Homeಅಂತರಾಷ್ಟ್ರೀಯವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

- Advertisement -
- Advertisement -

ಸಾಂಕ್ರಾಮಿಕ ರೋಗ ಪತ್ತೆಯಾದ ಚೀನಾದ ವುಹಾನ್ ನಗರದ ಪ್ರಮುಖ ಆಸ್ಪತ್ರೆಯು, ಕೊರೊನಾ ವೈರಸ್-ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ತೊಂಬತ್ತು ಪ್ರತಿಶತದಷ್ಟು ಜನರು ಶ್ವಾಸಕೋಶದ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ವರದಿ ಮಾಡಿದೆ.

ಆಸ್ಪತ್ರೆಯ ತೀವ್ರ ನಿಗಾ ಘಟಕದ ನಿರ್ದೇಶಕ ಪೆಂಗ್ ಝಿಯಾಂಗ್ ನೇತೃತ್ವದ ವುಹಾನ್ ವಿಶ್ವವಿದ್ಯಾಲಯದ ಝೋಂಗ್ನಾನ್ ಆಸ್ಪತ್ರೆಯ ತಂಡವು, ಏಪ್ರಿಲ್‌ನಿಂದ ಚೇತರಿಸಿಕೊಂಡ 100 ರೋಗಿಗಳೊಂದಿಗೆ ಸಂಪರ್ಕದಲ್ಲಿದೆ. ಈ ಒಂದು ವರ್ಷದ ಅಧ್ಯಯನ ಕಾರ್ಯಕ್ರಮದ ಮೊದಲ ಹಂತ ಜುಲೈನಲ್ಲಿ ಮುಗಿದಿದೆ. ಅಧ್ಯಯನದಲ್ಲಿ ರೋಗಿಗಳ ಸರಾಸರಿ ವಯಸ್ಸು 59 ಆಗಿದೆ.

ಮೊದಲ ಹಂತದ ಫಲಿತಾಂಶಗಳ ಪ್ರಕಾರ, ಶೇಕಡಾ 90 ರಷ್ಟು ರೋಗಿಗಳ ಶ್ವಾಸಕೋಶಗಳು ಇನ್ನೂ ಹಾನಿಗೊಳಗಾದ ಸ್ಥಿತಿಯಲ್ಲಿವೆ.

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಪೆಂಗ್‌ರ ತಂಡವು ರೋಗಿಗಳೊಂದಿಗೆ ಆರು ನಿಮಿಷಗಳ ವಾಕಿಂಗ್ ಪರೀಕ್ಷೆಯನ್ನು ನಡೆಸಿತು. ಚೇತರಿಸಿಕೊಂಡ ರೋಗಿಗಳು ಆರು ನಿಮಿಷಗಳಲ್ಲಿ 400 ಮೀಟರ್ ಮಾತ್ರ ನಡೆಯಬಲ್ಲರು. ಆದರೆ ಅವರ ಆರೋಗ್ಯವಂತ ಗೆಳೆಯರು ಅದೇ ಅವಧಿಯಲ್ಲಿ 500 ಮೀಟರ್ ನಡೆಯಬಹುದು ಎಂದು ಅಧ್ಯಯನ ತಿಳಿಸಿದೆ.

ಚೇತರಿಸಿಕೊಂಡ ಕೆಲವು ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮೂರು ತಿಂಗಳ ನಂತರವೂ ಆಮ್ಲಜನಕ ಯಂತ್ರಗಳನ್ನು ಅವಲಂಬಿಸಬೇಕಾಗಿದೆ ಎಂದು ಬೀಜಿಂಗ್‌ನ ಚೈನೀಸ್ ಮೆಡಿಸಿನ್ ವಿಶ್ವವಿದ್ಯಾಲಯದ ಡಾಂಗ್ ಝೈಮೆನ್ ಆಸ್ಪತ್ರೆಯ ವೈದ್ಯ ಲಿಯಾಂಗ್ ಟೆಂಗ್ಸ್‌ ಕಿಯಾವೋ ಅವರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

65 ವರ್ಷಕ್ಕಿಂತ ಮೇಲ್ಪಟ್ಟ, ಚೇತರಿಸಿಕೊಂಡ ರೋಗಿಗಳೊಂದಿಗೆ ಲಿಯಾಂಗ್ ಅವರ ತಂಡವು ಸಂಪರ್ಕದಲ್ಲಿದೆ. 100 ರೋಗಿಗಳಲ್ಲಿ ಶೇಕಡಾ 10 ರಷ್ಟು‌ ಜನರಿಗೆ ಕೊರೊನಾ ವೈರಸ್ ವಿರುದ್ಧದ ಪ್ರತಿಕಾಯಗಳು ಕಣ್ಮರೆಯಾಗಿವೆ ಎಂದು ಫಲಿತಾಂಶಗಳು ತೋರಿಸಿಕೊಟ್ಟಿವೆ.

ಅವರಲ್ಲಿ ಐದು ಪ್ರತಿಶತದಷ್ಟು ಜನರು ಕೊರೊನಾ ನ್ಯೂಕ್ಲಿಯಿಕ್ ಆಸಿಡ್ ಪರೀಕ್ಷೆಗಳಲ್ಲಿ‌ ನೆಗೆಟಿವ್ ಫಲಿತಾಂಶ ಬಂದಿದೆ. ಆದರೆ ಇಮ್ಯುನೊಗ್ಲಾಬ್ಯುಲಿನ್ M (IgM) ಪರೀಕ್ಷೆಗಳಲ್ಲಿ ಪಾಸಿಟಿವ್ ಎಂಬ ಫಲಿತಾಂಶ ಬಂದಿದೆ ಎಂದರು. ಆದ್ದರಿಂದ ಇದನ್ನು ಮತ್ತೆ ನಿರ್ಬಂಧಿಸಬೇಕಾಗಿದೆ ಎಂದು ವರದಿ ತಿಳಿಸಿದೆ.

ಐಜಿಎಂ ಸಾಮಾನ್ಯವಾಗಿ ವೈರಸ್ ದಾಳಿ ಮಾಡಿದಾಗ ಪ್ರತಿರಕ್ಷಣಾ ವ್ಯವಸ್ಥೆಯಿಂದ ಉತ್ಪತ್ತಿಯಾಗುವ ಮೊದಲ ಪ್ರತಿಕಾಯವಾಗಿದೆ. ಐಜಿಎಂ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶವು ಒಬ್ಬ ವ್ಯಕ್ತಿಯು ಸೋಂಕಿಗೆ ಒಳಗಾಗಿದ್ದಾನೆ ಎಂಬುದನ್ನು ಸೂಚಿಸುತ್ತದೆ.

ಆದರೆ ಈ ಜನರು ಮತ್ತೆ ಯಾಕೆ ಸೋಂಕಿಗೆ ಒಳಗಾಗಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 100 ರೋಗಿಗಳ ರೋಗನಿರೋಧಕ ವ್ಯವಸ್ಥೆಗಳು ಕಡಿಮೆ ಮಟ್ಟದ ಬಿ ಜೀವಕೋಶಗಳನ್ನು ತೋರಿಸಿದ ಕಾರಣ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

ರೋಗಿಗಳ ಪ್ರತಿರಕ್ಷಣಾ ವ್ಯವಸ್ಥೆಗಳು ಇನ್ನೂ ಚೇತರಿಸಿಕೊಳ್ಳುತ್ತಿವೆ ಎಂದು ಫಲಿತಾಂಶಗಳು ಬಹಿರಂಗಪಡಿಸಿದವು ಎಂದು ಪೆಂಗ್ ಹೇಳಿದರು. ಚೇತರಿಸಿಕೊಂಡ ಹೆಚ್ಚಿನ ರೋಗಿಗಳು ತಮ್ಮ ಕುಟುಂಬಗಳೊಂದಿಗೆ ಒಂದೇ ಟೇಬಲ್‌ನಲ್ಲಿ ಊಟ ಮಾಡಲು ಸಿದ್ಧರಿಲ್ಲ ಎಂದು ತಂಡಕ್ಕೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಚೇತರಿಸಿಕೊಂಡ ರೋಗಿಗಳಲ್ಲಿ ಅರ್ಧಕ್ಕಿಂತ ಕಡಿಮೆ ಜನರು ಕೆಲಸಕ್ಕೆ ಮರಳಿದ್ದಾರೆ ಎಂದು ಅದು ಹೇಳಿದೆ.

ಕೊರೊನಾ ವೈರಸ್ ಮೊದಲು ವುಹಾನ್ ನಗರದಲ್ಲಿ ಕಂಡುಬಂದಿದ್ದರಿಂದ ಈ ಸಂಶೋಧನೆಗಳು ಗಮನಾರ್ಹವಾಗಿವೆ. ವುಹಾನ್ ಪ್ರಾಂತೀಯ ರಾಜಧಾನಿಯಾಗಿರುವ ಹುಬೈ ಪ್ರಾಂತ್ಯವು ಈವರೆಗೆ ಒಟ್ಟು 68,138 ದೃಢೀಕರಿಸಿದ ಕೊರೊನಾ ಪ್ರಕರಣಗಳನ್ನು ವರದಿ ಮಾಡಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ ಈ ರೋಗವು ಪ್ರಾಂತ್ಯದಲ್ಲಿ 4,512 ಜನರನ್ನು ಬಲಿ ತೆಗೆದುಕೊಂಡಿದೆ.

ಮಂಗಳವಾರದ ಹೊತ್ತಿಗೆ, ಚೀನಾದಲ್ಲಿ ದೃಢಪಡಿಸಿದ ಕೊರೊನಾ ಪ್ರಕರಣಗಳ ಸಂಖ್ಯೆ 88,328 ಕ್ಕೆ ತಲುಪಿದೆ. ಚೇತರಿಸಿಕೊಂಡ ನಂತರ ಒಟ್ಟಾರೆಯಾಗಿ 81,417 ಜನರನ್ನು ಬಿಡುಗಡೆ ಮಾಡಲಾಗಿದೆ, ಮತ್ತು 4,677 ಜನರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಎನ್ಎಚ್‌ ಸಿ ತಿಳಿಸಿದೆ.


ಇದನ್ನೂ ಓದಿ: ರೋಗನಿರೋಧಕ ಪ್ರತಿಕ್ರಿಯೆಯನ್ನು ಹೆಚ್ಚಿಸಿದ ನೊವಾವಾಕ್ಸ್ ಕೊರೊನಾ ಲಸಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...