Homeಮುಖಪುಟಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

- Advertisement -
- Advertisement -

2020ರ ಆಗಸ್ಟ್ 5 ರಂದು ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲು ಆಳುವ ಬಿಜೆಪಿಯ ವರಿಷ್ಠರು ನಿರ್ಧರಿಸಿದ್ದಾರೆ. ಆ ಜಾಗದಲ್ಲಿ ಭವ್ಯವಾದ ರಾಮಮಂದಿರವನ್ನು ನಿರ್ಮಿಸುವುದು ಅವರ ಉದ್ದೇಶವೆಂದು ತಿಳಿಸಲಾಗಿದೆ. ಆ ಮಂದಿರ ಭವ್ಯವಾಗಿ ಇರಬಹುದು; ಆದರೆ ಖಂಡಿತ ಪವಿತ್ರವಾಗಿರುವುದಿಲ್ಲ. ಅದಕ್ಕೊಂದು ಕಾರಣವಿದೆ. ಈ ಪ್ರಸ್ತಾಪಿತ ರಾಮಮಂದಿರವನ್ನು ಅಕ್ಷರಶಃ ಮನುಷ್ಯರ ಹೆಣಗಳ ಮೇಲೆ ನಿರ್ಮಿಸಲಾಗುತ್ತಿದೆ.

ನಾವು ಒಮ್ಮೆ 1992ರ ಡಿಸೆಂಬರ್ 6ರ ದಿನಗಳನ್ನು ಮನಸ್ಸಿನೊಳಗೆ ತಂದುಕೊಳ್ಳಬೇಕು. ಆ ದಿನ ದೇಶದ ಎಲ್ಲೆಡೆಯಿಂದ ಫೈಜಾಬಾದ್ ಸಮೀಪದ ಅಯೋಧ್ಯೆಗೆ ಲಕ್ಷಾಂತರ ಜನ ಕರಸೇವಕರು ಬಂದಿದ್ದರು. ಅವರು ಬಿಜೆಪಿ ಕಾರ್ಯಕರ್ತರು; ಹೆಚ್ಚಿನವರು ಆರ್ ಎಸ್‍ ಎಸ್ ಸ್ವಯಂಸೇವಕರು. ಕರಸೇವಕರಲ್ಲಿ ಕೆಲವರು ಹಾರೆ ಪಿಕಾಸಿಗಳ ಸಮೇತ ಅಲ್ಲಿ ಜಮಾಯಿಸಿದ್ದರು. ಅಂದು ಲಕ್ಷಾಂತರ ಜನರ ಸಮ್ಮುಖದಲ್ಲಿ, ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲಾಯಿತು. ಅದರ ಬೆನ್ನಿಗೆ ಮುಂಬೈ ಶಹರದಲ್ಲಿ, ಮತೀಯ ಹಿಂಸಾ ಕೃತ್ಯಗಳು ಪ್ರಾರಂಭವಾಗಿ, ಮುಂದೆ ಮೂರು ನಾಲ್ಕು ತಿಂಗಳುಗಳ ಕಾಲ ಆ ಶಹರದಲ್ಲಿ ಮಾರಣಹೋಮ ಅವ್ಯಾಹತವಾಗಿ ನಡೆಯಿತು.

ಈ ಗಲಭೆಗಳಲ್ಲಿ, ಬಿಜೆಪಿ ಶಿವಸೇನಾ ಮಾತ್ರವಲ್ಲ, ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಸಹ ಭಾಗಿಯಾಗಿ ಹಿಂಸಾಚಾರವೆಸಗಿದ್ದರು. ಈ ಕುರಿತು ಸರಕಾರ ನೇಮಿಸಿದ, ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಆಯೋಗ ಹಿಂಸಾಚಾರದ ಕುರಿತು ಸಾಕ್ಷ್ಯಾಧಾರ ಸಹಿತ ವಿವರವಾದ ವರದಿ ಸಲ್ಲಿಸಿದೆ. ನನಗೆ ಗೊತ್ತಿರುವ ಮಟ್ಟಿಗೆ ಈ ವರದಿಯನ್ನು ಯಾವ ಸರಕಾರವೂ ಅಧಿಕೃತವಾಗಿ ಇದುವರೆಗೆ ಸ್ವೀಕರಿಸಿಲ್ಲ.

ಒಂದು ದೃಷ್ಟಿಯಿಂದ 1992ರ ಮುಂಬೈ ಗಲಭೆಗಳು, 2002ರ ಗುಜರಾತ್‍ನ ಮುಸ್ಲಿಂ ನರಮೇಧಕ್ಕೂ ನಾಂದಿ ಹಾಡಿತು. 92ರಲ್ಲಿ ಅಡ್ವಾಣಿ ನೇತೃತ್ವದ ರಥಯಾತ್ರೆಗೆ ಆಯೋಜಕನಾಗಿ ಕೆಲಸ ಮಾಡಿದ್ದ ಒಬ್ಬ ಗುಜರಾತ್‍ನ ಕಾರ್ಯಕರ್ತ, ನರಮೇಧದ ಬಂಡವಾಳ ತರುವ ಲಾಭದ ಅರಿವು ಪಡೆದುಕೊಂಡ. ಈಗ ದೇಶದ ಪ್ರಧಾನಿಯಾಗಿರುವ ಮೋದಿ ಮಹಾಶಯರೇ 2002ರಲ್ಲಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

ಆ ಸಂದರ್ಭದಲ್ಲಿ ನಡೆದ ನರಮೇಧದಿಂದ ಈತನ ಜನಪ್ರಿಯತೆ ಕುಸಿಯುವ ಬದಲು ಇನ್ನಷ್ಟು ಹಿಗ್ಗಿತು. ಖ್ಯಾತ ಚಿಂತಕ ಶಿವ ವಿಶ್ವನಾಥನ್, ಮುಸ್ಲಿಮರ ನರಮೇಧ, ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸದೆ ಅವರು ಇನ್ನಷ್ಟು ಜನಪ್ರಿಯರಾದರು ಎಂದು ವಿಶ್ಲೇಷಿಸಿದ್ದರು. ಇದು ಸ್ವತಃ ಅಂದಿನ ಮುಖ್ಯಮಂತ್ರಿಯ ಸಂಚಾಲಕತ್ವದಲ್ಲಿ ನಡೆಯಿತೆಂಬ ಆರೋಪ ಕೇಳಿಬಂತಲ್ಲದೇ ವಿಚಾರಣೆಗಳೂ ನಡೆದವು. ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದವರಿಗೆ ಅದೇ ಕಾರಣಕ್ಕಾಗಿ ವಿಚಾರಣಾ ನ್ಯಾಯಾಲಯವು 28 ವರ್ಷಗಳ ಶಿಕ್ಷೆಯನ್ನೂ ವಿಧಿಸಿತ್ತು. ಗುಜರಾತ್‍ನಲ್ಲಿ ಆಗಿನಿಂದಲೂ ಅದೇ ಪಕ್ಷಕ್ಕೆ ಸೇರಿದ ಸರ್ಕಾರವಿದೆ ಎಂಬುದನ್ನು ಮರೆಯಲಾಗದು. ಆ ರಾಜ್ಯದಲ್ಲಿ ವಿಚಾರಣೆ ನಡೆದರೆ ನ್ಯಾಯಯುತವಾಗಿರಲಾರದೆಂಬ ಕಾರಣಕ್ಕೆ ದೇಶದ ಸರ್ವೋಚ್ಚ ನ್ಯಾಯಾಲಯವು ವಿಚಾರಣೆಗಳನ್ನು ಬೇರೆಡೆಗೆ ವರ್ಗಾಯಿಸಿತ್ತು. ಆ ರಾಜ್ಯದ ಗೃಹಮಂತ್ರಿಯನ್ನು ಬೇರೆಡೆಗೆ ಗಡಿಪಾರು ಮಾಡಲಾಗಿತ್ತು. ಅದೇ ಗೃಹಮಂತ್ರಿ ಇದೀಗ ದೇಶದ ಗೃಹಮಂತ್ರಿ ಮತ್ತು ಅಂತಹ ಘನಘೋರ ಹಿಂಸೆ ಮಾಡಿಸಿದ ಆರೋಪ ಹೊತ್ತಿದ್ದ ಮಹಾಶಯರೇ ಈಗ ನಮ್ಮ ಸಂವಿಧಾನದ ಮೌಲ್ಯಗಳ ವಿರುದ್ಧ ಮಂದಿರದ ಶಿಲಾನ್ಯಾಸ ಮಾಡಲಿದ್ದಾರೆ.

ಭಾರತದಲ್ಲಿ, ಇದುವರೆಗೆ ಹತ್ತಿರ ಹತ್ತಿರ 40,000 ಜನ ಕೋವಿಡ್ ಸೋಂಕಿನಿಂದ ಸತ್ತಿದ್ದಾರೆ. ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿ ಹಿಂದೆಂದೂ ಕಾಣದ ರೀತಿಯಲ್ಲಿ ಜರ್ಜರಿತವಾಗಿದೆ. ಇದು ಕೂಡ ಒಂದು ಪ್ರಭುತ್ವ ಆಯೋಜಿತ ಮಾರಣಹೋಮ. ಈ ಪರಿಸ್ಥಿತಿಯಲ್ಲಿ ಹಿಂದೂ ರಾಷ್ಟ್ರದ ಕಡೆಗೆ ಒಂದು ಮಹತ್ವದ ಹೆಜ್ಜೆ, ಈ ರಾಮ ಮಂದಿರವೆಂದು ಭಾವಿಸಲಾಗುತ್ತಿದೆ. ಇವೆಲ್ಲವುಗಳಿಗೆ ರಾಮಾಯಣದ ರೂಪಕ ಒಂದೇ; ಮಾನವೀಯತೆ, ನ್ಯಾಯ, ವಿವೇಕ ಮತ್ತು ನಮ್ಮ ಸಂವಿಧಾನದ ಮೌಲ್ಯಗಳನ್ನು ದೀರ್ಘ ವನವಾಸಕ್ಕೆ ಕಳುಹಿಸಲಾಗುತ್ತಿದೆ.

– ಜಿ ರಾಜಶೇಖರ್, ಉಡುಪಿ


ಇದನ್ನು ಓದಿ: ಕಮರಿದ ವಿಶ್ವಾಸ; ಕುಲೀನ ಅನುಮಾನಗಳ ನಡುವೆ, ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ: ಶಿವಸುಂದರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...