Homeಅಂಕಣಗಳುಬೆಂಕಿ ಬರಹ-ಮಂದಿರವಲ್ಲೇ ಕಟ್ಟಿದೆವು...!

ಬೆಂಕಿ ಬರಹ-ಮಂದಿರವಲ್ಲೇ ಕಟ್ಟಿದೆವು…!

ಭೂಮಿಯಲ್ಲಿ ಜೈಶ್ರೀರಾಮ್ ಎಂದು ಕೂಗುತ್ತಾ ಹೊಡೆಯುತ್ತಿರುವ ಒಂದೊಂದು ಏಟಿಗೂ ಇಲ್ಲಿ ರಾಮನ ಮೈಮೇಲೆ ಬಾಸುಂಡೆ ಏಳುತ್ತಾ ಇದೆ.

- Advertisement -
- Advertisement -

“ಇಂಥ ಪರೀಕ್ಷೆ ಮಾಡ್ಲೇಬೇಕಿತ್ತಾ? ಬೆಂಕಿ ಸುಡದೇ ಇರಲು ಸಾಧ್ಯವಾ?” ಕೋಪ ಮತ್ತು ಬೇಸರದಿಂದ ಅಭಿಲಾಷ ಶೃತಿಯನ್ನು ಕೇಳಿದಳು. “ಏನ್ ಮಾಡೋಕೆ ಆಗುತ್ತೆ ನೀನೇ ಹೇಳು ಎಲ್ಲಾ ಆ ಅಗಸನಿಂದ ಆಗಿದ್ದು. ಅವನಿಗೆ ಇರುವಂತೆ ಬೇರೆಯವರಿಗೂ ಅನುಮಾನ ಇರುತ್ತೆ ಅಲ್ವ? ಹಾಗಾಗಿ ಈ ಅಗ್ನಿ ಪರೀಕ್ಷೆಯಂತೆ” ಉತ್ತರಿಸಿದಳು ಶೃತಿ.

ಸೀತೆಯ ಪಾವಿತ್ರತೆಯನ್ನು ಪರೀಕ್ಷೆ ಮಾಡಲು ಅಗ್ನಿಪರೀಕ್ಷೆಗೆ ಸಿದ್ಧತೆಗಳು ನಡೆದಿತ್ತು. ಊರಿನ ಜನರೆಲ್ಲಾ ಅಗ್ನಿ ಪರೀಕ್ಷೆ ನೋಡಲು ಸೇರಿದ್ದರು. ಅಭಿಲಾಷಳಿಗೆ ಕೋಪದಲ್ಲಿಯೇ ವಿಚಾರವೊಂದು ಹೊಳೆದಿತ್ತು, ಜನಜಾತ್ರೆಯ ಮಧ್ಯದಲ್ಲಿಯೇ ಕೂಗಿ ಹೇಳಿದಳು “ನಾನೇನು ಸೀತೆ ಅಲ್ಲ, ಎಲ್ಲಾನೂ ಒಪ್ಕಂಡು ಸುಮ್ನಿರೋಕೆ. ನನಗೂ ನನ್ನ ಗಂಡನ ಮೇಲೆ ಅನುಮಾನವಿದೆ. ಇದೇ ಅಗ್ನಿಯಲ್ಲಿ ನನ್ನ ಗಂಡನ ಪರೀಕ್ಷೆಯೂ ಆಗಲಿ” ಎಂದು ಕೂಗಿದಳು.

ಸುತ್ತ ನಿಂತಿದ್ದ ಮಹಿಳೆಯರ ಮುಖ ನೋಡುತ್ತಾ ನಿಮ್ಮಲ್ಲಿ ಯಾರಿಗೂ ನಿಮ್ಮ ಗಂಡನ ಮೇಲೆ ಅನುಮಾನವಿಲ್ಲವೇ? ಎಂದು ಪ್ರಶ್ನೆ ಎಸೆದಳು. ಹಲವರು ಗಾಬರಿಯಲ್ಲಿ ಅಭಿಲಾಷಳ ಮುಖ ನೋಡುತ್ತಾ ಮೌನವಾಗಿ ನಿಂತುಬಿಟ್ಟರು, ಇನ್ನು ಕೆಲವರು ಯೋಚಿಸುತ್ತಾ ಗೊಂದಲದಲ್ಲಿದ್ದರು. ಸ್ವಲ್ಪ ದೂರದಲ್ಲೇ ನಿಂತಿದ್ದ ಅಭಿಲಾಷಳ ಗಂಡ ಮತ್ತು ಇತರ ಗಂಡಸರ ಗುಂಪು ಭಯಬೀತರಾಗಿದ್ದರು. ಅಭಿಲಾಷಳ ಸುತ್ತ ನಿಂತವರಲ್ಲಿ ಕೆಲವರು ಅವಳ ಪ್ರಶ್ನೆಗೆ “ಹೌದು ನಮಗೂ ಅನುಮಾನವಿದೆ” ಎಂದು ಹೇಳುತ್ತಿದ್ದಂತೆಯೇ ಗಂಡಸರ ಗುಂಪು ಇವರ ದನಿ ಕೇಳಿಸದ ರೀತಿಯಲ್ಲಿ ಜೋರಾಗಿ “ಜೈ ಶ್ರೀರಾಮ್” ಎಂದು ಘೋಷಣೆ ಹಾಕಲು ಶುರು ಮಾಡಿದರು. ಜೈ ಶ್ರೀರಾಮ್ ಘೋಷಣೆಗೆ ದನಿಗೂಡಿಸುವ ಗಂಡಸರ ಸಂಖ್ಯೆ ಹೆಚ್ಚುತ್ತಲೇ ಹೋಯಿತು.

ಘೋಷಣೆ ಕೂಗಲು ಶುರು ಮಾಡಿ ಬರೀ ಎರಡು ನಿಮಿಷ ಮಾತ್ರವಾಗಿತ್ತು. ಒಂದು ಗುಂಪಿನಿಂದ ಶುರುವಾಗಿದ್ದು ಇದೀಗ ಸುಮಾರು ೧೫ ಬೇರೆ ಬೇರೆ ಗುಂಪುಗಳಾಗಿದೆ. ಹೋಟೆಲ್, ಅಂಗಡಿ, ಮನೆಗಳಿಗೆ ನುಗ್ಗಿ ಜೈ ಶ್ರೀರಾಮ್ ಎಂದು ಕೂಗಲು ಒತ್ತಾಯಿಸುತ್ತಿದ್ದಾರೆ. ನೋಡ ನೋಡುತ್ತಿದ್ದಂತೆಯೇ ಘೋಷಣೆ ಕೂಗುತ್ತಿದ್ದವರ ಕೈಗಳಲ್ಲಿ ದೊಣ್ಣೆ, ಕಲ್ಲುಗಳು ಬಂದುಬಿಟ್ಟಿವೆ. ಜೈ ಶ್ರೀರಾಮ್ ಎಂದು ಕೂಗಲು ನಿರಾಕರಿಸುವವರಿಗೆ ‘ಧರ್ಮ’ದೇಟು ಹಾಕುತ್ತಿದ್ದಾರೆ.

ಕ್ಷಣ ಮಾತ್ರದಲ್ಲಿ ಶುರುವಾಗಿದ್ದ ಈ ಗಲಭೆಯನ್ನು ನೋಡುತ್ತಿದ್ದ ವ್ಯಕ್ತಿಯೊಬ್ಬ ಇದೇನಾಯಿತು ಎಂಬ ಅರಿವಿಲ್ಲದೆ ಆಘಾತಕ್ಕೊಳಗಾಗಿ ಏನು ಮಾಡುವುದೆಂದು ತಿಳಿಯದೆ ಎಲ್ಲವನ್ನೂ ನೋಡುತ್ತ ನಿಂತಿದ್ದ. ಈ ವ್ಯಕ್ತಿಯನ್ನು ಗಮನಿಸಿದ ಗುಂಪು ಈತನೆಡೆಗೆ ಓಡಿ ಬಂತು. “ಹೇಯ್ ಜೈ ಶ್ರೀರಾಮ್ ಹೇಳೋ” ಎಂದು ಗುಂಪಿನಿಂದ ಒಬ್ಬ ಗದರಿದ. ಗೊಂದಲಕ್ಕೊಳಗಾದ ಆ ವ್ಯಕ್ತಿ ಗುಂಪಿನಲ್ಲಿ ಒಬ್ಬಾತ ಹಿಡಿದಿದ್ದ ದೊಣ್ಣೆಯನ್ನೇ ನೋಡುತ್ತಾ ನಿಂತ. ಗುಂಪಿನಿಂದ ಮತ್ತೊಬ್ಬ ಏನೋ ಸುಮ್ನೆ ನಿಂತಿದ್ದೀಯಾ, ಎಷ್ಟೋ ಧೈರ್ಯ ನಿನಗೆ, ಜೈ ಶ್ರೀರಾಮ್ ಹೇಳು ಎಂದು ಮುಂದಕ್ಕೆ ಬಂದ. ವ್ಯಕ್ತಿ ಇನ್ನೂ ಸುಮ್ಮನೇ ನಿಂತಿದ್ದ.

”ಇವನ್ಯಾರೋ ಸಾಬನೇ ಇರಬೇಕು ಕಣ್ರೋ ಅದಕ್ಕೆ ಬಾಯಿ ಬಿಡ್ತಿಲ್ಲ” ಎಂದ ಇನ್ನೊಬ್ಬ “ಇಲ್ಲ, ಟೋಪಿ ಇಲ್ಲ ಗಡ್ಡ ಇಲ್ಲ, ಬಹುಶಃ ಬುದ್ದಿಜೀವಿಯೋ, ವಿಚಾರವಾದಿಯೋ ಇರಬೇಕು ಬಿಲ್ಲು ಬಾಣ ಬೇರೆ ಇಟ್ಕೊಂಡ್ ಬಂದಿದ್ದಾನೆ, ಇಲ್ಲಿ ನಡಿಯೋ ಪವಿತ್ರವಾದ ಅಗ್ನಿಪರೀಕ್ಷೆಯನ್ನ ಕೆಡಿಸೋಕೆ ಬಂದಿರಬೇಕು. ಬಡಿರೋ ಇವ್ನಿಗೆ” ಎಂದು ಮಗದೊಬ್ಬ ಹೇಳುತ್ತಿದ್ದಂತೆಯೇ ಇಡೀ ಗುಂಪು ಥಳಿಸಲು ಶುರು ಮಾಡಿದರು. ಕಲ್ಲು ದೊಣ್ಣೆಗಳಿಂದ ದಾಳಿ ಶುರುವಾಯಿತು. ದೊಡ್ಡ ಕಲ್ಲೊಂದು ಕಾಲಿನ ಮೇಲೆ ಎತ್ತಿ ಹಾಕಿದರು ಆ ವ್ಯಕ್ತಿಯ ಪಾದ ಜಜ್ಜಿಹೋಗಿತ್ತು.

ದೂರದಿಂದ ಇದನ್ನು ಗಮನಿಸಿದ ಮಹಿಳೆಯೊಬ್ಬಳು ಗಲಾಟೆ ನಡೆಯುತ್ತಿದ್ದ ಗುಂಪಿನತ್ತ ಓಡಿ ಬಂದಳು. ಅಯ್ಯೋ ಇವರು ನನ್ನ ಗಂಡ ಬಿಟ್ಟುಬಿಡಿ ಎಂದು ಗೋಳಾಡಿದಳು. ಗುಂಪು ಮಾತ್ರ ಜೈ ಶ್ರೀರಾಮ್, ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಲೇ ಥಳಿಸುತ್ತಿದ್ದರು. ಆಗ ಆ ಮಹಿಳೆ “ಅಯ್ಯೋ ಇವರೇ ಶ್ರೀರಾಮ ನನ್ನ ಗಂಡ, ನಾನು ಸೀತೆ. ನಿಮ್ಮ ಕಾಲಿಗೆ ಬೀಳ್ತೀನಿ ನನ್ನ ಗಂಡ ರಾಮನನ್ನು ಬಿಟ್ಟುಬಿಡಿ” ಎಂದು ಕೂಗಿದಳು!.

ಹೌದು ಅವರು ರಾಮನನ್ನೇ ಬಡಿಯುತ್ತಿದ್ದರು! ಎಲ್ಲರೂ ಗಾಬರಿಯಾಗಿ ನಿಂತುಬಿಟ್ಟರು. ಒಬ್ಬ ಮಾತ್ರ ಮೈ ಮೇಲೆ ದೇವರು ಬಂದವರಂತೆ ಜೈ ಶ್ರೀರಾಮ ಎಂದು ಅರಚಿಕೊಳ್ಳುತ್ತಾ ದೊಣ್ಣೆಯಿಂದ ರಾಮನಿಗೆ ಹೊಡಿಯುತ್ತಲೇ ಇದ್ದ. ಗುಂಪಿನವರು ಅವನನ್ನು ಎಳೆದು ಇವರೇ ಶ್ರೀರಾಮ ಬಿಡು ಎಂದರೂ ಕೇಳುವ ಸ್ಥಿತಿಯಲ್ಲಿ ಇರಲಿಲ್ಲ. ಅವನನ್ನ ಎಲ್ಲರೂ ಸೇರಿ ಎತ್ತಿಕೊಂಡು ನಡೆದರು. ಅವನು ಹುಚ್ಚು ಹಿಡಿದವನಂತೆ ಜೈ ಶ್ರೀರಾಮ್ ಎಂದು ಅರಚಿಕೊಳ್ಳುತ್ತಲೇಯಿದ್ದ. ತನ್ನ ಗುಂಪಿನ ಸದಸ್ಯರ ಬಟ್ಟೆಗಳನ್ನೆಲ್ಲಾ ಹರಿದುಹಾಕುತ್ತಿದ್ದ.

ದಾರಿಹೋಕರ ಸಹಾಯದಿಂದ ಸೀತೆ ರಾಮನನ್ನು ಆಸ್ಪತ್ರೆಗೆ ಸೇರಿಸಿದಳು. ‘ಉಳಿಯುವುದು ಕಷ್ಟ, ಬಂಧುಗಳಿಗೆ ಹೇಳಿಬಿಡಿ’ ಎಂದರು ವೈದ್ಯರು. ಸೀತೆ ನೆನೆದೇ ನೆನೆದಳು. ರಾಮನನ್ನು ಹೊತ್ತು ಗಂಗೆಯ ಮೂಲವನ್ನು ಹುಡುಕುತ್ತಾ ಕೈಲಾಸಕ್ಕೆ ತಲುಪಿದಳು. ಅಲ್ಲೋ ಶಿವ ನರಳುತ್ತಿದ್ದಾನೆ ಹಸಿವೆಯಿಂದ. ‘ಅಲ್ಲಿ ಹಸಿವು ಹೆಚ್ಚಾದಂತೆಲ್ಲಾ ಇಲ್ಲಿ ಇವರ ಕಷ್ಟ ನೋಡಲಾಗದು’ ಎಂದು ಪಾರ್ವತಿ ಸೀತೆಯ ಬಳಿ ನಿಡುಸುಯ್ದಳು.

ರಾಮನ ಮೈಮೇಲೆ ಬಾಸುಂಡೆಗಳು ಒಂದಾದ ಮೇಲೆ ಒಂದು ಏಳತೊಡಗಿದವು. ಪಾರ್ವತಿ ತಂದ ಟ್ಯಾಬ್ ನೋಡಿ ಸೀತೆಗೆ ದಿಗ್ಬ್ರಾಂತಿಯಾಯಿತು. ಅಲ್ಲೆಲ್ಲೋ ಭೂಮಿಯಲ್ಲಿ ಜೈಶ್ರೀರಾಮ್ ಎಂದು ಕೂಗುತ್ತಾ ಹೊಡೆಯುತ್ತಿರುವ ಒಂದೊಂದು ಏಟಿಗೂ ಇಲ್ಲಿ ರಾಮನ ಮೈಮೇಲೆ ಬಾಸುಂಡೆ ಏಳುತ್ತಾ ಇದೆ. ಇನ್ನು ಬಾಸುಂಡೆ ಏಳಲು ಜಾಗವೇ ಇಲ್ಲ ಎನ್ನುವಷ್ಟು ಮಟ್ಟಿಗೆ ಚರ್ಮವೆಲ್ಲಾ ಕಿತ್ತುಹೋಗುವ ಹೊತ್ತಿಗೆ ಯಾರೋ ಕೂಗಿದ್ದು ಸೀತೆಗೆ ಕೇಳಿಸಿತು ‘ಮಂದಿರವಲ್ಲೇ ಕಟ್ಟಿದೆವು’. ರಾಮ ನೆಲದ ಮೇಲೆ ಬಿದ್ದಿದ್ದ.

-ಸರೋವರ್ ಬೆಂಕೀಕೆರೆ


ಓದಿ: ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇದು ಬೆಂಕಿಕೆರೆಯಲ್ಲ ಬೆಂಕಿ ಹಚ್ಚುವ ಕೆರೆ. ಕಾಲ್ಪನಿಕವಾಗಿ ಏನನ್ನೂ ಬರೆಯಬಹುದು ಆದರೆ ಅದರ ನೆರಳಿನಲ್ಲಿ ವಾಸ್ತವಿಕತೆಯನ್ನು ಮುಚ್ಚಿಡುವುದು ಘೋರ ಅಪರಾಧವಷ್ಟೇ ಅಲ್ಲ ಇಷ್ಟು ದಿನದ ಸಹನೆಗೆ ಮಾಡಿದ ಘೋರ ಅವಮಾನ.
    ನಿಜವಾದ ಪ್ರಗತಿಪರ ಆಲೋಚನೆಯೇ ಆಗಿದ್ದಲ್ಲಿ
    ಅಲ್ಪಸಂಖ್ಯಾತರಿದ್ದಲ್ಲಿ ಸಹೋದರತ್ವ ಬಹುಸಂಖ್ಯಾತರಾಗಿದ್ದಲ್ಲಿ ದಬ್ಬಾಳಿಕೆ ತೋರುವ ಸಮುದಾಯದ ಗೋಸುಂಬೆತನದ ಬಗ್ಗೆ ವ್ಯಂಗ್ಯ ಪರಿಕಲ್ಪನೆಯನ್ನು ಹರಿಯಬಿಡುವ ಧೈರ್ಯ ಮಾಡಬೇಕು. ಹಾಗೆ ನೋಡಿದರೆ ಪ್ರಗತಿಪರರಿಗೆ ಇತಿಹಾಸ ಪ್ರಜ್ಞೆ ಇರುತ್ತದೆ, ಇರಬೇಕು. ಉದಾಹರಣೆಗೆ ಗೋಧ್ರಾ ಹತ್ಯಾಕಾಂಡದ ಕುರಿತು ಮೋದಿಯವರನ್ನು ತೆಗಳುವ ಈ ಗುಂಪು ಆ ಹತ್ಯಾಕಾಂಡದ ಹಿಂದಿನ ಕಾರಣವೇನು ಎಂಬ ಬಗ್ಗೆ ಬಾಯಿ ಹೊಲಿದುಕೊಂಡಿರುತ್ತದೆ. ಇಂಥ ಅನೇಕ ಉದಾಹರಣೆಗಳಿವೆ. ಆದರೆ ಇವರಿಗೆ ಕಾಣುವುದು ಕೇವಲ ಅಲ್ಪಸಂಖ್ಯಾತರು ಮಾತ್ರ ಆದರೆ ಅಲ್ಪಸಂಖ್ಯಾತರ ಹೆಸರಿನಲ್ಲಿ ಇಲ್ಲಿಯ ಅನ್ನ ತಿಂದು ಬೇರೆ ದೇಶಕ್ಕೆ ಜೈಕಾರ ಹಾಕುವವರ ಬಗ್ಗೆಯೂ ಇವರು ತುಟಿ ಬಿಚ್ಚುವುದಿಲ್ಲ.
    ಒಂದು ಧರ್ಮದ ಆರಾಧ್ಯ ದೈವದ ಮಂದಿರವನ್ನು ಯಾವನೋ ದುರುಳ ಕೆಡವಿದ ಬಗ್ಗೆ ಉತ್ಖನನದ ಪಳೆಯುಳಿಕೆಗಳು ಸಾರಿ ಸಾರಿ ಹೇಳಿವೆ. ಅವುಗಳ ಆಧಾರದ ಮೇಲೆ ಸುಪ್ರೀಮ್ ಕೋರ್ಟು ತೀರ್ಪು ನೀಡಿದೆ. ಮಾತೆತ್ತಿದರೆ ಸಂವಿಧಾನದ ರಕ್ಷಣೆಯ ಮಾತಾಡುವ ಜನರು ಈ ತೀರ್ಪನ್ನು ಮಾತ್ರ ಗೌರವಿಸಲಾರರು ! ಇದು ಸಂವಿಧಾನದ ವಿಡಂಬನೆಯಲ್ಲದೆ ಮತ್ತೇನು ? ನೂರಾರು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಾಗ ಸಹಜವಾಗಿಯೇ ಭಕ್ತ ಆವೇಶಕ್ಕೊಳಗಾಗಿ ಜೈಕಾರ ಹಾಕುತ್ತಾನೆ. ಅದನ್ನು ಬೇರೊಬ್ಬರ ಮೇಲೆ ದಬ್ಬಾಳಿಕೆಯೆಂಬಂತೆ ಬಿಂಬಿಸಿ ವ್ಯಂಗ್ಯವಾಗಿ ಮಾತನಾಡುವ ಹುಕಿಯ ಹಿಂದಿನ ಪಿತೂರಿಯೇನು ? ಇಂಥದಕ್ಕೆಲ್ಲ ಒಂದೇ ಸಮುದಾಯ ಅದೂ ಬಹುಸಂಖ್ಯಾತ ಎಂದು ‘ ಕರೆಯಲ್ಪಟ್ಟರೂ ‘, ನಕಲಿ ಜಾತ್ಯತೀತರ ಕೆಂಗಣ್ಣಿಗೆ ಗುರಿಯಾಗಿರುವ ಹಿಂದೂ ಸಮುದಾಯವೇ ಗುರಿಯಾಗಿ, ಅಪಹಾಸ್ಯಕ್ಕೆ ಈಡಾಗುತ್ತಿರುವುದು ಯಾಕೆ ? ಹಿಂದೂಗಳ ಸಹನೀಯ ಗುಣವೇ ಕಾರಣವೇ ?

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...