Homeಆರೋಗ್ಯವಂಶವಾಹಿಗಳ (ಜೀನ್ಸ್) ತಿಳಿವಳಿಕೆ ಮೂಡಿಸುತ್ತಿರುವ ಹೊಸ ಸತ್ಯಗಳು: ಹರ್ಷಕುಮಾರ್ ಕುಗ್ವೆ

ವಂಶವಾಹಿಗಳ (ಜೀನ್ಸ್) ತಿಳಿವಳಿಕೆ ಮೂಡಿಸುತ್ತಿರುವ ಹೊಸ ಸತ್ಯಗಳು: ಹರ್ಷಕುಮಾರ್ ಕುಗ್ವೆ

ಈ ಡಿಎನ್‍ಎ ಸಂಶೋಧನೆಗಳು ಮನುಷ್ಯನಿಗೆ ಮನುಷ್ಯ ಗತಚರಿತ್ರೆಯ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಬುಡಮೇಲು ಮಾಡಬಲ್ಲವು. ಹಾಗೆಯೇ ಚರಿತ್ರೆಯ ಸರಿಯಾದ ತಿಳುವಳಿಕೆಗೆ ಅಧಿಕೃತತೆಯ ಮುದ್ರೆ ಒತ್ತಬಲ್ಲವು, ಇಲ್ಲವೇ ಮನುಕುಲ ಸಾಗಿಬಂದ ದಾರಿಯಲ್ಲಿ ಚಾರಿತ್ರಿಕ ಸತ್ಯಗಳನ್ನು ಕಂಡುಕೊಳ್ಳಲು ಕರಾರುವಕ್ಕಾದ ತಿಳಿವನ್ನು ಸಹ  ನಮಗೆ ನೀಡಬಲ್ಲವು.

- Advertisement -
- Advertisement -

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಲ್ಲಿ ಎರಡು ಪ್ರತಿಷ್ಠಿತ ಅಂತರರಾಷ್ಟ್ರೀಯ ವಿಜ್ಞಾನ ಪತ್ರಿಕಗೆಳಾದ ‘ಸೈನ್ಸ್’ ಮತ್ತು ‘ಸೆಲ್’ ಪತ್ರಿಕೆಗಳು ಭಾರತೀಯರ ಪುರಾತನ ಇತಿಹಾಸಕ್ಕೆ ಸಂಬಂಧಿಸಿದ ಬಹುಮುಖ್ಯವಾದ ಎರಡು ವರದಿಗಳನ್ನು ಪ್ರಕಟಿಸಿದವು. ದುರದೃಷ್ಟವಶಾತ್ ಇದು ನಮ್ಮ ಮಾಧ್ಯಮಗಳಲ್ಲಿ ಮತ್ತು ಅಕಡೆಮಿಕ್ ವಲಯಗಳಲ್ಲಿ ಎಷ್ಟು ಪ್ರಾಮುಖ್ಯತೆ ಪಡೆದುಕೊಳ್ಳಬೇಕಿತ್ತೋ ಅಷ್ಟನ್ನು ಪಡೆದುಕೊಳ್ಳಲೇ ಇಲ್ಲ. ಇದರಲ್ಲಿ ಹಲವು ಪಟ್ಟಭದ್ರ ಹಿತಾಸಕ್ತಿಗಳು ಕೆಲಸ ಮಾಡಿರುವುದು ಮೇಲ್ನೋಟಕ್ಕೇ ತಿಳಿಯುತ್ತದೆ.

ಭಾರತದ ಪ್ರಾಚೀನ ಇತಿಹಾಸದ ಬಗ್ಗೆ ಇದುವರೆಗೂ ಇತಿಹಾಸಕಾರರಲ್ಲಿ ಒಮ್ಮತವಿಲ್ಲ. ಇಲ್ಲಿ ಎಡ-ಬಲ ದೃಷ್ಟಿಕೋನಗಳು ಇತಿಹಾಸ ರಚನೆಯ ಮೇಲೆ ಗಾಢವಾದ ಪ್ರಭಾವ ಹೊಂದಿವೆ. ಬಲಪಂಥೀಯ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಲೆಲ್ಲಾ ಬಹಳ ಆದ್ಯತೆಯ ಮೇಲೆ ಇತಿಹಾಸ ರಚನೆಯ ಅಂಗಗಳ ಮೇಲೆ ಕೆಂಗಣ್ಣು ಬೀರುತ್ತದೆ. ಹಿಂದೆ 2002-03ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಆರ್‌ಎಸ್‍ಎಸ್ ಸೂತ್ರಧಾರಿಗಳು ಉನ್ನತ ಮಟ್ಟದ ಇತಿಹಾಸದ ಅಂಗಗಳಲ್ಲಿದ್ದ, ತಮ್ಮ ದೃಷ್ಟಿಕೋನಕ್ಕೆ ಸರಿ ಹೊಂದದವರನ್ನೆಲ್ಲಾ ಬದಲಿಸಿದ್ದರು. ಈಗ ನರೇಂದ್ರ ಮೋದಿಯ ಅಧಿಕಾರದಲ್ಲಿ ಇನ್ನೂ ಹತ್ತು ಹೆಜ್ಜೆ ಮುಂದೆ ಹೋಗಿದ್ದಾರೆ. ವೇದಕಾಲದಲ್ಲಿ ಇತ್ತೆಂದು ಹೇಳಲಾಗುವ ‘ಸರಸ್ವತಿ’ ನದಿಯ ಕುರಿತು ಸಂಶೋಧನೆ ನಡೆಸಲು ಇವರು ಕೈಗೊಂಡಿರುವ ಕ್ರಮ ಇದಕ್ಕೆ ಇತ್ತೀಚಿನ ನಿದರ್ಶನ.

ಆದರೆ ಇದುವರೆಗೆ ಯಾವುದನ್ನು ಇತಿಹಾಸಕಾರರಿಂದ, ಪ್ರಾಕ್ತನಶಾತ್ರಜ್ಞರಿಂದ, ಭಾಷಾತಜ್ಞರಿಂದ ಮಾಡಲು ಸಾಧ್ಯವಿರಲಿಲ್ಲವೋ ಅದನ್ನು ಇಂದಿನ ತಳಿ ವಿಜ್ಞಾನ ಬಹುತೇಕ ಸಾಧಿಸಿದೆ ಎನ್ನಬಹುದು. ಅದು ಮನುಷ್ಯನ ಇತಿಹಾಸಕ್ಕೆ ವಿಜ್ಞಾನದ ಸ್ಪರ್ಶ ನೀಡಿಯಾದರೂ ಅಲ್ಲಗಳೆಯಲಾಗದಂತಹ ಮಾನವ ಇತಿಹಾಸವನ್ನು ನಿರೂಪಿಸುವ ಕೆಲಸ. ವಂಶವಾಹಿಗಳ ಸಂಶೋಧನೆಯಲ್ಲಿ ಇದು ಇಂದು ಸಾಧ್ಯವಾಗಿದೆ.

ವಂಶವಾಹಿಗಳ (ಜೀನ್ಸ್) ಕುರಿತ ಮನುಷ್ಯನ ತಿಳಿವಳಿಕೆಗೆ ಶತಮಾನಗಳ ಇತಿಹಾಸವಿದ್ದರೂ ಅವುಗಳಲ್ಲಿ ಅಡಗಿರುವ ಅಗಾಧ ಮಾಹಿತಿಯನ್ನು ಮನುಕುಲದ ಇತಿಹಾಸ ಶೋಧನೆಗೆ ಬಳಸುವ ಪ್ರಕ್ರಿಯೆ ಶುರುವಾಗಿದ್ದು ಮಾತ್ರ ತೀರಾ ಇತ್ತೀಚೆಗೆ. ನಮ್ಮ ಜೀವಕೋಶಗಳ ನ್ಯೂಕ್ಲಿಯಸ್ ಒಳಗಿನ ವರ್ಣತಂತುಗಳನ್ನು ರೂಪಿಸಿರುವ ನಾಲ್ಕು ರಾಸಾಯನಿಕ ನ್ಯೂಕ್ಲಿಯೋಟೈಡ್‍ಗಳಿಂದ (ಎ-ಸಿ-ಟಿ-ಜಿ- ಅಡೆನೈನ್, ಸೈಟೊಸಿನ್, ಥೈಮೈನ್, ಗುವಾನಿನ್) ರಚಿತವಾದ ಸುರುಳಿಯಾಕಾರದ ಡಿಎನ್‍ಎ ಎಳೆಗಳು ತಮ್ಮೊಳಗೆ ಲಕ್ಷಾಂತರ ವರ್ಷಗಳ ಇತಿಹಾಸವನ್ನೇ ಅಡಗಿಸಿಕೊಂಡಿರುತ್ತವೆ ಎಂಬುದು ವಿಸ್ಮಯವೆನಿಸಿದರೂ ಸತ್ಯ ಸಂಗತಿ. ಇದನ್ನು ಮನುಷ್ಯ ಸರಿಯಾಗಿ ಮನವರಿಕೆ ಮಾಡಿಕೊಂಡಿದ್ದು ಕೇವಲ ಎರಡು ದಶಕಗಳ ಈಚೆಗೆ ಎನ್ನಬಹುದು. 2001ರಲ್ಲಿ ವಿಜ್ಞಾನಿಗಳು ಮಾನವ ಜಿನೋಮ್ ಯೋಜನೆಯ (ಜಿನೋಮ್ ಎಂದರೆ ಒಂದು ಜೀವಿಯ ವಂಶವಾಹಿಗಳ ಒಟ್ಟು ಜೋಡಣೆ) ಮೂಲಕ ಅಧ್ಯಯನ ನಡೆಸಲು ತೊಡಗಿದಂದಿನಿಂದ ನಂತರದ ಈ ಎರಡು ದಶಕಗಳಲ್ಲಿ ಅಗಾಧ ಮಾಹಿತಿಯನ್ನು ತಳಿ ವಿಜ್ಞಾನಿಗಳು ಕಲೆಹಾಕಿದ್ದಾರೆ. ಕಳೆದ ಏಳೆಂಟು ವರ್ಷಗಳಲ್ಲಿ ಪ್ರಪಂಚದ ಬಹುತೇಕ ಎಲ್ಲಾ ಜನಾಂಗೀಯ ಹಾಗೂ ಪ್ರಾದೇಶಿಕ ಭಿನ್ನತೆಗಳ ಜನರ ಡಿಎನ್‍ಎ ಮಾದರಿಗಳನ್ನು ಸಂಗ್ರಹಿಸಿ ಅಧ್ಯಯನಕ್ಕೆ ಒಳಪಡಿಸಿದ್ದಾರೆ. ಅವು ಒದಗಿಸಿರುವ ಮಾಹಿತಿ, ತಿಳುವಳಿಕೆಯನ್ನು ತಳಿ ವಿಜ್ಞಾನಿ ಡೇವಿಡ್ ರೀಚ್ ಡಿಎನ್‍ಎಯನ್ನು ಮನುಷ್ಯನ ಗತ ಇತಿಹಾಸದ ವಿವಿಧ ಹಂತಗಳ ಕುರಿತು ಮಾಹಿತಿಯನ್ನು ಒದಗಿಸುವ ‘ಪುರಾತನ ಡಿಎನ್‍ಎ’ ಎಂದೇ ಕರೆದಿದ್ದಾರೆ. ಈ ‘ಪುರಾತನ ಡಿಎನ್‍ಎ’ ನಮ್ಮ ಗತ ಇತಿಹಾಸವನ್ನು ಶೋಧಿಸಿ ಒರೆಗೆ ಹಚ್ಚಲು ಬೇಕಾದ ಅಮೂಲ್ಯ ಸಾಮಗ್ರಿಯನ್ನು ಒದಗಿಸುತ್ತದೆ. ಸದ್ಯದ ಮಟ್ಟಿಗೆ ಇಡೀ ಜಗತ್ತಿನಲ್ಲಿ ಮನುಷ್ಯನ ಚರಿತ್ರೆಯಲ್ಲಿ ನಡೆದಿರುವ ಎಲ್ಲಾ ವಲಸೆಗಳ ಇತಿಹಾಸವನ್ನು, ವಲಸೆಗಳ ಸ್ವರೂಪಗಳನ್ನು, ಜನಾಂಗೀಯ ಸಂಬಂಧಗಳನ್ನು ಸ್ಪಷ ರೂಪದಲ್ಲಿ ಮುಂದಿಡಲು ಈ ‘ಪುರಾತನ ಡಿಎನ್‍ಎ’ ಯಶಸ್ವಿಯಾಗಿದೆ ಎನ್ನಬಹುದು.

ಈ ಡಿಎನ್‍ಎ ಸಂಶೋಧನೆಗಳು ಮನುಷ್ಯನಿಗೆ ಮನುಷ್ಯ ಗತಚರಿತ್ರೆಯ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಬುಡಮೇಲು ಮಾಡಬಲ್ಲವು. ಹಾಗೆಯೇ ಚರಿತ್ರೆಯ ಸರಿಯಾದ ತಿಳುವಳಿಕೆಗೆ ಅಧಿಕೃತತೆಯ ಮುದ್ರೆ ಒತ್ತಬಲ್ಲವು, ಇಲ್ಲವೇ ಮನುಕುಲ ಸಾಗಿಬಂದ ದಾರಿಯಲ್ಲಿ ಚಾರಿತ್ರಿಕ ಸತ್ಯಗಳನ್ನು ಕಂಡುಕೊಳ್ಳಲು ಕರಾರುವಕ್ಕಾದ ತಿಳಿವನ್ನು ಸಹ  ನಮಗೆ ನೀಡಬಲ್ಲವು.

ಭಾರತದ ಮಟ್ಟಿಗೆ ಹೇಳುವುದಾದರೆ ಇದುವರೆಗೆ ನಡೆದಿರುವ ಪುರಾತನ ಡಿಎನ್‍ಎ ಸಂಶೋಧನೆಗಳು ಭಾರತದ ಪ್ರಾಚೀನ ಜನಾಂಗೀಯ ವಲಸೆಗಳ ಕುರಿತು, ಇಲ್ಲಿ ಸಂಭವಿಸಿರುವ ಜನಾಂಗೀಯ ಸಂಕರಗಳ ಕುರಿತು, ಯಾವಜನಾಂಗೀಯ, ಭಾಷಿಕ ಸಮುದಾಯಗಳು ಯಾರ ಮೇಲೆ ಯಾವ ಕಾಲಘಟ್ಟದಲ್ಲಿ ಆಕ್ರಮಣಕಾರಿಯಾಗಿ ವರ್ತಿಸಿದವು ಎಂಬ ಕುರಿತು, ಇಲ್ಲಿ ಜಾತಿಗಳು ಯಾವಾಗ, ಹೇಗೆ ಹುಟ್ಟಿಕೊಂಡವು ಎಂಬ ಕುರಿತು, ಈ ಜಾತಿಕಟ್ಟು ಕಟ್ಟಳೆಗಳು ಉಂಟು ಮಾಡಿರುವ ಜೈವಿಕ ಪರಿಣಾಮಗಳ ಕುರಿತು, ಹೀಗೆ ನಾನಾ ಚಾರಿತ್ರಿಕ ಸಂಗತಿಗಳ ಕುರಿತು ಬೆಳಕು ಚೆಲ್ಲಿವೆ. ಈ ಸಂಶೋಧನೆಗಳ ಬೆಳಕಿನಲ್ಲಿ ನಾವು ನಮ್ಮ ದೇಶದ ಚರಿತ್ರೆಯನ್ನು ಮತ್ತಷ್ಟು ನಿಖರವಾಗಿ ಕಟ್ಟಿಕೊಳ್ಳಬಹುದಾಗಿದೆ.

ಕಳೆದ ಒಂದು ದಶಕಕ್ಕೂ ಹೆಚ್ಚಿನ ಕಾಲಾವಧಿಯಲ್ಲಿ ನಡೆದಿರುವ ಭಾರತೀಯರ ಕುರಿತ ಡಿಎನ್‍ಎ ಸಂಶೋಧನಗೆಳನ್ನು ಆಳವಾಗಿ ಅಧ್ಯಯನ ನಡೆಸಿ ಅದರ ಸಾರವನ್ನು ಸೊಗಸಾಗಿ ನಿರೂಪಿಸಿದವರು ಟೋನಿ ಜೋಸೆಫ್. ಅವರುತಮ್ಮ ‘ಅರ್ಲಿ ಇಂಡಿಯನ್ಸ್” ಎಂಬ ಕೃತಿಯಲ್ಲಿ ಈ ತಳಿ ವಿಜ್ಞಾನ ಭಾರತೀಯರ ಇತಿಹಾಸದ ಕುರಿತು ಏನು ಹೇಳುತ್ತದೆ ಎಂಬುದನ್ನು ಸರಳವಾಗಿ ವಿವರಿಸಿದ್ದಾರೆ. ಹಾಗೆಯೇ ಈ ಎಲ್ಲಾ ಸಂಶೋಧನೆಗಳಲ್ಲಿ ತಮ್ಮನ್ನು ಸಂಪೂರ್ಣ ತೊಡಗಿಸಿಕೊಂಡಿರುವ ಡೇವಿಡ್ ರೀಚ್ ಬರೆದ “ಹೂ ವಿ ಆರ್ ಅಂಡ್ ಹೌ ವಿ ಗಾಟ್ ಹಿಯರ್’ ಎಂಬ ಕೃತಿಯಲ್ಲಿ ಇಡೀಜಗತ್ತಿನ ವಲಸೆಗಳ ಕುರಿತು ಡಿಎನ್‍ಎ ಸಂಶೋಧನೆ ಅರುಹಿದ ಮಾಹಿತಿಗಳನ್ನು ನೀಡಿದ್ದಾರೆ. ಇದರಲ್ಲಿ ಭಾರತದ ಪ್ರಾಚೀನ ಕಾಲದ ವಲಸೆಗಳ ಕುರಿತು ಸಹ ವಿವರವಾಗಿ ಒಂದು ಅಧ್ಯಾಯದಲ್ಲಿ ಬರೆದಿದ್ದಾರೆ.

ಈ ಪುಸ್ತಕ ಪ್ರಕಟವಾದ ನಂತರದಲ್ಲಿಯೇ ಆರಂಭದಲ್ಲಿ ಹೇಳಿದ ವರದಿಗಳು ಬಿಡುಗಡೆಯಾಗಿರುವುದು.

ಇಂದು ನಮ್ಮ ಸಮಾಜದಲ್ಲಿನ ಅನೇಕ ಸಂಕ್ಷೋಭೆಗಳಿಗೆ, ಜನಾಂಗೀಯ ಮತ್ತು ಧಾರ್ಮಿಕ ಹಿಂಸೆಗಳಿಗೆ ಭಾರತದ ‘ಚರಿತ್ರೆಯನ್ನು ತಿರುಚಿ, ವಿಕೃತಗೊಳಿಸಿ’ ಅವುಗಳನ್ನೇ ಸತ್ಯವೆಂದು ಜನರಿಗೆ ನಂಬಿಸಿರುವುದು ಮುಖ್ಯಕಾರಣ. ಬಲಪಂಥೀಯ ಶಕ್ತಿಗಳು ಚರಿತ್ರೆಯನ್ನು ಒಂದು ಹತಾರವಾಗಿ ಬಳಸಿಕೊಂಡ ಪರಿ ಇದು. ಹೀಗಾಗಿ ಜನರಿಗೆ ಚರಿತ್ರೆಯ ಕುರಿತ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ವಾಸ್ತವ ಚರಿತ್ರೆಯನ್ನು ಹೇಳುವುದು ಬಹಳ ಮುಖ್ಯ. ಈ ನಿಟ್ಟಿನಲ್ಲಿ ಇತ್ತೀಚಿನ ಡಿಎನ್‍ಎ ಸಂಶೋಧನೆಗಳು ಹೆಚ್ಚಿನ ಬಲವನ್ನು ನೀಡಿವೆ. ಅವುಗಳನ್ನು ಜನರ ಬಳಿಗೆ ಹೇಗೆ ಕೊಂಡೊಯ್ಯುತ್ತೇವೆ ಎನ್ನುವುದೇ ಈಗ ನಮ್ಮ ಮುಂದಿರುವ ಪ್ರಶ್ನೆ.

(ಮುಂದಿನ ವಾರದ ನ್ಯಾಯಪಥ ಸಂಚಿಕೆಯಲ್ಲಿ ನಿರೀಕ್ಷಿಸಿ: ಡೇವಿಡ್ ರೀಚ್ ಅವರ ಜೊತೆಗೆ ಗಣೇಶ್ ದೇವಿ ಸಂವಾದ)


ಇದನ್ನು ಓದಿ: ದಿನವೊಂದರಲ್ಲಿ 62,538 ಪ್ರಕರಣಗಳ ವರದಿ: 20 ಲಕ್ಷ ದಾಟಿದ ಭಾರತ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...