Homeಮುಖಪುಟಬೈರುತ್‌ ಸ್ಪೋಟ: 700 ಟನ್ ಸ್ಫೋಟಕ ರಾಸಾಯನಿಕದ ಬಗ್ಗೆ ಚಿಂತೆಯಲ್ಲಿರುವ ಚೆನ್ನೈ

ಬೈರುತ್‌ ಸ್ಪೋಟ: 700 ಟನ್ ಸ್ಫೋಟಕ ರಾಸಾಯನಿಕದ ಬಗ್ಗೆ ಚಿಂತೆಯಲ್ಲಿರುವ ಚೆನ್ನೈ

ಈ ರಾಸಾಯನಿಕವನ್ನು ಪಟಾಕಿ ಮತ್ತು ರಸಗೊಬ್ಬರಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ.

- Advertisement -
- Advertisement -

ಬೈರುತ್‌ನಲ್ಲಿ ಅಮೋನಿಯಂ ನೈಟ್ರೇಟ್ ಸ್ಫೋಟಗೊಂಡಿದ್ದರಿಂದ ಕನಿಷ್ಠ 135 ಜನರು ಸಾವನ್ನಪ್ಪಿ, ಸಾವಿರಾರು ಜನರು ಗಾಯಗೊಂಡ ಎರಡು ದಿನಗಳ ನಂತರ, ಚೆನ್ನೈ ಬಳಿಯಿರುವ ಸುಮಾರು 700 ಟನ್ ಸ್ಫೋಟಕ ರಾಸಾಯನಿಕದ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದೆ.

ಪ್ರಸ್ತುತ ಇದು ತಮಿಳುನಾಡಿನ ಕಸ್ಟಮ್ಸ್ ಇಲಾಖೆಯ ವಶದಲ್ಲಿದೆ. ಈ ರಾಸಾಯನಿಕವನ್ನು ಪಟಾಕಿ ಮತ್ತು ರಸಗೊಬ್ಬರಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ.

ಇದು ಭಾರತದ ಪಟಾಕಿ ರಾಜಧಾನಿ ಶಿವಕಾಸಿಯಲ್ಲಿನ ಒಂದು ಗುಂಪಿನದ್ದೆಂದು ತಿಳಿಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನು 2015 ರಲ್ಲಿ ಚೆನ್ನೈ ಬಂದರಿನಲ್ಲಿ ವಶಪಡಿಸಿಕೊಳ್ಳಲಾಯಿತು ಮತ್ತು ಅಂದಿನಿಂದಲೂ ಅಲ್ಲಿಯೇ ಇದೆ.

ಆದರೆ, ಸ್ಫೋಟಕಗಳ ರಾಶಿಯನ್ನು ಇನ್ನು ಮುಂದೆ ಬಂದರಿನಲ್ಲಿ ಸಂಗ್ರಹಿಸಲಾಗುವುದಿಲ್ಲ ಎಂದು ಚೆನ್ನೈ ಬಂದರು ಅಧಿಕಾರಿಗಳು ತಿಳಿಸಿದ್ದಾರೆ.

“ಸುಮಾರು 36 ಕಂಟೇನರ್‌ಗಲ್ಲಿವುರ ಪ್ರತಿಯೊಂದೂ ಸುಮಾರು 20 ಟನ್ ಅಮೋನಿಯಂ ನೈಟ್ರೇಟ್ ಅನ್ನು ಬಹಳ ಹಿಂದೆಯೇ ಸ್ಥಳಾಂತರಿಸಲಾಗಿದೆ ಮತ್ತು ಈಗ ಅವು ಕಸ್ಟಮ್ಸ್ ಇಲಾಖೆಯ ನಿಯಂತ್ರಣದಲ್ಲಿವೆ” ಎಂದು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ನಮ್ಮಲ್ಲಿ 697 ಟನ್ ಅಮೋನಿಯಂ ನೈಟ್ರೇಟ್ ಇದೆ. ಇದನ್ನು ಶ್ರೀ ಅಮ್ಮನ್ ಕೆಮಿಕಲ್ಸ್ ಅಕ್ರಮವಾಗಿ ಆಮದು ಮಾಡಿಕೊಂಡಿತ್ತು. ನಾವು ಅವುಗಳನ್ನು ವಿಲೇವಾರಿ ಮಾಡಲು ಪ್ರಯತ್ನಿಸುತ್ತಿದ್ದೇವೆ. ಶೀಘ್ರದಲ್ಲೇ ಎಲ್ಲಾ ವಿವರಗಳನ್ನು ನೀಡುತ್ತೇವೆ” ಎಂದು ಕಸ್ಟಮ್ಸ್ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆಂದು ಎನ್‌ಡಿಟಿವಿ ವರದಿ ಮಾಡಿದೆ.

ಮಾರಣಾಂತಿಕ ಬೈರುತ್ ದುರಂತವನ್ನು ಉಲ್ಲೇಖಿಸಿ, ಪಿಎಂಕೆ ಮುಖ್ಯಸ್ಥ ಡಾ.ರಾಮದಾಸ್ ಸ್ಫೋಟಕಗಳನ್ನು ಸುರಕ್ಷಿತವಾಗಿ ವಿಲೇವಾರಿ ಮಾಡಬೇಕೆಂದು ಒತ್ತಾಯಿಸಿದರು.

“ಇದೇ ರೀತಿಯ ಸ್ಫೋಟದ ಅಪಾಯವಿದೆ. ಸ್ಫೋಟಕಗಳನ್ನು ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು ಮತ್ತು ಗೊಬ್ಬರ ಮತ್ತು ಇತರ ಅಗತ್ಯಗಳ ತಯಾರಿಕೆಗೆ ಬಳಸಬೇಕು” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಬೈರುತ್ ಬಂದರು ಗೋದಾಮಿನಲ್ಲಿ ಸುಮಾರು 2,750 ಟನ್ ಅಮೋನಿಯಂ ನೈಟ್ರೇಟ್ ಸಂಗ್ರಹವಾಗಿದ್ದು, ಅದು ಮಂಗಳವಾರ ಸ್ಫೋಟಗೊಂಡು ಲೆಬನಾನಿನ ರಾಜಧಾನಿಯ ದೊಡ್ಡ ಭಾಗಗಳನ್ನು ಧ್ವಂಸಮಾಡಿತು.


ಇದನ್ನೂ ಓದಿ: ಲೆಬನಾನ್‌ ಬೈರುತ್ ಬಂದರಿನಲ್ಲಿ ಬೃಹತ್ ಸ್ಫೋಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...