Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

ಫ್ಯಾಕ್ಟ್‌‌ಚೆಕ್: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

- Advertisement -
- Advertisement -

ಹಳೆಯ ಮೂತ್ರಪಿಂಡ ಕಸಿ ದಂಧೆಯಲ್ಲಿ ಭಾಗಿಯಾಗಿರುವ ವೈದ್ಯರ ಬಂಧನದ ದಶಕದಷ್ಟು ಹಳೆಯ ಸುದ್ದಿಯನ್ನು ಕೊರೊನಾ ವೈರಸ್ ಹೆಸರಲ್ಲಿ ತಪ್ಪಾಗಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿರುವ ವೈರಲ್ ಚಿತ್ರವೊಂದನ್ನು “ಮೂತ್ರಪಿಂಡ ವ್ಯಾಪಾರಕ್ಕಾಗಿ ಕೊರೊನಾ ನೆಪದಲ್ಲಿ 125 ರೋಗಿಗಳನ್ನು ಕೊಂದ ವೈದ್ಯರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ” ಎಂದು ವೈರಲ್ ಮಾಡಲಾಗುತ್ತಿದೆ.

ಆದರೆ ಈ ಚಿತ್ರದಲ್ಲಿ ಇರುವ ವೈದ್ಯ 2004 ರಲ್ಲಿ ಮೊದಲ ಬಾರಿಗೆ ಬಂಧನಕ್ಕೊಳಗಾಗಿದ್ದರು. ಇದರ ನಂತರ ಅವರಿಗೆ 2020 ರ ಜನವರಿಯಲ್ಲಿ 20 ದಿನಗಳ ಪೆರೋಲ್ ದೊರೆತಿದ್ದು, ಆಗ ನಾಪತ್ತೆಯಾಗಿದ್ದ ಅವರನ್ನು ಜುಲೈ 28 ರಂದು ಮತ್ತೆ ಬಂಧಿಸಲಾಯಿತು ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇನು?

ಮೇಲೆ ತಿಳಿಸಿದಂತೆ ಹಲವಾರು ಜನರು ಇದನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ವೈರಲ್ ಮಾಡಿದ್ದಾರೆ. ಈ ಸಂದೇಶಗಳು ದೆಹಲಿ ಪೊಲೀಸರು ಬಂಧಿಸಿರುವ ಡಾ.ದೇವೇಂದ್ರ ಶರ್ಮಾ ಕರೋನಾ ವೈರಸ್ ರೋಗನಿರ್ಣಯದ ಹೆಸರಿನಲ್ಲಿ ರೋಗಿಗಳ ಮೂತ್ರಪಿಂಡಗಳನ್ನು ಮಾರಾಟ ಮಾಡಿದ್ದಾರೆ.  ತನ್ನ ವಿರುದ್ಧದ ಸಾಕ್ಷ್ಯಗಳನ್ನು ತೊಡೆದುಹಾಕಲು ಈ ವೈದ್ಯ ರೋಗಿಗಳ ಮೃತ ದೇಹಗಳನ್ನು ಮೊಸಳೆಗಳಿಗೆ ಆಹಾರವಾಗಿ ನೀಡಿದ್ದರು ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಫ್ಯಾಕ್ಟ್‌ಚೆಕ್

ಈ ಸಂದೇಶವು ಟೈಮ್ಸ್ ಆಫ್ ಇಂಡಿಯಾ ವರದಿಯ ಚಿತ್ರದೊಂದಿಗೆ ಇದು ಪ್ರಸಾರವಾಗುತ್ತಿದೆ. ಆದರೆ ಇದರಲ್ಲಿ ಕೊರೊನಾ ವೈರಸ್ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ವರದಿಯ ಪ್ರಕಾರ, ಆಯುರ್ವೇದ ವೈದ್ಯ ಡಾ.ದೇವೇಂದ್ರ ಶರ್ಮಾ ಅವರು ಸರಣಿ ಅಪರಾಧಗಳ ಅಪರಾಧಿಯಾಗಿದ್ದು, ಅವರು ಕಿಡ್ನಿ ದಂಧೆ ನಡೆಸುವುದು, ನಕಲಿ ಅನಿಲ ಏಜೆನ್ಸಿ ನಡೆಸುವುದು ಮತ್ತು ಕದ್ದ ವಾಹನಗಳ ಮಾರಾಟ ಮುಂತಾದ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ.

ದೇವೇಂದ್ರ ಅವರ ಕ್ರಿಮಿನಲ್ ದಾಖಲೆಯ ವಿವರಗಳನ್ನು ನೀಡುತ್ತಾ, 2004 ರಲ್ಲಿ ಅವರನ್ನು ಮೊದಲು ಬಂಧಿಸಲಾಗಿದ್ದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದಾಗಿ ಅವರು 16 ವರ್ಷಗಳ ಕಾಲ ಜೈಲಿನಲ್ಲಿ ಕಳೆದರು. 2020 ರ ಜನವರಿಯಲ್ಲಿ ಉತ್ತಮ ನಡವಳಿಕೆಗಾಗಿ ಅವರು 20 ದಿನಗಳ ಪೆರೋಲ್ ಪಡೆದಿದ್ದರು. ಆದರೆ ಪೆರೋಲ್‌ ಸಮಯದಲ್ಲಿ ಅವರು ನಾಪತ್ತೆಯಾಗಿದ್ದರು. ಜುಲೈ 28 ರಂದು ದೆಹಲಿ ಪೊಲೀಸ್ ಅಪರಾಧ ಶಾಖೆಯು ಅವರನ್ನು ಮತ್ತೆ ಬಂಧಿಸಲಾಯಿತು.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಮತ್ತು ಎನ್‌ಡಿಟಿವಿ ವರದಿಗಳು ಕೂಡಾ ಇದೇ ರೀತಿಯ ವಿವರಗಳನ್ನು ನೀಡಿವೆ. “ಅವರು ಮೊಸಳೆಗಳನ್ನು ಹೊಂದಿದ್ದ ಕಾಸ್‌ಗಂಜ್‌ನ ಹಜಾರಾ ಕಾಲುವೆಯಲ್ಲಿರುವ ಅಲಿಗಡ್‌ಗೆ ಹೋಗುವ ದಾರಿಯಲ್ಲಿ ಶವಗಳನ್ನು ಎಸೆಯುತ್ತಿದ್ದರು, ಆದ್ದರಿಂದ ಶವಗಳನ್ನು ಹಿಂಪಡೆಯಲು ಯಾವುದೇ ಅವಕಾಶವಿಲ್ಲ” ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ವರದಿ ಮಾಡಿದೆ.

ದೆಹಲಿ ಪೊಲೀಸ್ ಅಪರಾಧ ಶಾಖೆಯ ಡಿಸಿಪಿ ರಾಕೇಶ್ ಪವೇರಿಯಾ ಅವರು, ‘ಕೊರೊನಾ ವೈರಸ್‌ಗೂ ಈ ಘಟನೆಗೂ ಯಾವುದೆ ಸಂಬಂಧವಿಲ್ಲವೆಂದಿದ್ದಾರೆಂದು’ ದಿ ಕ್ವಿಂಟ್ ವರದಿ ಮಾಡಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಮೂತ್ರಪಿಂಡದ ದಂಧೆ ನಡೆಸಿದ್ದಕ್ಕಾಗಿ ಶಿಕ್ಷೆಗೊಳಗಾದ ಸರಣಿ ಅಪರಾಧಗಳ ಅಪರಾಧಿಯ ಬಂಧನವನ್ನು ಕೊರೊನಾ ವೈರಸ್ ಹೆಸರಲ್ಲಿ ಸುಳ್ಳು  ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.


ಓದಿ: ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...