Homeಮುಖಪುಟಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್

- Advertisement -
- Advertisement -

2020ರ ಆಗಸ್ಟ್ 5 ರಂದು ರಾಮಮಂದಿರದ ಶಿಲಾನ್ಯಾಸ ಕಾರ್ಯಕ್ರಮವನ್ನು ನಡೆಸಲು ಆಳುವ ಬಿಜೆಪಿಯ ವರಿಷ್ಠರು ನಿರ್ಧರಿಸಿದ್ದಾರೆ. ಆ ಜಾಗದಲ್ಲಿ ಭವ್ಯವಾದ ರಾಮಮಂದಿರವನ್ನು ನಿರ್ಮಿಸುವುದು ಅವರ ಉದ್ದೇಶವೆಂದು ತಿಳಿಸಲಾಗಿದೆ. ಆ ಮಂದಿರ ಭವ್ಯವಾಗಿ ಇರಬಹುದು; ಆದರೆ ಖಂಡಿತ ಪವಿತ್ರವಾಗಿರುವುದಿಲ್ಲ. ಅದಕ್ಕೊಂದು ಕಾರಣವಿದೆ. ಈ ಪ್ರಸ್ತಾಪಿತ ರಾಮಮಂದಿರವನ್ನು ಅಕ್ಷರಶಃ ಮನುಷ್ಯರ ಹೆಣಗಳ ಮೇಲೆ ನಿರ್ಮಿಸಲಾಗುತ್ತಿದೆ.

ನಾವು ಒಮ್ಮೆ 1992ರ ಡಿಸೆಂಬರ್ 6ರ ದಿನಗಳನ್ನು ಮನಸ್ಸಿನೊಳಗೆ ತಂದುಕೊಳ್ಳಬೇಕು. ಆ ದಿನ ದೇಶದ ಎಲ್ಲೆಡೆಯಿಂದ ಫೈಜಾಬಾದ್ ಸಮೀಪದ ಅಯೋಧ್ಯೆಗೆ ಲಕ್ಷಾಂತರ ಜನ ಕರಸೇವಕರು ಬಂದಿದ್ದರು. ಅವರು ಬಿಜೆಪಿ ಕಾರ್ಯಕರ್ತರು; ಹೆಚ್ಚಿನವರು ಆರ್ ಎಸ್‍ ಎಸ್ ಸ್ವಯಂಸೇವಕರು. ಕರಸೇವಕರಲ್ಲಿ ಕೆಲವರು ಹಾರೆ ಪಿಕಾಸಿಗಳ ಸಮೇತ ಅಲ್ಲಿ ಜಮಾಯಿಸಿದ್ದರು. ಅಂದು ಲಕ್ಷಾಂತರ ಜನರ ಸಮ್ಮುಖದಲ್ಲಿ, ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲಾಯಿತು. ಅದರ ಬೆನ್ನಿಗೆ ಮುಂಬೈ ಶಹರದಲ್ಲಿ, ಮತೀಯ ಹಿಂಸಾ ಕೃತ್ಯಗಳು ಪ್ರಾರಂಭವಾಗಿ, ಮುಂದೆ ಮೂರು ನಾಲ್ಕು ತಿಂಗಳುಗಳ ಕಾಲ ಆ ಶಹರದಲ್ಲಿ ಮಾರಣಹೋಮ ಅವ್ಯಾಹತವಾಗಿ ನಡೆಯಿತು.

ಈ ಗಲಭೆಗಳಲ್ಲಿ, ಬಿಜೆಪಿ ಶಿವಸೇನಾ ಮಾತ್ರವಲ್ಲ, ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಸಹ ಭಾಗಿಯಾಗಿ ಹಿಂಸಾಚಾರವೆಸಗಿದ್ದರು. ಈ ಕುರಿತು ಸರಕಾರ ನೇಮಿಸಿದ, ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಆಯೋಗ ಹಿಂಸಾಚಾರದ ಕುರಿತು ಸಾಕ್ಷ್ಯಾಧಾರ ಸಹಿತ ವಿವರವಾದ ವರದಿ ಸಲ್ಲಿಸಿದೆ. ನನಗೆ ಗೊತ್ತಿರುವ ಮಟ್ಟಿಗೆ ಈ ವರದಿಯನ್ನು ಯಾವ ಸರಕಾರವೂ ಅಧಿಕೃತವಾಗಿ ಇದುವರೆಗೆ ಸ್ವೀಕರಿಸಿಲ್ಲ.

ಒಂದು ದೃಷ್ಟಿಯಿಂದ 1992ರ ಮುಂಬೈ ಗಲಭೆಗಳು, 2002ರ ಗುಜರಾತ್‍ನ ಮುಸ್ಲಿಂ ನರಮೇಧಕ್ಕೂ ನಾಂದಿ ಹಾಡಿತು. 92ರಲ್ಲಿ ಅಡ್ವಾಣಿ ನೇತೃತ್ವದ ರಥಯಾತ್ರೆಗೆ ಆಯೋಜಕನಾಗಿ ಕೆಲಸ ಮಾಡಿದ್ದ ಒಬ್ಬ ಗುಜರಾತ್‍ನ ಕಾರ್ಯಕರ್ತ, ನರಮೇಧದ ಬಂಡವಾಳ ತರುವ ಲಾಭದ ಅರಿವು ಪಡೆದುಕೊಂಡ. ಈಗ ದೇಶದ ಪ್ರಧಾನಿಯಾಗಿರುವ ಮೋದಿ ಮಹಾಶಯರೇ 2002ರಲ್ಲಿ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

ಆ ಸಂದರ್ಭದಲ್ಲಿ ನಡೆದ ನರಮೇಧದಿಂದ ಈತನ ಜನಪ್ರಿಯತೆ ಕುಸಿಯುವ ಬದಲು ಇನ್ನಷ್ಟು ಹಿಗ್ಗಿತು. ಖ್ಯಾತ ಚಿಂತಕ ಶಿವ ವಿಶ್ವನಾಥನ್, ಮುಸ್ಲಿಮರ ನರಮೇಧ, ಮೋದಿಯವರ ಜನಪ್ರಿಯತೆಯನ್ನು ಕುಗ್ಗಿಸದೆ ಅವರು ಇನ್ನಷ್ಟು ಜನಪ್ರಿಯರಾದರು ಎಂದು ವಿಶ್ಲೇಷಿಸಿದ್ದರು. ಇದು ಸ್ವತಃ ಅಂದಿನ ಮುಖ್ಯಮಂತ್ರಿಯ ಸಂಚಾಲಕತ್ವದಲ್ಲಿ ನಡೆಯಿತೆಂಬ ಆರೋಪ ಕೇಳಿಬಂತಲ್ಲದೇ ವಿಚಾರಣೆಗಳೂ ನಡೆದವು. ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದವರಿಗೆ ಅದೇ ಕಾರಣಕ್ಕಾಗಿ ವಿಚಾರಣಾ ನ್ಯಾಯಾಲಯವು 28 ವರ್ಷಗಳ ಶಿಕ್ಷೆಯನ್ನೂ ವಿಧಿಸಿತ್ತು. ಗುಜರಾತ್‍ನಲ್ಲಿ ಆಗಿನಿಂದಲೂ ಅದೇ ಪಕ್ಷಕ್ಕೆ ಸೇರಿದ ಸರ್ಕಾರವಿದೆ ಎಂಬುದನ್ನು ಮರೆಯಲಾಗದು. ಆ ರಾಜ್ಯದಲ್ಲಿ ವಿಚಾರಣೆ ನಡೆದರೆ ನ್ಯಾಯಯುತವಾಗಿರಲಾರದೆಂಬ ಕಾರಣಕ್ಕೆ ದೇಶದ ಸರ್ವೋಚ್ಚ ನ್ಯಾಯಾಲಯವು ವಿಚಾರಣೆಗಳನ್ನು ಬೇರೆಡೆಗೆ ವರ್ಗಾಯಿಸಿತ್ತು. ಆ ರಾಜ್ಯದ ಗೃಹಮಂತ್ರಿಯನ್ನು ಬೇರೆಡೆಗೆ ಗಡಿಪಾರು ಮಾಡಲಾಗಿತ್ತು. ಅದೇ ಗೃಹಮಂತ್ರಿ ಇದೀಗ ದೇಶದ ಗೃಹಮಂತ್ರಿ ಮತ್ತು ಅಂತಹ ಘನಘೋರ ಹಿಂಸೆ ಮಾಡಿಸಿದ ಆರೋಪ ಹೊತ್ತಿದ್ದ ಮಹಾಶಯರೇ ಈಗ ನಮ್ಮ ಸಂವಿಧಾನದ ಮೌಲ್ಯಗಳ ವಿರುದ್ಧ ಮಂದಿರದ ಶಿಲಾನ್ಯಾಸ ಮಾಡಲಿದ್ದಾರೆ.

ಭಾರತದಲ್ಲಿ, ಇದುವರೆಗೆ ಹತ್ತಿರ ಹತ್ತಿರ 40,000 ಜನ ಕೋವಿಡ್ ಸೋಂಕಿನಿಂದ ಸತ್ತಿದ್ದಾರೆ. ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿ ಹಿಂದೆಂದೂ ಕಾಣದ ರೀತಿಯಲ್ಲಿ ಜರ್ಜರಿತವಾಗಿದೆ. ಇದು ಕೂಡ ಒಂದು ಪ್ರಭುತ್ವ ಆಯೋಜಿತ ಮಾರಣಹೋಮ. ಈ ಪರಿಸ್ಥಿತಿಯಲ್ಲಿ ಹಿಂದೂ ರಾಷ್ಟ್ರದ ಕಡೆಗೆ ಒಂದು ಮಹತ್ವದ ಹೆಜ್ಜೆ, ಈ ರಾಮ ಮಂದಿರವೆಂದು ಭಾವಿಸಲಾಗುತ್ತಿದೆ. ಇವೆಲ್ಲವುಗಳಿಗೆ ರಾಮಾಯಣದ ರೂಪಕ ಒಂದೇ; ಮಾನವೀಯತೆ, ನ್ಯಾಯ, ವಿವೇಕ ಮತ್ತು ನಮ್ಮ ಸಂವಿಧಾನದ ಮೌಲ್ಯಗಳನ್ನು ದೀರ್ಘ ವನವಾಸಕ್ಕೆ ಕಳುಹಿಸಲಾಗುತ್ತಿದೆ.

– ಜಿ ರಾಜಶೇಖರ್, ಉಡುಪಿ


ಇದನ್ನು ಓದಿ: ಕಮರಿದ ವಿಶ್ವಾಸ; ಕುಲೀನ ಅನುಮಾನಗಳ ನಡುವೆ, ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ: ಶಿವಸುಂದರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...