Homeಫ್ಯಾಕ್ಟ್‌ಚೆಕ್ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

- Advertisement -
- Advertisement -

ನ್ಯೂಯಾರ್ಕ್ ಮೂಲದ ಜಾಹೀರಾತು ಸಂಸ್ಥೆಯೊಂದು ರಾಮನ ಚಿತ್ರಗಳನ್ನು ಟೈಮ್ಸ್ ಸ್ಕ್ವೇರ್‌ನಲ್ಲಿ ಜಾಹೀರಾತು ಫಲಕಗಳಲ್ಲಿ ಪ್ರಸಾರ ಮಾಡಲು ನಿರಾಕರಿಸಿದ ನಂತರ, ಹಲವಾರು ಸುದ್ದಿ ವೆಬ್‌ಸೈಟ್‌ಗಳು, ಇದು ಅಮೆರಿಕಾದಲ್ಲಿನ “ಮುಸ್ಲಿಂ ಗುಂಪುಗಳು” ನಡೆಸಿದ ಅಭಿಯಾನದ ಫಲಿತಾಂಶವಾಗಿದೆ ಎಂದು ವರದಿ ಮಾಡಿವೆ.

ಆದರೆ ನಿಜವೇನೆಂದರೆ ಈ ವರದಿಗಳಿಗೆ ವಿರುದ್ದವಾಗಿ ಜಾಹೀರಾತುಗಳನ್ನು ಹಾಕದಂತೆ ಪ್ರತಿಭಟಿಸಿರುವವರಲ್ಲಿ ಹಿಂದೂಗಳು ಸೇರಿದಂತೆ ಎಲ್ಲಾ ಧರ್ಮಗಳ ನಾಗರಿಕ ಹಕ್ಕುಗಳ ಸಂಘಟನೆಯ ಜನರು ಇದ್ದರು ಎಂಬುವುದಾಗಿದೆ.

ಒಪಿಇಂಡಿಯಾ ಮತ್ತು ಇಂಡಿಯಾ.ಕಾಂನಂತಹ ಸುದ್ದಿ ಸಂಸ್ಥೆಗಳು ನಾಸ್ಡಾಕ್ ಬಿಲ್‌ಬೋರ್ಡ್ ಅನ್ನು ನಿರ್ವಹಿಸುವ ಜಾಹೀರಾತು ಕಂಪನಿಯಾದ ಬ್ರಾಂಡೆಡ್ ಸಿಟೀಸ್ ನೆಟ್ವರ್ಕ್ ಮುಸ್ಲಿಂ ಸಂಘಟನೆಗಳು ಇದರ ವಿರುದ್ಧ ಅರ್ಜಿಯನ್ನು ಸಲ್ಲಿಸಿದ ನಂತರ ಬಿಲ್‌ಬೋರ್ಡ್ ನೀಡಲು ನಿರಾಕರಿಸಿದೆ ಎಂದು ವರದಿಗಳನ್ನು ಪ್ರಕಟಿಸಿತು.

ದಕ್ಷಿಣ ಏಷ್ಯಾದ ನಾಗರಿಕ ಹಕ್ಕುಗಳ ಗುಂಪುಗಳ ಒಕ್ಕೂಟದ ಪ್ರತಿಭಟನೆಯಿಂದಾಗಿ ಜಾಹೀರಾತುಗಳನ್ನು ಹಾಕಲು ಕಂಪನಿ ನಿರಾಕರಿಸಿದ ನಂತರ ಸುಳ್ಳು ಹೇಳಿಕೆಗಳನ್ನು ಒಳಗೊಂಡ ಸುದ್ದಿಗಳನ್ನು ಈ ವೆಬ್‌ಸೈಟ್‌ಗಳು ವರದಿ ಮಾಡುತ್ತುದೆ.

ನಡೆದದ್ದೇನು ಅಥವಾ ಧ್ವೇಷ ಅಭಿಯಾನ ನಡೆಸುವ ವೆಬ್‌ಸೈಟ್ ಹೇಳಿದ್ದೇನು?

ಬಲಪಂಥೀಯ ವೆಬ್‌ಸೈಟ್‌ಗಳಾದ ಒಪಿಂಡಿಯಾ ಮತ್ತು ಇಂಡಿಯಾ.ಕಾಮ್ ತಮ್ಮ ವರದಿಗಳಲ್ಲಿ ಹೀಗೆ ಬರೆದಿದೆ “ಭಾರತೀಯ ಅಲ್ಪಸಂಖ್ಯಾತರ ವಕೀಲರ ನೆಟ್‌ವರ್ಕ್- (ಇಮಾನ್‌ನೆಟ್), ಜಸ್ಟಿಸ್ ಫಾರ್ ಆಲ್, ಕೊಯಿಲಿಷನ್ ಆಫ್ ಅಮೆರಿಕನ್ ಫಾರ್‌ ಪ್ಲೂರಲಿಸಂ ಇನ್ ಇಂಡಿಯಾ (ಸಿಎಪಿಐ), ಉತ್ತರ ಅಮೆರಿಕಾದ ಭಾರತೀಯ ಮುಸ್ಲಿಂ ಸಂಘ (ನೈಮಾ), ಇಸ್ಲಾಮಿಕ್ ಸರ್ಕಲ್ ಆಫ್ ನಾರ್ಥ್ ಅಮೆರಿಕಾ-ಸೋಷಿಯಲ್ ಜಸ್ಟಿಸ್ (ಐಸಿಎನ್‌ಎಎಸ್‌ಜೆ) ಮತ್ತು ದಿ ಇಂಟರ್‌ನ್ಯಾಷನಲ್ ಸೊಸೈಟಿ ಫಾರ್ ಪೀಸ್ ಅಂಡ್ ಜಸ್ಟೀಸ್ ಈ ಅರ್ಜಿಯನ್ನು ಸಲ್ಲಿಸಿ ಜಾಹೀರಾತು ಫಲಕಗಳಲ್ಲಿ ರಾಮನ ಚಿತ್ರ ಬಾರದಂತೆ ತಡೆ ಹಿಡಿದಿದ್ದಾರೆ”.

ಆದರೆ ಈ ಕ್ರಮವನ್ನು ವಿರೋಧಿಸುವ ಇತರ ಸಂಘಟನೆಗಳ ಬಗ್ಗೆ ವರದಿಯು ಮೌನವಾಗಿದೆ. ಆ ಮೂಲಕ ಕೇವಲ ಮುಸ್ಲಿಂ ಸಂಘಟನೆಗಳನ್ನು ಮಾತ್ರ ತನ್ನ ದ್ವೇಷ ಪ್ರಚಾರದ ಗುರಿಯಾಗಿಸಿಕೊಂಡಿದೆ.

ಕಂಪನಿಯು ಜಾಹಿರಾತು ಹಾಕುವುದನ್ನು ನಿರಾಕರಿಸಿರುವುದು “ಜಿಹಾದಿ ಪಡೆಗಳಿಗೆ” ತಲೆಬಾಗುವುದನ್ನು ಸಂಕೇತಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಈ ವರದಿಯನ್ನು ಉಲ್ಲೇಖಿಸಿ ಹೇಳಲಾಗುತ್ತಿದೆ.

ಬಿಲ್‌ಬೋರ್ಡ್ ವಿರುದ್ದ ಪ್ರತಿಭಟಿಸಿದ ನಾಗರಿಕ ಹಕ್ಕುಗಳ ಸಂಘಟನೆ

ಜುಲೈ 31 ರಂದು ಅಮೆರಿಕಾದ ಹಲವಾರು ನಾಗರಿಕ ಹಕ್ಕುಗಳ ಸಂಘಟನೆಗಳಾದ ಅಮೆರಿಕನ್ ಇಂಡಿಯನ್ ಪಬ್ಲಿಕ್ ಅಫೇರ್ಸ್ ಕಮಿಟಿ (ಎಐಪಿಎಸಿ) ನ್ಯೂಯಾರ್ಕ್ ನಗರದ ಮೇಯರ್‌ಗೆ ಆಗಸ್ಟ್ 5 ರಂದು ಟೈಮ್ಸ್ ಸ್ಕ್ವೇರ್‌ನಲ್ಲಿ “ಇಸ್ಲಾಮೋಫೋಬಿಕ್” ಬಿಲ್‌ಬೋರ್ಡ್ ಅನ್ನು ಪ್ರದರ್ಶಿಸುವುದನ್ನು ತಡೆಯುವಂತೆ ಕೇಳಿಕೊಂಡಿದ್ದವು.

ಟೈಮ್ಸ್ ಸ್ಕ್ವೇರ್ನಲ್ಲಿ ಹಾಕಲಾಗುವ ಜಾಹೀರಾತುಗಳ ಪ್ರದರ್ಶನವು “ನಂಬಿಕೆಯ ಆಚರಣೆಯಲ್ಲ ಆದರೆ ದ್ವೇಷದ ಆಚರಣೆಯಾಗಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇವುಗಳಲ್ಲಿ ಕೊಯಿಲಿಷನ್ ಅಗೈನ್ಸ್ಟ್‌ ಫ್ಯಾಸಿಸಂ ಇನ್ ಇಂಡಿಯಾ (ಸಿಎಎಫ್‌ಐ), ಹಿಂದೂಸ್ ಫಾರ್‌ ಹ್ಯೂಮನ್ ರೈಟ್ (ಎಚ್‌ಎಫ್‌ಹೆಚ್ಆರ್), ಗ್ಲೋಬಲ್ ಇಂಡಿಯನ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಜಿಪಿಎ), ಅಸೋಸಿಯೇಷನ್ ಆಫ್ ಇಂಡಿಯನ್ ಮುಸ್ಲಿಸ್, ಸಾಧನಾ: ಕೊಲಿಷನ್ ಆಫ್ ಪ್ರೋಗ್ರೆಸಿವ್‌ ಹಿಂದೂಸ್ ಮತ್ತು ಇತರವು ಸೇರಿವೆ.

ಹಿಂದೂಸ್ ಫಾರ್‌ ಹ್ಯೂಮನ್ ರೈಟ್ (ಎಚ್‌ಎಫ್‌ಹೆಚ್‌ಆರ್) ಸಂಘಟನೆಯ ಸಹ-ಸಂಸ್ಥಾಪಕಿ ಮತ್ತು ಮಂಡಳಿಯ ಸದಸ್ಯೆ ಸುನೀತಾ ವಿಶ್ವನಾಥ್ ಅವರು “ಕೆಲವನ್ನು ಹೊರತುಪಡಿಸಿ ಎಲ್ಲಾ ಸಂಘಟನೆಗಳು ಮುಸ್ಲಿಮರದ್ದಲ್ಲ. ನಾವೆಲ್ಲರೂ ನ್ಯೂಯಾರ್ಕ್ ಚುನಾಯಿತ ಅಧಿಕಾರಿಗಳಿಗೆ ಜಾಹೀರಾತು ಫಲಕಗಳ ಮಾಲೀಕರ ಮೇಲೆ ಒತ್ತಡ ಹೇರಿದ್ದೇವೆ ಮತ್ತು ನಮ್ಮ ಧ್ವನಿಯನ್ನು ಗಟ್ಟಿಯಾದ ರೀತಿಯಲ್ಲಿ ಎತ್ತಿದ್ದೇವೆ” ಎಂದಿದ್ದಾರೆ

“ವಿವಿಧ ರೀತಿಯ ಭಾರತೀಯ ವಲಸೆಗಾರರು ಭಾರತೀಯ ಪ್ರಜಾಪ್ರಭುತ್ವಕ್ಕಾಗಿ ಮಾತನಾಡಲು ಒಂದಾಗಬೇಕು ಮತ್ತು ಸಂಘಪರಿವಾರವನ್ನು ಸೋಲಿಸಲು ಸಹಾಯ ಮಾಡಬೇಕು. ಪ್ರತಿರೋಧ ಚಳವಳಿಯು ಹಿಂದೂ ಎಂದು ಗುರುತಿಸುವವರು ಸೇರಿದಂತೆ ಎಲ್ಲರನ್ನೂ ಸೇರಿಸುವ ಅಗತ್ಯವಿದೆ” ಎಂದು ಸುನಿತಾ ವಿಶ್ವನಾಥ್ ಹೇಳಿದ್ದಾರೆ.

ಒಕ್ಕೂಟದ ಭಾಗವಾಗಿದ್ದ ಗ್ಲೋಬಲ್ ಇಂಡಿಯಾ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಜಿಐಪಿಎ) ಯ ಪ್ರತಿನಿಧಿ ಪ್ರತಿಭಟನೆಗಳು ಭಾರತೀಯ-ಅಮೇರಿಕನ್ ವಲಸೆಗಾರರಿಂದಲೇ ಹೊರತು ಯಾವುದೇ ಒಂದು ನಿರ್ದಿಷ್ಟ ನಂಬಿಕೆ ಅಥವಾ ಧರ್ಮದ ಜನರಿಂದ ಅಲ್ಲ ಎಂದು ಹೇಳಿದರು.

ಆಗಸ್ಟ್ 5 ರಂದು ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ರಾಮ ಮಂದಿರದ ಜಾಹಿರಾತು ಹಾಕದಿರುವಂತೆ ನಾಗರಿಕ ಹಕ್ಕುಗಳ ಗುಂಪು ಒತ್ತಡ ಹಾಕಿದ್ದರಿಂದ ಜಾಹೀರಾತು ಸಂಸ್ಥೆ ಜಾಹಿರಾತು ಪ್ರಸಾರ ಮಾಡಲು ನಿರಾಕರಿಸಿತು. ಆದರೆ ಈ ಪ್ರತಿಭಟನೆಯು ವಿವಿಧ ನಾಗರಿಕ ಹಕ್ಕುಗಳ ಗುಂಪುಗಳ ಸಾಮೂಹಿಕ ಪ್ರಯತ್ನವಾಗಿತ್ತು ಹಾಗೂ ಅದು ಕೇವಲ ಮುಸ್ಲಿಮರ ಗುಂಪುಗಳದ್ದು ಮಾತ್ರವಾಗಿರಲಿಲ್ಲ.

ಕೃಪೆ: ದಿ ಕ್ವಿಂಟ್


ಓದಿ: ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...