Homeಅಂಕಣಗಳುಮಾರಿ ಸೆಲ್ವರಾಜ್‍ರ ನೂತನ ಭಾರತದಲ್ಲಿ ಈಗ ಧನುಷ್ ’ಕರ್ಣ’

ಮಾರಿ ಸೆಲ್ವರಾಜ್‍ರ ನೂತನ ಭಾರತದಲ್ಲಿ ಈಗ ಧನುಷ್ ’ಕರ್ಣ’

- Advertisement -
- Advertisement -

‘ಭಾರತೀಯ ಚಿತ್ರರಂಗವನ್ನು ರಾಮಾಯಣ ಮತ್ತು ಮಹಾಭಾರತದ ಆಚೆಗೆ ನಿಂತು ನೋಡಲು ಸಾದ್ಯವಿಲ್ಲ’ ಎನ್ನುವ, ನಿರ್ದೇಶಕ ಮಣಿರತ್ನಂ ಅವರ ಮಾತು ಒಂದು ಮಟ್ಟಕ್ಕೆ ನಿಜ ಕೂಡ.

ನಮ್ಮಲ್ಲಿ ಮಹಾಭಾರತ ಮತ್ತು ರಾಮಾಯಣದ ಕಥೆ ಅಥವಾ ಆ ಕಾವ್ಯಗಳ ಪಾತ್ರಗಳನ್ನು ಆಧಾರವಾಗಿಟ್ಟುಕೊಂಡು ಬಂದ ಹಲವಾರು ಚಿತ್ರಗಳು ಯಶಸ್ವಿಯಾಗಿದೆ. ಕೆಲವು ಚಿತ್ರಗಳು ಈ ಕಥೆ/ಪಾತ್ರಗಳನ್ನು ಯಥಾವತ್ತಾಗಿ(ಪೌರಾಣಿಕವಾಗಿ) ಚಿತ್ರಿಸಿದ್ದರೆ, ಮತ್ತೆ ಕೆಲವು ಚಿತ್ರಗಳು ಅವುಗಳಿಂದ ಸ್ಪೂರ್ತಿ ಪಡೆದು, ಕಾಲಕ್ಕೆ ತಕ್ಕಂತೆ (ಆಧುನಿಕ)ವಿಶ್ಲೇಷಣಾತ್ಮಕವಾಗಿ ಚಿತ್ರಿಸಿವೆ.

ಮಹಾಭಾರತವನ್ನು ಆಧಾರವಾಗಿಟ್ಟುಕೊಂಡ ಸುಮಾರು 91 ಚಿತ್ರಗಳು, ರಾಮಾಯಣವನ್ನು ಆಧಾರವಾಗಿಟ್ಟುಕೊಂಡ ಸುಮಾರು 47 ಚಿತ್ರಗಳು ಭಾರತೀಯ ಚಿತ್ರರಂಗದಲ್ಲಿ, ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ.

ಮಹಾಭಾರತದಲ್ಲಿ ಅತ್ಯಂತ ಪ್ರಮುಖ ಮತ್ತು ದುರಂತ ನಾಯಕ ಎನಿಸಿಕೊಂಡ ಕರ್ಣನ ಪಾತ್ರವು ಹಲವು ನಿರ್ದೇಶಕರುಗಳಿಗೆ ಸ್ಪೂರ್ತಿಯಾಗಿದೆ. ‘ಕರ್ಣರಸಾಯನಮಲ್ತೆ ಭಾರತಂ’ ಎನ್ನುವ ಕುಮಾರವ್ಯಾಸನ ಮಾತಿನಂತೆ, ಮಹಾಭಾರತವೆಂದರೆ ಕರ್ಣ-ಕರ್ಣನೆಂದರೆ ಮಹಾಭಾರತ ಎನ್ನಬಹುದೇನೋ?

ಕರ್ಣನ ಹುಟ್ಟು, ಬೆಳವಣಿಗೆ, ಬೆಳೆದ ಮನೆತನದ ಜಾತಿಯ ಕಾರಣದಿಂದ ಅನುಭವಿಸಿದ ಅವಮಾನ, ಆತನ ಸ್ನೇಹಪರತೆ, ದಾನ, ಸತ್ಯ, ಪ್ರಾಮಾಣಿಕತೆ, ಧೈರ್ಯ, ನೈತಿಕತೆ ಮುಂತಾದ ಗುಣಗಳೆಲ್ಲವೂ ಆ ಪಾತ್ರವನ್ನು ಮತ್ತಷ್ಟು ಶ್ರೀಮಂತಗೊಳಿಸಿದೆ. ಈ ಕಾರಣಕ್ಕಾಗಿಯೇ ಕರ್ಣನ ಪಾತ್ರವನ್ನಿಟ್ಟುಕೊಂಡು ಹಲವು ಚಿತ್ರಗಳು ಬಿಡುಗಡೆಯಾಗಿವೆ. ಇನ್ನೂ ಮತ್ತಷ್ಟು ಚಿತ್ರಗಳು ಸೆಟ್ಟೇರಿವೆ.

ಅವುಗಳಲ್ಲಿ, ತಮಿಳಿನ ಯಶಸ್ವಿ ಯುವ ನಿರ್ದೇಶಕರಲ್ಲಿ ಒಬ್ಬರಾದ ಮಾರಿ ಸೆಲ್ವರಾಜ್ ನಿರ್ದೇಶನದಲ್ಲಿ ಇನ್ನೂ ಚಿತ್ರೀಕರಣ ಹಂತದಲ್ಲಿರುವ ತಮಿಳು ಚಿತ್ರ “ಕರ್ಣನ್” ಸದ್ಯ ಹೆಚ್ಚು ಚರ್ಚಿಸಲ್ಪಡುತ್ತಿರುವ ಚಿತ್ರವಾಗಿದೆ.

ಇದಕ್ಕೆ ಹಲವು ಕಾರಣಗಳಿವೆ. ಮೊದಲನೆಯದಾಗಿ, ಮಾರಿ ಸೆಲ್ವರಾಜ್ ಈ ಹಿಂದೆ ತಮ್ಮ ಚೊಚ್ಚಲ ಸಿನಿಮಾ ‘ಪರಿಯೇರುಂ ಪೆರುಮಾಳ್’ ಮೂಲಕ ಪ್ರೇಕ್ಷಕರ ಮತ್ತು ವಿಮರ್ಶಕರ ಗಮನ ಸೆಳೆದಿದ್ದರಲ್ಲದೆ ಆ ಸಿನೆಮಾಗ ಭಾರಿ ಪ್ರಶಂಸೆ ವ್ಯಕ್ತವಾಗಿತ್ತು. ಸಬ್-ಆಲ್ಟರ್ನ್ ಪರಿದೃಷ್ಟಿಯಿಂದ ಜಾತಿವ್ಯವಸ್ಥೆ ಮತ್ತು ಅದರ ಕಬಂದ ಬಾಹುಗಳ ಸಮಸ್ಯೆ ಮತ್ತು ಪರಿಣಾಮಗಳನ್ನು ಸಂವೇದನಾಶೀಲವಾಗಿ ದಾಟಿಸುವಲ್ಲಿ ನಿರ್ದೇಶಕ ಯಶಸ್ವಿಯಾಗಿದ್ದರು. ಮುಖ್ಯವಾಹಿನಿಯ ಚಿತ್ರದಂತೆಯೇ ಮನರಂಜನೆ ಮತ್ತು ಹಣಗಳಿಕೆಯ ದೃಷ್ಟಿಯಲ್ಲೂ ‘ಪರಿಯೇರುಂ ಪೆರುಮಾಳ್’ ಯಶಸ್ವಿಯಾಗಿತ್ತು.

ಎರಡನೆಯದಾಗಿ, ಈಗ ಸೆಟ್ಟೇರಿರುವ ಸಿನಿಮಾದ ನಾಯಕನಾಗಿ ಅಭಿನಯಿಸುತ್ತಿರುವ ಧನುಷ್ ಕೂಡ ಈ ಚಿತ್ರದ ಮೇಲಿನ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ಧನುಷ್ ಮುಖ್ಯಪಾತ್ರದಲ್ಲಿ ನಟಿಸಿದ್ದ ವೆಟ್ರಿಮಾರನ್ ನಿರ್ದೇಶನದ ’ಅಸುರನ್’ ಚಿತ್ರ ದೊಡ್ಡಮಟ್ಟದಲ್ಲಿ ಯಶಸ್ಸನ್ನು ಕಂಡಿತ್ತು. ಅದೂ ಅಲ್ಲದೆ ಧನುಷ್ ಅವರ ‘ವಂಡರ್ ಬಾರ್’ ಬ್ಯಾನರ್ ಅಡಿಯಲ್ಲಿ ಅತ್ಯುತ್ತಮ ಚಿತ್ರಗಳ ನಿರ್ಮಾಣವಾಗುತ್ತಿದೆ. ಅವುಗಳೆಲ್ಲವೂ ಬಹುತೇಕ ಜಾತಿ ವ್ಯವಸ್ಥೆ ತಳಸಮುದಾಯಗಳನ್ನು ಶೋಷಿಸುವ ವಸ್ತು-ವಿಷಯಗಳನ್ನು ಹೊಂದಿರುವಂತವು.

ಕೆಲವು ದಿನಗಳ ಹಿಂದೆ ಈ ಚಿತ್ರದ ಮೇಕಿಂಗ್ ವಿಡಿಯೋವೊಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಮೇಕಿಂಗ್‍ನಲ್ಲಿ ಚಿತ್ರಕ್ಕಾಗಿ ಒಂದು ಹಳ್ಳಿಯನ್ನೇ ನಿರ್ಮಿಸುತ್ತಿರುವ ವಿಷಯ ಹೆಚ್ಚು ಚರ್ಚೆ ಮತ್ತು ಕುತೂಹಲಕ್ಕೆ ಕಾರಣವಾಗಿದೆ.

ಮೂರನೆಯದಾಗಿ, ಅದರ ಶೀರ್ಷಿಕೆಯಿಂದಲೇ ಮತ್ತಷ್ಟು ಕುತೂಹಲವನ್ನು ಹುಟ್ಟಿಸಿದೆ. ಕರ್ಣನ ಪಾತ್ರವನ್ನು ಅಥವಾ ಅದರ ಸ್ಪೂರ್ತಿಯಿಂದ ಮೂಡಿರುವ ಪಾತ್ರವನ್ನು ತಮಿಳಿನ ದಿಗ್ಗಜ ನಟರುಗಳು ಈ ಹಿಂದೆ ಅಭಿನಯಿಸಿದ್ದಾರೆ. ಈಗ ಇದು ಧನುಷ್ ಅವರ ಸರದಿಗೆ ಬಂದಿದೆ.

1964 ರಲ್ಲಿ ಬಿಡುಗಡೆಯಾಗಿದ್ದ ತಮಿಳು ಪೌರಾಣಿಕ ಚಿತ್ರ ‘ಕರ್ಣನ್’ ಭಾರತೀಯ ಮತ್ತು ತಮಿಳು ಚಿತ್ರರಂಗದಲ್ಲಿ ಒಂದು ಮೈಲಿಗಲ್ಲಾಗಿತ್ತು. ಈ ಚಿತ್ರದ ನಾಯಕ ಶಿವಾಜಿ ಗಣೇಶನ್ ಅವರ ನಟನೆ ತಮಿಳಯನಾಡಿನ ಜನರಲ್ಲಿ ಇಂದಿಗೂ ನೆನಪಿನಲ್ಲುಳಿದಿದೆ. ಬಿ ಆರ್ ಪಂತುಲು ನಿರ್ದೇಶಿಸಿದ್ದ ಈ ಚಿತ್ರ, 11ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು (ಮೂರನೇ ಅತ್ಯುತ್ತಮ ಚಿತ್ರ) ಪಡೆದುಕೊಂಡಿತ್ತು. ಇಷ್ಟೇ ಅಲ್ಲದೇ ಎನ್. ಟಿ. ರಾಮಾರಾವ್ ಅವರಿಂದ ಹಿಡಿದು ಸಾವಿತ್ರಿ, ಮುತ್ತುರಾಮನ್, ಎಂ. ವಿ. ರಾಜಮ್ಮ ಮುಂತಾದವರ ದೊಡ್ಡ ತಾರಾಬಳಗವೇ ಇತ್ತು. ಕರ್ಣನ ಪಾತ್ರವನ್ನು ತಮ್ಮ ಅದ್ಭುತ ಅಭಿನಯದ ಮೂಲಕ ಶಿವಾಜಿ ಗಣೇಶನ್ ಕಟ್ಟಿಕೊಟ್ಟಿದ್ದರು.

1991ರಲ್ಲಿ ಮಣಿರತ್ನಂ ನಿರ್ದೇಶನದಲ್ಲಿ ಬಿಡುಗಡೆಯಾದ ಮತ್ತೊಂದು ಯಶಸ್ವಿ ತಮಿಳು ಚಿತ್ರ ‘ದಳಪತಿ’. ಮಹಾಭಾರತವನ್ನು ಅಳವಡಿಸಿಕೊಂಡಿದ್ದ ಈ ಸಮಕಾಲೀನ ಕಥೆಯಲ್ಲಿ ರಜನಿಕಾಂತ್ ಕರ್ಣನಿಂದ ಸ್ಪೂರ್ತಿ ಪಡೆದ ಪಾತ್ರವನ್ನು ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ನಿರ್ದೇಶಕ ಕರ್ಣನ ಪಾತ್ರವನ್ನು ಈ ಚಿತ್ರದಲ್ಲಿ ಹೆಚ್ಚು ಸಮಕಾಲೀನಗೊಳಿಸಿದ್ದಾರೆ.

ಹುಟ್ಟಿದಾಗಲೇ ತಾಯಿಂದ ಬೇರೆಯಾಗುವ ಮಗು(ಸೂರ್ಯ/ಕರ್ಣ) ಬೆಳೆಯುತ್ತಾ ದೇವರಾಜ್ (ದುರ್ಯೋಧನ) ಎನ್ನುವ ರೌಡಿಯ ಸ್ನೇಹವನ್ನು ಮಾಡುತ್ತಾನೆ. ಸುಬ್ಬಲಕ್ಷ್ಮಿ ಎನ್ನುವ ಬ್ರಾಹ್ಮಣ ಹುಡುಗಿಯನ್ನು ಪ್ರೀತಿಸಿ, ತನ್ನ ಹುಟ್ಟಿನ ಕಾರಣಕ್ಕೆ, ಸ್ನೇಹದ ಕಾರಣಕ್ಕೆ ಆಕೆಯ ತಂದೆಯಿಂದಲೇ ಅವಮಾನಿತನಾಗುತ್ತಾನೆ. ಅದೇ ಊರಿಗೆ ಡಿ.ಸಿಯಾಗಿ ಬರುವ ತನ್ನ ತಮ್ಮ ಅರವಿಂದಸಾಮಿ (ಅರ್ಜುನ) ಸೂರ್ಯ ಮತ್ತು ದೇವರಾಜ್‌ನನ್ನು ಮಟ್ಟಹಾಕಲು ಯತ್ನಿಸುತ್ತಾನೆ. ಇದರ ನಡುವೆ ತಾಯಿ (ಕುಂತಿ) ಪ್ರೀತಿಯ ಸಂಘರ್ಷವನ್ನೂ ಸಿನೆಮಾ ಒಳಗೊಂಡಿದೆ.

ಹೀಗೆ ಮಹಾಭಾರತದ ಕಥೆಯ ಹಿನ್ನಲೆಯಲ್ಲಿ ಕರ್ಣನ ಪಾತ್ರದಿಂದ ಸ್ಪೂರ್ತಿಗೊಂಡ ಈ ಚಿತ್ರ ರಜನಿಕಾಂತ್, ಮಣಿರತ್ನಂ ಮತ್ತು ತಮಿಳು ಚಿತ್ರರಂಗಕ್ಕೆ ಒಂದು ಮೈಲಿಗಲ್ಲಾಯಿತು.

ಪ್ರಸ್ತುತ ಧನುಷ್ ಈಗ ಕರ್ಣನಾಗಲಿದ್ದಾರೆ. ಆದರೆ ಇದು ಪೌರಾಣಿಕ ಚಿತ್ರವಲ್ಲ. ಬದಲಿಗೆ ನಿರ್ದೇಶಕರ ಹಿನ್ನೆಲೆಯಿಂದ ನೋಡುವುದಾದರೆ, ಪಕ್ಕಾ ತಳಸಮುದಾಯದ ಪರವಾದ ದನಿಯಿರುವ ಚಿತ್ರ ಇದು ಎನ್ನುವುದರಲ್ಲಿ ಅನುಮಾನವಿಲ್ಲ.

ನಿರ್ದೇಶಕನ ಮಾತುಗಳಲ್ಲೇ ಹೇಳುವುದಾದರೆ ”ಇದು ನನ್ನ ಎರಡನೇ ಚಿತ್ರ. ವಾಸ್ತವದಲ್ಲಿ ಇದೇ ಮೊದಲ ಚಿತ್ರವಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ‘ಪರಿಯೇರುಂ ಪೆರುಮಾಳ್’ ಚಿತ್ರ ಮೊದಲು ಬರಬೇಕಾಯಿತು. ನನ್ನ ಸಿದ್ಧಾಂತವನ್ನು ಈ ಚಿತ್ರದಲ್ಲಿಯೇ ವ್ಯಕ್ತಪಡಿಸಿದ್ದೆ. ಇದರಲ್ಲಿ ನಾಯಕ ತಾನಾಯಿತು ತನ್ನ ಪಾಡಾಯಿತು ಎಂದು ಬದುಕುತ್ತಿರುತ್ತಾನೆ. ಆದರೂ ಆತನನ್ನು ಬಿಡದೇ ಕಾಡುವ ಜಾತಿ ವ್ಯವಸ್ಥೆಯ ಅನಿಷ್ಟಗಳನ್ನು ಸೂಕ್ಷ್ಮವಾಗಿ ತೊರಿಸುವಲ್ಲಿ ಯಶಸ್ವಿಯಾಗಿದ್ದೆ ಎಂದು ನಂಬಿದ್ದೇನೆ.

ಆದರೆ ‘ಕರ್ಣನ್’ ಚಿತ್ರದಲ್ಲಿ ನಾಯಕ ಅನ್ಯಾಯವನ್ನು ಸಹಿಸದ, ತನ್ನ(ತಳಸಮುದಾಯದ) ಜನಗಳಿಗಾಗಿ, ನ್ಯಾಯಕ್ಕಾಗಿ ಏನನ್ನು ಬೇಕಾದರೂ ಮಾಡುವ ಛಲವುಳ್ಳವನಾಗಿರುತ್ತಾನೆ. ಮಹಾಭಾರತದ ಕರ್ಣನ ತ್ಯಾಗ ಮತ್ತು ಧೈರ್ಯವನ್ನು ಈ ಚಿತ್ರದ ನಾಯಕನಲ್ಲಿ ಕಾಣಬಹುದು. ಪೌರಾಣಿಕ ಕರ್ಣನಿಗಿಂತ ವಿಭಿನ್ನವಾಗಿ ಹೋರಾಟ ಮಾಡಿ ತನ್ನ ಹಕ್ಕನ್ನು ಪಡೆಯುತ್ತಾನೆ’’ ಎನ್ನುತ್ತಾರೆ ಮಾರಿ ಸೆಲ್ವರಾಜ್.

ಶಿವಾಜಿ ಗಣೇಶನ್ ಮತ್ತು ರಜನಿಕಾಂತ್ ಕರ್ಣನಾಗಿ ನಟಿಸಿದ್ದ ಚಿತ್ರಗಳು ಉಂಟುಮಾಡಿದ ಸಂಚಲನವನ್ನು ಈ ಚಿತ್ರವು ಇನ್ನೂ ವಿಭಿನ್ನವಾಗಿ ಉಂಟುಮಾಡಬಹುದೆಂಬ ನಿರೀಕ್ಷೆಯನ್ನು ಚಿತ್ರಪ್ರೇಮಿಗಳಿಗೆ ಹುಟ್ಟಿಸಿದೆ. ತುದಿಗಾಲಿನಲ್ಲಿ ಚಿತ್ರಕ್ಕಾಗಿ ಕಾಯುವಂತೆ ಮಾಡಿದೆ.

– ಪ್ರತಾಪ್ ಹುಣಸೂರು


ಇದನ್ನು ಓದಿ: ಕೀಲಾರ ಟೆಂಟ್ ಹೌಸ್-4: ಮನುಷ್ಯನ ಆಳದ ಮಾನವೀಯ ತಂತುಗಳನ್ನು ಶೋಧಿಸುವ ಕೀಸ್ಲೋಸ್ಕಿ ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...