Homeಮುಖಪುಟಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

- Advertisement -
- Advertisement -

2020ರ ಆಗಸ್ಟ್ 5 ರಂದು ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲು ಆಳುವ ಬಿಜೆಪಿಯ ವರಿಷ್ಠರು ನಿರ್ಧರಿಸಿದ್ದಾರೆ. ಆ ಜಾಗದಲ್ಲಿ ಭವ್ಯವಾದ ರಾಮಮಂದಿರವನ್ನು ನಿರ್ಮಿಸುವುದು ಅವರ ಉದ್ದೇಶವೆಂದು ತಿಳಿಸಲಾಗಿದೆ. ಆ ಮಂದಿರ ಭವ್ಯವಾಗಿ ಇರಬಹುದು; ಆದರೆ ಖಂಡಿತ ಪವಿತ್ರವಾಗಿರುವುದಿಲ್ಲ. ಅದಕ್ಕೊಂದು ಕಾರಣವಿದೆ. ಈ ಪ್ರಸ್ತಾಪಿತ ರಾಮಮಂದಿರವನ್ನು ಅಕ್ಷರಶಃ ಮನುಷ್ಯರ ಹೆಣಗಳ ಮೇಲೆ ನಿರ್ಮಿಸಲಾಗುತ್ತಿದೆ.

ನಾವು ಒಮ್ಮೆ 1992ರ ಡಿಸೆಂಬರ್ 6ರ ದಿನಗಳನ್ನು ಮನಸ್ಸಿನೊಳಗೆ ತಂದುಕೊಳ್ಳಬೇಕು. ಆ ದಿನ ದೇಶದ ಎಲ್ಲೆಡೆಯಿಂದ ಫೈಜಾಬಾದ್ ಸಮೀಪದ ಅಯೋಧ್ಯೆಗೆ ಲಕ್ಷಾಂತರ ಜನ ಕರಸೇವಕರು ಬಂದಿದ್ದರು. ಅವರು ಬಿಜೆಪಿ ಕಾರ್ಯಕರ್ತರು; ಹೆಚ್ಚಿನವರು ಆರ್ ಎಸ್‍ ಎಸ್ ಸ್ವಯಂಸೇವಕರು. ಕರಸೇವಕರಲ್ಲಿ ಕೆಲವರು ಹಾರೆ ಪಿಕಾಸಿಗಳ ಸಮೇತ ಅಲ್ಲಿ ಜಮಾಯಿಸಿದ್ದರು. ಅಂದು ಲಕ್ಷಾಂತರ ಜನರ ಸಮ್ಮುಖದಲ್ಲಿ, ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲಾಯಿತು. ಅದರ ಬೆನ್ನಿಗೆ ಮುಂಬೈ ಶಹರದಲ್ಲಿ, ಮತೀಯ ಹಿಂಸಾ ಕೃತ್ಯಗಳು ಪ್ರಾರಂಭವಾಗಿ, ಮುಂದೆ ಮೂರು ನಾಲ್ಕು ತಿಂಗಳುಗಳ ಕಾಲ ಆ ಶಹರದಲ್ಲಿ ಮಾರಣಹೋಮ ಅವ್ಯಾಹತವಾಗಿ ನಡೆಯಿತು.

ಈ ಗಲಭೆಗಳಲ್ಲಿ, ಬಿಜೆಪಿ ಶಿವಸೇನಾ ಮಾತ್ರವಲ್ಲ, ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಸಹ ಭಾಗಿಯಾಗಿ ಹಿಂಸಾಚಾರವೆಸಗಿದ್ದರು. ಈ ಕುರಿತು ಸರಕಾರ ನೇಮಿಸಿದ, ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಆಯೋಗ ಹಿಂಸಾಚಾರದ ಕುರಿತು ಸಾಕ್ಷ್ಯಾಧಾರ ಸಹಿತ ವಿವರವಾದ ವರದಿ ಸಲ್ಲಿಸಿದೆ. ನನಗೆ ಗೊತ್ತಿರುವ ಮಟ್ಟಿಗೆ ಈ ವರದಿಯನ್ನು ಯಾವ ಸರಕಾರವೂ ಅಧಿಕೃತವಾಗಿ ಇದುವರೆಗೆ ಸ್ವೀಕರಿಸಿಲ್ಲ.

ಒಂದು ದೃಷ್ಟಿಯಿಂದ 1992ರ ಮುಂಬೈ ಗಲಭೆಗಳು, 2002ರ ಗುಜರಾತ್‍ನ ಮುಸ್ಲಿಂ ನರಮೇಧಕ್ಕೂ ನಾಂದಿ ಹಾಡಿತು. 92ರಲ್ಲಿ ಅಡ್ವಾಣಿ ನೇತೃತ್ವದ ರಥಯಾತ್ರೆಗೆ ಆಯೋಜಕನಾಗಿ ಕೆಲಸ ಮಾಡಿದ್ದ ಒಬ್ಬ ಗುಜರಾತ್‍ನ ಕಾರ್ಯಕರ್ತ, ನರಮೇಧದ ಬಂಡವಾಳ ತರುವ ಲಾಭದ ಅರಿವು ಪಡೆದುಕೊಂಡ. ಈಗ ದೇಶದ ಪ್ರಧಾನಿಯಾಗಿರುವ ಮೋದಿ ಮಹಾಶಯರೇ 2002ರಲ್ಲಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

ಆ ಸಂದರ್ಭದಲ್ಲಿ ನಡೆದ ನರಮೇಧದಿಂದ ಈತನ ಜನಪ್ರಿಯತೆ ಕುಸಿಯುವ ಬದಲು ಇನ್ನಷ್ಟು ಹಿಗ್ಗಿತು. ಖ್ಯಾತ ಚಿಂತಕ ಶಿವ ವಿಶ್ವನಾಥನ್, ಮುಸ್ಲಿಮರ ನರಮೇಧ, ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸದೆ ಅವರು ಇನ್ನಷ್ಟು ಜನಪ್ರಿಯರಾದರು ಎಂದು ವಿಶ್ಲೇಷಿಸಿದ್ದರು. ಇದು ಸ್ವತಃ ಅಂದಿನ ಮುಖ್ಯಮಂತ್ರಿಯ ಸಂಚಾಲಕತ್ವದಲ್ಲಿ ನಡೆಯಿತೆಂಬ ಆರೋಪ ಕೇಳಿಬಂತಲ್ಲದೇ ವಿಚಾರಣೆಗಳೂ ನಡೆದವು. ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದವರಿಗೆ ಅದೇ ಕಾರಣಕ್ಕಾಗಿ ವಿಚಾರಣಾ ನ್ಯಾಯಾಲಯವು 28 ವರ್ಷಗಳ ಶಿಕ್ಷೆಯನ್ನೂ ವಿಧಿಸಿತ್ತು. ಗುಜರಾತ್‍ನಲ್ಲಿ ಆಗಿನಿಂದಲೂ ಅದೇ ಪಕ್ಷಕ್ಕೆ ಸೇರಿದ ಸರ್ಕಾರವಿದೆ ಎಂಬುದನ್ನು ಮರೆಯಲಾಗದು. ಆ ರಾಜ್ಯದಲ್ಲಿ ವಿಚಾರಣೆ ನಡೆದರೆ ನ್ಯಾಯಯುತವಾಗಿರಲಾರದೆಂಬ ಕಾರಣಕ್ಕೆ ದೇಶದ ಸರ್ವೋಚ್ಚ ನ್ಯಾಯಾಲಯವು ವಿಚಾರಣೆಗಳನ್ನು ಬೇರೆಡೆಗೆ ವರ್ಗಾಯಿಸಿತ್ತು. ಆ ರಾಜ್ಯದ ಗೃಹಮಂತ್ರಿಯನ್ನು ಬೇರೆಡೆಗೆ ಗಡಿಪಾರು ಮಾಡಲಾಗಿತ್ತು. ಅದೇ ಗೃಹಮಂತ್ರಿ ಇದೀಗ ದೇಶದ ಗೃಹಮಂತ್ರಿ ಮತ್ತು ಅಂತಹ ಘನಘೋರ ಹಿಂಸೆ ಮಾಡಿಸಿದ ಆರೋಪ ಹೊತ್ತಿದ್ದ ಮಹಾಶಯರೇ ಈಗ ನಮ್ಮ ಸಂವಿಧಾನದ ಮೌಲ್ಯಗಳ ವಿರುದ್ಧ ಮಂದಿರದ ಶಿಲಾನ್ಯಾಸ ಮಾಡಲಿದ್ದಾರೆ.

ಭಾರತದಲ್ಲಿ, ಇದುವರೆಗೆ ಹತ್ತಿರ ಹತ್ತಿರ 40,000 ಜನ ಕೋವಿಡ್ ಸೋಂಕಿನಿಂದ ಸತ್ತಿದ್ದಾರೆ. ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿ ಹಿಂದೆಂದೂ ಕಾಣದ ರೀತಿಯಲ್ಲಿ ಜರ್ಜರಿತವಾಗಿದೆ. ಇದು ಕೂಡ ಒಂದು ಪ್ರಭುತ್ವ ಆಯೋಜಿತ ಮಾರಣಹೋಮ. ಈ ಪರಿಸ್ಥಿತಿಯಲ್ಲಿ ಹಿಂದೂ ರಾಷ್ಟ್ರದ ಕಡೆಗೆ ಒಂದು ಮಹತ್ವದ ಹೆಜ್ಜೆ, ಈ ರಾಮ ಮಂದಿರವೆಂದು ಭಾವಿಸಲಾಗುತ್ತಿದೆ. ಇವೆಲ್ಲವುಗಳಿಗೆ ರಾಮಾಯಣದ ರೂಪಕ ಒಂದೇ; ಮಾನವೀಯತೆ, ನ್ಯಾಯ, ವಿವೇಕ ಮತ್ತು ನಮ್ಮ ಸಂವಿಧಾನದ ಮೌಲ್ಯಗಳನ್ನು ದೀರ್ಘ ವನವಾಸಕ್ಕೆ ಕಳುಹಿಸಲಾಗುತ್ತಿದೆ.

– ಜಿ ರಾಜಶೇಖರ್, ಉಡುಪಿ


ಇದನ್ನು ಓದಿ: ಕಮರಿದ ವಿಶ್ವಾಸ; ಕುಲೀನ ಅನುಮಾನಗಳ ನಡುವೆ, ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ: ಶಿವಸುಂದರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...