Homeಮುಖಪುಟಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

- Advertisement -
- Advertisement -

2020ರ ಆಗಸ್ಟ್ 5 ರಂದು ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲು ಆಳುವ ಬಿಜೆಪಿಯ ವರಿಷ್ಠರು ನಿರ್ಧರಿಸಿದ್ದಾರೆ. ಆ ಜಾಗದಲ್ಲಿ ಭವ್ಯವಾದ ರಾಮಮಂದಿರವನ್ನು ನಿರ್ಮಿಸುವುದು ಅವರ ಉದ್ದೇಶವೆಂದು ತಿಳಿಸಲಾಗಿದೆ. ಆ ಮಂದಿರ ಭವ್ಯವಾಗಿ ಇರಬಹುದು; ಆದರೆ ಖಂಡಿತ ಪವಿತ್ರವಾಗಿರುವುದಿಲ್ಲ. ಅದಕ್ಕೊಂದು ಕಾರಣವಿದೆ. ಈ ಪ್ರಸ್ತಾಪಿತ ರಾಮಮಂದಿರವನ್ನು ಅಕ್ಷರಶಃ ಮನುಷ್ಯರ ಹೆಣಗಳ ಮೇಲೆ ನಿರ್ಮಿಸಲಾಗುತ್ತಿದೆ.

ನಾವು ಒಮ್ಮೆ 1992ರ ಡಿಸೆಂಬರ್ 6ರ ದಿನಗಳನ್ನು ಮನಸ್ಸಿನೊಳಗೆ ತಂದುಕೊಳ್ಳಬೇಕು. ಆ ದಿನ ದೇಶದ ಎಲ್ಲೆಡೆಯಿಂದ ಫೈಜಾಬಾದ್ ಸಮೀಪದ ಅಯೋಧ್ಯೆಗೆ ಲಕ್ಷಾಂತರ ಜನ ಕರಸೇವಕರು ಬಂದಿದ್ದರು. ಅವರು ಬಿಜೆಪಿ ಕಾರ್ಯಕರ್ತರು; ಹೆಚ್ಚಿನವರು ಆರ್ ಎಸ್‍ ಎಸ್ ಸ್ವಯಂಸೇವಕರು. ಕರಸೇವಕರಲ್ಲಿ ಕೆಲವರು ಹಾರೆ ಪಿಕಾಸಿಗಳ ಸಮೇತ ಅಲ್ಲಿ ಜಮಾಯಿಸಿದ್ದರು. ಅಂದು ಲಕ್ಷಾಂತರ ಜನರ ಸಮ್ಮುಖದಲ್ಲಿ, ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲಾಯಿತು. ಅದರ ಬೆನ್ನಿಗೆ ಮುಂಬೈ ಶಹರದಲ್ಲಿ, ಮತೀಯ ಹಿಂಸಾ ಕೃತ್ಯಗಳು ಪ್ರಾರಂಭವಾಗಿ, ಮುಂದೆ ಮೂರು ನಾಲ್ಕು ತಿಂಗಳುಗಳ ಕಾಲ ಆ ಶಹರದಲ್ಲಿ ಮಾರಣಹೋಮ ಅವ್ಯಾಹತವಾಗಿ ನಡೆಯಿತು.

ಈ ಗಲಭೆಗಳಲ್ಲಿ, ಬಿಜೆಪಿ ಶಿವಸೇನಾ ಮಾತ್ರವಲ್ಲ, ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಸಹ ಭಾಗಿಯಾಗಿ ಹಿಂಸಾಚಾರವೆಸಗಿದ್ದರು. ಈ ಕುರಿತು ಸರಕಾರ ನೇಮಿಸಿದ, ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಆಯೋಗ ಹಿಂಸಾಚಾರದ ಕುರಿತು ಸಾಕ್ಷ್ಯಾಧಾರ ಸಹಿತ ವಿವರವಾದ ವರದಿ ಸಲ್ಲಿಸಿದೆ. ನನಗೆ ಗೊತ್ತಿರುವ ಮಟ್ಟಿಗೆ ಈ ವರದಿಯನ್ನು ಯಾವ ಸರಕಾರವೂ ಅಧಿಕೃತವಾಗಿ ಇದುವರೆಗೆ ಸ್ವೀಕರಿಸಿಲ್ಲ.

ಒಂದು ದೃಷ್ಟಿಯಿಂದ 1992ರ ಮುಂಬೈ ಗಲಭೆಗಳು, 2002ರ ಗುಜರಾತ್‍ನ ಮುಸ್ಲಿಂ ನರಮೇಧಕ್ಕೂ ನಾಂದಿ ಹಾಡಿತು. 92ರಲ್ಲಿ ಅಡ್ವಾಣಿ ನೇತೃತ್ವದ ರಥಯಾತ್ರೆಗೆ ಆಯೋಜಕನಾಗಿ ಕೆಲಸ ಮಾಡಿದ್ದ ಒಬ್ಬ ಗುಜರಾತ್‍ನ ಕಾರ್ಯಕರ್ತ, ನರಮೇಧದ ಬಂಡವಾಳ ತರುವ ಲಾಭದ ಅರಿವು ಪಡೆದುಕೊಂಡ. ಈಗ ದೇಶದ ಪ್ರಧಾನಿಯಾಗಿರುವ ಮೋದಿ ಮಹಾಶಯರೇ 2002ರಲ್ಲಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

ಆ ಸಂದರ್ಭದಲ್ಲಿ ನಡೆದ ನರಮೇಧದಿಂದ ಈತನ ಜನಪ್ರಿಯತೆ ಕುಸಿಯುವ ಬದಲು ಇನ್ನಷ್ಟು ಹಿಗ್ಗಿತು. ಖ್ಯಾತ ಚಿಂತಕ ಶಿವ ವಿಶ್ವನಾಥನ್, ಮುಸ್ಲಿಮರ ನರಮೇಧ, ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸದೆ ಅವರು ಇನ್ನಷ್ಟು ಜನಪ್ರಿಯರಾದರು ಎಂದು ವಿಶ್ಲೇಷಿಸಿದ್ದರು. ಇದು ಸ್ವತಃ ಅಂದಿನ ಮುಖ್ಯಮಂತ್ರಿಯ ಸಂಚಾಲಕತ್ವದಲ್ಲಿ ನಡೆಯಿತೆಂಬ ಆರೋಪ ಕೇಳಿಬಂತಲ್ಲದೇ ವಿಚಾರಣೆಗಳೂ ನಡೆದವು. ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದವರಿಗೆ ಅದೇ ಕಾರಣಕ್ಕಾಗಿ ವಿಚಾರಣಾ ನ್ಯಾಯಾಲಯವು 28 ವರ್ಷಗಳ ಶಿಕ್ಷೆಯನ್ನೂ ವಿಧಿಸಿತ್ತು. ಗುಜರಾತ್‍ನಲ್ಲಿ ಆಗಿನಿಂದಲೂ ಅದೇ ಪಕ್ಷಕ್ಕೆ ಸೇರಿದ ಸರ್ಕಾರವಿದೆ ಎಂಬುದನ್ನು ಮರೆಯಲಾಗದು. ಆ ರಾಜ್ಯದಲ್ಲಿ ವಿಚಾರಣೆ ನಡೆದರೆ ನ್ಯಾಯಯುತವಾಗಿರಲಾರದೆಂಬ ಕಾರಣಕ್ಕೆ ದೇಶದ ಸರ್ವೋಚ್ಚ ನ್ಯಾಯಾಲಯವು ವಿಚಾರಣೆಗಳನ್ನು ಬೇರೆಡೆಗೆ ವರ್ಗಾಯಿಸಿತ್ತು. ಆ ರಾಜ್ಯದ ಗೃಹಮಂತ್ರಿಯನ್ನು ಬೇರೆಡೆಗೆ ಗಡಿಪಾರು ಮಾಡಲಾಗಿತ್ತು. ಅದೇ ಗೃಹಮಂತ್ರಿ ಇದೀಗ ದೇಶದ ಗೃಹಮಂತ್ರಿ ಮತ್ತು ಅಂತಹ ಘನಘೋರ ಹಿಂಸೆ ಮಾಡಿಸಿದ ಆರೋಪ ಹೊತ್ತಿದ್ದ ಮಹಾಶಯರೇ ಈಗ ನಮ್ಮ ಸಂವಿಧಾನದ ಮೌಲ್ಯಗಳ ವಿರುದ್ಧ ಮಂದಿರದ ಶಿಲಾನ್ಯಾಸ ಮಾಡಲಿದ್ದಾರೆ.

ಭಾರತದಲ್ಲಿ, ಇದುವರೆಗೆ ಹತ್ತಿರ ಹತ್ತಿರ 40,000 ಜನ ಕೋವಿಡ್ ಸೋಂಕಿನಿಂದ ಸತ್ತಿದ್ದಾರೆ. ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿ ಹಿಂದೆಂದೂ ಕಾಣದ ರೀತಿಯಲ್ಲಿ ಜರ್ಜರಿತವಾಗಿದೆ. ಇದು ಕೂಡ ಒಂದು ಪ್ರಭುತ್ವ ಆಯೋಜಿತ ಮಾರಣಹೋಮ. ಈ ಪರಿಸ್ಥಿತಿಯಲ್ಲಿ ಹಿಂದೂ ರಾಷ್ಟ್ರದ ಕಡೆಗೆ ಒಂದು ಮಹತ್ವದ ಹೆಜ್ಜೆ, ಈ ರಾಮ ಮಂದಿರವೆಂದು ಭಾವಿಸಲಾಗುತ್ತಿದೆ. ಇವೆಲ್ಲವುಗಳಿಗೆ ರಾಮಾಯಣದ ರೂಪಕ ಒಂದೇ; ಮಾನವೀಯತೆ, ನ್ಯಾಯ, ವಿವೇಕ ಮತ್ತು ನಮ್ಮ ಸಂವಿಧಾನದ ಮೌಲ್ಯಗಳನ್ನು ದೀರ್ಘ ವನವಾಸಕ್ಕೆ ಕಳುಹಿಸಲಾಗುತ್ತಿದೆ.

– ಜಿ ರಾಜಶೇಖರ್, ಉಡುಪಿ


ಇದನ್ನು ಓದಿ: ಕಮರಿದ ವಿಶ್ವಾಸ; ಕುಲೀನ ಅನುಮಾನಗಳ ನಡುವೆ, ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ: ಶಿವಸುಂದರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...