Homeಮುಖಪುಟಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ

ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ

ಅಡ್ಯಾರ್ ಕ್ಯಾನ್ಸರ್ ಸಂಸ್ಥೆ ಮತ್ತು ಸರ್ಕಾರಿ ಯೋಗ ಮತ್ತು ಪ್ರಕೃತಿಚಿಕಿತ್ಸೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತಲಾ 5 ಲಕ್ಷ ರೂ ದಂಡ ಪಾವತಿಸುವಂತೆ ಪತಂಜಲಿಗೆ ಕೋರ್ಟ್ ಹೇಳಿದೆ.

- Advertisement -
- Advertisement -

ಕೊರೊನಾ ವೈರಸ್‌ಗೆ ಔಷಧಿ ಸಿದ್ದಪಡಿಸಿರುವುದಾಗಿ ಘೋಷಿಸಿ ಕೊರೊನಿಲ್ ಎಂಬ ಔಷಧವನ್ನು ಮಾರುಕಟ್ಟೆಗೆ ಬಿಡುವ ಮೂಲಕ ಸಾರ್ವಜನಿಕ ಭಯವನ್ನು ದುರುಪಯೋಗಪಡಿಸಿಕೊಂಡು ಶೋಷಿಸಿದ್ದಾರೆ ಎಂದು ಬಾಬಾ ರಾಮ್‌ದೇವ್‌ ನೇತೃತ್ವದ ಆರ್ಯುವೇದ ಕಂಪನಿ ಪತಂಜಲಿಗೆ ಮದ್ರಾಸ್ ಹೈಕೋರ್ಟ್ 10 ಲಕ್ಷ ರೂ ದಂಡ ವಿಧಿಸಿದೆ. ಅಲ್ಲದೇ ಉತ್ಪನ್ನಗಳನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡಬಾರದು ಎಂದು ನಿ‍ಷೇಧ ಹೇರಿದೆ.

ಗುರುವಾರ ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಇಮ್ಯುನಿಟಿ ಬೂಸ್ಟರ್ ಎಂದು ಹೇಳಲಾಗುತ್ತಿರುವ ಕೊರೊನಿಲ್ ಮೇಲಿನ ಮಧ್ಯಂತರ ನಿಷೇಧವನ್ನು ತೆರವುಗೊಳಿಸಲು ನಿರಾಕರಿಸಿತು.

ಸುಮಾರು ಮೂರು ದಶಕಗಳಿಂದ ಕೈಗಾರಿಕಾ ಶುಚಿಗೊಳಿಸುವ ರಾಸಾಯನಿಕಗಳಿಗಾಗಿ ನೋಂದಾಯಿತ ಟ್ರೇಡ್‌ಮಾರ್ಕ್‌ಗಳಾದ ಕೊರೊನಿಲ್ -213 ಎಸ್‌ಪಿಎಲ್ ಮತ್ತು ಕೊರೊನಿಲ್ -92 ಬಿ ಅನ್ನು ಬಳಸುತ್ತಿದ್ದ ಚೆನ್ನೈ ಮೂಲದ ಅರುದ್ರ ಎಂಜಿನಿಯರ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಟ್ರೇಡ್‌ಮಾರ್ಕ್ ಉಲ್ಲಂಘನೆ ಮೊಕದ್ದಮೆಗೆ ಮದ್ರಾಸ್ ಹೈಕೋರ್ಟ್ ಈ ತಡೆಯಾಜ್ಞೆಯನ್ನು ನೀಡಿದೆ.

“ಪತಂಜಲಿ ಮತ್ತು ದಿವ್ಯಾ ಯೋಗ ಮಂದಿರ ಟ್ರಸ್ಟ್ 10,000 ಕೋಟಿ ರೂ ವ್ಯವಹಾರ ನಡೆಸುತ್ತಿದ್ದಾರೆ. ಆದರೂ ಸಹ ಸಾಂಕ್ರಾಮಿಕದ ಸಮಯದಲ್ಲಿ ಜನರ ಭಯ, ಭೀತಿಯನ್ನು ಬಳಸಿಕೊಂಡು ಔಷಧಿ ಕೊಡುತ್ತೇವೆ ಎಂದು ನಂಬಿಸಿ ಮತ್ತಷ್ಟು ಲಾಭ ಮಾಡಲು ಮುಂದಾಗಿದ್ದಾರೆ. ಕೊರೊನಿಲ್ ಮಾತ್ರೆಯು ಕೊರೊನಾವನ್ನು ಹೋಗಲಾಡಿಸುವುದಿಲ್ಲ ಅದು ಕೇವಲ ಕೆಮ್ಮು, ಶೀತ ಮತ್ತು ಜ್ವರಕ್ಕೆ ರೋಗನಿರೋಧಕ ವರ್ಧಕವಾಗಿದೆ” ಎಂದು ನ್ಯಾಯಮೂರ್ತಿ ಸಿ.ವಿ.ಕಾರ್ತಿಕೇಯನ್ ಅಭಿಪ್ರಾಯಪಟ್ಟಿದ್ದಾರೆ.

ಅಲ್ಲದೇ ಕೊರೊನಿಲ್ ಎಂಬ ಟ್ರೇಡ್‌ಮಾರ್ಕ್ ಅನ್ನು ಈಗಾಗಲೇ ಬೇರೆಯವರು ಹೊಂದಿದ್ದಾರೆ. ಸರಳವಾಗಿ ರಿಜಿಸ್ಟ್ರಿಯಲ್ಲಿ ಹುಡುಕಿದರೆ ಮಾಹಿತಿ ಸಿಗುತ್ತದೆ. ಆದರೂ ಇದೆಲ್ಲಾ ತಿಳಿದಿದ್ದರು ರಾಮ್‌ದೇವ್ ಕಂಪನಿ ಮುಂದುವರೆದಿದ್ದರೆ ಅವರು ಯಾವುದೇ ಪರಿಗಣೆಗೆ ಅರ್ಹರಲ್ಲ ಎಂದು ಕೋರ್ಟ್ ಹೇಳಿದೆ.

ಅಡ್ಯಾರ್ ಕ್ಯಾನ್ಸರ್ ಸಂಸ್ಥೆ ಮತ್ತು ಸರ್ಕಾರಿ ಯೋಗ ಮತ್ತು ಪ್ರಕೃತಿಚಿಕಿತ್ಸೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ತಲಾ 5 ಲಕ್ಷ ರೂ ದಂಡ ಪಾವತಿಸುವಂತೆ ಸೂಚಿಸಿದ ಕೋರ್ಟ್, 2020 ರ ಆಗಸ್ಟ್ 25 ಕ್ಕೆ ಮುಂಚೆ ಮದ್ರಾಸ್‌ನ ಹೈಕೋರ್ಟ್‌ನ ರಿಜಿಸ್ಟ್ರಿಯ ಮುಂದೆ ದಂಡ ಪಾವತಿಸಿದ ರಶೀದಿಯನ್ನು ಸಲ್ಲಿಸಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ.


ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...