Homeಅಂತರಾಷ್ಟ್ರೀಯವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

- Advertisement -
- Advertisement -

ಸಾಂಕ್ರಾಮಿಕ ರೋಗ ಪತ್ತೆಯಾದ ಚೀನಾದ ವುಹಾನ್ ನಗರದ ಪ್ರಮುಖ ಆಸ್ಪತ್ರೆಯು, ಕೊರೊನಾ ವೈರಸ್-ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ತೊಂಬತ್ತು ಪ್ರತಿಶತದಷ್ಟು ಜನರು ಶ್ವಾಸಕೋಶದ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ವರದಿ ಮಾಡಿದೆ.

ಆಸ್ಪತ್ರೆಯ ತೀವ್ರ ನಿಗಾ ಘಟಕದ ನಿರ್ದೇಶಕ ಪೆಂಗ್ ಝಿಯಾಂಗ್ ನೇತೃತ್ವದ ವುಹಾನ್ ವಿಶ್ವವಿದ್ಯಾಲಯದ ಝೋಂಗ್ನಾನ್ ಆಸ್ಪತ್ರೆಯ ತಂಡವು, ಏಪ್ರಿಲ್‌ನಿಂದ ಚೇತರಿಸಿಕೊಂಡ 100 ರೋಗಿಗಳೊಂದಿಗೆ ಸಂಪರ್ಕದಲ್ಲಿದೆ. ಈ ಒಂದು ವರ್ಷದ ಅಧ್ಯಯನ ಕಾರ್ಯಕ್ರಮದ ಮೊದಲ ಹಂತ ಜುಲೈನಲ್ಲಿ ಮುಗಿದಿದೆ. ಅಧ್ಯಯನದಲ್ಲಿ ರೋಗಿಗಳ ಸರಾಸರಿ ವಯಸ್ಸು 59 ಆಗಿದೆ.

ಮೊದಲ ಹಂತದ ಫಲಿತಾಂಶಗಳ ಪ್ರಕಾರ, ಶೇಕಡಾ 90 ರಷ್ಟು ರೋಗಿಗಳ ಶ್ವಾಸಕೋಶಗಳು ಇನ್ನೂ ಹಾನಿಗೊಳಗಾದ ಸ್ಥಿತಿಯಲ್ಲಿವೆ.

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಪೆಂಗ್‌ರ ತಂಡವು ರೋಗಿಗಳೊಂದಿಗೆ ಆರು ನಿಮಿಷಗಳ ವಾಕಿಂಗ್ ಪರೀಕ್ಷೆಯನ್ನು ನಡೆಸಿತು. ಚೇತರಿಸಿಕೊಂಡ ರೋಗಿಗಳು ಆರು ನಿಮಿಷಗಳಲ್ಲಿ 400 ಮೀಟರ್ ಮಾತ್ರ ನಡೆಯಬಲ್ಲರು. ಆದರೆ ಅವರ ಆರೋಗ್ಯವಂತ ಗೆಳೆಯರು ಅದೇ ಅವಧಿಯಲ್ಲಿ 500 ಮೀಟರ್ ನಡೆಯಬಹುದು ಎಂದು ಅಧ್ಯಯನ ತಿಳಿಸಿದೆ.

ಚೇತರಿಸಿಕೊಂಡ ಕೆಲವು ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮೂರು ತಿಂಗಳ ನಂತರವೂ ಆಮ್ಲಜನಕ ಯಂತ್ರಗಳನ್ನು ಅವಲಂಬಿಸಬೇಕಾಗಿದೆ ಎಂದು ಬೀಜಿಂಗ್‌ನ ಚೈನೀಸ್ ಮೆಡಿಸಿನ್ ವಿಶ್ವವಿದ್ಯಾಲಯದ ಡಾಂಗ್ ಝೈಮೆನ್ ಆಸ್ಪತ್ರೆಯ ವೈದ್ಯ ಲಿಯಾಂಗ್ ಟೆಂಗ್ಸ್‌ ಕಿಯಾವೋ ಅವರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

65 ವರ್ಷಕ್ಕಿಂತ ಮೇಲ್ಪಟ್ಟ, ಚೇತರಿಸಿಕೊಂಡ ರೋಗಿಗಳೊಂದಿಗೆ ಲಿಯಾಂಗ್ ಅವರ ತಂಡವು ಸಂಪರ್ಕದಲ್ಲಿದೆ. 100 ರೋಗಿಗಳಲ್ಲಿ ಶೇಕಡಾ 10 ರಷ್ಟು‌ ಜನರಿಗೆ ಕೊರೊನಾ ವೈರಸ್ ವಿರುದ್ಧದ ಪ್ರತಿಕಾಯಗಳು ಕಣ್ಮರೆಯಾಗಿವೆ ಎಂದು ಫಲಿತಾಂಶಗಳು ತೋರಿಸಿಕೊಟ್ಟಿವೆ.

ಅವರಲ್ಲಿ ಐದು ಪ್ರತಿಶತದಷ್ಟು ಜನರು ಕೊರೊನಾ ನ್ಯೂಕ್ಲಿಯಿಕ್ ಆಸಿಡ್ ಪರೀಕ್ಷೆಗಳಲ್ಲಿ‌ ನೆಗೆಟಿವ್ ಫಲಿತಾಂಶ ಬಂದಿದೆ. ಆದರೆ ಇಮ್ಯುನೊಗ್ಲಾಬ್ಯುಲಿನ್ M (IgM) ಪರೀಕ್ಷೆಗಳಲ್ಲಿ ಪಾಸಿಟಿವ್ ಎಂಬ ಫಲಿತಾಂಶ ಬಂದಿದೆ ಎಂದರು. ಆದ್ದರಿಂದ ಇದನ್ನು ಮತ್ತೆ ನಿರ್ಬಂಧಿಸಬೇಕಾಗಿದೆ ಎಂದು ವರದಿ ತಿಳಿಸಿದೆ.

ಐಜಿಎಂ ಸಾಮಾನ್ಯವಾಗಿ ವೈರಸ್ ದಾಳಿ ಮಾಡಿದಾಗ ಪ್ರತಿರಕ್ಷಣಾ ವ್ಯವಸ್ಥೆಯಿಂದ ಉತ್ಪತ್ತಿಯಾಗುವ ಮೊದಲ ಪ್ರತಿಕಾಯವಾಗಿದೆ. ಐಜಿಎಂ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶವು ಒಬ್ಬ ವ್ಯಕ್ತಿಯು ಸೋಂಕಿಗೆ ಒಳಗಾಗಿದ್ದಾನೆ ಎಂಬುದನ್ನು ಸೂಚಿಸುತ್ತದೆ.

ಆದರೆ ಈ ಜನರು ಮತ್ತೆ ಯಾಕೆ ಸೋಂಕಿಗೆ ಒಳಗಾಗಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 100 ರೋಗಿಗಳ ರೋಗನಿರೋಧಕ ವ್ಯವಸ್ಥೆಗಳು ಕಡಿಮೆ ಮಟ್ಟದ ಬಿ ಜೀವಕೋಶಗಳನ್ನು ತೋರಿಸಿದ ಕಾರಣ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

ರೋಗಿಗಳ ಪ್ರತಿರಕ್ಷಣಾ ವ್ಯವಸ್ಥೆಗಳು ಇನ್ನೂ ಚೇತರಿಸಿಕೊಳ್ಳುತ್ತಿವೆ ಎಂದು ಫಲಿತಾಂಶಗಳು ಬಹಿರಂಗಪಡಿಸಿದವು ಎಂದು ಪೆಂಗ್ ಹೇಳಿದರು. ಚೇತರಿಸಿಕೊಂಡ ಹೆಚ್ಚಿನ ರೋಗಿಗಳು ತಮ್ಮ ಕುಟುಂಬಗಳೊಂದಿಗೆ ಒಂದೇ ಟೇಬಲ್‌ನಲ್ಲಿ ಊಟ ಮಾಡಲು ಸಿದ್ಧರಿಲ್ಲ ಎಂದು ತಂಡಕ್ಕೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಚೇತರಿಸಿಕೊಂಡ ರೋಗಿಗಳಲ್ಲಿ ಅರ್ಧಕ್ಕಿಂತ ಕಡಿಮೆ ಜನರು ಕೆಲಸಕ್ಕೆ ಮರಳಿದ್ದಾರೆ ಎಂದು ಅದು ಹೇಳಿದೆ.

ಕೊರೊನಾ ವೈರಸ್ ಮೊದಲು ವುಹಾನ್ ನಗರದಲ್ಲಿ ಕಂಡುಬಂದಿದ್ದರಿಂದ ಈ ಸಂಶೋಧನೆಗಳು ಗಮನಾರ್ಹವಾಗಿವೆ. ವುಹಾನ್ ಪ್ರಾಂತೀಯ ರಾಜಧಾನಿಯಾಗಿರುವ ಹುಬೈ ಪ್ರಾಂತ್ಯವು ಈವರೆಗೆ ಒಟ್ಟು 68,138 ದೃಢೀಕರಿಸಿದ ಕೊರೊನಾ ಪ್ರಕರಣಗಳನ್ನು ವರದಿ ಮಾಡಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ ಈ ರೋಗವು ಪ್ರಾಂತ್ಯದಲ್ಲಿ 4,512 ಜನರನ್ನು ಬಲಿ ತೆಗೆದುಕೊಂಡಿದೆ.

ಮಂಗಳವಾರದ ಹೊತ್ತಿಗೆ, ಚೀನಾದಲ್ಲಿ ದೃಢಪಡಿಸಿದ ಕೊರೊನಾ ಪ್ರಕರಣಗಳ ಸಂಖ್ಯೆ 88,328 ಕ್ಕೆ ತಲುಪಿದೆ. ಚೇತರಿಸಿಕೊಂಡ ನಂತರ ಒಟ್ಟಾರೆಯಾಗಿ 81,417 ಜನರನ್ನು ಬಿಡುಗಡೆ ಮಾಡಲಾಗಿದೆ, ಮತ್ತು 4,677 ಜನರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಎನ್ಎಚ್‌ ಸಿ ತಿಳಿಸಿದೆ.


ಇದನ್ನೂ ಓದಿ: ರೋಗನಿರೋಧಕ ಪ್ರತಿಕ್ರಿಯೆಯನ್ನು ಹೆಚ್ಚಿಸಿದ ನೊವಾವಾಕ್ಸ್ ಕೊರೊನಾ ಲಸಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...