Homeಅಂತರಾಷ್ಟ್ರೀಯಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

ಚೀನಾ ಭಾರತದ ಭೂಪ್ರದೇಶ ಅತಿಕ್ರಮಿಸಿದೆಯೆಂದು ಒಪ್ಪಿಕೊಂಡ ರಕ್ಷಣಾ ಸಚಿವಾಲಯ: ದಾಖಲೆ ಡಿಲಿಟ್!

ಚೀನಾ ಭಾರತೀಯ ಭೂಪ್ರದೇಶಗಳನ್ನು ಆಕ್ರಮಿಸಿದೆ ಎಂದು ಅಪ್‌ಲೋಡ್‌ ಮಾಡಿದ್ದ ಸುದ್ದಿಯನ್ನು ಎರಡು ದಿನಗಳ ನಂತರ ವೆಬ್‌ಸೈಟಿನಿಂದ ತೆಗೆದು ಹಾಕಲಾಗಿದೆ.

- Advertisement -
- Advertisement -

ಮೇ ಆರಂಭದಲ್ಲಿ ಚೀನಾ ಪೂರ್ವ ಲಡಾಖ್‌ನಲ್ಲಿರುವ ಭಾರತೀಯ ಭೂಪ್ರದೇಶಕ್ಕೆ ನುಸುಳಿದೆ ಎಂದು ರಕ್ಷಣಾ ಸಚಿವಾಲಯ ತನ್ನ ವೆಬ್‌ಸೈಟ್‌ನ ಸುದ್ದಿ ವಿಭಾಗದಲ್ಲಿ ಒಪ್ಪಿಕೊಂಡಿದ್ದು, ಆದರೆ ಪ್ರಸ್ತುತ ಅದನ್ನು ತೆಗೆದು ಹಾಕಲಾಗಿದೆ.

ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಯಲ್ಲಿ ಚೀನಾದ ಆಕ್ರಮಣಶೀಲತೆ ಹೆಚ್ಚುತ್ತಿದೆ ಮತ್ತು ಪ್ರಸ್ತುತ ನಿಲುವು ಧೀರ್ಘ ಕಾಲದವರೆಗೆ ನಿರೀಕ್ಷಿಲಾಗಿದೆ ಎಂದು ರಕ್ಷಣಾ ಸಚಿವಾಲಯದ ದಾಖಲೆಯಲ್ಲಿ ತಿಳಿಸಲಾಗಿದೆ ಎಂದು ಹಿಂದುಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಗಾಲ್ವಾನ್ ಕಣಿವೆಯಲ್ಲಿ ಜೂನ್ 15 ರಂದು ನಡೆದ ಸಂಘರ್ಷದಲ್ಲಿ 20 ಭಾರತೀಯ ಯೋಧರು ಕೊಲ್ಲಲ್ಪಟ್ಟಿದ್ದರು.

ಜೂನ್‌ನಲ್ಲಿ ರಕ್ಷಣಾ ಇಲಾಖೆಯ ಪ್ರಮುಖ ಚಟುವಟಿಕೆಗಳನ್ನು ಪಟ್ಟಿ ಮಾಡಿರುವ ಅಧಿಕೃತ ದಾಖಲೆಯಲ್ಲಿ, ಸಚಿವಾಲಯವು ಚೀನಾ ಸೇನೆಯು ಮೇ ತಿಂಗಳಿನ 17-18 ರಂದು ಕುಗ್ರಾಂಗ್‌ ನಲಾ, ಗೊಗ್ರಾ ಮತ್ತು ಪಾಂಗೊಂಗ್ ತ್ಸೊದ ಉತ್ತರ ದಂಡೆಯ ಪ್ರದೇಶಗಳಲ್ಲಿ ಭಾರತದ ಕಡೆಗೆ ಅತಿಕ್ರಮಿಸಿದೆ ಎಂದು ಹೇಳಿದೆ. ಇದನ್ನು ಆಗಸ್ಟ್ 4 ರಂದು ಸಚಿವಾಲಯದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಇಂದು ಬೆಳಿಗ್ಗೆ ಅದನ್ನು ಡಿಲೀಟ್ ಮಾಡಲಾಗಿದೆ.

“ಚೀನಾ ಆಕ್ರಮಣದ ಪರಿಣಾಮವಾಗಿ, ಪರಿಸ್ಥಿತಿಯನ್ನು ತಗ್ಗಿಸಲು ಎರಡೂ ಕಡೆಯ ಸಶಸ್ತ್ರ ಪಡೆಗಳ ನಡುವೆ ತಳಮಟ್ಟದ ಸಂವಹನ ನಡೆಸಲಾಯಿತು. ಕಾರ್ಪ್ಸ್ ಕಮಾಂಡರ್ ಮಟ್ಟದ ಧ್ವಜ ಸಭೆ ಜೂನ್ 6, 2020 ರಂದು ನಡೆಯಿತು. ಆದಾಗ್ಯೂ, ಜೂನ್ 15 ರಂದು ಎರಡು ಕಡೆಯವರ ನಡುವೆ ಹಿಂಸಾತ್ಮಕ ಘರ್ಷನೆ ನಡೆದಿದ್ದು, ಇದರ ಪರಿಣಾಮವಾಗಿ ಎರಡೂ ಕಡೆಯವರು ಸಾವನ್ನಪ್ಪಿದ್ದಾರೆ” ಎಂದು ದಾಖಲೆ ಹೇಳಿತ್ತು.

ಜೂನ್ ತಿಂಗಳನ್ನು ಮಾತ್ರ ಉಲ್ಲೇಖಿಸುವ ಡಾಕ್ಯುಮೆಂಟ್ ನಂತರದ ಮಿಲಿಟರಿ ಮಾತುಕತೆ ಜೂನ್ 22 ರಂದು ನಡೆಯಿತು ಎಂದು ಹೇಳಿದೆ. “ಮಿಲಿಟರಿ ಮತ್ತು ರಾಜತಾಂತ್ರಿಕ ಮಟ್ಟದಲ್ಲಿ ಸಮ್ಮತಿ ಮತ್ತು ಸಂವಾದವು ಪರಸ್ಪರ ಸ್ವೀಕಾರಾರ್ಹ ಒಮ್ಮತಕ್ಕೆ ಬರುತ್ತಲೇ ಇದ್ದರೂ, ಪ್ರಸ್ತುತದ ಘರ್ಷನೆ ದೀರ್ಘಕಾಲದವರೆಗೆ ಇರುತ್ತದೆ” ಎಂದು ಅದು ಹೇಳಿದೆ.

ಪೂರ್ವ ಲಡಾಕ್‌ನಲ್ಲಿ ಚೀನಾದ ಏಕಪಕ್ಷೀಯ ಆಕ್ರಮಣದಿಂದ ಉಂಟಾಗುವ ಪರಿಸ್ಥಿತಿ ಸೂಕ್ಷ್ಮವಾಗಿದೆ ಮತ್ತು ವಿಕಾಸಗೊಳ್ಳುತ್ತಿರುವ ಪರಿಸ್ಥಿತಿಯ ಆಧಾರದ ಮೇಲೆ ನಿಕಟ ಮೇಲ್ವಿಚಾರಣೆ ಮತ್ತು ತ್ವರಿತ ಕ್ರಮ ಅಗತ್ಯ ಎಂದು ಸಚಿವಾಲಯ ಹೇಳಿದೆ.

ಸಚಿವಾಲಯವು ಚೀನಾದ ಆಕ್ರಮಣ ಒಪ್ಪಿಕೊಂಡಿದ್ದ ದಾಖಲೆಯನ್ನು ಅಳಿಸಿರುವುದಕ್ಕೆ ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಚೀನಾ ದಾಳಿ ಮಾಡಿರುವುದರ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಏಕೆ ಸುಳ್ಳು ಹೇಳುತ್ತಿದ್ದಾರೆ ಎಂದು ರಾಹುಲ್ ಕಿಡಿಕಾರಿದ್ದಾರೆ.

ಪಂಗೊಂಗ್ ತ್ಸೊ ಬಳಿಯ ಫಿಂಗರ್ ಪ್ರದೇಶದಲ್ಲಿನ ಎರಡು ಸೇನೆಗಳ ನಡುವಿನ ಗಂಭೀರ ಭಿನ್ನಾಭಿಪ್ರಾಯಗಳು ಮತ್ತು ಚೀನಾ ಸೇನೆ ಖಾಲಿ ಮಾಡಲು ಹಿಂದೇಟು ಹಾಕಿದ್ದರಿಂದಾಗಿ ಭಾರತದ ಮತ್ತು ಚೀನಾದ ಉನ್ನತ ಮಿಲಿಟರಿ ಕಮಾಂಡರ್‌ಗಳು ಭಾನುವಾರ ಪೂರ್ವ ಲಡಾಕ್‌ನಲ್ಲಿ ಸಭೆ ನಡೆಸಿ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ ಮುಂದಿನ ಹಂತದ ನಿಷ್ಕ್ರಿಯತೆಯ ಬಗ್ಗೆ ಚರ್ಚಿಸಿದ್ದರು ಎನ್ನಲಾಗಿದೆ.


ಓದಿ: ಭಾರತ-ಚೀನಾ ಸಂಘರ್ಷದ ನಂತರ ಚೀನಾದ ಬೆದರಿಕೆ ಎದುರಿಸಲು ಜಪಾನ್ ಕ್ಷಿಪಣಿಗಳನ್ನು ನಿಯೋಜಿಸಿದೆಯೇ?; ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...