Homeಅಂತರಾಷ್ಟ್ರೀಯವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ವುಹಾನ್‌ನಲ್ಲಿ ಚೇತರಿಸಿಕೊಂಡ ಶೇ 90 ರಷ್ಟು ರೋಗಿಗಳಿಗೆ ಶ್ವಾಸಕೋಶದ ತೊಂದರೆ

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

- Advertisement -
- Advertisement -

ಸಾಂಕ್ರಾಮಿಕ ರೋಗ ಪತ್ತೆಯಾದ ಚೀನಾದ ವುಹಾನ್ ನಗರದ ಪ್ರಮುಖ ಆಸ್ಪತ್ರೆಯು, ಕೊರೊನಾ ವೈರಸ್-ನಿಂದ ಚೇತರಿಸಿಕೊಂಡ ರೋಗಿಗಳಲ್ಲಿ ತೊಂಬತ್ತು ಪ್ರತಿಶತದಷ್ಟು ಜನರು ಶ್ವಾಸಕೋಶದ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ವರದಿ ಮಾಡಿದೆ.

ಆಸ್ಪತ್ರೆಯ ತೀವ್ರ ನಿಗಾ ಘಟಕದ ನಿರ್ದೇಶಕ ಪೆಂಗ್ ಝಿಯಾಂಗ್ ನೇತೃತ್ವದ ವುಹಾನ್ ವಿಶ್ವವಿದ್ಯಾಲಯದ ಝೋಂಗ್ನಾನ್ ಆಸ್ಪತ್ರೆಯ ತಂಡವು, ಏಪ್ರಿಲ್‌ನಿಂದ ಚೇತರಿಸಿಕೊಂಡ 100 ರೋಗಿಗಳೊಂದಿಗೆ ಸಂಪರ್ಕದಲ್ಲಿದೆ. ಈ ಒಂದು ವರ್ಷದ ಅಧ್ಯಯನ ಕಾರ್ಯಕ್ರಮದ ಮೊದಲ ಹಂತ ಜುಲೈನಲ್ಲಿ ಮುಗಿದಿದೆ. ಅಧ್ಯಯನದಲ್ಲಿ ರೋಗಿಗಳ ಸರಾಸರಿ ವಯಸ್ಸು 59 ಆಗಿದೆ.

ಮೊದಲ ಹಂತದ ಫಲಿತಾಂಶಗಳ ಪ್ರಕಾರ, ಶೇಕಡಾ 90 ರಷ್ಟು ರೋಗಿಗಳ ಶ್ವಾಸಕೋಶಗಳು ಇನ್ನೂ ಹಾನಿಗೊಳಗಾದ ಸ್ಥಿತಿಯಲ್ಲಿವೆ.

ಅಂದರೆ ಅವರ ಶ್ವಾಸಕೋಶದ ವಾತಾಯನ ಮತ್ತು ಅನಿಲ ವಿನಿಮಯ ಕಾರ್ಯಗಳು ಆರೋಗ್ಯವಂತ ಜನರ ಮಟ್ಟಕ್ಕೆ ಚೇತರಿಸಿಕೊಂಡಿಲ್ಲ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಪೆಂಗ್‌ರ ತಂಡವು ರೋಗಿಗಳೊಂದಿಗೆ ಆರು ನಿಮಿಷಗಳ ವಾಕಿಂಗ್ ಪರೀಕ್ಷೆಯನ್ನು ನಡೆಸಿತು. ಚೇತರಿಸಿಕೊಂಡ ರೋಗಿಗಳು ಆರು ನಿಮಿಷಗಳಲ್ಲಿ 400 ಮೀಟರ್ ಮಾತ್ರ ನಡೆಯಬಲ್ಲರು. ಆದರೆ ಅವರ ಆರೋಗ್ಯವಂತ ಗೆಳೆಯರು ಅದೇ ಅವಧಿಯಲ್ಲಿ 500 ಮೀಟರ್ ನಡೆಯಬಹುದು ಎಂದು ಅಧ್ಯಯನ ತಿಳಿಸಿದೆ.

ಚೇತರಿಸಿಕೊಂಡ ಕೆಲವು ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮೂರು ತಿಂಗಳ ನಂತರವೂ ಆಮ್ಲಜನಕ ಯಂತ್ರಗಳನ್ನು ಅವಲಂಬಿಸಬೇಕಾಗಿದೆ ಎಂದು ಬೀಜಿಂಗ್‌ನ ಚೈನೀಸ್ ಮೆಡಿಸಿನ್ ವಿಶ್ವವಿದ್ಯಾಲಯದ ಡಾಂಗ್ ಝೈಮೆನ್ ಆಸ್ಪತ್ರೆಯ ವೈದ್ಯ ಲಿಯಾಂಗ್ ಟೆಂಗ್ಸ್‌ ಕಿಯಾವೋ ಅವರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.

65 ವರ್ಷಕ್ಕಿಂತ ಮೇಲ್ಪಟ್ಟ, ಚೇತರಿಸಿಕೊಂಡ ರೋಗಿಗಳೊಂದಿಗೆ ಲಿಯಾಂಗ್ ಅವರ ತಂಡವು ಸಂಪರ್ಕದಲ್ಲಿದೆ. 100 ರೋಗಿಗಳಲ್ಲಿ ಶೇಕಡಾ 10 ರಷ್ಟು‌ ಜನರಿಗೆ ಕೊರೊನಾ ವೈರಸ್ ವಿರುದ್ಧದ ಪ್ರತಿಕಾಯಗಳು ಕಣ್ಮರೆಯಾಗಿವೆ ಎಂದು ಫಲಿತಾಂಶಗಳು ತೋರಿಸಿಕೊಟ್ಟಿವೆ.

ಅವರಲ್ಲಿ ಐದು ಪ್ರತಿಶತದಷ್ಟು ಜನರು ಕೊರೊನಾ ನ್ಯೂಕ್ಲಿಯಿಕ್ ಆಸಿಡ್ ಪರೀಕ್ಷೆಗಳಲ್ಲಿ‌ ನೆಗೆಟಿವ್ ಫಲಿತಾಂಶ ಬಂದಿದೆ. ಆದರೆ ಇಮ್ಯುನೊಗ್ಲಾಬ್ಯುಲಿನ್ M (IgM) ಪರೀಕ್ಷೆಗಳಲ್ಲಿ ಪಾಸಿಟಿವ್ ಎಂಬ ಫಲಿತಾಂಶ ಬಂದಿದೆ ಎಂದರು. ಆದ್ದರಿಂದ ಇದನ್ನು ಮತ್ತೆ ನಿರ್ಬಂಧಿಸಬೇಕಾಗಿದೆ ಎಂದು ವರದಿ ತಿಳಿಸಿದೆ.

ಐಜಿಎಂ ಸಾಮಾನ್ಯವಾಗಿ ವೈರಸ್ ದಾಳಿ ಮಾಡಿದಾಗ ಪ್ರತಿರಕ್ಷಣಾ ವ್ಯವಸ್ಥೆಯಿಂದ ಉತ್ಪತ್ತಿಯಾಗುವ ಮೊದಲ ಪ್ರತಿಕಾಯವಾಗಿದೆ. ಐಜಿಎಂ ಪರೀಕ್ಷೆಯಲ್ಲಿ ಪಾಸಿಟಿವ್ ಫಲಿತಾಂಶವು ಒಬ್ಬ ವ್ಯಕ್ತಿಯು ಸೋಂಕಿಗೆ ಒಳಗಾಗಿದ್ದಾನೆ ಎಂಬುದನ್ನು ಸೂಚಿಸುತ್ತದೆ.

ಆದರೆ ಈ ಜನರು ಮತ್ತೆ ಯಾಕೆ ಸೋಂಕಿಗೆ ಒಳಗಾಗಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 100 ರೋಗಿಗಳ ರೋಗನಿರೋಧಕ ವ್ಯವಸ್ಥೆಗಳು ಕಡಿಮೆ ಮಟ್ಟದ ಬಿ ಜೀವಕೋಶಗಳನ್ನು ತೋರಿಸಿದ ಕಾರಣ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ.

ರೋಗಿಗಳ ಪ್ರತಿರಕ್ಷಣಾ ವ್ಯವಸ್ಥೆಗಳು ಇನ್ನೂ ಚೇತರಿಸಿಕೊಳ್ಳುತ್ತಿವೆ ಎಂದು ಫಲಿತಾಂಶಗಳು ಬಹಿರಂಗಪಡಿಸಿದವು ಎಂದು ಪೆಂಗ್ ಹೇಳಿದರು. ಚೇತರಿಸಿಕೊಂಡ ಹೆಚ್ಚಿನ ರೋಗಿಗಳು ತಮ್ಮ ಕುಟುಂಬಗಳೊಂದಿಗೆ ಒಂದೇ ಟೇಬಲ್‌ನಲ್ಲಿ ಊಟ ಮಾಡಲು ಸಿದ್ಧರಿಲ್ಲ ಎಂದು ತಂಡಕ್ಕೆ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ.

ಚೇತರಿಸಿಕೊಂಡ ರೋಗಿಗಳಲ್ಲಿ ಅರ್ಧಕ್ಕಿಂತ ಕಡಿಮೆ ಜನರು ಕೆಲಸಕ್ಕೆ ಮರಳಿದ್ದಾರೆ ಎಂದು ಅದು ಹೇಳಿದೆ.

ಕೊರೊನಾ ವೈರಸ್ ಮೊದಲು ವುಹಾನ್ ನಗರದಲ್ಲಿ ಕಂಡುಬಂದಿದ್ದರಿಂದ ಈ ಸಂಶೋಧನೆಗಳು ಗಮನಾರ್ಹವಾಗಿವೆ. ವುಹಾನ್ ಪ್ರಾಂತೀಯ ರಾಜಧಾನಿಯಾಗಿರುವ ಹುಬೈ ಪ್ರಾಂತ್ಯವು ಈವರೆಗೆ ಒಟ್ಟು 68,138 ದೃಢೀಕರಿಸಿದ ಕೊರೊನಾ ಪ್ರಕರಣಗಳನ್ನು ವರದಿ ಮಾಡಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ ಈ ರೋಗವು ಪ್ರಾಂತ್ಯದಲ್ಲಿ 4,512 ಜನರನ್ನು ಬಲಿ ತೆಗೆದುಕೊಂಡಿದೆ.

ಮಂಗಳವಾರದ ಹೊತ್ತಿಗೆ, ಚೀನಾದಲ್ಲಿ ದೃಢಪಡಿಸಿದ ಕೊರೊನಾ ಪ್ರಕರಣಗಳ ಸಂಖ್ಯೆ 88,328 ಕ್ಕೆ ತಲುಪಿದೆ. ಚೇತರಿಸಿಕೊಂಡ ನಂತರ ಒಟ್ಟಾರೆಯಾಗಿ 81,417 ಜನರನ್ನು ಬಿಡುಗಡೆ ಮಾಡಲಾಗಿದೆ, ಮತ್ತು 4,677 ಜನರು ಈ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ಎನ್ಎಚ್‌ ಸಿ ತಿಳಿಸಿದೆ.


ಇದನ್ನೂ ಓದಿ: ರೋಗನಿರೋಧಕ ಪ್ರತಿಕ್ರಿಯೆಯನ್ನು ಹೆಚ್ಚಿಸಿದ ನೊವಾವಾಕ್ಸ್ ಕೊರೊನಾ ಲಸಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...