Homeಅಂಕಣಗಳುಸದ್ಯಕ್ಕೆ ಯಡಿಯೂರಪ್ಪನವರ ಕುರ್ಚಿಗೆ ಅಪಾಯವಿಲ್ಲ. ಏಕೆಂದರೆ..

ಸದ್ಯಕ್ಕೆ ಯಡಿಯೂರಪ್ಪನವರ ಕುರ್ಚಿಗೆ ಅಪಾಯವಿಲ್ಲ. ಏಕೆಂದರೆ..

ಬಿಜೆಪಿ ಶಾಸಕರಲ್ಲಿ ಅತೃಪ್ತರು ಬಹಳ ಮಂದಿ ಇದ್ದಾರೆ. ಅವರು ಏನು ಮಾಡಲು ಹೇಸುವುದಿಲ್ಲ. ಅವರಿಗೆ ಸ್ವಾರ್ಥ ಬಿಟ್ಟು ಬೇರೇನೂ ಗೊತ್ತಿಲ್ಲ. ಸಂಸ್ಥೆ ಅವರಿಗೊಂದು ಆಸರೆಯ ನೆಲೆ ಅಷ್ಟೇ. ಅವರಿಗೆ ಪಾವಿತ್ರ್ಯತೆ ಕಾಪಾಡಬೇಕೆಂಬ ಆಸಕ್ತಿ ಲವಲೇಶವೂ ಇಲ್ಲ. ಈ ವ್ಯಾಧಿ ಬಿಜೆಪಿಯಲ್ಲಿ ಮಾತ್ರ ಬೇರೂರಿದೆ ಎಂದೇನಿಲ್ಲ.

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪನವರ ಭವಿಷ್ಯಕ್ಕೆ ಕುತ್ತು ಇದೆ ಎಂಬುದು ಇತ್ತೀಚಿನ ಬಿಜೆಪಿ ಶಾಸಕರ ನಡಾವಳಿಗಳಿಂದ ವ್ಯಕ್ತವಾಗುತ್ತದೆ. ಯಡಿಯೂರಪ್ಪನವರು ಕೊರೊನಾ ತಡೆಗಟ್ಟುವ ಕೆಲಸದಲ್ಲಿ ತನ್ಮಯತೆಯಿಂದ ಕಾರ್ಯನಿರ್ವಹಿಸಿದ್ದಾರೆ, ಅದರಲ್ಲಿ ಎರಡು ಮಾತಿಲ್ಲ. ಕೊರೊನಾ ತಡೆಗೆ ಬಳಸಲಾದ ಅಪಾರ ಹಣದಲ್ಲಿ ದೊಡ್ಡ ಮೊತ್ತದ ಗೋಲ್‍ಮಾಲ್ ಆಗಿದೆ. ತಿನ್ನುವುದಕ್ಕೆ ಅವಕಾಶ ಇರುವ ಎಲ್ಲ ಧನಪಿಶಾಚಿ ಮಂತ್ರಿಗಳು, ಶಾಸಕರು, ಅಧಿಕಾರಿಗಳು ತಿಂದು ಹಾಕಿದ್ದಾರೆ. ಈ ಹಣ ದುರುಪಯೋಗದ ತನಿಖೆಯನ್ನು ಯಡಿಯೂರಪ್ಪನವರು ತಡ ಮಾಡದೆ ಆರಂಭಿಸಬೇಕು. ಈ ಹಗರಣದಲ್ಲಿ ಯಡಿಯೂರಪ್ಪನವರದು ಯಾವ ಪಾತ್ರವೂ ಇಲ್ಲವೆಂದು ನನಗನಿಸುತ್ತದೆ. ಆದ್ದರಿಂದ ಭ್ರಷ್ಟ ಪ್ರಕರಣಗಳನ್ನು ಮುಚ್ಚಿಡುವ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಈ ವಿಷಯದಲ್ಲಿ ಆಲಸ್ಯ ತೋರಬಾರದು.

ಬಿಜೆಪಿ ಶಾಸಕರಲ್ಲಿ ಅತೃಪ್ತರು ಬಹಳ ಮಂದಿ ಇದ್ದಾರೆ. ಅವರು ಏನು ಮಾಡಲು ಹೇಸುವುದಿಲ್ಲ. ಅವರಿಗೆ ಸ್ವಾರ್ಥ ಬಿಟ್ಟು ಬೇರೇನೂ ಗೊತ್ತಿಲ್ಲ. ಸಂಸ್ಥೆ ಅವರಿಗೊಂದು ಆಸರೆಯ ನೆಲೆ ಅಷ್ಟೇ. ಅವರಿಗೆ ಪಾವಿತ್ರ್ಯತೆ ಕಾಪಾಡಬೇಕೆಂಬ ಆಸಕ್ತಿ ಲವಲೇಶವೂ ಇಲ್ಲ. ಈ ವ್ಯಾಧಿ ಬಿಜೆಪಿಯಲ್ಲಿ ಮಾತ್ರ ಬೇರೂರಿದೆ ಎಂದೇನಿಲ್ಲ. ಇದು ಇತರ ಪಕ್ಷಗಳಲ್ಲೂ ಇರುವ ವ್ಯಾಧಿಯೇ. ಇಂತಹವರ ಮಧ್ಯೆ ಸರ್ಕಾರವನ್ನು ಸುಗುಮವಾಗಿ ನಡೆಸುವುದು ಸುಲಭ ಸಾಧ್ಯವಲ್ಲ. ಇದು ಯಡಿಯೂರಪ್ಪನವರಿಗೆ ತಿಳಿಯದ ವಿಷಯವೇನಲ್ಲ.

ಕೃಪೆ: ಪ್ರೆಸ್ ರೀಡರ್

ಯಡಿಯೂರಪ್ಪನವರ ಮುಖ್ಯಮಂತ್ರಿ ಪದವಿ ಕಸಿಯಲು ಈ ಸ್ವಾರ್ಥ ರಾಜಕಾರಣಿಗಳ ಮಸಲತ್ತು ಎಷ್ಟು ಅಪಾಯಕಾರಿಯೋ, ಅಷ್ಟೇ ಆಘಾತಕಾರಿ ಬೆಳವಣಿಗೆ ಕೂಡ. ಆರ್‍ಎಸ್‍ಎಸ್ ವಲಯದಿಂದ ಮತ್ತು ಮೋದಿ, ಷಾದ್ವಯರಿಂದ ಯಡಿಯೂರಪ್ಪನವರಿಗೆ ತೊಂದರೆಯಾಗುವ ಎಲ್ಲ ಲಕ್ಷಣಗಳೂ ನನಗೆ ಕಾಣುತ್ತಿದೆ. ಆರ್‍ಎಸ್‍ಎಸ್‍ನ ಪರಿವಾರದವರಿಬ್ಬರನ್ನು ಯಡಿಯೂರಪ್ಪನವರು ತಮ್ಮ ಸಹಜ ಉತ್ಸಾಹದಿಂದ ಮುನ್ನಡೆಯಲು ಅವಕಾಶವಿಲ್ಲದಂತೆ ಕಡಿವಾಣ ಹಾಕುವುದರಲ್ಲಿ ಯಶಸ್ಸು ಕಂಡಿದ್ದಾರೆ. ಅವರಲ್ಲಿ ಒಬ್ಬರು ಕರ್ನಾಟಕದಲ್ಲೇ ಇದ್ದುಕೊಂಡು ಎಡೆಬಿಡದೆ ಕಾಟ ಕೊಡುತ್ತಿದ್ದಾರೆ. ಇನ್ನೊಬ್ಬರು ದೆಹಲಿಯಲ್ಲಿ ಮೋದಿ ಷಾರವರೊಂದಿಗೆ ಬೆರೆತು ಕಾಟ ಕೊಡುತ್ತಿದ್ದಾರೆ. ಈ ಎರಡೂ ಕಾಟದಿಂದ ಪಾರಾಗಲು ಯಡಿಯೂರಪ್ಪನವರಿಗೆ ಸಾಧ್ಯವೇ ಇಲ್ಲದ ವಾತಾವರಣ ಸೃಷ್ಠಿಯಾಗಿದೆ. ಅಶೋಕ್, ಅಶ್ವತ್ಥನಾರಾಯಣ, ಜಾರಕಿಹೊಳಿಯಂಥ ಮುಂತಾದದವರು ಕೊಚ್ಚಿಕೊಳ್ಳುವಂತೆ ಯಾವರೀತಿಯಲ್ಲೂ ಯಡಿಯೂರಪ್ಪನವರಿಗೆ ಬೆಂಬಲಿಸುವ ಯೋಗ್ಯತೆ ಇವರಿಗೆ ಇವತ್ತಿನ ಪರಿಸ್ಥಿತಿಯಲ್ಲಿ ಸಾಧ್ಯವೇ ಇಲ್ಲ. ಮೋದಿ ಮತ್ತು ಷಾರವರಿಗೆ ಇವರಿಂದ ಆಗಬೇಕಾದದ್ದು ಏನೂ ಇಲ್ಲ. ಇವರೆಲ್ಲ ಅಧಿಕಾರದಾಹ ಉಳ್ಳವರೇ ಹೊರತು ಆಡಳಿತ ಚತುರರೇನಲ್ಲ. ಈ ವಿಚಾರ ಅನುಭವಿ ರಾಜಕಾರಣಿ ಯಡಿಯೂರಪ್ಪನವರಿಗೆ ತಿಳಿಯದೇನಿಲ್ಲ.

ಈ ಸಂದರ್ಭದಲ್ಲಿ ಮಹತ್ವಾಕಾಂಕ್ಷಿಗಳಾದ ಮೋದಿ, ಷಾ ಇವರ ವಿಚಾರ ಸರಣಿ ಏನಿರಬಹುದು? ಕರ್ನಾಟಕದ ಮುಖ್ಯಮಂತ್ರಿ ಸ್ಥಾನದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿಯಂತಹವರನ್ನು ಕೂಡಿಸುವ ದುರಾಲೋಚನೆ ಇದೆ. ಆ ಛದ್ಮವೇಷದ ಕಾವಿಯ ವಸ್ತ್ರ ಧಾರಿಯಂತಹವರನ್ನು ತಂದು ಕೂಡಿಸುವ ತವಕ ಇದೆ. ಅಷ್ಟೇ ರುತ್‍ಲೆಸ್ ಆದ ವ್ಯಕ್ತಿಯೊಬ್ಬನ ತಲಾಷಿನಲ್ಲಿದ್ದಾರೆ ಅವರು. ಶಾಸಕರಲ್ಲಿ ಈ ಅರ್ಹತೆ ಉಳ್ಳವರು ಯಾರು ಇಲ್ಲ. ಆರ್‍ಎಸ್‍ಎಸ್‍ನಲ್ಲಾದರೂ, ಕರ್ನಾಟಕದಲ್ಲಿ ಇಂತಹ ಧೂರ್ತರು ಇದ್ದಾರೆಯೇ ಎಂದು ತಲಾಷ್ ಮಾಡುತ್ತಿದ್ದಾರೆ. ಪ್ರಹ್ಲಾದ್ ಜೋಷಿ ಮುಖ್ಯಮಂತ್ರಿ ಪದವಿಯ ಆಕಾಂಕ್ಷಿಯೇನೋ ಹೌದು. ಆದರೆ ಉತ್ತರಪ್ರದೇಶದ ಕಾವಿ ಮುಖ್ಯಮಂತ್ರಿಯ Ruthlessnessನ ಸಾವಿರದಲ್ಲಿ ಒಂದು ಅಂಶಕೂಡ ಪ್ರಹ್ಲಾದ್ ಜೋಶಿಯಲಿಲ್ಲ ಎಂಬುದು ಮೋದಿ-ಷಾಗಳಿಗೆ ಗೊತ್ತಿದೆ. ಉತ್ತರ ಪ್ರದೇಶದ ಛದ್ಮವೇಷಾದಾರಿಯಂತಹ ಕಾಠಿಣ್ಯ ಮನುಷ್ಯ ಮೋದಿ ಷಾ ಅವರಿಗೆ ಸಿಗುವವರೆಗೂ ಯಡಿಯೂರಪ್ಪನವರಿಗೆ ಅಧಿಕಾರದ ಜೀವದಾನ ಮುಂದುವರೆಯುತ್ತದೆ ಎಂಬುದರಲ್ಲಿ ಸಂದೇಹವೇ ಇಲ್ಲ.

  • ಎಚ್.ಎಸ್ ದೊರೆಸ್ವಾಮಿ.

ಇದನ್ನು ಓದಿ: ಜನರ ಭಯದ ದುರುಪಯೋಗ: ರಾಮ್‌ದೇವ್ ಪತಂಜಲಿಗೆ 10 ಲಕ್ಷ ರೂ ದಂಡ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...