Homeಅಂತರಾಷ್ಟ್ರೀಯಯುಎಸ್ ಕಾರ್ಯದರ್ಶಿ ಜೊತೆ ಲಡಾಖ್‌ ಕುರಿತು ಚರ್ಚೆ; ಎಸ್ ಜೈಶಂಕರ್

ಯುಎಸ್ ಕಾರ್ಯದರ್ಶಿ ಜೊತೆ ಲಡಾಖ್‌ ಕುರಿತು ಚರ್ಚೆ; ಎಸ್ ಜೈಶಂಕರ್

"ಕಾರ್ಯದರ್ಶಿ ಪೊಂಪಿಯೊ ಮತ್ತು ಸಚಿವ ಜೈಶಂಕರ್ ಅವರು ಇಂಡೋ-ಪೆಸಿಫಿಕ್ ಮತ್ತು ಜಗತ್ತಿನಾದ್ಯಂತ ಶಾಂತಿ, ಸಮೃದ್ಧಿ ಮತ್ತು ಭದ್ರತೆಯನ್ನು ಮುನ್ನಡೆಸಲು ಅಮೇರಿಕಾ-ಭಾರತ ಸಂಬಂಧದ ಒಟ್ಟು ಬಲದ ಸಹಮತವಿದೆ ಎಂದು ಪುನರುಚ್ಚರಿಸಿದರು" ಎಂದು ವಕ್ತಾರರು ಹೇಳಿದ್ದಾರೆ.

- Advertisement -
- Advertisement -

ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್‌ ಮತ್ತು ಅಮೇರಿಕಾದ ವಿದೇಶಾಂಗ ಕಾರ್ಯದರ್ಶಿ ಮೈಕ್‌ ಪೊಂಪಿಯೋ, ಗುರುವಾರ ಲಡಾಖ್‌ ಘರ್ಷಣೆಯನ್ನು ನಿಲ್ಲಿಸುವುದರ ಕುರಿತು ಚರ್ಚಿಸಿದ್ದಾರೆ.

ಜೂನ್ 15 ರಂದು ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಕನಿಷ್ಠ 20 ಭಾರತೀಯ ಸೈನಿಕರು ಸಾವನ್ನಪ್ಪಿದ್ದರು.

ಜುಲೈ 31 ರಂದು, ಭಾರತ ಮತ್ತು ಭೂತಾನ್‌ನಲ್ಲಿ ಚೀನಾ ಪ್ರಾದೇಶಿಕ ಹಕ್ಕುಗಳನ್ನು ಮಂಡಿಸುವುದರೊಂದಿಗೆ ಜಗತ್ತನ್ನು ಪರೀಕ್ಷಿಸಲಾಗುತ್ತಿದೆ ಆದರೆ, ಅಮೆರಿಕದ ರಾಜತಾಂತ್ರಿಕ ಪ್ರಯತ್ನಗಳು ಚೀನಾದ ಬೆದರಿಕೆಗಳಿಂದ ಜಗತ್ತನ್ನು ಜಾಗೃತಗೊಳಿಸಿವೆ ಎಂದು ಪೊಂಪಿಯೊ ಹೇಳಿದ್ದಾರೆ.

ನಮ್ಮ ಹುರುಪಿನ ರಾಜತಾಂತ್ರಿಕತೆಯು ಸಿ.ಸಿ.ಪಿ [ಚೈನೀಸ್ ಕಮ್ಯುನಿಸ್ಟ್ ಪಾರ್ಟಿ] ಯ ಬೆದರಿಕೆಗೆ ಅಂತರರಾಷ್ಟ್ರೀಯ ಜಾಗೃತಿ ಮೂಡಿಸಲು ಸಹಾಯ ಮಾಡಿದೆ ಎಂದು ಅವರು ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕ ಮತ್ತು ಶಾಂತಿ ಪ್ರಕ್ರಿಯೆಯನ್ನು ನಿಯಂತ್ರಿಸುವ ಪ್ರಯತ್ನಗಳು ಸೇರಿದಂತೆ ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ನಡೆಯುತ್ತಿರುವ ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ಸಹಕಾರದ ಬಗ್ಗೆ ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಯುಎಸ್ ಸ್ಟೇಟ್ ಡಿಪಾರ್ಟ್ಮೆಂಟ್ ವಕ್ತಾರ ಕೇಲ್ ಬ್ರೌನ್ ಹೇಳಿದ್ದಾರೆ.

“ಕಾರ್ಯದರ್ಶಿ ಪೊಂಪಿಯೊ ಮತ್ತು ಸಚಿವ ಜೈಶಂಕರ್ ಅವರು ಇಂಡೋ-ಪೆಸಿಫಿಕ್ ಮತ್ತು ಜಗತ್ತಿನಾದ್ಯಂತ ಶಾಂತಿ, ಸಮೃದ್ಧಿ ಮತ್ತು ಭದ್ರತೆಯನ್ನು ಮುನ್ನಡೆಸಲು ಅಮೇರಿಕಾ-ಭಾರತ ಸಂಬಂಧದ ಒಟ್ಟು ಬಲದ ಸಹಮತವಿದೆ ಎಂದು ಪುನರುಚ್ಚರಿಸಿದರು” ಎಂದು ವಕ್ತಾರರು ಹೇಳಿದ್ದಾರೆ.

ಜೈಶಂಕರ್ ಮತ್ತು ಪೊಂಪಿಯೊ ವಿವಿಧ ವಿಷಯಗಳ ಬಗ್ಗೆ ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

ಅಮೇರಿಕಾ, ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ನೊಂದಿಗಿನ ಒಪ್ಪಂದದ ಬಗ್ಗೆ ಸಮಾಲೋಚನೆ ಮತ್ತು ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಅಮೇರಿಕಾ-ಭಾರತ 2 + 2 ಮಂತ್ರಿ ಸಂವಾದವನ್ನು ಎದುರು ನೋಡುತ್ತೇವೆ ಎಂದು ಅವರು ಹೇಳಿದರು.

ನವೆಂಬರ್ 2017 ರಲ್ಲಿ, ಭಾರತ, ಪೆಸಿಫಿಕ್‌ನಲ್ಲಿನ ನಿರ್ಣಾಯಕ ಸಮುದ್ರ ಮಾರ್ಗಗಳನ್ನು ಚೀನಾದ ಪ್ರಭಾವದಿಂದ ದೂರವಿಡುವ ಪ್ರಯತ್ನದಲ್ಲಿ, ಹೊಸ ಕಾರ್ಯತಂತ್ರವನ್ನು ಅಭಿವೃದ್ಧಿಪಡಿಸುವ ಸಲುವಾಗಿ ಭಾರತ, ಅಮೇರಿಕಾ, ಆಸ್ಟ್ರೇಲಿಯಾ ಮತ್ತು ಜಪಾನ್ ನಾಲ್ಕು ದೇಶಗಳು ಸೇರಿ ಚತುರ್ಭುಜ ಒಕ್ಕೂಟವನ್ನು ರಚಿಸಿದವು.

ನವೆಂಬರ್ 2018 ರಲ್ಲಿ, ಮೊದಲ ಭಾರತ-ಯುಎಸ್ 2 + 2 ಸಂವಾದವನ್ನು, ಒಂದು ಕಡೆ ರಕ್ಷಣಾ ಸಚಿವರು ಮತ್ತು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವರು, ಇನ್ನೊಂದೆಡೆ ರಕ್ಷಣಾ ಕಾರ್ಯದರ್ಶಿ ಮತ್ತು ಅಮೇರಿಕಾ ರಾಜ್ಯ ಕಾರ್ಯದರ್ಶಿ ನಡುವೆ ನಡೆಸಲಾಯಿತು.


ಇದನ್ನೂ ಓದಿ: 500 ಮಿಲಿಯನ್ ಡಾಲರ್‌ ಖರ್ಚಿನಲ್ಲಿ ಡಾಟಾ ಸೆಂಟರ್‌ ಸ್ಥಾಪಿಸುತ್ತಿರುವ ಟಿಕ್‌ಟಾಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...