Homeರಾಜಕೀಯಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

ಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

- Advertisement -
- Advertisement -

 ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕುರಿತೋದದೆಯುಂ ಕಾವ್ಯ ಪ್ರಯೋಗ ಪರಿಣಿತಮತಿಗಳ್ ಎಂದು ಅಮೋಘ ವರ್ಷನಿಂದ ಬಣ್ಣಿಸಲ್ಪಟ್ಟ ಜನಪದವನ್ನೊಳಗೊಂಡ ಹೈದರಾಬಾದ್ ಕರ್ನಾಟಕದ ವಸ್ತುಸ್ಥಿತಿ ತಿಳಿಯಬೇಕೆಂದರೆ ನಂಜುಡಪ್ಪ ವರದಿಯತ್ತ ಒಮ್ಮೆ ಕಣ್ಣಾಡಿಸಬೇಕು. ಈ ವರದಿಯ ಪ್ರಕಾರ ಹೈ.ಕ.ದ ಒಟ್ಟು 31 ತಾಲೂಕುಗಳಲ್ಲಿ 21 ಅತ್ಯಂತ ಹಿಂದುಳಿದ, 5 ಅತಿ ಹಿಂದುಳಿದ, 2 ಹಿಂದುಳಿದ ಹಾಗು ಕೇವಲ 3 ಮುಂದುವರಿದ ತಾಲೂಕುಗಳಿವೆ. ಈ ಹಿಂದೆ ಹೈದರಾಬಾದ್ ನಿಜಾಮರ ಕಾಲದಲ್ಲಿ ಫ್ಯೂಡಲ್ ಲ್ಯಾಂಡ್ ಲಾರ್ಡ್‍ಗಳ ದಬ್ಬಾಳಿಕೆಗೊಳಗಾಗಿದ್ದ ಈ ಭಾಗದ ಜನ ಸ್ವಾತಂತ್ರ್ಯವನ್ನೂ ಒಂದು ವರ್ಷ ತಡವಾಗಿಯೇ ಪಡೆದರು.ನಂತರ1956 ರಲ್ಲಿ ಕರ್ನಾಟಕ ಏಕೀಕರಣದ ಫಲವಾಗಿ ಮೈಸೂರು ರಾಜ್ಯಕ್ಕೆ ಸೇರ್ಪಡೆಯಾದರು. ಹೈ.ಕರ್ನಾಟಕದ ಆರ್ಥಿಕತೆ ಮುಖ್ಯವಾಗಿ ಕೃಷಿಯನ್ನು ಅವಲಂಬಿಸಿದೆ. ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ಮಧ್ಯದ ಫಲವತ್ತಾದ ದೋ- ಅಬ್ ಪ್ರದೇಶವನ್ನೊಳಗೊಂಡಿದ್ದರೂ ಮಳೆಯ ಕೊರತೆ, ಸತತ ಬರಗಾಲ ಹಾಗೂ ನೀರಾವರಿ ಯೋಜನೆಗಳ ಕುಂಟುವಿಕೆಯಿಂದಾಗಿ ನಿರೀಕ್ಷಿತ ಪ್ರಮಾಣದ ಕೃಷಿ ಉತ್ಪಾದನೆ ಸಾಧ್ಯವಾಗದೇ ಜನ ಪದೇಪದೇ ಮುಂಬಯಿ, ಪುಣೆ ಹಾಗೂ ಗೋವಾಗಳಿಗೆ ಗುಳೆ ಹೋಗುವಂತಾಗಿದೆ.ಬ್ರಿಟಿಷ್ ಆಳ್ವಿಕೆಯಲ್ಲಿ ಪ್ರಾರಂಭವಾದ ತುಂಗಭದ್ರಾ ಆಣೆಕಟ್ಟು ಹೊರತುಪಡಿಸಿದರೆ ಸ್ವಾತಂತ್ರ್ಯ ಬಂದ ಐದು ದಶಕಗಳಲ್ಲಿ ಒಂದೇ ಒಂದು ನೀರಾವರಿ ಯೋಜನೆಯೂ ಅನುಷ್ಠಾನಕ್ಕೆ ಬರಲಿಲ್ಲ. ಆದರೆ ಹಳೇ ಮೈಸೂರು ಭಾಗದಲ್ಲಿ ಕಬಿನಿ,ಹೇಮಾವತಿಯಂಥಾ ಹಲವಾರು ನೀರಾವರಿ ಯೋಜನೆಗಳು ಯಶಸ್ವಿಯಾಗಿ ಜಾರಿಗೆ ಬಂದವು.ಕಳೆದೆರಡು ದಶಕಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಲ್ಪ ಸ್ವಲ್ಪ ಅನುಷ್ಠಾನದಿಂದಾಗಿ ಐದಾರು ತಾಲ್ಲೂಕಿನ ರೈತರು ಇತ್ತೀಚೆಗೆ ನೀರಾವರಿಯ ರುಚಿ ನೋಡುತ್ತಿದ್ದಾರೆ.
ಇನ್ನು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದು , ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಸರ್ಕಾರ ನಿರಾಸಕ್ತಿ ತೋರಿದ ಕಾರಣ ಈ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಶಿಕ್ಷಣಕ್ಕಾಗಿ ಹೈದರಾಬಾದ್, ಧಾರವಾಡ, ಬೆಳಗಾವಿ ಹಾಗೂ ಬೆಂಗಳೂರಿಗೆ ಹೋಗುವ ಪರಿಸ್ಥಿತಿ ಇತ್ತೀಚಿನವರೆಗೂ ಇತ್ತು.
ರಾಜಕೀಯವಾಗಿ ಹೇಳುವುದಾದರೆ ವೀರೇಂದ್ರ ಪಾಟೀಲ್ ಹಾಗೂ ಧರಂಸಿಂಗ್ ಈ ಭಾಗದಿಂದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿಯೂ ಸಹ ಇಲ್ಲಿನ ಜನ ಪ್ರತಿನಿಧಿಗಳ ಇಚ್ಛಾಶಕ್ತಿ ಮತ್ತು ಬದ್ಧತೆಯ ಕೊರತೆಯಿಂದಾಗಿ ಯಾವುದೇ ಮಹತ್ವದ ಯೋಜನೆಗಳನ್ನು ರೂಪಿಸಲಾಗಲಿಲ್ಲ.
ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂಬ ನಾಮಕಾವಸ್ಥೆ ಸಂಸ್ಥೆಯನ್ನು ಸ್ಥಾಪಿಸಿದರೂ ಸರಿಯಾದ ಮಾರ್ಗಸೂಚಿಗಳಿಲ್ಲದೆ ಕೇವಲ ರಸ್ತೆ, ಕಟ್ಟಡಗಳನ್ನು ನಿರ್ಮಿಸುವ ಇನ್ನೊಂದು ಏಜೆನ್ಸಿಯಾಗಿ ಮಾರ್ಪಾಡಾಯಿತು. ರಾಜ್ಯದಲ್ಲಿರುವ ನಾಲ್ಕು ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಎರಡು ಹೈದರಾಬಾದ್ ಕರ್ನಾಟಕದಲ್ಲಿವೆ.(ಬಳ್ಳಾರಿ ಮತ್ತು ರಾಯಚೂರು) ಬೇಸಿಗೆಯಲ್ಲಿ 42 ಡಿಗ್ರಿಗೂ ಅಧಿಕ ತಾಪಮಾನವಿರುವ ಈ ಜಿಲ್ಲೆಗಳಲ್ಲಿ ಇನ್ನೂ ಎರಡು ಉಷ್ಣ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಿದರೂ ಜನರು ಹಲ್ಲು ಕಚ್ಚಿ ಸಹಿಸಿಕೊಂಡು ಹೋಗುತ್ತಾರೆ.( ಮೈಸೂರಿನ ಚಾಮಲಾಪುರದ ಉಷ್ಣ ವಿದ್ಯುತ್ ಸ್ಥಾವರಕ್ಕೆ ಬಂದ ಪ್ರತಿರೋಧವನ್ನು ನೆನಪಿಸಿಕೊಳ್ಳಿ) ಬಹುಶಃ ಕಲ್ಯಾಣ ಕರ್ನಾಟಕದ ಶರಣರು ಮತ್ತು ತತ್ವಪದಕಾರರ ವಾರಸತ್ವದಿಂದಾಗಿ ಈ ಭಾಗದ ಜನರು ಪಡೆದುಕೊಂಡಿರುವ ಸಹಿಷ್ಣುತೆ ಹಾಗೂ ಸ್ಥಿತಪ್ರಜ್ಞತೆಗಳೇ ಇಲ್ಲಿನ ಜನಪ್ರತಿನಿಧಿಗಳಿಗೆ ವರವಾಗಿ ಪರಿಣಮಿಸಿವೆ. ಹಾಗಾಗಿ ಅವರು ಪರ್ಸೆಂಟೇಜ್ ಅಭಿವೃದ್ಧಿಯಲ್ಲಿ ಮುಳುಗಿ ತಮ್ಮ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿ ಮೊಮ್ಮಕ್ಕಳಿಗಾಗುವಷ್ಟು ಸಂಪತ್ತು ಗಳಿಸುವುದರಲ್ಲಿ ತಲ್ಲೀನರಾಗಿ ಜನಹಿತವನ್ನೇ ಮರೆತಿದ್ದಾರೆ.ಶೋಷಿತ ಸಮುದಾಯದಿಂದ ಬಂದ ನಾಯಕರುಗಳು ಕೂಡಾ ತಾವು ಬದುಕಿರುವಾಗಲೇ ಮಕ್ಕಳು ಮರಿಗಳಿಗೆ ಎಮ್.ಎಲ್.ಎ, ಎಂ.ಎಲ್.ಸಿ.ಹಾಗೂ ಮಂತ್ರಿ ಪದವಿಗಳನ್ನು ಕೊಡಿಸುವ ಮೂಲಕ ಅವರಿಗೊಂದು ನೆಲೆ ಕಲ್ಪಿಸುವ ಅತ್ಯವಸರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಒಟ್ಟಾರೆ ಹೇಳುವುದಾದರೆ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ , (ಶಾಸನ ರಚನೆಯ ಅಧಿಕಾರವನ್ನು ಹೊರತುಪಡಿಸಿ ಹಣಕಾಸು, ಕಾರ್ಯ ನಿರ್ವಾಹಕ, ಆಡಳಿತಾತ್ಮಕ ಹೀಗೆ ಎಲ್ಲಾ ಅಧಿಕಾರಗಳನ್ನೊಳಗೊಂಡ) ಸ್ವಾಯತ್ತ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯನ್ನಾಗಿ ಪುನರ್‍ರಚನೆ ಮಾಡುವುದರ ಮೂಲಕ ಮಾತ್ರ ಈ ಭಾಗದ ಸರ್ವಾಂಗೀಣ ಪ್ರಗತಿ ಸಾಧ್ಯ. ಅದುವರೆಗೂ 371ಜೆ ಎಂಬ ಮೂಗಿಗೆ ಸವರಿದ ತುಪ್ಪದ ವಾಸನೆಯಲ್ಲಿಯೇ ತೃಪ್ತಿ ಪಡಬೇಕಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...