕನಸು), `ಹಾಲಲ್ಲಾದರು ಹಾಕು…’ (ದೇವತಾ ಮನುಷ್ಯ) ಹಾಡುಗಳು ಜನಪ್ರಿಯವಾಗಿವೆ. ಸಂಕಷ್ಟದಲ್ಲಿ ರಾಯರನ್ನು ನೆನೆಯುವ `ಬಿಡೆನು ನಿನ್ನ ಪಾದ…’ (ನಾ ನಿನ್ನ ಬಿಡಲಾರೆ), `ದಾರಿ ಕಾಣದಾಗಿದೆ ರಾಘವೇಂದ್ರನೆ…’ (ದೀಪ) ಮತ್ತೆರಡು ಶ್ರೇಷ್ಠ ಉದಾಹರಣೆ. `ಭಾಗ್ಯವಂತ’ ಚಿತ್ರದ `ಗುರುವಾರ ಬಂತಮ್ಮ…’ ಸೇರಿದಂತೆ ಹಲವು ರಾಯರ ಭಕ್ತಿಗೀತೆಗಳು ರಚಿಸಲ್ಪಿಟ್ಟಿವೆ.

ಕಿರುತೆರೆಯಲ್ಲಿ…

ಕನ್ನಡ ಕಿರುತೆರೆಯಲ್ಲಿ ಮೂಡಿಬಂದ `ಶ್ರೀ ಗುರುರಾಘವೇಂದ್ರ ವೈಭವ’ ಸೀರಿಯಲ್ ಜನಮನ್ನಣೆಗೆ ಪಾತ್ರವಾಗಿತ್ತು. ಯುವನಟ ಪರೀಕ್ಷಿತ್ ಶಿರ್ಷಿಕೆ ಪಾತ್ರದಲ್ಲಿ ಅಭಿನಯಿಸಿದ್ದರು. ಸುವರ್ಣ ವಾಹಿನಿಯಲ್ಲಿ ನಿರ್ದೇಶಕ ಬ.ಲ.ಸುರೇಶ್ 565 ಸಂಚಿಕೆಗಳಲ್ಲಿ ಸಮಗ್ರವಾಗಿ ರಾಯರ ಕಥೆ, ಇತಿಹಾಸ ಕಟ್ಟಿಕೊಟ್ಟಿದ್ದರು. `ಕಲಿಯುಗದ ಕಲ್ಪತರು’, `ರಾಘವೇಂದ್ರ ವಿಜಯ’, `ಸಮಕಾಲೀನ ಇತಿಹಾಸ’ ಗ್ರಂಥಗಳನ್ನು ಆಧರಿಸಿ ಧಾರಾವಾಹಿಗೆ ಕಥೆ ಹೆಣೆಯಲಾಗಿತ್ತು.

ಈ ಟೀವಿ ವಾಹಿನಿಯಲ್ಲಿ `ಶ್ರೀ ರಾಘವೇಂದ್ರ ಮಹಿಮೆ’ ಶಿರ್ಷಿಕೆಯಡಿ ರಾಯರ ಕಥೆ ಮೂಡಿಬಂದಿತ್ತು. ಚಿತ್ರನಟ, ನೃತ್ಯ ತಾರೆ ಶ್ರೀಧರ್ ರಾಯರ ಪಾತ್ರದಲ್ಲಿ ಮನೋಜ್ಞ ಅಭಿನಯ ನೀಡಿದ್ದರು. ತೆಲುಗು ಮತ್ತು ತಮಿಳು ಕಿರುತೆರೆಯಲ್ಲಿಯೂ ರಾಯರ ಕಥೆಗಳು ಮೂಡಿಬಂದಿವೆ.

ಬರಹ: ಶಶಿಧರ ಚಿತ್ರದುರ್ಗ

ಫೋಟೋಗಳು: ಡಿ.ಸಿ.ನಾಗೇಶ್


ಓದಿ: ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...