Homeಕರ್ನಾಟಕಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

- Advertisement -
- Advertisement -
ಕೊವಿಡ್-19ರ ಸಂಕಷ್ಟದ ಸಮಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸರ್ಕಾರದ ಭರವಸೆ ಹುಸಿಯಾಗಿದೆ. ಹಣದ ಕೊರತೆಯಿಂದಾಗಿ ಉದ್ಯೋಗ ಖಾತ್ರಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಹಾಗಾಗಿ ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರು ಮತ್ತು ಬಡಜನತೆ ಉದ್ಯೋಗವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಕೂಲಿಯೂ ಇಲ್ಲ ಮಾಡಿರುವ ಕೆಲಸಕ್ಕೆ ರೊಕ್ಕವೂ ಇಲ್ಲದಂತಹ ಪರಿಸ್ಥಿತಿ ಉದ್ಭವಿಸಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲವು ಕಡೆ 30 ಮಾನವ ದಿನಗಳ ಕೆಲಸ ಸೃಜನೆಯಾಗಿದೆ. ಇನ್ನೂ ಕೆಲ ಕಡೆ 15 ದಿನಗಳ ಕೆಲಸ ದೊರಕಿದೆ. ಕೆಲಸ ಬೇಕೆಂದು ಗ್ರಾಮ ಪಂಚಾಯಿತಿಗಳಿಗೆ ಹಲವರು ಅರ್ಜಿ ಸಲ್ಲಿಸಿದ್ದರೂ ಜಾಬ್ ಕಾರ್ಡ್ ಗಳನ್ನು ನೀಡಿಲ್ಲ. ಜಾಬ್ ಕಾರ್ಡ್ ಕೊಡುವಂತೆ ಕೇಳಿದರೂ ಗ್ರಾಮ ಪಂಚಾಯಿತಿಗಳಿಂದ ಯಾವುದೇ ಪ್ರತಿಕ್ರಿಯೆ ದೊರೆಯುತ್ತಿಲ್ಲ. ಇದು ಕೆಲಸ ಅರಸುತ್ತಿರುವವರಿಗೆ ಬೇಸರ ಮೂಡಿಸಿದೆ.
ಬೆಂಗಳೂರು ಸೇರಿದಂತೆ ಎಲ್ಲೆಡೆ ಕೊರೊನ ಸೋಂಕು ವ್ಯಾಪಕವಾಗಿ ಹರಡಿದ ಪರಿಣಾಮ ನಗರಗಳಲ್ಲಿದ್ದ ಲಕ್ಷಾಂತರ ಮಂದಿ ವಲಸೆ ಕಾರ್ಮಿಕರು ಹಳ್ಳಿಗಳಿಗೆ ಮರಳಿದರು. ಹೀಗೆ ಬಂದವರಿಗೆ ಉದ್ಯೋಗ ಖಾತ್ರಿ ಯೋಜನೆ ಕೈಹಿಡಿಯಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಆರಂಭದಲ್ಲಿ ಕೆಲಸ ಸಿಕ್ಕಿದರೂ ಈಗ ಕೆಲಸವಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪದವೀಧರರು, ಸ್ನಾತಕೋತ್ತರ ಪದವೀಧರರು ಕೂಡ ಕೆಲಸ ಮಾಡುತ್ತಿದ್ದಾರೆ. ಕೆಲವು ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿಗಳು ಮತ್ತು ವಲಸೆ ಕಾರ್ಮಿಕರಿಗೆ ಕೆಲಸ ನೀಡುವ ಉದ್ದೇಶದಿಂದ ಸಾವಿರಾರು ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ 61 ಸಾವಿರ ಕೋಟಿ, ಎರಡನೇ ಕಂತಿನಲ್ಲಿ 40 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದರು. ಆದರೆ ರಾಜ್ಯಕ್ಕೆ ಎಷ್ಟು ಹಣ ಬಂದಿದೆ. ಈ ಹಣದಲ್ಲಿ ಎಷ್ಟು ಖರ್ಚಾಗಿದೆ ಎಂಬ ಮಾಹಿತಿಗಳನ್ನು ರಾಜ್ಯ ಸರ್ಕಾರ ಇದುವರೆಗೂ ಬಿಡುಗಡೆ ಮಾಡಿಲ್ಲ.
ಗ್ರಾಮ ಪಂಚಾಯಿತಿಗಳಲ್ಲಿ ನೋಂದಾಯಿಸಿಕೊಂಡ ಫಲನುಭವಿಗಳಿಗೆ ವರ್ಷದಲ್ಲಿ 100 ಮಾನವ ಕೆಲಸದ ದಿನಗಳನ್ನು ಒದಗಿಸುವುದಾಗಿ ಭರವಸೆ ನೀಡಿತ್ತು. ಆದರೆ ಬಹುತೇಕ ಕಡೆ ಕನಿಷ್ಠ 90 ದಿನಗಳ ಕೆಲಸವನ್ನೂ ನೀಡಿಲ್ಲದಿರುವುದು ಕಂಡುಬಂದಿದೆ. ಕೊರೊನ ಕಾಲದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ತಿಂಗಳು ಕೆಲಸ ದೊರಕಿದೆ. ಇದರಲ್ಲಿ ಕೇವಲ 15 ದಿನಗಳ ಕೂಲಿಯನ್ನು ಮಾತ್ರ ನೀಡಲಾಗಿದೆ.
ಲಕ್ಷಾಂತರ ಮಂದಿ ನಿರುದ್ಯೋಗಿಗಳು, ವಲಸೆ ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ್ದು ಕೆಲವು ಕಡೆ 10 ದಿನ, ಮತ್ತೆ ಕೆಲವು ಕಡೆ ಒಂದು ವಾರದ ಹಣ ಹಾಗೂ ಇನ್ನೂ ಕೆಲವು ಕಡೆ ಒಂದು ತಿಂಗಳ ಹಣ ಬಂದಿಲ್ಲ. ಇದು ನಿರುದ್ಯೋಗಿಗಳನ್ನು ಮತ್ತಷ್ಟು ಸಂಕಷ್ಟ ದೂಡುವಂತೆ ಮಾಡಿದೆ. ತಾಲುಕು ಪಂಚಾಯಿತಿ ಕಾರ್ಯನಿರ್ವಾಹಕ ಅದಿಕಾರಿಗಳನ್ನು ಕೇಳಿದರೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂಬ ಸಬೂಬು ನೀಡುತ್ತಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಹಣಕಾಸಿನ ಕೊರತೆಯೇ ಇದಕ್ಕೆ ಕಾರಣ. ಪಾವಗಡ ತಾಲೂಕು ವೆಂಕಟಾಪುರ ಮತ್ತು ವಿರುಪಸಮುದ್ರ ಗ್ರಾಮ ಪಂಚಾಯಿತಿಯಲ್ಲಿ 30 ಮಾನವ ಕೆಲಸದ ಸೃಜನೆಯಾಗಿದೆ. ಆದರೆ ಇಲ್ಲಿ ಅರ್ಧದಷ್ಟು ಕೂಲಿಯನ್ನು ಕಾರ್ಮಿಕರಿಗೆ ನೀಡಿಲ್ಲ.
‘ಸರ್ಕಾರ ನೂರು ದಿನಗಳ ಕೆಲಸ ನೀಡುವುದಾಗಿ ಹೇಳುತ್ತಿದೆ. ಆದರೆ 90 ದಿನಗಳ ಕೆಲಸವನ್ನೂ ಕೊಡುತ್ತಿಲ್ಲ. ನಾವು 200 ದಿನಗಳಿಗೆ ಕೆಲಸದ ದಿನಗಳನ್ನು ಹೆಚ್ಚಿಸಬೇಕೆಂದು ಒತ್ತಾಯಿಸುತ್ತಿದ್ದೇವೆ. ಸರ್ಕಾರ ನಿಗದಿಪಡಿಸಿರುವ ಕೆಲಸದ ದಿನಗಳಲ್ಲಿ ಕೆಲಸ ಕೊಡುತ್ತಿಲ್ಲ. ಪಾವಗಡ ತಾಲೂಕಿನಲ್ಲಿ ಉದ್ಯೋಗ ಖಾತ್ರಿಯ ಬಗ್ಗೆ ಜನರಲ್ಲಿ ತಿಳುವಳಿಕೆ ಇಲ್ಲ. ಇದನ್ನು ಗ್ರಾಮ ಪಂಚಾಯಿತಿ ಸದಸ್ಯರು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಈ.ಶಿವಣ್ಣ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.
ಜನರಿಗೆ ಇರುವ ತಿಳುವಳಿಕೆಯ ಕೊರತೆಯನ್ನೇ ಬಂಡವಾಳ ಮಾಡಿಕೊಂಡಿರುವ ಗ್ರಾಮ ಪಂಚಾಯಿತಿ ಸದಸ್ಯರು ಜಾಬ್ ಕಾರ್ಡ್ ಗಳನ್ನು ತಮ್ಮ ಬಳಿ ಇಟ್ಟುಕೊಂಡು ಮೊದಲಿಗೆ ತಮ್ಮ ಖಾತೆಗಳಿಗೆ ಹಣ ಜಮಾ ಮಾಡಿಕೊಂಡು ಫಲಾನುಭವಿಗಳಿಗೆ ಕಡಿಮೆ ಹಣ ನೀಡುವ ಮೂಲಕ ವಂಚನೆ ಮಾಡುತ್ತಿದ್ದಾರೆ. ಹಾಗಾಗಿ ಬಡವರಿಗೆ ಹಣ ತಲುಪುತ್ತಿಲ್ಲ. ಜಾಬ್ ಕಾರ್ಡ್ ಇದ್ದು ಬ್ಯಾಂಕ್ ಖಾತೆ ಹೊಂದಿರುವವರಿಗೆ ನೇರವಾಗಿ ಹಣ ಖಾತೆಗೆ ವರ್ಗಾವಣೆಯಾಗುತ್ತದೆ. ಇದು ಒಳ್ಳೆಯ ಬೆಳವಣಿಗೆ. ಆದರೆ ಬಹುತೇಕ ಕಡೆ ಪಂಚಾಯಿತಿ ಸದಸ್ಯರೇ ಹಣ ಗುಳುಂ ಮಾಡಿರುವ ಪ್ರಕರಣಗಳು ಇವೆ’ ಎಂದು ಅವರು ಆರೋಪಿಸಿದ್ದಾರೆ.
ಸ್ವಗ್ರಾಮಗಳಿಗೆ ಮರಳಿರುವ ವಲಸೆ ಕಾರ್ಮಿಕರು ಅದರಲ್ಲೂ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಕೆಲ ಯುವಕರು ಗ್ರಾಮಗಳಲ್ಲಿ ಸ್ವಯಂ ಉದ್ಯೋಗದಲ್ಲಿ ತೊಡಗಿರುವುದು ಕಂಡುಬರುತ್ತಿದೆ. ಇನ್ನೂ ಹಲವಾರು ಯುವಕರು ಮತ್ತು ಕಾರ್ಮಿಕರು ಯಾವುದೇ ಕೆಲಸ ಇಲ್ಲದೆ ಕಾಲ ದೂಡುವುದು ಕಷ್ಟವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...