Homeಫ್ಯಾಕ್ಟ್‌ಚೆಕ್ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

ರಾಮ ಮಂದಿರದ ಜಾಹಿರಾತು ಹಾಕದಂತೆ ಒತ್ತಡ ಹಾಕಿದ್ದು ಮುಸ್ಲಿಂ ಸಂಘಟನೆಗಳು ಮಾತ್ರವೆ?

- Advertisement -
- Advertisement -

ನ್ಯೂಯಾರ್ಕ್ ಮೂಲದ ಜಾಹೀರಾತು ಸಂಸ್ಥೆಯೊಂದು ರಾಮನ ಚಿತ್ರಗಳನ್ನು ಟೈಮ್ಸ್ ಸ್ಕ್ವೇರ್‌ನಲ್ಲಿ ಜಾಹೀರಾತು ಫಲಕಗಳಲ್ಲಿ ಪ್ರಸಾರ ಮಾಡಲು ನಿರಾಕರಿಸಿದ ನಂತರ, ಹಲವಾರು ಸುದ್ದಿ ವೆಬ್‌ಸೈಟ್‌ಗಳು, ಇದು ಅಮೆರಿಕಾದಲ್ಲಿನ “ಮುಸ್ಲಿಂ ಗುಂಪುಗಳು” ನಡೆಸಿದ ಅಭಿಯಾನದ ಫಲಿತಾಂಶವಾಗಿದೆ ಎಂದು ವರದಿ ಮಾಡಿವೆ.

ಆದರೆ ನಿಜವೇನೆಂದರೆ ಈ ವರದಿಗಳಿಗೆ ವಿರುದ್ದವಾಗಿ ಜಾಹೀರಾತುಗಳನ್ನು ಹಾಕದಂತೆ ಪ್ರತಿಭಟಿಸಿರುವವರಲ್ಲಿ ಹಿಂದೂಗಳು ಸೇರಿದಂತೆ ಎಲ್ಲಾ ಧರ್ಮಗಳ ನಾಗರಿಕ ಹಕ್ಕುಗಳ ಸಂಘಟನೆಯ ಜನರು ಇದ್ದರು ಎಂಬುವುದಾಗಿದೆ.

ಒಪಿಇಂಡಿಯಾ ಮತ್ತು ಇಂಡಿಯಾ.ಕಾಂನಂತಹ ಸುದ್ದಿ ಸಂಸ್ಥೆಗಳು ನಾಸ್ಡಾಕ್ ಬಿಲ್‌ಬೋರ್ಡ್ ಅನ್ನು ನಿರ್ವಹಿಸುವ ಜಾಹೀರಾತು ಕಂಪನಿಯಾದ ಬ್ರಾಂಡೆಡ್ ಸಿಟೀಸ್ ನೆಟ್ವರ್ಕ್ ಮುಸ್ಲಿಂ ಸಂಘಟನೆಗಳು ಇದರ ವಿರುದ್ಧ ಅರ್ಜಿಯನ್ನು ಸಲ್ಲಿಸಿದ ನಂತರ ಬಿಲ್‌ಬೋರ್ಡ್ ನೀಡಲು ನಿರಾಕರಿಸಿದೆ ಎಂದು ವರದಿಗಳನ್ನು ಪ್ರಕಟಿಸಿತು.

ದಕ್ಷಿಣ ಏಷ್ಯಾದ ನಾಗರಿಕ ಹಕ್ಕುಗಳ ಗುಂಪುಗಳ ಒಕ್ಕೂಟದ ಪ್ರತಿಭಟನೆಯಿಂದಾಗಿ ಜಾಹೀರಾತುಗಳನ್ನು ಹಾಕಲು ಕಂಪನಿ ನಿರಾಕರಿಸಿದ ನಂತರ ಸುಳ್ಳು ಹೇಳಿಕೆಗಳನ್ನು ಒಳಗೊಂಡ ಸುದ್ದಿಗಳನ್ನು ಈ ವೆಬ್‌ಸೈಟ್‌ಗಳು ವರದಿ ಮಾಡುತ್ತುದೆ.

ನಡೆದದ್ದೇನು ಅಥವಾ ಧ್ವೇಷ ಅಭಿಯಾನ ನಡೆಸುವ ವೆಬ್‌ಸೈಟ್ ಹೇಳಿದ್ದೇನು?

ಬಲಪಂಥೀಯ ವೆಬ್‌ಸೈಟ್‌ಗಳಾದ ಒಪಿಂಡಿಯಾ ಮತ್ತು ಇಂಡಿಯಾ.ಕಾಮ್ ತಮ್ಮ ವರದಿಗಳಲ್ಲಿ ಹೀಗೆ ಬರೆದಿದೆ “ಭಾರತೀಯ ಅಲ್ಪಸಂಖ್ಯಾತರ ವಕೀಲರ ನೆಟ್‌ವರ್ಕ್- (ಇಮಾನ್‌ನೆಟ್), ಜಸ್ಟಿಸ್ ಫಾರ್ ಆಲ್, ಕೊಯಿಲಿಷನ್ ಆಫ್ ಅಮೆರಿಕನ್ ಫಾರ್‌ ಪ್ಲೂರಲಿಸಂ ಇನ್ ಇಂಡಿಯಾ (ಸಿಎಪಿಐ), ಉತ್ತರ ಅಮೆರಿಕಾದ ಭಾರತೀಯ ಮುಸ್ಲಿಂ ಸಂಘ (ನೈಮಾ), ಇಸ್ಲಾಮಿಕ್ ಸರ್ಕಲ್ ಆಫ್ ನಾರ್ಥ್ ಅಮೆರಿಕಾ-ಸೋಷಿಯಲ್ ಜಸ್ಟಿಸ್ (ಐಸಿಎನ್‌ಎಎಸ್‌ಜೆ) ಮತ್ತು ದಿ ಇಂಟರ್‌ನ್ಯಾಷನಲ್ ಸೊಸೈಟಿ ಫಾರ್ ಪೀಸ್ ಅಂಡ್ ಜಸ್ಟೀಸ್ ಈ ಅರ್ಜಿಯನ್ನು ಸಲ್ಲಿಸಿ ಜಾಹೀರಾತು ಫಲಕಗಳಲ್ಲಿ ರಾಮನ ಚಿತ್ರ ಬಾರದಂತೆ ತಡೆ ಹಿಡಿದಿದ್ದಾರೆ”.

ಆದರೆ ಈ ಕ್ರಮವನ್ನು ವಿರೋಧಿಸುವ ಇತರ ಸಂಘಟನೆಗಳ ಬಗ್ಗೆ ವರದಿಯು ಮೌನವಾಗಿದೆ. ಆ ಮೂಲಕ ಕೇವಲ ಮುಸ್ಲಿಂ ಸಂಘಟನೆಗಳನ್ನು ಮಾತ್ರ ತನ್ನ ದ್ವೇಷ ಪ್ರಚಾರದ ಗುರಿಯಾಗಿಸಿಕೊಂಡಿದೆ.

ಕಂಪನಿಯು ಜಾಹಿರಾತು ಹಾಕುವುದನ್ನು ನಿರಾಕರಿಸಿರುವುದು “ಜಿಹಾದಿ ಪಡೆಗಳಿಗೆ” ತಲೆಬಾಗುವುದನ್ನು ಸಂಕೇತಿಸುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಈ ವರದಿಯನ್ನು ಉಲ್ಲೇಖಿಸಿ ಹೇಳಲಾಗುತ್ತಿದೆ.

ಬಿಲ್‌ಬೋರ್ಡ್ ವಿರುದ್ದ ಪ್ರತಿಭಟಿಸಿದ ನಾಗರಿಕ ಹಕ್ಕುಗಳ ಸಂಘಟನೆ

ಜುಲೈ 31 ರಂದು ಅಮೆರಿಕಾದ ಹಲವಾರು ನಾಗರಿಕ ಹಕ್ಕುಗಳ ಸಂಘಟನೆಗಳಾದ ಅಮೆರಿಕನ್ ಇಂಡಿಯನ್ ಪಬ್ಲಿಕ್ ಅಫೇರ್ಸ್ ಕಮಿಟಿ (ಎಐಪಿಎಸಿ) ನ್ಯೂಯಾರ್ಕ್ ನಗರದ ಮೇಯರ್‌ಗೆ ಆಗಸ್ಟ್ 5 ರಂದು ಟೈಮ್ಸ್ ಸ್ಕ್ವೇರ್‌ನಲ್ಲಿ “ಇಸ್ಲಾಮೋಫೋಬಿಕ್” ಬಿಲ್‌ಬೋರ್ಡ್ ಅನ್ನು ಪ್ರದರ್ಶಿಸುವುದನ್ನು ತಡೆಯುವಂತೆ ಕೇಳಿಕೊಂಡಿದ್ದವು.

ಟೈಮ್ಸ್ ಸ್ಕ್ವೇರ್ನಲ್ಲಿ ಹಾಕಲಾಗುವ ಜಾಹೀರಾತುಗಳ ಪ್ರದರ್ಶನವು “ನಂಬಿಕೆಯ ಆಚರಣೆಯಲ್ಲ ಆದರೆ ದ್ವೇಷದ ಆಚರಣೆಯಾಗಿದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇವುಗಳಲ್ಲಿ ಕೊಯಿಲಿಷನ್ ಅಗೈನ್ಸ್ಟ್‌ ಫ್ಯಾಸಿಸಂ ಇನ್ ಇಂಡಿಯಾ (ಸಿಎಎಫ್‌ಐ), ಹಿಂದೂಸ್ ಫಾರ್‌ ಹ್ಯೂಮನ್ ರೈಟ್ (ಎಚ್‌ಎಫ್‌ಹೆಚ್ಆರ್), ಗ್ಲೋಬಲ್ ಇಂಡಿಯನ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಜಿಪಿಎ), ಅಸೋಸಿಯೇಷನ್ ಆಫ್ ಇಂಡಿಯನ್ ಮುಸ್ಲಿಸ್, ಸಾಧನಾ: ಕೊಲಿಷನ್ ಆಫ್ ಪ್ರೋಗ್ರೆಸಿವ್‌ ಹಿಂದೂಸ್ ಮತ್ತು ಇತರವು ಸೇರಿವೆ.

ಹಿಂದೂಸ್ ಫಾರ್‌ ಹ್ಯೂಮನ್ ರೈಟ್ (ಎಚ್‌ಎಫ್‌ಹೆಚ್‌ಆರ್) ಸಂಘಟನೆಯ ಸಹ-ಸಂಸ್ಥಾಪಕಿ ಮತ್ತು ಮಂಡಳಿಯ ಸದಸ್ಯೆ ಸುನೀತಾ ವಿಶ್ವನಾಥ್ ಅವರು “ಕೆಲವನ್ನು ಹೊರತುಪಡಿಸಿ ಎಲ್ಲಾ ಸಂಘಟನೆಗಳು ಮುಸ್ಲಿಮರದ್ದಲ್ಲ. ನಾವೆಲ್ಲರೂ ನ್ಯೂಯಾರ್ಕ್ ಚುನಾಯಿತ ಅಧಿಕಾರಿಗಳಿಗೆ ಜಾಹೀರಾತು ಫಲಕಗಳ ಮಾಲೀಕರ ಮೇಲೆ ಒತ್ತಡ ಹೇರಿದ್ದೇವೆ ಮತ್ತು ನಮ್ಮ ಧ್ವನಿಯನ್ನು ಗಟ್ಟಿಯಾದ ರೀತಿಯಲ್ಲಿ ಎತ್ತಿದ್ದೇವೆ” ಎಂದಿದ್ದಾರೆ

“ವಿವಿಧ ರೀತಿಯ ಭಾರತೀಯ ವಲಸೆಗಾರರು ಭಾರತೀಯ ಪ್ರಜಾಪ್ರಭುತ್ವಕ್ಕಾಗಿ ಮಾತನಾಡಲು ಒಂದಾಗಬೇಕು ಮತ್ತು ಸಂಘಪರಿವಾರವನ್ನು ಸೋಲಿಸಲು ಸಹಾಯ ಮಾಡಬೇಕು. ಪ್ರತಿರೋಧ ಚಳವಳಿಯು ಹಿಂದೂ ಎಂದು ಗುರುತಿಸುವವರು ಸೇರಿದಂತೆ ಎಲ್ಲರನ್ನೂ ಸೇರಿಸುವ ಅಗತ್ಯವಿದೆ” ಎಂದು ಸುನಿತಾ ವಿಶ್ವನಾಥ್ ಹೇಳಿದ್ದಾರೆ.

ಒಕ್ಕೂಟದ ಭಾಗವಾಗಿದ್ದ ಗ್ಲೋಬಲ್ ಇಂಡಿಯಾ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಜಿಐಪಿಎ) ಯ ಪ್ರತಿನಿಧಿ ಪ್ರತಿಭಟನೆಗಳು ಭಾರತೀಯ-ಅಮೇರಿಕನ್ ವಲಸೆಗಾರರಿಂದಲೇ ಹೊರತು ಯಾವುದೇ ಒಂದು ನಿರ್ದಿಷ್ಟ ನಂಬಿಕೆ ಅಥವಾ ಧರ್ಮದ ಜನರಿಂದ ಅಲ್ಲ ಎಂದು ಹೇಳಿದರು.

ಆಗಸ್ಟ್ 5 ರಂದು ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ರಾಮ ಮಂದಿರದ ಜಾಹಿರಾತು ಹಾಕದಿರುವಂತೆ ನಾಗರಿಕ ಹಕ್ಕುಗಳ ಗುಂಪು ಒತ್ತಡ ಹಾಕಿದ್ದರಿಂದ ಜಾಹೀರಾತು ಸಂಸ್ಥೆ ಜಾಹಿರಾತು ಪ್ರಸಾರ ಮಾಡಲು ನಿರಾಕರಿಸಿತು. ಆದರೆ ಈ ಪ್ರತಿಭಟನೆಯು ವಿವಿಧ ನಾಗರಿಕ ಹಕ್ಕುಗಳ ಗುಂಪುಗಳ ಸಾಮೂಹಿಕ ಪ್ರಯತ್ನವಾಗಿತ್ತು ಹಾಗೂ ಅದು ಕೇವಲ ಮುಸ್ಲಿಮರ ಗುಂಪುಗಳದ್ದು ಮಾತ್ರವಾಗಿರಲಿಲ್ಲ.

ಕೃಪೆ: ದಿ ಕ್ವಿಂಟ್


ಓದಿ: ಫ್ಯಾಕ್ಟ್‌ಚೆಕ್: ನ್ಯೂಯಾರ್ಕ್‌ನ ’ಟೈಮ್ಸ್‌ ‌ಸ್ಕ್ವೇರ್’ನಲ್ಲಿ ರಾಮನ ಚಿತ್ರ ಬಿತ್ತರಿಸಲಾಗಿದೆಯೆ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...