Homeಮುಖಪುಟಈ ಮುಂಗಾರಿಗೆ ಯಾವ ರೀತಿಯ ವೈವಿಧ್ಯ ಆಹಾರ ಉತ್ತಮ?: ಕೆ.ಸಿ ರಘು

ಈ ಮುಂಗಾರಿಗೆ ಯಾವ ರೀತಿಯ ವೈವಿಧ್ಯ ಆಹಾರ ಉತ್ತಮ?: ಕೆ.ಸಿ ರಘು

ಈಗಲೂ ಸಹ ಆಹಾರದ ಬಗ್ಗೆ ಕೊಂಚ ಆಸಕ್ತಿಯುಳ್ಳವರು ಹಿರಿಯರ ಅನುಭವವನ್ನು ಬಳಸಿಕೊಂಡು ಆಧುನಿಕ ವಿಜ್ಞಾನದ ಕೊಡುಗೆಯನ್ನು ಬೆಸೆದರೆ ಉತ್ತಮ ಆಹಾರ, ರಸ ಮತ್ತು ರುಚಿಯೂ ಮುಂಗಾರು ಮಳೆಯ ನಾದಕ್ಕೆ ಜುಗಲ್‍ಬಂದಿ ಆಗಬಹುದು.

- Advertisement -
- Advertisement -

ನಮ್ಮ ನಿತ್ಯ ಆಹಾರ ಹೊರ ಜಗತ್ತನ್ನು ಒಳಜಗತ್ತನ್ನಾಗಿ ಪರಿವರ್ತಿಸುವ ನಿರಂತರ ಪ್ರಕ್ರಿಯೆ. ಹೊರ ಜಗತ್ತು ಎಷ್ಟು ವೈವಿಧ್ಯಮಯವೋ, ಒಳಜಗತ್ತು ಸಹ ವೈವಿಧ್ಯತೆಯ ಆಗರವೇ. ನಾವೆಂಬ ನಾವು ಕೇವಲ ನಾವೇ ಅಲ್ಲ. ನಮ್ಮ ದೇಹವೂ ಲಕ್ಷಾಂತರ ಸೂಕ್ಷ್ಮ ಜೀವಿಗಳಿಗೆ ಸೂರು ಹೌದು. ಇತ್ತೀಚಿನ ವಿಜ್ಞಾನ ಹೇಳುವಂತೆ ನಮ್ಮ ದೇಹದಲ್ಲಿ ನಾವೇ ಅತಿಥಿಗಳು. ಅಲನಾ ಕೋಲನ್ ಅವರು ಈ ಬಗೆಗೆ ಬರೆದಿರುವ ಪುಸ್ತಕದ ಹೆಸರೇ “10 ಪರ್ಸೆಂಟ್ ಹ್ಯೂಮನ್”.

ಸೂಕ್ಷ್ಮ ಜೀವಿಗಳ ಜಗತ್ತು ನಮ್ಮ ಇರುವಿಕೆಯ ಜೊತೆಗೇ ಹೆಣೆದುಕೊಂಡಿದೆ. ಬಳ್ಳಿಯಿಂದ ಮರ ನಿಂತಿದೆಯೋ ಅಥವಾ ಮರದಿಂದ ಬಳ್ಳಿ ನಿಂತಿದೆಯೋ ಹೇಳಲಾಗದು. ನಮ್ಮ 23 ಸಾವಿರ ಗುಣಾಣುಗಳಲ್ಲಿ ಸುಮಾರು 10ಸಾವಿರ ಗುಣಾಣುಗಳು ವೈರಸ್‍ಗಳಿಂದ ಮಾಡಲ್ಪಟ್ಟವು ಎನ್ನುತ್ತಾರೆ. ಹಾಗಾಗಿ ನಮ್ಮ ಆಹಾರ ನಮಗಾಗಿ ಎನ್ನುವಂತಿಲ್ಲ. ಅತಿಥಿ ಅತಿಥೇಯರ ಸರ್ವಾಂಗೀಣ ಒಳಿತಿಗಾಗಿ ನಾವು ಆಹಾರವನ್ನು ಸೇವಿಸಬೇಕು. ಇದು ಕೇವಲ ನಾಲಿಗೆಯ ರುಚಿಗೆ ಜೋತು ಬೀಳುವ ಕ್ಷುಲ್ಲಕ ವಿಷಯವಲ್ಲ. ಯಾವುದೋ ಕೆಟ್ಟ ಆಹಾರವನ್ನು ಒಗ್ಗಿಸಿಕೊಂಡುಬಿಟ್ಟರೆ ಮಾದಕ ವಸ್ತುವಿಗೆ ನಮ್ಮನ್ನೇ ನಾವು ಮಾರಿಕೊಂಡಂತೆ. ಹೀಗಾಗದೆ ವೈವಿಧ್ಯಮಯ ಆಹಾರ ಪದ್ಧತಿಯನ್ನು ಅಷ್ಟೇ ವೈವಿಧ್ಯಮಯವಾದ ನಮ್ಮ ದೇಹವೆನ್ನುವ ಜೀವರಾಶಿಗೆ ಒದಗಿಸತಕ್ಕದ್ದು. ಈ ರೀತಿಯಲ್ಲಿ ನಮ್ಮ ದೇಹವೆನ್ನುವುದು ಒಂದು ಪೃಕೃತಿ ಪಂಜರವೇ ಸರಿ.

ಪ್ರತಿ ಋತುವಿಗೆ ತಕ್ಕಂತೆ ಆಹಾರದ ಬದಲಾವಣೆ ಆಗತಕ್ಕದ್ದು ವಾಡಿಕೆ ಎಂಬಂತಿದೆ. ನಮ್ಮ ಹಿಂದಿನವರು ಋತು ಬುಕ್, ಹಿತ ಬುಕ್ ಮತ್ತು ಮಿತ ಬುಕ್ ಎಂದು ಹೇಳುತ್ತಿದ್ದರು. ಅಂದರೆ ಕಾಲಕ್ಕೆ ತಕ್ಕಂತೆ ಹಿತಮಿತವಾದ ಆಹಾರವನ್ನು ಬಳಸುವುದರ ಅಗತ್ಯದ ಬಗೆಗಿನ ಮಾತು ಅದು. ಅಧ್ಯಯನದ ಪ್ರಕಾರ ಕಾಡಿನಲ್ಲೇ ವಾಸಿಸುವ ಅನೇಕ ಬುಡಕಟ್ಟು ಜನಾಂಗದವರ ದೇಹ ಪೃಕೃತಿಯನ್ನು ಅಧ್ಯಯನ ಮಾಡಿದಾಗ ಕಂಡು ಬರುವುದೇನೆಂದರೆ ಪ್ರತಿ ಋತುವಿಗೂ ಅವರ ದೇಹದ ಸೂಕ್ಷ್ಮ ಜೀವ ಜಗತ್ತು ಸಂಪೂರ್ಣವಾಗಿ ಬದಲಾಗುತ್ತದೆ. ಅಂದರೆ ಬ್ಯಾಕ್ಟೀರಿಯಾ, ಪ್ರೊಟೊಜೋವಾ ಮತ್ತು ವೈರಸ್‍ಗಳ ಜಗತ್ತು ಋತುವಿಂದ ಋತುವಿಗೆ ಕಾಲಕ್ಕೆ ತಕ್ಕಂತೆ ಆಹಾರ ಪದ್ಧತಿ ಬದಲಾಗುವುದರಿಂದ ಬದಲಾಗುತ್ತವೆ. ತನ್ನ ದೇಹದಲ್ಲಿರುವ ಜೀವ ಜಗತ್ತು ನಿಂತ ನೀರಾಗದೇ, ನಿರಂತರವಾಗಿ ಪೃಕೃತಿ ಜೊತೆಗೆ ಹೆಣೆದು ಬೆಸೆದುಕೊಂಡು ಬದಲಾಗುತ್ತಾ ಇರುತ್ತದೆ. ಆರೋಗ್ಯವೆಂದರೆ ಹೀಗೂ ವ್ಯಾಖ್ಯಾನಿಸುವುದುಂಟು” “ನಿರಂತರವಾಗಿ ಬದಲಾಗುವ ಹೊರ ಜಗತ್ತಿನೊಂದಿಗೆ ಸದಾ ಹೊಂದಿಕೊಳ್ಳುವ ಪೃಕ್ರಿಯೆ” ಎಂದು. ಈ ರೀತಿ ನಮ್ಮ ದೇಹ ಪೃಕೃತಿಯೂ ಸಹ ನಮ್ಮ ಆಹಾರ ಪದ್ಧತಿಯ ಮೂಲಕ ನಿರಂತರವಾಗಿ ಹೊಂದಿಕೊಳ್ಳುತ್ತ ಸಾಗಿದಾಗ ದೇಹ ಮತ್ತು ಪರಿಸರದ ಮಧ್ಯೆ ಒಂದು ಸಾವಯವ ಸಂಬಂಧ ಏರ್ಪಡುತ್ತದೆ. ಉಪನಿಷತ್ತಿನಲ್ಲಿ ನೀವು ಬಳಸುವ ಆಹಾರ ನಿಮ್ಮನ್ನು ಬಳಸುತ್ತದೆ ಎನ್ನುವ ಮಾತಿದೆ. ಇತ್ತೀಚಿನ ಜಾಗತೀಕರಣದ ಆಹಾರ ಸಂಸ್ಕೃತಿಯನ್ನು ಮ್ಯಾಕ್‍ಡೊನಾಲ್ಡ್‍ಡೈಸೇಶನ್ ಅಥವಾ ಕೊಕಾಕೊಲೊನೈಸೇಶನ್ ಎನ್ನುತ್ತಾರೆ. ಅಂದರೆ ಇಡೀ ಜಗತ್ತಿನ ಆಹಾರ ಸಂಸ್ಕೃತಿಯನ್ನು ಬಹು ಸಂಸ್ಕೃತಿಯಿಂದ ಅತ್ಯಂತ ಇಕ್ಕಟ್ಟಾದ ಏಕಸಂಸ್ಕೃತಿತಿಗೆ ತಂದು ನಿಲ್ಲಿಸಿರುವುದು. ಈ ಮ್ಯಾಕ್ಡೊನಾಲ್ಡ್‍ಡೈಸೇಶನ್ ಎನ್ನುವುದು ಸಮಾಜ ಶಾಸ್ತ್ರದಲ್ಲಿ ಒಂದು ವಿಶೇಷ ಅಧ್ಯಾಯನ ಆಗಿದೆ. ಇದು ಕೇವಲ ಆಹಾರದಲ್ಲಿ ಮಾತ್ರವಲ್ಲ ಎಲ್ಲ ರೀತಿಯ ವೈವಿಧ್ಯಮಯ ಸಂಸ್ಕೃತಿಯನ್ನು ಮಾರಣಹೋಮ ಮಾಡಿ ಏಕಮಯ ಸಂಸ್ಕೃತಿಗೆ ತಂದು ನಿಲ್ಲಿಸುವಂತದ್ದಾಗಿದೆ.

ಸ್ಥಳೀಯವಾಗಿ ಬೆಳೆದ ಮತ್ತು ಸಾಂಸ್ಕೃತಿಕವಾಗಿ ಬೆಳೆದು ಬಂದು ಬಳಸುವ ನಮ್ಮ ಆಹಾರ ಪದ್ಧತಿ ಸಾಮಾನ್ಯವಾಗಿ ಹೀಗೆ ಇದ್ದದ್ದಾಗಿತ್ತು. ಮಳೆಗಾಲ ಬಂತೆಂದರೆ ಮಲೆನಾಡಿನಲ್ಲಿ ಕಾಡು ಬಳುವಳಿಯಾಗಿ ನೀಡುವ ಅಣಬೆ, ಕಳಲಿ, ಗೆಡ್ಡೆ-ಗೆಣಸುಗಳು, ತರತರದ ಬೇಲಿ ಸೊಪ್ಪುಗಳು, ಹಳ್ಳ-ಕೊಳ್ಳದಿಂದ ಸಿಗುವ ಏಡಿ ಮೀನುಗಳು ಕಾಲಕ್ಕೆ ತಕ್ಕಂತೆ ಲಭ್ಯವಾಗುತ್ತಿದ್ದವು. ಈ ರೀತಿಯ ಆಹಾರ ಬಳಕೆಯಿಂದ, ಎಷ್ಟೋ ಜನ ವಿಜ್ಞಾನದ ಮಾಹಿತಿ ತಿಳಿಯದೇ ವೈಜ್ಞಾನಿಕವಾದ ಆಧಾರದಲ್ಲಿಯೇ ಬದುಕು ಕಟ್ಟಿಕೊಳ್ಳುವುದ್ದಾಗಿದೆ. ಇಂದು ಆಹಾರ ಭದ್ರತೆ ಹಿಂದಿಗಿಂತ ಅತ್ಯಂತ ಉನ್ನತ ಸ್ಥಿತಿಯಲ್ಲಿರುವುದು ಸತ್ಯ. ಆದರೆ ಜಗತ್ತಿನ ಶೇಕಡ 80ರಷ್ಟು ಆಹಾರ ಧಾನ್ಯ ಕೇವಲ 5 ಧಾನ್ಯಗಳಾಗಿವೆ. ಅಕ್ಕಿ, ಗೋಧಿ, ಮೆಕ್ಕೆಜೋಳ, ಸೋಯಾಬೀನ್, ಆಲೂಗಡ್ಡೆ ಎನ್ನಬಹುದು. ಇದರಲ್ಲಿ ಮೆಕ್ಕೆಜೋಳ ಮತ್ತು ಸೋಯಾಬೀನ್‍ಗಳನ್ನು ಪ್ರಾಣಿಗಳಿಗೆ ತಿನ್ನಲು ಕೊಟ್ಟರೆ ನಮಗೆ ಉಳಿಯುವ ಆಹಾರ ವೈವಿಧ್ಯತೆ ಮೂರು ಅಥವಾ ನಾಲ್ಕು ಮಾತ್ರವಾಗಿವೆ. ಅದರಲ್ಲಿಯೂ ಸಹ ಭತ್ತ ಮತ್ತು ಗೋಧಿಯ ವೈವಿಧ್ಯಮಯ ತಳಿಗಳು ಇಂದು ಲಭ್ಯವಿಲ್ಲ. ಉದಾಹರಣೆಗೆ ರಕ್ತಶಾಲಿ ಎನ್ನುವ ಅಕ್ಕಿ ಗರ್ಭಿಣಿಯರಿಗೆ ಉತ್ತಮವಾದ ಅಕ್ಕಿ ಎನ್ನುತ್ತದೆ ಆಯುರ್ವೇದ. ಕೇರಳದ ನವರಾ ಅಕ್ಕಿ ಔಷಧಿಗೆ ಬಹಳ ಹಿಂದಿನಿಂದಿಲೂ ಬಳಸಿಕೊಂಡು ಬಂದ ಅಕ್ಕಿಯಾಗಿದೆ. ಮೂಳೆ ಸವೆತಕ್ಕೆ ಲೇಪಿಸುವ ಆಯುರ್ವೇದ ಚಿಕಿತ್ಸೆಯಲ್ಲಿ ಇದನ್ನು ಬಳಸುತ್ತಾರೆ. ಮೆಕ್ಕೆಜೋಳ ಕಾಮನ ಬಿಲ್ಲಿನ ಎಲ್ಲ ಬಣ್ಣಗಳನ್ನು ಒಳಗೊಂಡ ಏಕದಳ ಧಾನ್ಯ. ಆದರೆ ಇಂದು ನಮಗೆ ಅವು ಕಾಣಸಿಗುವುದಿಲ್ಲ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದಿಗೂ ಸುಮಾರು 100 ರೀತಿಯ ಭತ್ತದ ತಳಿಗಳನ್ನು ಬೆರಳೆಣಿಕಿಯಷ್ಟು ರೈತರು ಬಳಸುತ್ತಿದ್ದಾರೆ.

ಮುಂಗಾರಿಗೆ ತಕ್ಕಂತೆ ಅನೇಕ ವೈವಿದ್ಯಮಯ ಆಹಾರ ಪದ್ಧತಿ ನಮ್ಮಲ್ಲಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರಿಗೂ ಮುನ್ನ ನೂರಾರು ರೀತಿಯ ಕಾಡು ಎಲೆಯ ಕುಡಿಗಳನ್ನು ತಂದು ಗಸಿ ಮಾಡಿ ಆರು ತಿಂಗಳಿಗೆ ಬಳಸುತ್ತಾರೆ. ಅವು ಬಹು ಪೋಷಕಾಂಶಗಳ ಮತ್ತು ಖನಿಜಗಳ ಸಂಪತ್ತೆ ಸರಿ. ಹಾಗೆಯೇ ತರತರದ ಹಪ್ಪಳ ಸಂಡಿಗೆ, ಚಟ್ನಿ ಪುಡಿಗಳು, ಉಪ್ಪಿನಕಾಯಿಗಳು, ಹಲಸಿನ ಹಲವು ಬಗೆಯ ಪದಾರ್ಥಗಳು, ಕೆಸು ಎಲೆ, ತಜಂಕ್ ಸೊಪ್ಪಿನ ಪತ್ರೊಡೆ ನಮಗೆ ತಿಳಿದೆ ಇದೆ. ಚಟ್ನಿ ಪುಡಿಗಳ ಜಗತ್ತೆ ಅತ್ಯಂತ ವಿಸ್ತಾರವಾದುದು. ಏಕದಳ ಧಾನ್ಯ, ದ್ವಿದಳ ಧಾನ್ಯ, ಎಣ್ಣೆ ಕಾಳುಗಳು, ಸಾಂಬಾರ ಪದಾರ್ಥಗಳು ಹೀಗೆ ಆಧುನಿಕ ಪೌಷ್ಟಿಕಾಂಶ ತಜ್ಞರ ಸಂಶೋಧನೆಗ ಕನ್ನಡಿ ಹಿಡಿಯುವ ಹಾಗಿವೆ. ಈ ಪುಡಿಗಳು ಅನ್ನಕ್ಕೂ ಸೈ ರೊಟ್ಟಿಗೂ ಕೈ ಜೋಡಿಸುತ್ತವೆ. ಎಲ್ಲ ಕಾಲಕ್ಕೂ ಎಲ್ಲ ಪದಾರ್ಥಗಳಿಗೂ ಮಿಲನವಾಗುವ ಮಿಕ್ಷರ್‍ಗಳು ಇವು.

ಕಾಫಿಯಲ್ಲಿ ಮಾನ್ಸೂನ್ ಮಲಬಾರ್ ಎಂಬ ಕಾಫಿ ಇದೆ. ವಿದೇಶದಲ್ಲೂ ಇದಕ್ಕೆ ಅಪಾರವಾದ ಬೇಡಿಕೆ ಇದೆ. ಇದರ ಹುಟ್ಟೇ ಆಕಸ್ಮಿಕ. ರಪ್ತು ಮಾಡಲು ಗೋದಾಮಿನಲ್ಲಿ ತಂದಿಟ್ಟ ಕಾಫಿ ಮಂಗಳೂರಿನಲ್ಲಿ ಸಮಯಕ್ಕೆ ಸರಿಯಾಗಿ ರಫ್ತಾಗದೇ ಮುಂಗಾರಿನಲ್ಲಿ ಗೋದಾಮಿನಲ್ಲಿ ಉಳಿಯಬೇಕಾಯಿತು. ಹೀಗೆ 6 ತಿಂಗಳು ಶೇಖರಿಸಿಟ್ಟಿದ್ದರಿಂದ ಅದಕ್ಕೆ ಬೂಸ್ಟ್ ಬಂದು ಕೆಟ್ಟು ಹೋಗಿತ್ತು. ಆದರೂ ಇದನ್ನೇ ಧೈರ್ಯ ಮಾಡಿ ರಫ್ತು ಮಾಡಿದ ವ್ಯಾಪಾರಿಗೆ ಆಶ್ಚರ್ಯಕರವಾಗಿ ವಿದೇಶದಿಂದ ಇನ್ನು ಮುಂದೆ ನಮಗೆ ಇಂಥದ್ದೇ “ಒಳ್ಳೆಯ” ಕಾಫಿ ಕಳಿಸಿ ಎಂದು ಬೇಡಿಕೆ ಹೆಚ್ಚಾಯಿತು. ಇದು ಮಾನ್ಸೂನ್ ಮಾಡಿದ ಚಮತ್ಕಾರ. ಬೂಸ್ಟ್ ಬಂದ ಕಾಫಿಯಲ್ಲಿ ಯಾವುದೋ ಜೈವಿಕ ಪ್ರಕ್ರಿಯೆಯಾಗಿ ಹೊಸ ರುಚಿಯನ್ನು ತಂದುಕೊಟ್ಟಿತು.

ಈಗಲೂ ಸಹ ಆಹಾರದ ಬಗ್ಗೆ ಕೊಂಚ ಆಸಕ್ತಿಯುಳ್ಳವರು ಹಿರಿಯರ ಅನುಭವವನ್ನು ಬಳಸಿಕೊಂಡು ಆಧುನಿಕ ವಿಜ್ಞಾನದ ಕೊಡುಗೆಯನ್ನು ಬೆಸೆದರೆ ಉತ್ತಮ ಆಹಾರ, ರಸ ಮತ್ತು ರುಚಿಯೂ ಮುಂಗಾರು ಮಳೆಯ ನಾದಕ್ಕೆ ಜುಗಲ್‍ಬಂದಿ ಆಗಬಹುದು.


ಇದನ್ನು ಓದಿ: ಸುಪ್ರೀಂಕೋರ್ಟಿನ ನ್ಯಾಯಾಂಗ ನಿಂದನೆ ನೋಟೀಸಿಗೆ ವಕೀಲ ಪ್ರಶಾಂತ್ ಭೂಷಣ್ ಸ್ಫೋಟಕ ಉತ್ತರ!
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...