Homeಕರೋನಾ ತಲ್ಲಣಆನ್‌ಲೈನ್‌ನಲ್ಲಿ ಕಾನೂನು ಬಾಹಿರ ಆರೋಗ್ಯ ಸೇವೆ ನೀಡುವವರ ವಿರುದ್ದ ಕ್ರಮ ಕೈಗೊಳ್ಳಿ: ದೆಹಲಿ ಹೈಕೋರ್ಟ್

ಆನ್‌ಲೈನ್‌ನಲ್ಲಿ ಕಾನೂನು ಬಾಹಿರ ಆರೋಗ್ಯ ಸೇವೆ ನೀಡುವವರ ವಿರುದ್ದ ಕ್ರಮ ಕೈಗೊಳ್ಳಿ: ದೆಹಲಿ ಹೈಕೋರ್ಟ್

- Advertisement -
- Advertisement -

ಅಕ್ರಮ ಆನ್‌ಲೈನ್ ಆರೋಗ್ಯ ಸೇವೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಇಂದು ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ಡಾ. ರೋಹಿತ್ ಜೈನ್ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಪ್ರತೀಕ್ ಜಲನ್ ಅವರ ವಿಭಾಗೀಯ ಪೀಠ ಈ ಆದೇಶವನ್ನು ಅಂಗೀಕರಿಸಿದೆ.

ಅರ್ಜಿದಾರರ ಪ್ರಕಾರ, ಕೊರೊನಾ ಮಾದರಿಗಳನ್ನು ಒಳಗೊಂಡಂತೆ ರೋಗನಿರ್ಣಯದ ಮಾದರಿಗಳನ್ನು ಸಂಗ್ರಹಿಸುತ್ತಿದ್ದ ತಮ್ಮನ್ನು ವೈದ್ಯಕೀಯ ರೋಗನಿರ್ಣಯ ಪ್ರಯೋಗಾಲಯಗಳು ಎಂದು ತಪ್ಪಾಗಿ ಬಿಂಬಿಸುವ ಕೆಲವು ಆನ್‌ಲೈನ್ ಆರೋಗ್ಯ ಸೇವಾ ಸಂಗ್ರಾಹಕರನ್ನು ನಿಷೇಧಿಸುವ ಅವಶ್ಯಕತೆಯಿದೆ ಎಂದಿದ್ದರು.

ಈ “ಅನಧಿಕೃತ ಪ್ರಯೋಗಾಲಯಗಳು” ಸಾಮಾನ್ಯ ಜನರ ಜೀವನ ಮತ್ತು ಸುರಕ್ಷತೆಗೆ ದೊಡ್ಡ ಅಪಾಯವನ್ನುಂಟುಮಾಡಿದೆ, ಏಕೆಂದರೆ ಅವುಗಳು ಸಂಪೂರ್ಣವಾಗಿ ಅವೈಜ್ಞಾನಿಕ ರೋಗನಿರ್ಣಯ ಪರೀಕ್ಷಾ ವರದಿಗಳನ್ನು ಒದಗಿಸುವ ಅನರ್ಹ ತಂತ್ರಜ್ಞರಿಂದ ನಡೆಸಲ್ಪಡುತ್ತವೆ ಎಂದು ಅರ್ಜಿದಾರರು ಅಭಿಪ್ರಾಯಪಟ್ಟಿದ್ದರು.

ಅಕ್ರಮ ಆನ್‌ಲೈನ್ ಆರೋಗ್ಯ ಸೇವಾ ಸಂಗ್ರಾಹಕರು ಎನ್‌ಎಬಿಎಲ್‌ನಿಂದ, ಐಸಿಎಂಆರ್‌ನಿಂದ ಅಥವಾ ಇತರ ಯಾವುದೇ ಆರೋಗ್ಯ ನಿಯಂತ್ರಕ ಸಂಸ್ಥೆಯೊಂದಿಗೆ ಅನುಮೋದನೆ ಪಡೆದಿಲ್ಲ ಎಂದು ಹೇಳಿರುವ ಅರ್ಜಿದಾರರು ಅವರ ಸೇವೆಗಳನ್ನು ನಿಯಂತ್ರಿಸಲು ಮಾರ್ಗಸೂಚಿಗಳನ್ನು ಕೋರಿದರು.

ಈ ಕುರಿತು ಅರ್ಜಿದಾರರ ಪ್ರಾತಿನಿಧ್ಯವನ್ನು ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳು ಪರಿಗಣಿಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು.

ಅರ್ಜಿದಾರರ ವಿಚಾರಣೆಯ ನಂತರ, ಯಾವುದೇ ಕಾನೂನು, ನಿಯಂತ್ರಣ ಅಥವಾ ಸರ್ಕಾರದ ನೀತಿಯನ್ನು ಉಲ್ಲಂಘಿಸಿದ್ದಕ್ಕಾಗಿ ಕಾನೂನಿನ ಪ್ರಕಾರ ಕಾನೂನುಬಾಹಿರ ಆನ್‌ಲೈನ್ ಆರೋಗ್ಯ ಸೇವೆ ನೀಡುವವರ ವಿರುದ್ಧ ಕ್ರಮಕೈಗೊಳ್ಳುವಂತೆ ನ್ಯಾಯಾಲಯವು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿತು.


ಓದಿ: ಈ ಸಾಂಕ್ರಾಮಿಕ ಹೊಸ ವ್ಯವಸ್ಥೆಗೆ ದಾರಿದೀಪವಾಗಬಲ್ಲದೆ? – ಅರುಂಧತಿ ರಾಯ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...