Homeಮುಖಪುಟಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

ಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಪ್ರವಾಹ ಹೆಚ್ಚು ಪರಿಣಾಮ ಬೀರಿದೆ.

- Advertisement -
- Advertisement -

ಮಾನ್ಸೂನ್ ಪ್ರಾರಂಭವಾದಾಗಿನಿಂದ ಉಂಟಾಗುತ್ತಿರುವ ಪ್ರವಾಹ ಮತ್ತು ಪ್ರವಾಹ ಸಂಬಂಧಿತ ಘಟನೆಗಳಿಂದಾಗಿ ದೇಶಾದ್ಯಂತ 500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಕನಿಷ್ಠ 1.26 ಕೋಟಿ ಜನರು ಬಾಧಿತರಾಗಿದ್ದಾರೆ. ಅಂದಾಜು 5,22,908 ಜನರು ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ.

ಮುಖ್ಯವಾಗಿ ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಪ್ರವಾಹ ಹೆಚ್ಚು ಪರಿಣಾಮ ಬೀರಿದೆ. ನೇಪಾಳದಿಂದ ನದಿ ಉಕ್ಕಿ ಹರಿಯುವುದರಿಂದ ಬಿಹಾರದ ಹೆಚ್ಚಿನ ಪ್ರದೇಶಗಳು ಮುಳುಗಿ ಪ್ರವಾಹಕ್ಕೆ ಒಳಗಾಗಿವೆ.

ಆಗಸ್ಟ್ 4 ರಂದು ಗೃಹ ಸಚಿವಾಲಯದ ವಿಪತ್ತು ನಿರ್ವಹಣಾ ವಿಭಾಗವು ಪ್ರಕಟಿಸಿದ ಪರಿಸ್ಥಿತಿ ವರದಿಯ ಪ್ರಕಾರ, 59.68 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದೆ.

1118 ಗ್ರಾಮಗಳಿಗೆ ತೊಂದರೆಯಾಗಿದೆ. ಒಟ್ಟು 4,40,507 ಜನರನ್ನು ಸ್ಥಳಾಂತರಿಸಲಾಗಿದ್ದು, 38 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಪರಿಹಾರ ಶಿಬಿರಗಳಲ್ಲಿ ಪ್ರಸ್ತುತ 28,664 ಜನರು ಆಶ್ರಯ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

ಅಸ್ಸಾಂನಲ್ಲಿ 30 ಜಿಲ್ಲೆಗಳ 56,89,584 ಜನರು ಪ್ರವಾಹದಿಂದ ಬಳಲುತ್ತಿದ್ದಾರೆ. ಪ್ರವಾಹ ಸಂಬಂಧಿತ ಘಟನೆಗಳಲ್ಲಿ 107, ಭೂಕುಸಿತದಿಂದಾಗಿ 26 ಜೀವಗಳು ಬಲಿಯಾಗಿವೆ. ರಾಜ್ಯದಲ್ಲಿ 5,000 ಕ್ಕೂ ಹೆಚ್ಚು ಗ್ರಾಮಗಳು ಬಾಧಿತವಾಗಿದ್ದು, 81,696 ಜನರನ್ನು ಸ್ಥಳಾಂತರಿಸಲಾಗಿದೆ.

ಮಾನ್ಸೂನ್ ಪ್ರಾರಂಭವಾದಾಗಿನಿಂದ ಉತ್ತರ ಪ್ರದೇಶದಲ್ಲಿಯೂ ಭಾರಿ ಮಳೆಯಾಗಿದೆ. 16 ಜಿಲ್ಲೆಗಳು ಮತ್ತು 960 ಗ್ರಾಮಗಳಿಂದ ಐದು ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಜುಲೈ 1 ರಿಂದ 6 ಜನರು ಸಾವನ್ನಪ್ಪಿದ್ದಾರೆ. 552 ಮನೆಗಳಿಗೆ ಹಾನಿಯಾಗಿದೆ.

956 ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, 4,340 ಜನರು ಈ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಸುಮಾರು 38,000 ಹೆಕ್ಟೇರ್ ಬೆಳೆ ಪ್ರದೇಶ ಹಾನಿಯಾಗಿದೆ.

ಪಶ್ಚಿಮ ಬಂಗಾಳದಲ್ಲಿ, ಪ್ರಸಕ್ತ ಮಳೆಗಾಲದಲ್ಲಿ 233 ಜನ ಸಾವನ್ನಪ್ಪಿದ್ದು, ಇನ್ನೂ 6 ಜನರು ಕಾಣೆಯಾಗಿದ್ದಾರೆ. ಮೇ 2020 ರಲ್ಲಿ ದಕ್ಷಿಣ ಬಂಗಾಳದ ಮೂಲಕ ಅಮ್ಫಾನ್ ಎಂಬ ಚಂಡಮಾರುತ ಅಪ್ಪಳಿಸಿದಾಗ ಹೆಚ್ಚಿನ ಜನ ಕಳೆದು ಹೋಗಿದ್ದಾರೆ.

23 ಜಿಲ್ಲೆಗಳು ಮತ್ತು 1,868 ಗ್ರಾಮಗಳಿಂದ 2,18,000 ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ, ಮತ್ತು 10,000 ಕ್ಕೂ ಹೆಚ್ಚು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ನೂರ ಮೂವತ್ತೆಂಟು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರಸ್ತುತ 13,771 ಜನರಿಗೆ ವಸತಿ ಕಲ್ಪಿಸಲಾಗಿದೆ.

ಈ ನಾಲ್ಕು ರಾಜ್ಯಗಳಲ್ಲದೆ, ಕೇರಳ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ಸಾವಿನ ಸಂಖ್ಯೆ ಕ್ರಮವಾಗಿ 28, 18, ಮತ್ತು 68 ಆಗಿದೆ. 10 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡಗಳು ದೇಶಾದ್ಯಂತ ನೆರವು ನೀಡುತ್ತಿವೆ.

ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿಗಳ ಪ್ರಕಾರ, ದಕ್ಷಿಣ ಏಷ್ಯಾದಲ್ಲಿ 1.75 ಕೋಟಿಗೂ ಹೆಚ್ಚು ಜನರು ಪ್ರವಾಹದಿಂದ ಪ್ರಭಾವಿತರಾಗಿದ್ದಾರೆ ಮತ್ತು ಸಾಂಕ್ರಾಮಿಕ ರೋಗದಿಂದ ಭಯಕ್ಕೆ ಒಳಗಾಗಿದ್ದಾರೆ. 630 ಕ್ಕೂ ಹೆಚ್ಚು ಜನರು ಭಾರತ, ಬಾಂಗ್ಲಾದೇಶ ಮತ್ತು ನೇಪಾಳದ ಪ್ರಮುಖ ಪ್ರವಾಹದಿಂದ ಸಾವನ್ನಪ್ಪಿದ್ದಾರೆ.

ಬಾಂಗ್ಲಾದೇಶದ ಅರ್ಧದಷ್ಟು ಜಿಲ್ಲೆಗಳು ನೀರಿನೊಳಗಿವೆ. ಪ್ರವಾಹದಿಂದಾಗಿ ಸುಮಾರು 1 ಮಿಲಿಯನ್ ಕುಟುಂಬಗಳು ತಮ್ಮ ಹಳ್ಳಿಗಳಲ್ಲಿ ಸಿಕ್ಕಿಹಾಕಿಕೊಂಡಿವೆ. ನೇಪಾಳದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದಾಗಿ ಸುಮಾರು 200 ಜನರು ಸತ್ತಿದ್ದಾರೆ.

ಮಳೆಗಾಲದ ಪ್ರವಾಹ ಬಂದರೆ, ದಕ್ಷಿಣ ಏಷ್ಯಾದ ಹೆಚ್ಚಿನ ಜನಸಂಖ್ಯೆಯು ಡೆಂಗ್ಯೂ, ಮಲೇರಿಯಾ, ಲೆಪ್ಟೊಸ್ಪಿರೋಸಿಸ್ ಮತ್ತು ಕಾಲರಾ ಮುಂತಾದ ಕಾಯಿಲೆಗಳಿಗೆ ಗುರಿಯಾಗುತ್ತದೆ.

2019 ರಲ್ಲಿ ಭಾರತದಲ್ಲಿ 1,36,000 ಜನರು ಡೆಂಗ್ಯೂ ಸೋಂಕಿಗೆ ಒಳಗಾಗಿದ್ದರು ಮತ್ತು ಅನೇಕರು ಆಸ್ಪತ್ರೆಗೆ ದಾಖಲಾಗಿದ್ದರು.

ಈ ವರ್ಷದ ಮಾನ್ಸೂನ್ ಗೆ ಮುಂಚಿತವಾಗಿ ಡೆಂಗ್ಯೂ ಮತ್ತು ಮಲೇರಿಯಾ ಮುಂತಾದ ರೋಗಗಳ ಹರಡುವಿಕೆಯನ್ನು ಹೇಗೆ ತಡೆಗಟ್ಟಬಹುದು ಎಂಬ ಬಗ್ಗೆ ಸಮುದಾಯಗಳಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಸರ್ಕಾರ ಹೇಳಿದೆ.


ಇದನ್ನೂ ಓದಿ: ಟಿಕ್‌ಟಾಕ್, ವೀಚಾಟ್ ಜೊತೆಗಿನ ವಹಿವಾಟುಗಳ ನಿಷೇಧ: ಡೊನಾಲ್ಡ್ ಟ್ರಂಪ್ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...