Homeಅಂತರಾಷ್ಟ್ರೀಯಟಿಕ್‌ಟಾಕ್, ವೀಚಾಟ್ ಜೊತೆಗಿನ ವಹಿವಾಟುಗಳ ನಿಷೇಧ: ಡೊನಾಲ್ಡ್ ಟ್ರಂಪ್ ಸಹಿ

ಟಿಕ್‌ಟಾಕ್, ವೀಚಾಟ್ ಜೊತೆಗಿನ ವಹಿವಾಟುಗಳ ನಿಷೇಧ: ಡೊನಾಲ್ಡ್ ಟ್ರಂಪ್ ಸಹಿ

ಆದೇಶದ ಪ್ರಕಾರ, ಟಿಕ್‌ಟಾಕ್ ಮತ್ತು ವೀಚಾಟ್, ಆಪಲ್‌ನ ಆಪ್ ಸ್ಟೋರ್ ಅಥವಾ ಯುನೈಟೆಡ್ ಸ್ಟೇಟ್ಸ್‌ನ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಕಾಣಿಸಿಕೊಳ್ಳುವುದಿಲ್ಲ.

- Advertisement -
- Advertisement -

ಚೀನಾದ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಟಿಕ್‌ಟಾಕ್ ಮತ್ತು ವೀಚಾಟ್‌ನ ಮೂಲ ಕಂಪನಿಯಾದ ಬೈಟ್‌ಡ್ಯಾನ್ಸ್ ಲಿಮಿಟೆಡ್‌ನೊಂದಿಗೆ ವಹಿವಾಟುಗಳನ್ನು ನಿಷೇಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಸಹಿ ಹಾಕಿದ್ದಾರೆ ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಆದೇಶವು 45 ದಿನಗಳ ನಂತರ ಜಾರಿಗೆ ಬರಲಿದೆ.

ಆದೇಶದ ಪ್ರಕಾರ, ಟಿಕ್‌ಟಾಕ್ ಮತ್ತು ವೀಚಾಟ್, ಆಪಲ್‌ನ ಆಪ್ ಸ್ಟೋರ್ ಅಥವಾ ಯುನೈಟೆಡ್ ಸ್ಟೇಟ್ಸ್‌ನ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಕಾಣಿಸಿಕೊಳ್ಳುವುದಿಲ್ಲ.

“ನಮ್ಮ ರಾಷ್ಟ್ರೀಯ ಭದ್ರತೆಯನ್ನು ರಕ್ಷಿಸಲು ಯುನೈಟೆಡ್ ಸ್ಟೇಟ್ಸ್ ಟಿಕ್ ಟಾಕ್ ಮಾಲೀಕರ ವಿರುದ್ಧ ಆಕ್ರಮಣಕಾರಿ ಕ್ರಮ ತೆಗೆದುಕೊಳ್ಳಬೇಕು” ಎಂದು ಆದೇಶದಲ್ಲಿ ತಿಳಿಸಲಾಗಿದೆ.

“ಈ ಆದೇಶ ದಿನಾಂಕದ 45 ದಿನಗಳ ನಂತರ ನಿಷೇಧಿಸಲಾಗುವುದು ಎಂದು ಅದು ಹೇಳಿದೆ. ಬೈಟ್‌ಡ್ಯಾನ್ಸ್ ಲಿಮಿಟೆಡ್‌ನೊಂದಿಗೆ ಯಾವುದೇ ಆಸ್ತಿಗೆ ಸಂಬಂಧಿಸಿದಂತೆ, ಯಾವುದೇ ವ್ಯಕ್ತಿಯ ಯಾವುದೇ ವಹಿವಾಟು, ಯುನೈಟೆಡ್ ಸ್ಟೇಟ್ಸ್‌ನ ಅಧಿಕಾರ ವ್ಯಾಪ್ತಿಗೆ ಒಳಪಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಯುಎಸ್ ಫೆಡರಲ್ ಅಧಿಕಾರಿಗಳು ಕಳೆದ ತಿಂಗಳು ಟಿಕ್‌ಟಾಕ್‌ ಅನ್ನು ಚೀನಾದ ಗುಪ್ತಚರ ಸಂಸ್ಥೆಗಳು ಬಳಸಬಹುದೆಂಬ ಕಳವಳವನ್ನು ವ್ಯಕ್ತಪಡಿಸಿದ್ದರು. ಹಾಗೆಯೇ ಆಗಸ್ಟ್ 1 ರಂದು ಟ್ರಂಪ್ ಅಮೆರಿಕದಲ್ಲಿ ಟಿಕ್‌ಟಾಕ್ ಅನ್ನು ನಿಷೇಧಿಸುವುದಾಗಿ ಹೇಳಿದ್ದರು.

ಆಗಸ್ಟ್ 5 ರಂದು, ಬೈಟ್‌ಡ್ಯಾನ್ಸ್ ಲಿಮಿಟೆಡ್‌ನ ಸಂಸ್ಥಾಪಕ ಜಾಂಗ್ ಯಿಮಿಂಗ್, ಟಿಕ್‌ ಟಾಕ್‌ ಅನ್ನು ಮೈಕ್ರೋಸಾಫ್ಟ್‌ಗೆ ಮಾರಾಟ ಮಾಡುವುದು ಅಮೇರಿಕಾದಲ್ಲಿಅದರ ನಿಷೇಧಿಸುವಿಕೆಯನ್ನು ತಡೆಯುವ ಏಕೈಕ ಮಾರ್ಗವಾಗಿದೆ ಎಂದು ಹೇಳಿದ್ದರು.

ಮೈಕ್ರೋಸಾಫ್ಟ್ ಆಗಸ್ಟ್ 3 ರಂದು ಟಿಕ್‌ಟಾಕ್‌ನ ಕೆಲವು ಭಾಗಗಳನ್ನು ಖರೀದಿಸಲು ಬೈಟ್‌ಡ್ಯಾನ್ಸ್‌ನೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಹೇಳಿದೆ.

ಅದೇ ದಿನ, ಟ್ರಂಪ್, ಟಿಕ್ ಟಾಕ್ ಅನ್ನು ನಿಷೇಧಿಸುವ ಬಗ್ಗೆ ಮನಸ್ಸು ಬದಲಾಯಿಸಿದ ನಂತರ, ಅದನ್ನು ಸ್ವಾಧೀನಪಡಿಸಿಕೊಳ್ಳಲು ಮೈಕ್ರೋಸಾಫ್ಟ್‌ಗೆ ಒಂದು ತಿಂಗಳು ಕಾಲಾವಕಾಶ ನೀಡಿದ್ದರು.

ಮೈಕ್ರೋಸಾಫ್ಟ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತ್ಯ ನಾದೆಲ್ಲಾ ಅವರು ಸೆಪ್ಟೆಂಬರ್ 15 ರೊಳಗೆ ಟಿಕ್ ಟಾಕ್ ಜೊತೆ ಒಪ್ಪಂದ ಮಾಡಿಕೊಳ್ಳುವ ಭರವಸೆ ಹೊಂದಿದ್ದಾರೆ ಎಂದು ಹೇಳಿದ್ದರು.

ಗಾಲ್ವಾನ್ ವ್ಯಾಲಿ ಘರ್ಷಣೆಯ ನಂತರ ಭಾರತದಲ್ಲಿ ಚೀನಾದ ಆ್ಯಪ್‌ಗಳನ್ನು ನಿಷೇಧಿಸಲಾಯಿತು.

ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಭೌಮತ್ವಕ್ಕೆ ಬೆದರಿಕೆ ಹಾಕಿದ್ದನ್ನು ಉಲ್ಲೇಖಿಸಿ ಜೂನ್‌ನಲ್ಲಿ ಕೇಂದ್ರವು 59 ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತು. ಕಳೆದ ವಾರ, ನಿಷೇಧಿತ ಅಪ್ಲಿಕೇಶನ್‌ಗಳ ತದ್ರೂಪುಗಳಾಗಿದ್ದ 47 ಅಪ್ಲಿಕೇಶನ್‌ಗಳನ್ನು ಸಹ ನಿರ್ಬಂಧಿಸಲಾಗಿದೆ.

ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸುವ ಭಾರತದ ಕ್ರಮವನ್ನು, ಚೀನಾ, ವಿಶ್ವ ವಾಣಿಜ್ಯ ಸಂಸ್ಥೆಯ ನಿಯಮಗಳ ಉಲ್ಲಂಘನೆ ಎಂದು ಕರೆದಿದೆ.


ಇದನ್ನೂ ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...