Homeಮುಖಪುಟಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

ಭಾರತದಾದ್ಯಂತ ಪ್ರವಾಹ; 508 ಸಾವು, 1.26 ಕೋಟಿ ಜನ ನಿರಾಶ್ರಿತರು

ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಪ್ರವಾಹ ಹೆಚ್ಚು ಪರಿಣಾಮ ಬೀರಿದೆ.

- Advertisement -
- Advertisement -

ಮಾನ್ಸೂನ್ ಪ್ರಾರಂಭವಾದಾಗಿನಿಂದ ಉಂಟಾಗುತ್ತಿರುವ ಪ್ರವಾಹ ಮತ್ತು ಪ್ರವಾಹ ಸಂಬಂಧಿತ ಘಟನೆಗಳಿಂದಾಗಿ ದೇಶಾದ್ಯಂತ 500 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಕನಿಷ್ಠ 1.26 ಕೋಟಿ ಜನರು ಬಾಧಿತರಾಗಿದ್ದಾರೆ. ಅಂದಾಜು 5,22,908 ಜನರು ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿದೆ.

ಮುಖ್ಯವಾಗಿ ಬಿಹಾರ, ಅಸ್ಸಾಂ, ಉತ್ತರ ಪ್ರದೇಶ ರಾಜ್ಯಗಳಲ್ಲಿ ಪ್ರವಾಹ ಹೆಚ್ಚು ಪರಿಣಾಮ ಬೀರಿದೆ. ನೇಪಾಳದಿಂದ ನದಿ ಉಕ್ಕಿ ಹರಿಯುವುದರಿಂದ ಬಿಹಾರದ ಹೆಚ್ಚಿನ ಪ್ರದೇಶಗಳು ಮುಳುಗಿ ಪ್ರವಾಹಕ್ಕೆ ಒಳಗಾಗಿವೆ.

ಆಗಸ್ಟ್ 4 ರಂದು ಗೃಹ ಸಚಿವಾಲಯದ ವಿಪತ್ತು ನಿರ್ವಹಣಾ ವಿಭಾಗವು ಪ್ರಕಟಿಸಿದ ಪರಿಸ್ಥಿತಿ ವರದಿಯ ಪ್ರಕಾರ, 59.68 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಬಳಲುತ್ತಿದ್ದಾರೆ ಎಂದು ತಿಳಿಸಿದೆ.

1118 ಗ್ರಾಮಗಳಿಗೆ ತೊಂದರೆಯಾಗಿದೆ. ಒಟ್ಟು 4,40,507 ಜನರನ್ನು ಸ್ಥಳಾಂತರಿಸಲಾಗಿದ್ದು, 38 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಪರಿಹಾರ ಶಿಬಿರಗಳಲ್ಲಿ ಪ್ರಸ್ತುತ 28,664 ಜನರು ಆಶ್ರಯ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

ಅಸ್ಸಾಂನಲ್ಲಿ 30 ಜಿಲ್ಲೆಗಳ 56,89,584 ಜನರು ಪ್ರವಾಹದಿಂದ ಬಳಲುತ್ತಿದ್ದಾರೆ. ಪ್ರವಾಹ ಸಂಬಂಧಿತ ಘಟನೆಗಳಲ್ಲಿ 107, ಭೂಕುಸಿತದಿಂದಾಗಿ 26 ಜೀವಗಳು ಬಲಿಯಾಗಿವೆ. ರಾಜ್ಯದಲ್ಲಿ 5,000 ಕ್ಕೂ ಹೆಚ್ಚು ಗ್ರಾಮಗಳು ಬಾಧಿತವಾಗಿದ್ದು, 81,696 ಜನರನ್ನು ಸ್ಥಳಾಂತರಿಸಲಾಗಿದೆ.

ಮಾನ್ಸೂನ್ ಪ್ರಾರಂಭವಾದಾಗಿನಿಂದ ಉತ್ತರ ಪ್ರದೇಶದಲ್ಲಿಯೂ ಭಾರಿ ಮಳೆಯಾಗಿದೆ. 16 ಜಿಲ್ಲೆಗಳು ಮತ್ತು 960 ಗ್ರಾಮಗಳಿಂದ ಐದು ಲಕ್ಷಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಜುಲೈ 1 ರಿಂದ 6 ಜನರು ಸಾವನ್ನಪ್ಪಿದ್ದಾರೆ. 552 ಮನೆಗಳಿಗೆ ಹಾನಿಯಾಗಿದೆ.

956 ಪರಿಹಾರ ಶಿಬಿರಗಳನ್ನು ತೆರೆಯಲಾಗಿದ್ದು, 4,340 ಜನರು ಈ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಸುಮಾರು 38,000 ಹೆಕ್ಟೇರ್ ಬೆಳೆ ಪ್ರದೇಶ ಹಾನಿಯಾಗಿದೆ.

ಪಶ್ಚಿಮ ಬಂಗಾಳದಲ್ಲಿ, ಪ್ರಸಕ್ತ ಮಳೆಗಾಲದಲ್ಲಿ 233 ಜನ ಸಾವನ್ನಪ್ಪಿದ್ದು, ಇನ್ನೂ 6 ಜನರು ಕಾಣೆಯಾಗಿದ್ದಾರೆ. ಮೇ 2020 ರಲ್ಲಿ ದಕ್ಷಿಣ ಬಂಗಾಳದ ಮೂಲಕ ಅಮ್ಫಾನ್ ಎಂಬ ಚಂಡಮಾರುತ ಅಪ್ಪಳಿಸಿದಾಗ ಹೆಚ್ಚಿನ ಜನ ಕಳೆದು ಹೋಗಿದ್ದಾರೆ.

23 ಜಿಲ್ಲೆಗಳು ಮತ್ತು 1,868 ಗ್ರಾಮಗಳಿಂದ 2,18,000 ಕ್ಕೂ ಹೆಚ್ಚು ಜನರು ಬಾಧಿತರಾಗಿದ್ದಾರೆ. ಒಂದು ಸಾವಿರಕ್ಕೂ ಹೆಚ್ಚು ಮನೆಗಳಿಗೆ ಸಂಪೂರ್ಣ ಹಾನಿಯಾಗಿದೆ, ಮತ್ತು 10,000 ಕ್ಕೂ ಹೆಚ್ಚು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ನೂರ ಮೂವತ್ತೆಂಟು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರಸ್ತುತ 13,771 ಜನರಿಗೆ ವಸತಿ ಕಲ್ಪಿಸಲಾಗಿದೆ.

ಈ ನಾಲ್ಕು ರಾಜ್ಯಗಳಲ್ಲದೆ, ಕೇರಳ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ಸಾವಿನ ಸಂಖ್ಯೆ ಕ್ರಮವಾಗಿ 28, 18, ಮತ್ತು 68 ಆಗಿದೆ. 10 ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ತಂಡಗಳು ದೇಶಾದ್ಯಂತ ನೆರವು ನೀಡುತ್ತಿವೆ.

ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿಗಳ ಪ್ರಕಾರ, ದಕ್ಷಿಣ ಏಷ್ಯಾದಲ್ಲಿ 1.75 ಕೋಟಿಗೂ ಹೆಚ್ಚು ಜನರು ಪ್ರವಾಹದಿಂದ ಪ್ರಭಾವಿತರಾಗಿದ್ದಾರೆ ಮತ್ತು ಸಾಂಕ್ರಾಮಿಕ ರೋಗದಿಂದ ಭಯಕ್ಕೆ ಒಳಗಾಗಿದ್ದಾರೆ. 630 ಕ್ಕೂ ಹೆಚ್ಚು ಜನರು ಭಾರತ, ಬಾಂಗ್ಲಾದೇಶ ಮತ್ತು ನೇಪಾಳದ ಪ್ರಮುಖ ಪ್ರವಾಹದಿಂದ ಸಾವನ್ನಪ್ಪಿದ್ದಾರೆ.

ಬಾಂಗ್ಲಾದೇಶದ ಅರ್ಧದಷ್ಟು ಜಿಲ್ಲೆಗಳು ನೀರಿನೊಳಗಿವೆ. ಪ್ರವಾಹದಿಂದಾಗಿ ಸುಮಾರು 1 ಮಿಲಿಯನ್ ಕುಟುಂಬಗಳು ತಮ್ಮ ಹಳ್ಳಿಗಳಲ್ಲಿ ಸಿಕ್ಕಿಹಾಕಿಕೊಂಡಿವೆ. ನೇಪಾಳದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದಾಗಿ ಸುಮಾರು 200 ಜನರು ಸತ್ತಿದ್ದಾರೆ.

ಮಳೆಗಾಲದ ಪ್ರವಾಹ ಬಂದರೆ, ದಕ್ಷಿಣ ಏಷ್ಯಾದ ಹೆಚ್ಚಿನ ಜನಸಂಖ್ಯೆಯು ಡೆಂಗ್ಯೂ, ಮಲೇರಿಯಾ, ಲೆಪ್ಟೊಸ್ಪಿರೋಸಿಸ್ ಮತ್ತು ಕಾಲರಾ ಮುಂತಾದ ಕಾಯಿಲೆಗಳಿಗೆ ಗುರಿಯಾಗುತ್ತದೆ.

2019 ರಲ್ಲಿ ಭಾರತದಲ್ಲಿ 1,36,000 ಜನರು ಡೆಂಗ್ಯೂ ಸೋಂಕಿಗೆ ಒಳಗಾಗಿದ್ದರು ಮತ್ತು ಅನೇಕರು ಆಸ್ಪತ್ರೆಗೆ ದಾಖಲಾಗಿದ್ದರು.

ಈ ವರ್ಷದ ಮಾನ್ಸೂನ್ ಗೆ ಮುಂಚಿತವಾಗಿ ಡೆಂಗ್ಯೂ ಮತ್ತು ಮಲೇರಿಯಾ ಮುಂತಾದ ರೋಗಗಳ ಹರಡುವಿಕೆಯನ್ನು ಹೇಗೆ ತಡೆಗಟ್ಟಬಹುದು ಎಂಬ ಬಗ್ಗೆ ಸಮುದಾಯಗಳಲ್ಲಿ ಜಾಗೃತಿ ಮೂಡಿಸಲಾಗಿದೆ ಎಂದು ಸರ್ಕಾರ ಹೇಳಿದೆ.


ಇದನ್ನೂ ಓದಿ: ಟಿಕ್‌ಟಾಕ್, ವೀಚಾಟ್ ಜೊತೆಗಿನ ವಹಿವಾಟುಗಳ ನಿಷೇಧ: ಡೊನಾಲ್ಡ್ ಟ್ರಂಪ್ ಸಹಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...