Homeಅಂತರಾಷ್ಟ್ರೀಯವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

- Advertisement -
- Advertisement -

ಸಾಂಕ್ರಾಮಿಕ ರೋಗ ಪತ್ತೆಯಾದ ಚೀನಾದ ವುಹಾನ್ ನಗರದ ಪ್ರಮುಖ ಆಸ್ಪತ್ರೆಯು, ಕೊರೊನಾ ವೈರಸ್-ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ತೊಂಬತ್ತು ಪ್ರತಿಶತದಷ್ಟು ಜನರು ಶ್ವಾಸಕೋಶದ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ವರದಿ ಮಾಡಿದೆ.

ಆಸ್ಪತ್ರೆಯ ತೀವ್ರ ನಿಗಾ ಘಟಕದ ನಿರ್ದೇಶಕ ಪೆಂಗ್ ಝಿಯಾಂಗ್ ನೇತೃತ್ವದ ವುಹಾನ್ ವಿಶ್ವವಿದ್ಯಾಲಯದ ಝೋಂಗ್ನಾನ್ ಆಸ್ಪತ್ರೆಯ ತಂಡವು, ಏಪ್ರಿಲ್‌ನಿಂದ ಚೇತರಿಸಿಕೊಂಡ 100 ರೋಗಿಗಳೊಂದಿಗೆ ಸಂಪರ್ಕದಲ್ಲಿದೆ. ಈ ಒಂದು ವರ್ಷದ ಅಧ್ಯಯನ ಕಾರ್ಯಕ್ರಮದ ಮೊದಲ ಹಂತ ಜುಲೈನಲ್ಲಿ ಮುಗಿದಿದೆ. ಅಧ್ಯಯನದಲ್ಲಿ ರೋಗಿಗಳ ಸರಾಸರಿ ವಯಸ್ಸು 59 ಆಗಿದೆ.

ಮೊದಲ ಹಂತದ ಫಲಿತಾಂಶಗಳ ಪ್ರಕಾರ, ಶೇಕಡಾ 90 ರಷ್ಟು ರೋಗಿಗಳ ಶ್ವಾಸಕೋಶಗಳು ಇನ್ನೂ ಹಾನಿಗೊಳಗಾದ ಸ್ಥಿತಿಯಲ್ಲಿವೆ.

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಪೆಂಗ್‌ರ ತಂಡವು ರೋಗಿಗಳೊಂದಿಗೆ ಆರು ನಿಮಿಷಗಳ ವಾಕಿಂಗ್ ಪರೀಕ್ಷೆಯನ್ನು ನಡೆಸಿತು. ಚೇತರಿಸಿಕೊಂಡ ರೋಗಿಗಳು ಆರು ನಿಮಿಷಗಳಲ್ಲಿ 400 ಮೀಟರ್ ಮಾತ್ರ ನಡೆಯಬಲ್ಲರು. ಆದರೆ ಅವರ ಆರೋಗ್ಯವಂತ ಗೆಳೆಯರು ಅದೇ ಅವಧಿಯಲ್ಲಿ 500 ಮೀಟರ್ ನಡೆಯಬಹುದು ಎಂದು ಅಧ್ಯಯನ ತಿಳಿಸಿದೆ.

ಚೇತರಿಸಿಕೊಂಡ ಕೆಲವು ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮೂರು ತಿಂಗಳ ನಂತರವೂ ಆಮ್ಲಜನಕ ಯಂತ್ರಗಳನ್ನು ಅವಲಂಬಿಸಬೇಕಾಗಿದೆ ಎಂದು ಬೀಜಿಂಗ್‌ನ ಚೈನೀಸ್ ಮೆಡಿಸಿನ್ ವಿಶ್ವವಿದ್ಯಾಲಯದ ಡಾಂಗ್ ಝೈಮೆನ್ ಆಸ್ಪತ್ರೆಯ ವೈದ್ಯ ಲಿಯಾಂಗ್ ಟೆಂಗ್ಸ್‌ ಕಿಯಾವೋ ಅವರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

65 ವರ್ಷಕ್ಕಿಂತ ಮೇಲ್ಪಟ್ಟ, ಚೇತರಿಸಿಕೊಂಡ ರೋಗಿಗಳೊಂದಿಗೆ ಲಿಯಾಂಗ್ ಅವರ ತಂಡವು ಸಂಪರ್ಕದಲ್ಲಿದೆ. 100 ರೋಗಿಗಳಲ್ಲಿ ಶೇಕಡಾ 10 ರಷ್ಟು‌ ಜನರಿಗೆ ಕೊರೊನಾ ವೈರಸ್ ವಿರುದ್ಧದ ಪ್ರತಿಕಾಯಗಳು ಕಣ್ಮರೆಯಾಗಿವೆ ಎಂದು ಫಲಿತಾಂಶಗಳು ತೋರಿಸಿಕೊಟ್ಟಿವೆ.

ಅವರಲ್ಲಿ ಐದು ಪ್ರತಿಶತದಷ್ಟು ಜನರು ಕೊರೊನಾ ನ್ಯೂಕ್ಲಿಯಿಕ್ ಆಸಿಡ್ ಪರೀಕ್ಷೆಗಳಲ್ಲಿ‌ ನೆಗೆಟಿವ್ ಫಲಿತಾಂಶ ಬಂದಿದೆ. ಆದರೆ ಇಮ್ಯುನೊಗ್ಲಾಬ್ಯುಲಿನ್ M (IgM) ಪರೀಕ್ಷೆಗಳಲ್ಲಿ ಪಾಸಿಟಿವ್ ಎಂಬ ಫಲಿತಾಂಶ ಬಂದಿದೆ ಎಂದರು. ಆದ್ದರಿಂದ ಇದನ್ನು ಮತ್ತೆ ನಿರ್ಬಂಧಿಸಬೇಕಾಗಿದೆ ಎಂದು ವರದಿ ತಿಳಿಸಿದೆ.

ಐಜಿಎಂ ಸಾಮಾನ್ಯವಾಗಿ ವೈರಸ್ ದಾಳಿ ಮಾಡಿದಾಗ ಪ್ರತಿರಕ್ಷಣಾ ವ್ಯವಸ್ಥೆಯಿಂದ ಉತ್ಪತ್ತಿಯಾಗುವ ಮೊದಲ ಪ್ರತಿಕಾಯವಾಗಿದೆ. ಐಜಿಎಂ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶವು ಒಬ್ಬ ವ್ಯಕ್ತಿಯು ಸೋಂಕಿಗೆ ಒಳಗಾಗಿದ್ದಾನೆ ಎಂಬುದನ್ನು ಸೂಚಿಸುತ್ತದೆ.

ಆದರೆ ಈ ಜನರು ಮತ್ತೆ ಯಾಕೆ ಸೋಂಕಿಗೆ ಒಳಗಾಗಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 100 ರೋಗಿಗಳ ರೋಗನಿರೋಧಕ ವ್ಯವಸ್ಥೆಗಳು ಕಡಿಮೆ ಮಟ್ಟದ ಬಿ ಜೀವಕೋಶಗಳನ್ನು ತೋರಿಸಿದ ಕಾರಣ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

ರೋಗಿಗಳ ಪ್ರತಿರಕ್ಷಣಾ ವ್ಯವಸ್ಥೆಗಳು ಇನ್ನೂ ಚೇತರಿಸಿಕೊಳ್ಳುತ್ತಿವೆ ಎಂದು ಫಲಿತಾಂಶಗಳು ಬಹಿರಂಗಪಡಿಸಿದವು ಎಂದು ಪೆಂಗ್ ಹೇಳಿದರು. ಚೇತರಿಸಿಕೊಂಡ ಹೆಚ್ಚಿನ ರೋಗಿಗಳು ತಮ್ಮ ಕುಟುಂಬಗಳೊಂದಿಗೆ ಒಂದೇ ಟೇಬಲ್‌ನಲ್ಲಿ ಊಟ ಮಾಡಲು ಸಿದ್ಧರಿಲ್ಲ ಎಂದು ತಂಡಕ್ಕೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಚೇತರಿಸಿಕೊಂಡ ರೋಗಿಗಳಲ್ಲಿ ಅರ್ಧಕ್ಕಿಂತ ಕಡಿಮೆ ಜನರು ಕೆಲಸಕ್ಕೆ ಮರಳಿದ್ದಾರೆ ಎಂದು ಅದು ಹೇಳಿದೆ.

ಕೊರೊನಾ ವೈರಸ್ ಮೊದಲು ವುಹಾನ್ ನಗರದಲ್ಲಿ ಕಂಡುಬಂದಿದ್ದರಿಂದ ಈ ಸಂಶೋಧನೆಗಳು ಗಮನಾರ್ಹವಾಗಿವೆ. ವುಹಾನ್ ಪ್ರಾಂತೀಯ ರಾಜಧಾನಿಯಾಗಿರುವ ಹುಬೈ ಪ್ರಾಂತ್ಯವು ಈವರೆಗೆ ಒಟ್ಟು 68,138 ದೃಢೀಕರಿಸಿದ ಕೊರೊನಾ ಪ್ರಕರಣಗಳನ್ನು ವರದಿ ಮಾಡಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ ಈ ರೋಗವು ಪ್ರಾಂತ್ಯದಲ್ಲಿ 4,512 ಜನರನ್ನು ಬಲಿ ತೆಗೆದುಕೊಂಡಿದೆ.

ಮಂಗಳವಾರದ ಹೊತ್ತಿಗೆ, ಚೀನಾದಲ್ಲಿ ದೃಢಪಡಿಸಿದ ಕೊರೊನಾ ಪ್ರಕರಣಗಳ ಸಂಖ್ಯೆ 88,328 ಕ್ಕೆ ತಲುಪಿದೆ. ಚೇತರಿಸಿಕೊಂಡ ನಂತರ ಒಟ್ಟಾರೆಯಾಗಿ 81,417 ಜನರನ್ನು ಬಿಡುಗಡೆ ಮಾಡಲಾಗಿದೆ, ಮತ್ತು 4,677 ಜನರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಎನ್ಎಚ್‌ ಸಿ ತಿಳಿಸಿದೆ.


ಇದನ್ನೂ ಓದಿ: ರೋಗನಿರೋಧಕ ಪ್ರತಿಕ್ರಿಯೆಯನ್ನು ಹೆಚ್ಚಿಸಿದ ನೊವಾವಾಕ್ಸ್ ಕೊರೊನಾ ಲಸಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...