Homeಚಳವಳಿರಸ್ತೆ ಸಾರಿಗೆ ಕ್ಷೇತ್ರವನ್ನು ಉಳಿಸಲು ದೇಶಾದ್ಯಂತ ಸಾರಿಗೆ ಕಾರ್ಮಿಕರ ಪ್ರತಿಭಟನೆ

ರಸ್ತೆ ಸಾರಿಗೆ ಕ್ಷೇತ್ರವನ್ನು ಉಳಿಸಲು ದೇಶಾದ್ಯಂತ ಸಾರಿಗೆ ಕಾರ್ಮಿಕರ ಪ್ರತಿಭಟನೆ

ಇತ್ತೀಚಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಕಾರ್ಮಿಕ ಸಂಘಗಳು ಹಲವಾರು ಪ್ರತಿಭಟನೆಗಳನ್ನು ನಡೆಸಿದ್ದು, ಸಾರಿಗೆ ಕಾರ್ಮಿಕರು ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ 2019 ಅನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

- Advertisement -
- Advertisement -

ಆಗಸ್ಟ್ 5 ರ ಬುಧವಾರದಂದು ರಸ್ತೆ ಸಾರಿಗೆ ಕಾರ್ಮಿಕರ ಅಖಿಲ ಭಾರತ ಸಮನ್ವಯ ಸಮಿತಿಯ (AICCORTWO) ಕರೆಯ ಮೇರೆಗೆ, ಸಾರ್ವಜನಿಕ ಮತ್ತು ಖಾಸಗಿ ಸಾರಿಗೆ ಕಾರ್ಮಿಕರು ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಸರ್ಕಾರದ ನಿರ್ಬಂಧಗಳ ನಡುವೆ ರಾಜ್ಯಗಳಾದ್ಯಂತ ರಾಷ್ಟ್ರೀಯ ಪ್ರತಿಭಟನಾ ದಿನವನ್ನು ಆಚರಿಸಿದರು.

“ಕೇರಳ, ಕರ್ನಾಟಕ, ರಾಜಸ್ಥಾನ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ, ಮಧ್ಯಪ್ರದೇಶ ಮತ್ತು ಜಾರ್ಖಂಡ್‌ನಲ್ಲಿ ಪ್ರತಿಭಟನೆಗಳು ಯಶಸ್ವಿಯಾಗಿವೆ, ಅಲ್ಲಿ ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರು ಹಲವಾರು ರಾಜ್ಯಗಳಲ್ಲಿ ಪೊಲೀಸ್ ಪಡೆಗಳ ದಬ್ಬಾಳಿಕೆಯ ಹೊರತಾಗಿಯೂ ವಿವಿಧ ಪ್ರತಿಭಟನಾ ಪ್ರದರ್ಶನಗಳನ್ನು ನಡೆಸಿದರು” ಎಂದು ಅಖಿಲ ಭಾರತ ರಸ್ತೆ ಸಾರಿಗೆ ಕಾರ್ಮಿಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ಕೆ. ದಿವಾಕರನ್ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಮುಂಚಿತವಾಗಿ ರಸ್ತೆ ಸಾರಿಗೆ ಉದ್ಯಮದಲ್ಲಿ ಕಾರ್ಮಿಕರು ಬಿಕ್ಕಟ್ಟಿನಲ್ಲಿದ್ದರು. ಸಾಂಕ್ರಾಮಿಕ ರೋಗವು ಅವರನ್ನು ಮತ್ತಷ್ಟು ಸಮಸ್ಯೆಗಳಿಗೆ ಕೆಡವಿತು. ಅಲ್ಲದೆ ಲಾಕ್‌ಡೌನ್‌ನಿಂದಾಗಿ ಉದ್ಯಮವು ವಾಸ್ತವಿಕವಾಗಿ ಕುಸಿದಿದೆ” ಎಂದು ದಿವಾಕರನ್ ಹೇಳಿದರು. ನಾವು ಮಂಡಿಸಿದ ಬೇಡಿಕೆಗಳು ರಸ್ತೆ ಸಾರಿಗೆ ಉದ್ಯಮದಲ್ಲಿರುವ 10 ಕೋಟಿ ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತವೆ ಎಂದು ಅವರು ಹೇಳಿದ್ದಾರೆ.

ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ವರ್ಧಿತ ಅಬಕಾರಿ ಸುಂಕವನ್ನು ಹಿಂತೆಗೆದುಕೊಳ್ಳುವುದು ಹಾಗೂ ಜೂನ್ 7 ರಿಂದ ಹೆಚ್ಚಿದ ತೈಲ ಬೆಲೆಗಳನ್ನು ಹಿಂತೆಗೆದುಕೊಳ್ಳುವುದು ಸೇರಿದಂತೆ ತಮ್ಮ 12 ಅಂಶಗಳ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ ನಡೆದಿದೆ. ಕಳೆದ ತಿಂಗಳು AICCORTWO ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಕುರಿತು ಮನವಿ ಮಾಡಿತ್ತು.

ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ ಅಡಿಯಲ್ಲಿ ತರುವುದು; ರಸ್ತೆ ಸಾರಿಗೆ ಕಾರ್ಮಿಕರಿಗೆ ಪ್ರತ್ಯೇಕ ಸಾಮಾಜಿಕ ಭದ್ರತಾ ಕಾನೂನು; ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ 2019 ರ ವಾಪಸಾತಿ; ಅಸಂಘಟಿತ ವಲಯದ ಸಾರಿಗೆ ಕಾರ್ಮಿಕರಿಗೆ ರಾಷ್ಟ್ರೀಯ ವೇತನ ನೀತಿ; ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಿಗೆ (ಎಸ್‌ಟಿಯು) ಬಜೆಟ್ ಬೆಂಬಲ; ಎಸ್‌ಟಿಯುಗಳನ್ನು ಅಬಕಾರಿ ಸುಂಕ ಮತ್ತು ಡೀಸೆಲ್ ಮತ್ತು ಮೋಟಾರು ವಾಹನಗಳ ಮೇಲಿನ ಮಾರಾಟ ತೆರಿಗೆಯಿಂದ ವಿನಾಯಿತಿ; ಎಸ್‌ಟಿಯುಗಳಿಗೆ ಮಾತ್ರ ವಿದ್ಯುತ್ ಬಸ್‌ಗಳು ಮತ್ತು ಆರು ತಿಂಗಳ ಅವಧಿಗೆ ಎಲ್ಲಾ ಅಸಂಘಟಿತ ವಲಯದ ಸಾರಿಗೆ ಕಾರ್ಮಿಕರಿಗೆ 7,500 ರೂ ಇವುಗಳು ಪ್ರತಿಭಟನಾಕಾರರ ಇತರ ಬೇಡಿಕೆಗಳಾಗಿದ್ದವು.

“ರಾಮ ಮಂದಿರ ವಿಚಾರದಿಂದಾಗಿ ಸಿಆರ್‌ಪಿಸಿ ಯ ಸೆಕ್ಷನ್ 144 ಅನ್ನು ಹೇರಿದ ಕಾರಣ ಇಡೀ ಅಸ್ಸಾಂ ಕಟ್ಟುನಿಟ್ಟಾದ ಲಾಕ್‌ಡೌನ್ ಆಗಿದೆ. ಅದರಂತೆ, ಗುವಾಹಟಿ ಮತ್ತು ಬೊಂಗೈಗಾಂವ್‌ನಲ್ಲಿ ಪ್ರತಿಭಟನಾ ಪ್ರದರ್ಶನಗಳನ್ನು ಆಚರಿಸಲಾಯಿತು”ಎಂದು ದಿವಾಕರನ್ ಹೇಳಿದರು. ಅಲ್ಲದೆ ದೇಶಾದ್ಯಂತದ ವಿವಿಧ ಪ್ರತಿಭಟನೆಗಳ ಬಗ್ಗೆ ಅವರು ಮಾತನಾಡಿದರು.

“ರಾಜ್ಯದಾದ್ಯಂತದ ಎಸ್‌ಟಿಯುಗಳು ಕಾರ್ಯಾಚರಣೆಯ ವೆಚ್ಚ, ಖಾಸಗಿ ಗಾಡಿಗಳ ಅಕ್ರಮ ಕಾರ್ಯಾಚರಣೆ ಮತ್ತು ಇತರ ಕಾರಣಗಳಿಂದಾಗಿ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ. ಅಂತಹ ಪರಿಸ್ಥಿತಿಯಲ್ಲಿ ಮಾನವಶಕ್ತಿಯ ಕಡಿತ ಮತ್ತು ಅದರ ಪರಿಣಾಮವಾಗಿ ಕೆಲಸದ ಹೊರೆ ಹೆಚ್ಚಳ, ವೇತನ ಪಾವತಿಸದಿರುವುದು, ನಿವೃತ್ತಿ ವೇತನ ಬಾಕಿ ಅಥವಾ ವಿಳಂಬ ಪಾವತಿ ಸಮಸ್ಯೆಗಳಿಂದ ಕಾರ್ಮಿಕರು ಬಳಲುತ್ತಿದ್ದಾರೆ” ಎಂದು AICCORTWO ಹೇಳಿದೆ.

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಎಸ್‌ಆರ್‌ಟಿಸಿ) ನೌಕರರ ಒಕ್ಕೂಟದ ಕೆ.ರಾಜಿ ರೆಡ್ಡಿ ಮಾತನಾಡಿ, ರಾಜ್ಯ ಪೊಲೀಸರು ಹೈದರಾಬಾದ್‌ನಲ್ಲಿ ಹಲವಾರು ಕಾರ್ಮಿಕರನ್ನು ವಶಕ್ಕೆ ಪಡೆದಿದ್ದಾರೆ ಮತ್ತು ತೆಲಂಗಾಣದ ಎಲ್ಲಾ ಬಸ್ ಡಿಪೋಗಳ ಮುಂದೆ ಕಾರ್ಮಿಕರು ಮತ್ತು ನೌಕರರು ಪ್ರತಿಭಟನೆ ನಡೆಸಿದ್ದಾರೆ ಎಂದು ಹೇಳಿದರು.

ಸಾರಿಗೆ ಕಾರ್ಮಿಕರ ರಾಷ್ಟ್ರೀಯ ಒಕ್ಕೂಟ, ಅಖಿಲ ಭಾರತ ರಸ್ತೆ ಸಾರಿಗೆ ಕಾರ್ಮಿಕರ ಒಕ್ಕೂಟ, ಭಾರತೀಯ ರಾಷ್ಟ್ರೀಯ ಸಾರಿಗೆ ಕಾರ್ಮಿಕರ ಒಕ್ಕೂಟ, ಮಹಾರಾಷ್ಟ್ರ ರಾಜ್ಯ ಸಾರಿಗೆ ಕಮಾರ್ ಸಂಘತಾನ, ಕಾರ್ಮಿಕ ಪ್ರಗತಿಪರ ಒಕ್ಕೂಟ, ದೆಹಲಿ ಸಾರಿಗೆ ನಿಗಮ (ಡಿಟಿಸಿ) ಕಾರ್ಮಿಕರ ಏಕತಾ ಕೇಂದ್ರ, ತೆಲಂಗಾಣ ಮಜ್ದೂರ್ ಯೂನಿಯನ್, ತಮಿಳುನಾಡು ಸರ್ಕಾರಿ ಸಾರಿಗೆ ನಿಗಮಗಳ ಸಿಬ್ಬಂದಿ ಒಕ್ಕೂಟ, ಸರ್ವ ಕರ್ಮಚಾರಿ ಸಂಘ ಹೀಗೆ ಹಲವಾರು ಕೇಂದ್ರ ಕಾರ್ಮಿಕ ಸಂಘಗಳ ಸಂಯೋಜಿತ ಒಕ್ಕೂಟಗಳನ್ನು AICCORTWO ಒಳಗೊಂಡಿದೆ.

ದೆಹಲಿ, ಮುಂಬೈ, ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್‌ನಂತಹ ಪ್ರಮುಖ ನಗರಗಳಲ್ಲಿ ಉಬರ್, ಓಲಾ, ಸ್ವಿಗ್ಗಿ ಮತ್ತು ಇತರ ಅಪ್ಲಿಕೇಶನ್‌ಗಳೊಂದಿಗೆ ಕೆಲಸ ಮಾಡುವ ಅಪ್ಲಿಕೇಶನ್ ಆಧಾರಿತ ಸಾರಿಗೆ ಕಾರ್ಮಿಕರು ಸಹ ಪ್ರತಿಭಟನೆಯಲ್ಲಿ ಸೇರಿದ್ದಾರೆ.

ಸಾರಿಗೆ ಕಾರ್ಮಿಕರ ಸಂಘಗಳು ಮಂಡಿಸಿದ ಬೇಡಿಕೆಗಳನ್ನು ಬೆಂಬಲಿಸುತ್ತಾ, ಆ್ಯಪ್ ಆಧಾರಿತ ಸಾರಿಗೆ ಕಾರ್ಮಿಕರ ಫೆಡರೇಶನ್‌ನ ಪ್ರಧಾನ ಕಾರ್ಯದರ್ಶಿ ಶೈಕ್ ಸಲಾವುದ್ದೀನ್, “ಲಾಕ್‌ಡೌನ್ ಸಮಯದಲ್ಲಿ ಮತ್ತು ನಂತರ ಅಪ್ಲಿಕೇಶನ್ ಆಧಾರಿತ ಚಾಲಕರು ಮತ್ತು ವಿತರಣಾ ಕಾರ್ಮಿಕರು ರಸ್ತೆಗಳಲ್ಲಿದ್ದಾರೆ. ಅವರಿಗೆ ಯಾವುದೇ ಸಾಮಾಜಿಕ ಭದ್ರತೆ ಸೌಲಭ್ಯಗಳಿಲ್ಲ. 25 ಲಕ್ಷಕ್ಕೂ ಹೆಚ್ಚು ಆ್ಯಪ್ ಆಧಾರಿತ ಕಾರ್ಮಿಕರ ಕುಂದುಕೊರತೆಗಳನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು ಮತ್ತು ಅವರಿಗೆ ಸಾಮಾಜಿಕ ರಕ್ಷಣೆ ನೀಡಬೇಕು” ಎಂದು ಹೇಳಿದ್ದಾರೆ.

ಇತ್ತೀಚಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಕಾರ್ಮಿಕ ಸಂಘಗಳು ಹಲವಾರು ಪ್ರತಿಭಟನೆಗಳನ್ನು ನಡೆಸಿದ್ದು, ಸಾರಿಗೆ ಕಾರ್ಮಿಕರು ಮೋಟಾರು ವಾಹನ (ತಿದ್ದುಪಡಿ) ಕಾಯ್ದೆ 2019 ಅನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

ಫೋಟೋ ಹಾಗೂ ಸುದ್ದಿ ಕೃಪೆ: ನ್ಯೂಸ್ ಕ್ಲಿಕ್


ಓದಿ: ಕಾರ್ಮಿಕರಿಗೆ ಮತ್ತೇ ಬರೆ ಎಳೆಯಲು ತಯಾರಿ; ಪಿಎಫ್ ಬಡ್ಡಿದರ ಕಡಿತ…!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...