Homeಅಂಕಣಗಳುಮಾರಿ ಸೆಲ್ವರಾಜ್‍ರ ನೂತನ ಭಾರತದಲ್ಲಿ ಈಗ ಧನುಷ್ ’ಕರ್ಣ’

ಮಾರಿ ಸೆಲ್ವರಾಜ್‍ರ ನೂತನ ಭಾರತದಲ್ಲಿ ಈಗ ಧನುಷ್ ’ಕರ್ಣ’

- Advertisement -
- Advertisement -

‘ಭಾರತೀಯ ಚಿತ್ರರಂಗವನ್ನು ರಾಮಾಯಣ ಮತ್ತು ಮಹಾಭಾರತದ ಆಚೆಗೆ ನಿಂತು ನೋಡಲು ಸಾದ್ಯವಿಲ್ಲ’ ಎನ್ನುವ, ನಿರ್ದೇಶಕ ಮಣಿರತ್ನಂ ಅವರ ಮಾತು ಒಂದು ಮಟ್ಟಕ್ಕೆ ನಿಜ ಕೂಡ.

ನಮ್ಮಲ್ಲಿ ಮಹಾಭಾರತ ಮತ್ತು ರಾಮಾಯಣದ ಕಥೆ ಅಥವಾ ಆ ಕಾವ್ಯಗಳ ಪಾತ್ರಗಳನ್ನು ಆಧಾರವಾಗಿಟ್ಟುಕೊಂಡು ಬಂದ ಹಲವಾರು ಚಿತ್ರಗಳು ಯಶಸ್ವಿಯಾಗಿದೆ. ಕೆಲವು ಚಿತ್ರಗಳು ಈ ಕಥೆ/ಪಾತ್ರಗಳನ್ನು ಯಥಾವತ್ತಾಗಿ(ಪೌರಾಣಿಕವಾಗಿ) ಚಿತ್ರಿಸಿದ್ದರೆ, ಮತ್ತೆ ಕೆಲವು ಚಿತ್ರಗಳು ಅವುಗಳಿಂದ ಸ್ಪೂರ್ತಿ ಪಡೆದು, ಕಾಲಕ್ಕೆ ತಕ್ಕಂತೆ (ಆಧುನಿಕ)ವಿಶ್ಲೇಷಣಾತ್ಮಕವಾಗಿ ಚಿತ್ರಿಸಿವೆ.

ಮಹಾಭಾರತವನ್ನು ಆಧಾರವಾಗಿಟ್ಟುಕೊಂಡ ಸುಮಾರು 91 ಚಿತ್ರಗಳು, ರಾಮಾಯಣವನ್ನು ಆಧಾರವಾಗಿಟ್ಟುಕೊಂಡ ಸುಮಾರು 47 ಚಿತ್ರಗಳು ಭಾರತೀಯ ಚಿತ್ರರಂಗದಲ್ಲಿ, ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ.

ಮಹಾಭಾರತದಲ್ಲಿ ಅತ್ಯಂತ ಪ್ರಮುಖ ಮತ್ತು ದುರಂತ ನಾಯಕ ಎನಿಸಿಕೊಂಡ ಕರ್ಣನ ಪಾತ್ರವು ಹಲವು ನಿರ್ದೇಶಕರುಗಳಿಗೆ ಸ್ಪೂರ್ತಿಯಾಗಿದೆ. ‘ಕರ್ಣರಸಾಯನಮಲ್ತೆ ಭಾರತಂ’ ಎನ್ನುವ ಕುಮಾರವ್ಯಾಸನ ಮಾತಿನಂತೆ, ಮಹಾಭಾರತವೆಂದರೆ ಕರ್ಣ-ಕರ್ಣನೆಂದರೆ ಮಹಾಭಾರತ ಎನ್ನಬಹುದೇನೋ?

ಕರ್ಣನ ಹುಟ್ಟು, ಬೆಳವಣಿಗೆ, ಬೆಳೆದ ಮನೆತನದ ಜಾತಿಯ ಕಾರಣದಿಂದ ಅನುಭವಿಸಿದ ಅವಮಾನ, ಆತನ ಸ್ನೇಹಪರತೆ, ದಾನ, ಸತ್ಯ, ಪ್ರಾಮಾಣಿಕತೆ, ಧೈರ್ಯ, ನೈತಿಕತೆ ಮುಂತಾದ ಗುಣಗಳೆಲ್ಲವೂ ಆ ಪಾತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸಿದೆ. ಈ ಕಾರಣಕ್ಕಾಗಿಯೇ ಕರ್ಣನ ಪಾತ್ರವನ್ನಿಟ್ಟುಕೊಂಡು ಹಲವು ಚಿತ್ರಗಳು ಬಿಡುಗಡೆಯಾಗಿವೆ. ಇನ್ನೂ ಮತ್ತಷ್ಟು ಚಿತ್ರಗಳು ಸೆಟ್ಟೇರಿವೆ.

ಅವುಗಳಲ್ಲಿ, ತಮಿಳಿನ ಯಶಸ್ವಿ ಯುವ ನಿರ್ದೇಶಕರಲ್ಲಿ ಒಬ್ಬರಾದ ಮಾರಿ ಸೆಲ್ವರಾಜ್ ನಿರ್ದೇಶನದಲ್ಲಿ ಇನ್ನೂ ಚಿತ್ರೀಕರಣ ಹಂತದಲ್ಲಿರುವ ತಮಿಳು ಚಿತ್ರ “ಕರ್ಣನ್” ಸದ್ಯ ಹೆಚ್ಚು ಚರ್ಚಿಸಲ್ಪಡುತ್ತಿರುವ ಚಿತ್ರವಾಗಿದೆ.

ಇದಕ್ಕೆ ಹಲವು ಕಾರಣಗಳಿವೆ. ಮೊದಲನೆಯದಾಗಿ, ಮಾರಿ ಸೆಲ್ವರಾಜ್ ಈ ಹಿಂದೆ ತಮ್ಮ ಚೊಚ್ಚಲ ಸಿನಿಮಾ ‘ಪರಿಯೇರುಂ ಪೆರುಮಾಳ್’ ಮೂಲಕ ಪ್ರೇಕ್ಷಕರ ಮತ್ತು ವಿಮರ್ಶಕರ ಗಮನ ಸೆಳೆದಿದ್ದರಲ್ಲದೆ ಆ ಸಿನೆಮಾಗ ಭಾರಿ ಪ್ರಶಂಸೆ ವ್ಯಕ್ತವಾಗಿತ್ತು. ಸಬ್-ಆಲ್ಟರ್ನ್ ಪರಿದೃಷ್ಟಿಯಿಂದ ಜಾತಿವ್ಯವಸ್ಥೆ ಮತ್ತು ಅದರ ಕಬಂದ ಬಾಹುಗಳ ಸಮಸ್ಯೆ ಮತ್ತು ಪರಿಣಾಮಗಳನ್ನು ಸಂವೇದನಾಶೀಲವಾಗಿ ದಾಟಿಸುವಲ್ಲಿ ನಿರ್ದೇಶಕ ಯಶಸ್ವಿಯಾಗಿದ್ದರು. ಮುಖ್ಯವಾಹಿನಿಯ ಚಿತ್ರದಂತೆಯೇ ಮನರಂಜನೆ ಮತ್ತು ಹಣಗಳಿಕೆಯ ದೃಷ್ಟಿಯಲ್ಲೂ ‘ಪರಿಯೇರುಂ ಪೆರುಮಾಳ್’ ಯಶಸ್ವಿಯಾಗಿತ್ತು.

ಎರಡನೆಯದಾಗಿ, ಈಗ ಸೆಟ್ಟೇರಿರುವ ಸಿನಿಮಾದ ನಾಯಕನಾಗಿ ಅಭಿನಯಿಸುತ್ತಿರುವ ಧನುಷ್ ಕೂಡ ಈ ಚಿತ್ರದ ಮೇಲಿನ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಧನುಷ್ ಮುಖ್ಯಪಾತ್ರದಲ್ಲಿ ನಟಿಸಿದ್ದ ವೆಟ್ರಿಮಾರನ್ ನಿರ್ದೇಶನದ ’ಅಸುರನ್’ ಚಿತ್ರ ದೊಡ್ಡಮಟ್ಟದಲ್ಲಿ ಯಶಸ್ಸನ್ನು ಕಂಡಿತ್ತು. ಅದೂ ಅಲ್ಲದೆ ಧನುಷ್ ಅವರ ‘ವಂಡರ್ ಬಾರ್’ ಬ್ಯಾನರ್ ಅಡಿಯಲ್ಲಿ ಅತ್ಯುತ್ತಮ ಚಿತ್ರಗಳ ನಿರ್ಮಾಣವಾಗುತ್ತಿದೆ. ಅವುಗಳೆಲ್ಲವೂ ಬಹುತೇಕ ಜಾತಿ ವ್ಯವಸ್ಥೆ ತಳಸಮುದಾಯಗಳನ್ನು ಶೋಷಿಸುವ ವಸ್ತು-ವಿಷಯಗಳನ್ನು ಹೊಂದಿರುವಂತವು.

ಕೆಲವು ದಿನಗಳ ಹಿಂದೆ ಈ ಚಿತ್ರದ ಮೇಕಿಂಗ್ ವಿಡಿಯೋವೊಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಮೇಕಿಂಗ್‍ನಲ್ಲಿ ಚಿತ್ರಕ್ಕಾಗಿ ಒಂದು ಹಳ್ಳಿಯನ್ನೇ ನಿರ್ಮಿಸುತ್ತಿರುವ ವಿಷಯ ಹೆಚ್ಚು ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.

ಮೂರನೆಯದಾಗಿ, ಅದರ ಶೀರ್ಷಿಕೆಯಿಂದಲೇ ಮತ್ತಷ್ಟು ಕುತೂಹಲವನ್ನು ಹುಟ್ಟಿಸಿದೆ. ಕರ್ಣನ ಪಾತ್ರವನ್ನು ಅಥವಾ ಅದರ ಸ್ಪೂರ್ತಿಯಿಂದ ಮೂಡಿರುವ ಪಾತ್ರವನ್ನು ತಮಿಳಿನ ದಿಗ್ಗಜ ನಟರುಗಳು ಈ ಹಿಂದೆ ಅಭಿನಯಿಸಿದ್ದಾರೆ. ಈಗ ಇದು ಧನುಷ್ ಅವರ ಸರದಿಗೆ ಬಂದಿದೆ.

1964 ರಲ್ಲಿ ಬಿಡುಗಡೆಯಾಗಿದ್ದ ತಮಿಳು ಪೌರಾಣಿಕ ಚಿತ್ರ ‘ಕರ್ಣನ್’ ಭಾರತೀಯ ಮತ್ತು ತಮಿಳು ಚಿತ್ರರಂಗದಲ್ಲಿ ಒಂದು ಮೈಲಿಗಲ್ಲಾಗಿತ್ತು. ಈ ಚಿತ್ರದ ನಾಯಕ ಶಿವಾಜಿ ಗಣೇಶನ್ ಅವರ ನಟನೆ ತಮಿಳಯನಾಡಿನ ಜನರಲ್ಲಿ ಇಂದಿಗೂ ನೆನಪಿನಲ್ಲುಳಿದಿದೆ. ಬಿ ಆರ್ ಪಂತುಲು ನಿರ್ದೇಶಿಸಿದ್ದ ಈ ಚಿತ್ರ, 11ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (ಮೂರನೇ ಅತ್ಯುತ್ತಮ ಚಿತ್ರ) ಪಡೆದುಕೊಂಡಿತ್ತು. ಇಷ್ಟೇ ಅಲ್ಲದೇ ಎನ್. ಟಿ. ರಾಮಾರಾವ್ ಅವರಿಂದ ಹಿಡಿದು ಸಾವಿತ್ರಿ, ಮುತ್ತುರಾಮನ್, ಎಂ. ವಿ. ರಾಜಮ್ಮ ಮುಂತಾದವರ ದೊಡ್ಡ ತಾರಾಬಳಗವೇ ಇತ್ತು. ಕರ್ಣನ ಪಾತ್ರವನ್ನು ತಮ್ಮ ಅದ್ಭುತ ಅಭಿನಯದ ಮೂಲಕ ಶಿವಾಜಿ ಗಣೇಶನ್ ಕಟ್ಟಿಕೊಟ್ಟಿದ್ದರು.

1991ರಲ್ಲಿ ಮಣಿರತ್ನಂ ನಿರ್ದೇಶನದಲ್ಲಿ ಬಿಡುಗಡೆಯಾದ ಮತ್ತೊಂದು ಯಶಸ್ವಿ ತಮಿಳು ಚಿತ್ರ ‘ದಳಪತಿ’. ಮಹಾಭಾರತವನ್ನು ಅಳವಡಿಸಿಕೊಂಡಿದ್ದ ಈ ಸಮಕಾಲೀನ ಕಥೆಯಲ್ಲಿ ರಜನಿಕಾಂತ್ ಕರ್ಣನಿಂದ ಸ್ಪೂರ್ತಿ ಪಡೆದ ಪಾತ್ರವನ್ನು ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ನಿರ್ದೇಶಕ ಕರ್ಣನ ಪಾತ್ರವನ್ನು ಈ ಚಿತ್ರದಲ್ಲಿ ಹೆಚ್ಚು ಸಮಕಾಲೀನಗೊಳಿಸಿದ್ದಾರೆ.

ಹುಟ್ಟಿದಾಗಲೇ ತಾಯಿಂದ ಬೇರೆಯಾಗುವ ಮಗು(ಸೂರ್ಯ/ಕರ್ಣ) ಬೆಳೆಯುತ್ತಾ ದೇವರಾಜ್ (ದುರ್ಯೋಧನ) ಎನ್ನುವ ರೌಡಿಯ ಸ್ನೇಹವನ್ನು ಮಾಡುತ್ತಾನೆ. ಸುಬ್ಬಲಕ್ಷ್ಮಿ ಎನ್ನುವ ಬ್ರಾಹ್ಮಣ ಹುಡುಗಿಯನ್ನು ಪ್ರೀತಿಸಿ, ತನ್ನ ಹುಟ್ಟಿನ ಕಾರಣಕ್ಕೆ, ಸ್ನೇಹದ ಕಾರಣಕ್ಕೆ ಆಕೆಯ ತಂದೆಯಿಂದಲೇ ಅವಮಾನಿತನಾಗುತ್ತಾನೆ. ಅದೇ ಊರಿಗೆ ಡಿ.ಸಿಯಾಗಿ ಬರುವ ತನ್ನ ತಮ್ಮ ಅರವಿಂದಸಾಮಿ (ಅರ್ಜುನ) ಸೂರ್ಯ ಮತ್ತು ದೇವರಾಜ್‌ನನ್ನು ಮಟ್ಟಹಾಕಲು ಯತ್ನಿಸುತ್ತಾನೆ. ಇದರ ನಡುವೆ ತಾಯಿ (ಕುಂತಿ) ಪ್ರೀತಿಯ ಸಂಘರ್ಷವನ್ನೂ ಸಿನೆಮಾ ಒಳಗೊಂಡಿದೆ.

ಹೀಗೆ ಮಹಾಭಾರತದ ಕಥೆಯ ಹಿನ್ನಲೆಯಲ್ಲಿ ಕರ್ಣನ ಪಾತ್ರದಿಂದ ಸ್ಪೂರ್ತಿಗೊಂಡ ಈ ಚಿತ್ರ ರಜನಿಕಾಂತ್, ಮಣಿರತ್ನಂ ಮತ್ತು ತಮಿಳು ಚಿತ್ರರಂಗಕ್ಕೆ ಒಂದು ಮೈಲಿಗಲ್ಲಾಯಿತು.

ಪ್ರಸ್ತುತ ಧನುಷ್ ಈಗ ಕರ್ಣನಾಗಲಿದ್ದಾರೆ. ಆದರೆ ಇದು ಪೌರಾಣಿಕ ಚಿತ್ರವಲ್ಲ. ಬದಲಿಗೆ ನಿರ್ದೇಶಕರ ಹಿನ್ನೆಲೆಯಿಂದ ನೋಡುವುದಾದರೆ, ಪಕ್ಕಾ ತಳಸಮುದಾಯದ ಪರವಾದ ದನಿಯಿರುವ ಚಿತ್ರ ಇದು ಎನ್ನುವುದರಲ್ಲಿ ಅನುಮಾನವಿಲ್ಲ.

ನಿರ್ದೇಶಕನ ಮಾತುಗಳಲ್ಲೇ ಹೇಳುವುದಾದರೆ ”ಇದು ನನ್ನ ಎರಡನೇ ಚಿತ್ರ. ವಾಸ್ತವದಲ್ಲಿ ಇದೇ ಮೊದಲ ಚಿತ್ರವಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ‘ಪರಿಯೇರುಂ ಪೆರುಮಾಳ್’ ಚಿತ್ರ ಮೊದಲು ಬರಬೇಕಾಯಿತು. ನನ್ನ ಸಿದ್ಧಾಂತವನ್ನು ಈ ಚಿತ್ರದಲ್ಲಿಯೇ ವ್ಯಕ್ತಪಡಿಸಿದ್ದೆ. ಇದರಲ್ಲಿ ನಾಯಕ ತಾನಾಯಿತು ತನ್ನ ಪಾಡಾಯಿತು ಎಂದು ಬದುಕುತ್ತಿರುತ್ತಾನೆ. ಆದರೂ ಆತನನ್ನು ಬಿಡದೇ ಕಾಡುವ ಜಾತಿ ವ್ಯವಸ್ಥೆಯ ಅನಿಷ್ಟಗಳನ್ನು ಸೂಕ್ಷ್ಮವಾಗಿ ತೊರಿಸುವಲ್ಲಿ ಯಶಸ್ವಿಯಾಗಿದ್ದೆ ಎಂದು ನಂಬಿದ್ದೇನೆ.

ಆದರೆ ‘ಕರ್ಣನ್’ ಚಿತ್ರದಲ್ಲಿ ನಾಯಕ ಅನ್ಯಾಯವನ್ನು ಸಹಿಸದ, ತನ್ನ(ತಳಸಮುದಾಯದ) ಜನಗಳಿಗಾಗಿ, ನ್ಯಾಯಕ್ಕಾಗಿ ಏನನ್ನು ಬೇಕಾದರೂ ಮಾಡುವ ಛಲವುಳ್ಳವನಾಗಿರುತ್ತಾನೆ. ಮಹಾಭಾರತದ ಕರ್ಣನ ತ್ಯಾಗ ಮತ್ತು ಧೈರ್ಯವನ್ನು ಈ ಚಿತ್ರದ ನಾಯಕನಲ್ಲಿ ಕಾಣಬಹುದು. ಪೌರಾಣಿಕ ಕರ್ಣನಿಗಿಂತ ವಿಭಿನ್ನವಾಗಿ ಹೋರಾಟ ಮಾಡಿ ತನ್ನ ಹಕ್ಕನ್ನು ಪಡೆಯುತ್ತಾನೆ’’ ಎನ್ನುತ್ತಾರೆ ಮಾರಿ ಸೆಲ್ವರಾಜ್.

ಶಿವಾಜಿ ಗಣೇಶನ್ ಮತ್ತು ರಜನಿಕಾಂತ್ ಕರ್ಣನಾಗಿ ನಟಿಸಿದ್ದ ಚಿತ್ರಗಳು ಉಂಟುಮಾಡಿದ ಸಂಚಲನವನ್ನು ಈ ಚಿತ್ರವು ಇನ್ನೂ ವಿಭಿನ್ನವಾಗಿ ಉಂಟುಮಾಡಬಹುದೆಂಬ ನಿರೀಕ್ಷೆಯನ್ನು ಚಿತ್ರಪ್ರೇಮಿಗಳಿಗೆ ಹುಟ್ಟಿಸಿದೆ. ತುದಿಗಾಲಿನಲ್ಲಿ ಚಿತ್ರಕ್ಕಾಗಿ ಕಾಯುವಂತೆ ಮಾಡಿದೆ.

– ಪ್ರತಾಪ್ ಹುಣಸೂರು


ಇದನ್ನು ಓದಿ: ಕೀಲಾರ ಟೆಂಟ್ ಹೌಸ್-4: ಮನುಷ್ಯನ ಆಳದ ಮಾನವೀಯ ತಂತುಗಳನ್ನು ಶೋಧಿಸುವ ಕೀಸ್ಲೋಸ್ಕಿ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...

ಶೇ.80 ರಷ್ಟು ಮಹಿಳೆಯರು ಕಿರುಕುಳ ಎದುರಿಸುತ್ತಿದ್ದಾರೆ; ಹಿಂಸಾಚಾರವು ಅವರ ಪ್ರಗತಿಗೆ ಅಡ್ಡಿಯಾಗಿದೆ: ರಾಹುಲ್ ಗಾಂಧಿ

ದೇಶದ ಅತಿದೊಡ್ಡ ಆಸ್ತಿಯಾಗಿರುವ ಮಹಿಳೆಯರು ಪ್ರಗತಿ ಸಾಧಿಸುವುದನ್ನು ತಡೆಯಲು ಸಮಾಜದಲ್ಲಿ ಹಿಂಸಾಚಾರವನ್ನು ಬಳಸಲಾಗುತ್ತಿದೆ. ಶೇಕಡಾ 80 ರಷ್ಟು ಜನರು ಕಿರುಕುಳ ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...

‘ಅಕ್ರಮ ವಲಸಿಗರ ಪರಿಶೀಲನೆ’ ನೆಪದಲ್ಲಿ ಬಂಗಾಳಿ ವಲಸೆ ಕಾರ್ಮಿಕರ ಮೇಲೆ ಬೆಂಗಳೂರು ಪೊಲೀಸರಿಂದ ದೌರ್ಜನ್ಯ: ಜಂಟಿ ಸತ್ಯಶೋಧನಾ ವರದಿ

ಬೆಂಗಳೂರು ನಗರದಲ್ಲಿ ನಡೆದ "ಅಕ್ರಮ ವಲಸಿಗರ ಪರಿಶೀಲನೆ" ಕಾರ್ಯಾಚರಣೆಯ ಹೆಸರಿನಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಭಾಷೆ ಮತ್ತು ವರ್ಗದ ಆಧಾರದ ಮೇಲೆ ಪ್ರೊಫೈಲಿಂಗ್ ಮಾಡಿ, ಅವರ ಮೇಲೆ ಅನಿಯಂತ್ರಿತ ಬಂಧನ, ಹಲ್ಲೆ...