Homeಅಂಕಣಗಳುಬೆಂಕಿ ಬರಹ-ಮಂದಿರವಲ್ಲೇ ಕಟ್ಟಿದೆವು...!

ಬೆಂಕಿ ಬರಹ-ಮಂದಿರವಲ್ಲೇ ಕಟ್ಟಿದೆವು…!

ಭೂಮಿಯಲ್ಲಿ ಜೈಶ್ರೀರಾಮ್ ಎಂದು ಕೂಗುತ್ತಾ ಹೊಡೆಯುತ್ತಿರುವ ಒಂದೊಂದು ಏಟಿಗೂ ಇಲ್ಲಿ ರಾಮನ ಮೈಮೇಲೆ ಬಾಸುಂಡೆ ಏಳುತ್ತಾ ಇದೆ.

- Advertisement -
- Advertisement -

“ಇಂಥ ಪರೀಕ್ಷೆ ಮಾಡ್ಲೇಬೇಕಿತ್ತಾ? ಬೆಂಕಿ ಸುಡದೇ ಇರಲು ಸಾಧ್ಯವಾ?” ಕೋಪ ಮತ್ತು ಬೇಸರದಿಂದ ಅಭಿಲಾಷ ಶೃತಿಯನ್ನು ಕೇಳಿದಳು. “ಏನ್ ಮಾಡೋಕೆ ಆಗುತ್ತೆ ನೀನೇ ಹೇಳು ಎಲ್ಲಾ ಆ ಅಗಸನಿಂದ ಆಗಿದ್ದು. ಅವನಿಗೆ ಇರುವಂತೆ ಬೇರೆಯವರಿಗೂ ಅನುಮಾನ ಇರುತ್ತೆ ಅಲ್ವ? ಹಾಗಾಗಿ ಈ ಅಗ್ನಿ ಪರೀಕ್ಷೆಯಂತೆ” ಉತ್ತರಿಸಿದಳು ಶೃತಿ.

ಸೀತೆಯ ಪಾವಿತ್ರತೆಯನ್ನು ಪರೀಕ್ಷೆ ಮಾಡಲು ಅಗ್ನಿಪರೀಕ್ಷೆಗೆ ಸಿದ್ಧತೆಗಳು ನಡೆದಿತ್ತು. ಊರಿನ ಜನರೆಲ್ಲಾ ಅಗ್ನಿ ಪರೀಕ್ಷೆ ನೋಡಲು ಸೇರಿದ್ದರು. ಅಭಿಲಾಷಳಿಗೆ ಕೋಪದಲ್ಲಿಯೇ ವಿಚಾರವೊಂದು ಹೊಳೆದಿತ್ತು, ಜನಜಾತ್ರೆಯ ಮಧ್ಯದಲ್ಲಿಯೇ ಕೂಗಿ ಹೇಳಿದಳು “ನಾನೇನು ಸೀತೆ ಅಲ್ಲ, ಎಲ್ಲಾನೂ ಒಪ್ಕಂಡು ಸುಮ್ನಿರೋಕೆ. ನನಗೂ ನನ್ನ ಗಂಡನ ಮೇಲೆ ಅನುಮಾನವಿದೆ. ಇದೇ ಅಗ್ನಿಯಲ್ಲಿ ನನ್ನ ಗಂಡನ ಪರೀಕ್ಷೆಯೂ ಆಗಲಿ” ಎಂದು ಕೂಗಿದಳು.

ಸುತ್ತ ನಿಂತಿದ್ದ ಮಹಿಳೆಯರ ಮುಖ ನೋಡುತ್ತಾ ನಿಮ್ಮಲ್ಲಿ ಯಾರಿಗೂ ನಿಮ್ಮ ಗಂಡನ ಮೇಲೆ ಅನುಮಾನವಿಲ್ಲವೇ? ಎಂದು ಪ್ರಶ್ನೆ ಎಸೆದಳು. ಹಲವರು ಗಾಬರಿಯಲ್ಲಿ ಅಭಿಲಾಷಳ ಮುಖ ನೋಡುತ್ತಾ ಮೌನವಾಗಿ ನಿಂತುಬಿಟ್ಟರು, ಇನ್ನು ಕೆಲವರು ಯೋಚಿಸುತ್ತಾ ಗೊಂದಲದಲ್ಲಿದ್ದರು. ಸ್ವಲ್ಪ ದೂರದಲ್ಲೇ ನಿಂತಿದ್ದ ಅಭಿಲಾಷಳ ಗಂಡ ಮತ್ತು ಇತರ ಗಂಡಸರ ಗುಂಪು ಭಯಬೀತರಾಗಿದ್ದರು. ಅಭಿಲಾಷಳ ಸುತ್ತ ನಿಂತವರಲ್ಲಿ ಕೆಲವರು ಅವಳ ಪ್ರಶ್ನೆಗೆ “ಹೌದು ನಮಗೂ ಅನುಮಾನವಿದೆ” ಎಂದು ಹೇಳುತ್ತಿದ್ದಂತೆಯೇ ಗಂಡಸರ ಗುಂಪು ಇವರ ದನಿ ಕೇಳಿಸದ ರೀತಿಯಲ್ಲಿ ಜೋರಾಗಿ “ಜೈ ಶ್ರೀರಾಮ್” ಎಂದು ಘೋಷಣೆ ಹಾಕಲು ಶುರು ಮಾಡಿದರು. ಜೈ ಶ್ರೀರಾಮ್ ಘೋಷಣೆಗೆ ದನಿಗೂಡಿಸುವ ಗಂಡಸರ ಸಂಖ್ಯೆ ಹೆಚ್ಚುತ್ತಲೇ ಹೋಯಿತು.

ಘೋಷಣೆ ಕೂಗಲು ಶುರು ಮಾಡಿ ಬರೀ ಎರಡು ನಿಮಿಷ ಮಾತ್ರವಾಗಿತ್ತು. ಒಂದು ಗುಂಪಿನಿಂದ ಶುರುವಾಗಿದ್ದು ಇದೀಗ ಸುಮಾರು ೧೫ ಬೇರೆ ಬೇರೆ ಗುಂಪುಗಳಾಗಿದೆ. ಹೋಟೆಲ್, ಅಂಗಡಿ, ಮನೆಗಳಿಗೆ ನುಗ್ಗಿ ಜೈ ಶ್ರೀರಾಮ್ ಎಂದು ಕೂಗಲು ಒತ್ತಾಯಿಸುತ್ತಿದ್ದಾರೆ. ನೋಡ ನೋಡುತ್ತಿದ್ದಂತೆಯೇ ಘೋಷಣೆ ಕೂಗುತ್ತಿದ್ದವರ ಕೈಗಳಲ್ಲಿ ದೊಣ್ಣೆ, ಕಲ್ಲುಗಳು ಬಂದುಬಿಟ್ಟಿವೆ. ಜೈ ಶ್ರೀರಾಮ್ ಎಂದು ಕೂಗಲು ನಿರಾಕರಿಸುವವರಿಗೆ ‘ಧರ್ಮ’ದೇಟು ಹಾಕುತ್ತಿದ್ದಾರೆ.

ಕ್ಷಣ ಮಾತ್ರದಲ್ಲಿ ಶುರುವಾಗಿದ್ದ ಈ ಗಲಭೆಯನ್ನು ನೋಡುತ್ತಿದ್ದ ವ್ಯಕ್ತಿಯೊಬ್ಬ ಇದೇನಾಯಿತು ಎಂಬ ಅರಿವಿಲ್ಲದೆ ಆಘಾತಕ್ಕೊಳಗಾಗಿ ಏನು ಮಾಡುವುದೆಂದು ತಿಳಿಯದೆ ಎಲ್ಲವನ್ನೂ ನೋಡುತ್ತ ನಿಂತಿದ್ದ. ಈ ವ್ಯಕ್ತಿಯನ್ನು ಗಮನಿಸಿದ ಗುಂಪು ಈತನೆಡೆಗೆ ಓಡಿ ಬಂತು. “ಹೇಯ್ ಜೈ ಶ್ರೀರಾಮ್ ಹೇಳೋ” ಎಂದು ಗುಂಪಿನಿಂದ ಒಬ್ಬ ಗದರಿದ. ಗೊಂದಲಕ್ಕೊಳಗಾದ ಆ ವ್ಯಕ್ತಿ ಗುಂಪಿನಲ್ಲಿ ಒಬ್ಬಾತ ಹಿಡಿದಿದ್ದ ದೊಣ್ಣೆಯನ್ನೇ ನೋಡುತ್ತಾ ನಿಂತ. ಗುಂಪಿನಿಂದ ಮತ್ತೊಬ್ಬ ಏನೋ ಸುಮ್ನೆ ನಿಂತಿದ್ದೀಯಾ, ಎಷ್ಟೋ ಧೈರ್ಯ ನಿನಗೆ, ಜೈ ಶ್ರೀರಾಮ್ ಹೇಳು ಎಂದು ಮುಂದಕ್ಕೆ ಬಂದ. ವ್ಯಕ್ತಿ ಇನ್ನೂ ಸುಮ್ಮನೇ ನಿಂತಿದ್ದ.

”ಇವನ್ಯಾರೋ ಸಾಬನೇ ಇರಬೇಕು ಕಣ್ರೋ ಅದಕ್ಕೆ ಬಾಯಿ ಬಿಡ್ತಿಲ್ಲ” ಎಂದ ಇನ್ನೊಬ್ಬ “ಇಲ್ಲ, ಟೋಪಿ ಇಲ್ಲ ಗಡ್ಡ ಇಲ್ಲ, ಬಹುಶಃ ಬುದ್ದಿಜೀವಿಯೋ, ವಿಚಾರವಾದಿಯೋ ಇರಬೇಕು ಬಿಲ್ಲು ಬಾಣ ಬೇರೆ ಇಟ್ಕೊಂಡ್ ಬಂದಿದ್ದಾನೆ, ಇಲ್ಲಿ ನಡಿಯೋ ಪವಿತ್ರವಾದ ಅಗ್ನಿಪರೀಕ್ಷೆಯನ್ನ ಕೆಡಿಸೋಕೆ ಬಂದಿರಬೇಕು. ಬಡಿರೋ ಇವ್ನಿಗೆ” ಎಂದು ಮಗದೊಬ್ಬ ಹೇಳುತ್ತಿದ್ದಂತೆಯೇ ಇಡೀ ಗುಂಪು ಥಳಿಸಲು ಶುರು ಮಾಡಿದರು. ಕಲ್ಲು ದೊಣ್ಣೆಗಳಿಂದ ದಾಳಿ ಶುರುವಾಯಿತು. ದೊಡ್ಡ ಕಲ್ಲೊಂದು ಕಾಲಿನ ಮೇಲೆ ಎತ್ತಿ ಹಾಕಿದರು ಆ ವ್ಯಕ್ತಿಯ ಪಾದ ಜಜ್ಜಿಹೋಗಿತ್ತು.

ದೂರದಿಂದ ಇದನ್ನು ಗಮನಿಸಿದ ಮಹಿಳೆಯೊಬ್ಬಳು ಗಲಾಟೆ ನಡೆಯುತ್ತಿದ್ದ ಗುಂಪಿನತ್ತ ಓಡಿ ಬಂದಳು. ಅಯ್ಯೋ ಇವರು ನನ್ನ ಗಂಡ ಬಿಟ್ಟುಬಿಡಿ ಎಂದು ಗೋಳಾಡಿದಳು. ಗುಂಪು ಮಾತ್ರ ಜೈ ಶ್ರೀರಾಮ್, ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಲೇ ಥಳಿಸುತ್ತಿದ್ದರು. ಆಗ ಆ ಮಹಿಳೆ “ಅಯ್ಯೋ ಇವರೇ ಶ್ರೀರಾಮ ನನ್ನ ಗಂಡ, ನಾನು ಸೀತೆ. ನಿಮ್ಮ ಕಾಲಿಗೆ ಬೀಳ್ತೀನಿ ನನ್ನ ಗಂಡ ರಾಮನನ್ನು ಬಿಟ್ಟುಬಿಡಿ” ಎಂದು ಕೂಗಿದಳು!.

ಹೌದು ಅವರು ರಾಮನನ್ನೇ ಬಡಿಯುತ್ತಿದ್ದರು! ಎಲ್ಲರೂ ಗಾಬರಿಯಾಗಿ ನಿಂತುಬಿಟ್ಟರು. ಒಬ್ಬ ಮಾತ್ರ ಮೈ ಮೇಲೆ ದೇವರು ಬಂದವರಂತೆ ಜೈ ಶ್ರೀರಾಮ ಎಂದು ಅರಚಿಕೊಳ್ಳುತ್ತಾ ದೊಣ್ಣೆಯಿಂದ ರಾಮನಿಗೆ ಹೊಡಿಯುತ್ತಲೇ ಇದ್ದ. ಗುಂಪಿನವರು ಅವನನ್ನು ಎಳೆದು ಇವರೇ ಶ್ರೀರಾಮ ಬಿಡು ಎಂದರೂ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಅವನನ್ನ ಎಲ್ಲರೂ ಸೇರಿ ಎತ್ತಿಕೊಂಡು ನಡೆದರು. ಅವನು ಹುಚ್ಚು ಹಿಡಿದವನಂತೆ ಜೈ ಶ್ರೀರಾಮ್ ಎಂದು ಅರಚಿಕೊಳ್ಳುತ್ತಲೇಯಿದ್ದ. ತನ್ನ ಗುಂಪಿನ ಸದಸ್ಯರ ಬಟ್ಟೆಗಳನ್ನೆಲ್ಲಾ ಹರಿದುಹಾಕುತ್ತಿದ್ದ.

ದಾರಿಹೋಕರ ಸಹಾಯದಿಂದ ಸೀತೆ ರಾಮನನ್ನು ಆಸ್ಪತ್ರೆಗೆ ಸೇರಿಸಿದಳು. ‘ಉಳಿಯುವುದು ಕಷ್ಟ, ಬಂಧುಗಳಿಗೆ ಹೇಳಿಬಿಡಿ’ ಎಂದರು ವೈದ್ಯರು. ಸೀತೆ ನೆನೆದೇ ನೆನೆದಳು. ರಾಮನನ್ನು ಹೊತ್ತು ಗಂಗೆಯ ಮೂಲವನ್ನು ಹುಡುಕುತ್ತಾ ಕೈಲಾಸಕ್ಕೆ ತಲುಪಿದಳು. ಅಲ್ಲೋ ಶಿವ ನರಳುತ್ತಿದ್ದಾನೆ ಹಸಿವೆಯಿಂದ. ‘ಅಲ್ಲಿ ಹಸಿವು ಹೆಚ್ಚಾದಂತೆಲ್ಲಾ ಇಲ್ಲಿ ಇವರ ಕಷ್ಟ ನೋಡಲಾಗದು’ ಎಂದು ಪಾರ್ವತಿ ಸೀತೆಯ ಬಳಿ ನಿಡುಸುಯ್ದಳು.

ರಾಮನ ಮೈಮೇಲೆ ಬಾಸುಂಡೆಗಳು ಒಂದಾದ ಮೇಲೆ ಒಂದು ಏಳತೊಡಗಿದವು. ಪಾರ್ವತಿ ತಂದ ಟ್ಯಾಬ್ ನೋಡಿ ಸೀತೆಗೆ ದಿಗ್ಬ್ರಾಂತಿಯಾಯಿತು. ಅಲ್ಲೆಲ್ಲೋ ಭೂಮಿಯಲ್ಲಿ ಜೈಶ್ರೀರಾಮ್ ಎಂದು ಕೂಗುತ್ತಾ ಹೊಡೆಯುತ್ತಿರುವ ಒಂದೊಂದು ಏಟಿಗೂ ಇಲ್ಲಿ ರಾಮನ ಮೈಮೇಲೆ ಬಾಸುಂಡೆ ಏಳುತ್ತಾ ಇದೆ. ಇನ್ನು ಬಾಸುಂಡೆ ಏಳಲು ಜಾಗವೇ ಇಲ್ಲ ಎನ್ನುವಷ್ಟು ಮಟ್ಟಿಗೆ ಚರ್ಮವೆಲ್ಲಾ ಕಿತ್ತುಹೋಗುವ ಹೊತ್ತಿಗೆ ಯಾರೋ ಕೂಗಿದ್ದು ಸೀತೆಗೆ ಕೇಳಿಸಿತು ‘ಮಂದಿರವಲ್ಲೇ ಕಟ್ಟಿದೆವು’. ರಾಮ ನೆಲದ ಮೇಲೆ ಬಿದ್ದಿದ್ದ.

-ಸರೋವರ್ ಬೆಂಕೀಕೆರೆ


ಓದಿ: ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದು ಬೆಂಕಿಕೆರೆಯಲ್ಲ ಬೆಂಕಿ ಹಚ್ಚುವ ಕೆರೆ. ಕಾಲ್ಪನಿಕವಾಗಿ ಏನನ್ನೂ ಬರೆಯಬಹುದು ಆದರೆ ಅದರ ನೆರಳಿನಲ್ಲಿ ವಾಸ್ತವಿಕತೆಯನ್ನು ಮುಚ್ಚಿಡುವುದು ಘೋರ ಅಪರಾಧವಷ್ಟೇ ಅಲ್ಲ ಇಷ್ಟು ದಿನದ ಸಹನೆಗೆ ಮಾಡಿದ ಘೋರ ಅವಮಾನ.
    ನಿಜವಾದ ಪ್ರಗತಿಪರ ಆಲೋಚನೆಯೇ ಆಗಿದ್ದಲ್ಲಿ
    ಅಲ್ಪಸಂಖ್ಯಾತರಿದ್ದಲ್ಲಿ ಸಹೋದರತ್ವ ಬಹುಸಂಖ್ಯಾತರಾಗಿದ್ದಲ್ಲಿ ದಬ್ಬಾಳಿಕೆ ತೋರುವ ಸಮುದಾಯದ ಗೋಸುಂಬೆತನದ ಬಗ್ಗೆ ವ್ಯಂಗ್ಯ ಪರಿಕಲ್ಪನೆಯನ್ನು ಹರಿಯಬಿಡುವ ಧೈರ್ಯ ಮಾಡಬೇಕು. ಹಾಗೆ ನೋಡಿದರೆ ಪ್ರಗತಿಪರರಿಗೆ ಇತಿಹಾಸ ಪ್ರಜ್ಞೆ ಇರುತ್ತದೆ, ಇರಬೇಕು. ಉದಾಹರಣೆಗೆ ಗೋಧ್ರಾ ಹತ್ಯಾಕಾಂಡದ ಕುರಿತು ಮೋದಿಯವರನ್ನು ತೆಗಳುವ ಈ ಗುಂಪು ಆ ಹತ್ಯಾಕಾಂಡದ ಹಿಂದಿನ ಕಾರಣವೇನು ಎಂಬ ಬಗ್ಗೆ ಬಾಯಿ ಹೊಲಿದುಕೊಂಡಿರುತ್ತದೆ. ಇಂಥ ಅನೇಕ ಉದಾಹರಣೆಗಳಿವೆ. ಆದರೆ ಇವರಿಗೆ ಕಾಣುವುದು ಕೇವಲ ಅಲ್ಪಸಂಖ್ಯಾತರು ಮಾತ್ರ ಆದರೆ ಅಲ್ಪಸಂಖ್ಯಾತರ ಹೆಸರಿನಲ್ಲಿ ಇಲ್ಲಿಯ ಅನ್ನ ತಿಂದು ಬೇರೆ ದೇಶಕ್ಕೆ ಜೈಕಾರ ಹಾಕುವವರ ಬಗ್ಗೆಯೂ ಇವರು ತುಟಿ ಬಿಚ್ಚುವುದಿಲ್ಲ.
    ಒಂದು ಧರ್ಮದ ಆರಾಧ್ಯ ದೈವದ ಮಂದಿರವನ್ನು ಯಾವನೋ ದುರುಳ ಕೆಡವಿದ ಬಗ್ಗೆ ಉತ್ಖನನದ ಪಳೆಯುಳಿಕೆಗಳು ಸಾರಿ ಸಾರಿ ಹೇಳಿವೆ. ಅವುಗಳ ಆಧಾರದ ಮೇಲೆ ಸುಪ್ರೀಮ್ ಕೋರ್ಟು ತೀರ್ಪು ನೀಡಿದೆ. ಮಾತೆತ್ತಿದರೆ ಸಂವಿಧಾನದ ರಕ್ಷಣೆಯ ಮಾತಾಡುವ ಜನರು ಈ ತೀರ್ಪನ್ನು ಮಾತ್ರ ಗೌರವಿಸಲಾರರು ! ಇದು ಸಂವಿಧಾನದ ವಿಡಂಬನೆಯಲ್ಲದೆ ಮತ್ತೇನು ? ನೂರಾರು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಾಗ ಸಹಜವಾಗಿಯೇ ಭಕ್ತ ಆವೇಶಕ್ಕೊಳಗಾಗಿ ಜೈಕಾರ ಹಾಕುತ್ತಾನೆ. ಅದನ್ನು ಬೇರೊಬ್ಬರ ಮೇಲೆ ದಬ್ಬಾಳಿಕೆಯೆಂಬಂತೆ ಬಿಂಬಿಸಿ ವ್ಯಂಗ್ಯವಾಗಿ ಮಾತನಾಡುವ ಹುಕಿಯ ಹಿಂದಿನ ಪಿತೂರಿಯೇನು ? ಇಂಥದಕ್ಕೆಲ್ಲ ಒಂದೇ ಸಮುದಾಯ ಅದೂ ಬಹುಸಂಖ್ಯಾತ ಎಂದು ‘ ಕರೆಯಲ್ಪಟ್ಟರೂ ‘, ನಕಲಿ ಜಾತ್ಯತೀತರ ಕೆಂಗಣ್ಣಿಗೆ ಗುರಿಯಾಗಿರುವ ಹಿಂದೂ ಸಮುದಾಯವೇ ಗುರಿಯಾಗಿ, ಅಪಹಾಸ್ಯಕ್ಕೆ ಈಡಾಗುತ್ತಿರುವುದು ಯಾಕೆ ? ಹಿಂದೂಗಳ ಸಹನೀಯ ಗುಣವೇ ಕಾರಣವೇ ?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...