Homeರಾಜಕೀಯಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

ಹೈ.ಕ.: ಹೈರಾಣಾದ ಜನರು, ಆರಾಮಾಗಿರೋ ಅಧಿಕಾರಸ್ಥರು

- Advertisement -
- Advertisement -

 ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕುರಿತೋದದೆಯುಂ ಕಾವ್ಯ ಪ್ರಯೋಗ ಪರಿಣಿತಮತಿಗಳ್ ಎಂದು ಅಮೋಘ ವರ್ಷನಿಂದ ಬಣ್ಣಿಸಲ್ಪಟ್ಟ ಜನಪದವನ್ನೊಳಗೊಂಡ ಹೈದರಾಬಾದ್ ಕರ್ನಾಟಕದ ವಸ್ತುಸ್ಥಿತಿ ತಿಳಿಯಬೇಕೆಂದರೆ ನಂಜುಡಪ್ಪ ವರದಿಯತ್ತ ಒಮ್ಮೆ ಕಣ್ಣಾಡಿಸಬೇಕು. ಈ ವರದಿಯ ಪ್ರಕಾರ ಹೈ.ಕ.ದ ಒಟ್ಟು 31 ತಾಲೂಕುಗಳಲ್ಲಿ 21 ಅತ್ಯಂತ ಹಿಂದುಳಿದ, 5 ಅತಿ ಹಿಂದುಳಿದ, 2 ಹಿಂದುಳಿದ ಹಾಗು ಕೇವಲ 3 ಮುಂದುವರಿದ ತಾಲೂಕುಗಳಿವೆ. ಈ ಹಿಂದೆ ಹೈದರಾಬಾದ್ ನಿಜಾಮರ ಕಾಲದಲ್ಲಿ ಫ್ಯೂಡಲ್ ಲ್ಯಾಂಡ್ ಲಾರ್ಡ್‍ಗಳ ದಬ್ಬಾಳಿಕೆಗೊಳಗಾಗಿದ್ದ ಈ ಭಾಗದ ಜನ ಸ್ವಾತಂತ್ರ್ಯವನ್ನೂ ಒಂದು ವರ್ಷ ತಡವಾಗಿಯೇ ಪಡೆದರು.ನಂತರ1956 ರಲ್ಲಿ ಕರ್ನಾಟಕ ಏಕೀಕರಣದ ಫಲವಾಗಿ ಮೈಸೂರು ರಾಜ್ಯಕ್ಕೆ ಸೇರ್ಪಡೆಯಾದರು. ಹೈ.ಕರ್ನಾಟಕದ ಆರ್ಥಿಕತೆ ಮುಖ್ಯವಾಗಿ ಕೃಷಿಯನ್ನು ಅವಲಂಬಿಸಿದೆ. ಕೃಷ್ಣಾ ಮತ್ತು ತುಂಗಭದ್ರಾ ನದಿಗಳ ಮಧ್ಯದ ಫಲವತ್ತಾದ ದೋ- ಅಬ್ ಪ್ರದೇಶವನ್ನೊಳಗೊಂಡಿದ್ದರೂ ಮಳೆಯ ಕೊರತೆ, ಸತತ ಬರಗಾಲ ಹಾಗೂ ನೀರಾವರಿ ಯೋಜನೆಗಳ ಕುಂಟುವಿಕೆಯಿಂದಾಗಿ ನಿರೀಕ್ಷಿತ ಪ್ರಮಾಣದ ಕೃಷಿ ಉತ್ಪಾದನೆ ಸಾಧ್ಯವಾಗದೇ ಜನ ಪದೇಪದೇ ಮುಂಬಯಿ, ಪುಣೆ ಹಾಗೂ ಗೋವಾಗಳಿಗೆ ಗುಳೆ ಹೋಗುವಂತಾಗಿದೆ.ಬ್ರಿಟಿಷ್ ಆಳ್ವಿಕೆಯಲ್ಲಿ ಪ್ರಾರಂಭವಾದ ತುಂಗಭದ್ರಾ ಆಣೆಕಟ್ಟು ಹೊರತುಪಡಿಸಿದರೆ ಸ್ವಾತಂತ್ರ್ಯ ಬಂದ ಐದು ದಶಕಗಳಲ್ಲಿ ಒಂದೇ ಒಂದು ನೀರಾವರಿ ಯೋಜನೆಯೂ ಅನುಷ್ಠಾನಕ್ಕೆ ಬರಲಿಲ್ಲ. ಆದರೆ ಹಳೇ ಮೈಸೂರು ಭಾಗದಲ್ಲಿ ಕಬಿನಿ,ಹೇಮಾವತಿಯಂಥಾ ಹಲವಾರು ನೀರಾವರಿ ಯೋಜನೆಗಳು ಯಶಸ್ವಿಯಾಗಿ ಜಾರಿಗೆ ಬಂದವು.ಕಳೆದೆರಡು ದಶಕಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಅಲ್ಪ ಸ್ವಲ್ಪ ಅನುಷ್ಠಾನದಿಂದಾಗಿ ಐದಾರು ತಾಲ್ಲೂಕಿನ ರೈತರು ಇತ್ತೀಚೆಗೆ ನೀರಾವರಿಯ ರುಚಿ ನೋಡುತ್ತಿದ್ದಾರೆ.
ಇನ್ನು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದಿದ್ದು , ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಲು ಸರ್ಕಾರ ನಿರಾಸಕ್ತಿ ತೋರಿದ ಕಾರಣ ಈ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಶಿಕ್ಷಣಕ್ಕಾಗಿ ಹೈದರಾಬಾದ್, ಧಾರವಾಡ, ಬೆಳಗಾವಿ ಹಾಗೂ ಬೆಂಗಳೂರಿಗೆ ಹೋಗುವ ಪರಿಸ್ಥಿತಿ ಇತ್ತೀಚಿನವರೆಗೂ ಇತ್ತು.
ರಾಜಕೀಯವಾಗಿ ಹೇಳುವುದಾದರೆ ವೀರೇಂದ್ರ ಪಾಟೀಲ್ ಹಾಗೂ ಧರಂಸಿಂಗ್ ಈ ಭಾಗದಿಂದ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿಯೂ ಸಹ ಇಲ್ಲಿನ ಜನ ಪ್ರತಿನಿಧಿಗಳ ಇಚ್ಛಾಶಕ್ತಿ ಮತ್ತು ಬದ್ಧತೆಯ ಕೊರತೆಯಿಂದಾಗಿ ಯಾವುದೇ ಮಹತ್ವದ ಯೋಜನೆಗಳನ್ನು ರೂಪಿಸಲಾಗಲಿಲ್ಲ.
ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಎಂಬ ನಾಮಕಾವಸ್ಥೆ ಸಂಸ್ಥೆಯನ್ನು ಸ್ಥಾಪಿಸಿದರೂ ಸರಿಯಾದ ಮಾರ್ಗಸೂಚಿಗಳಿಲ್ಲದೆ ಕೇವಲ ರಸ್ತೆ, ಕಟ್ಟಡಗಳನ್ನು ನಿರ್ಮಿಸುವ ಇನ್ನೊಂದು ಏಜೆನ್ಸಿಯಾಗಿ ಮಾರ್ಪಾಡಾಯಿತು. ರಾಜ್ಯದಲ್ಲಿರುವ ನಾಲ್ಕು ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಎರಡು ಹೈದರಾಬಾದ್ ಕರ್ನಾಟಕದಲ್ಲಿವೆ.(ಬಳ್ಳಾರಿ ಮತ್ತು ರಾಯಚೂರು) ಬೇಸಿಗೆಯಲ್ಲಿ 42 ಡಿಗ್ರಿಗೂ ಅಧಿಕ ತಾಪಮಾನವಿರುವ ಈ ಜಿಲ್ಲೆಗಳಲ್ಲಿ ಇನ್ನೂ ಎರಡು ಉಷ್ಣ ವಿದ್ಯುತ್ ಸ್ಥಾವರಗಳನ್ನು ಸ್ಥಾಪಿಸಿದರೂ ಜನರು ಹಲ್ಲು ಕಚ್ಚಿ ಸಹಿಸಿಕೊಂಡು ಹೋಗುತ್ತಾರೆ.( ಮೈಸೂರಿನ ಚಾಮಲಾಪುರದ ಉಷ್ಣ ವಿದ್ಯುತ್ ಸ್ಥಾವರಕ್ಕೆ ಬಂದ ಪ್ರತಿರೋಧವನ್ನು ನೆನಪಿಸಿಕೊಳ್ಳಿ) ಬಹುಶಃ ಕಲ್ಯಾಣ ಕರ್ನಾಟಕದ ಶರಣರು ಮತ್ತು ತತ್ವಪದಕಾರರ ವಾರಸತ್ವದಿಂದಾಗಿ ಈ ಭಾಗದ ಜನರು ಪಡೆದುಕೊಂಡಿರುವ ಸಹಿಷ್ಣುತೆ ಹಾಗೂ ಸ್ಥಿತಪ್ರಜ್ಞತೆಗಳೇ ಇಲ್ಲಿನ ಜನಪ್ರತಿನಿಧಿಗಳಿಗೆ ವರವಾಗಿ ಪರಿಣಮಿಸಿವೆ. ಹಾಗಾಗಿ ಅವರು ಪರ್ಸೆಂಟೇಜ್ ಅಭಿವೃದ್ಧಿಯಲ್ಲಿ ಮುಳುಗಿ ತಮ್ಮ ಮಕ್ಕಳು, ಮೊಮ್ಮಕ್ಕಳು ಹಾಗೂ ಮರಿ ಮೊಮ್ಮಕ್ಕಳಿಗಾಗುವಷ್ಟು ಸಂಪತ್ತು ಗಳಿಸುವುದರಲ್ಲಿ ತಲ್ಲೀನರಾಗಿ ಜನಹಿತವನ್ನೇ ಮರೆತಿದ್ದಾರೆ.ಶೋಷಿತ ಸಮುದಾಯದಿಂದ ಬಂದ ನಾಯಕರುಗಳು ಕೂಡಾ ತಾವು ಬದುಕಿರುವಾಗಲೇ ಮಕ್ಕಳು ಮರಿಗಳಿಗೆ ಎಮ್.ಎಲ್.ಎ, ಎಂ.ಎಲ್.ಸಿ.ಹಾಗೂ ಮಂತ್ರಿ ಪದವಿಗಳನ್ನು ಕೊಡಿಸುವ ಮೂಲಕ ಅವರಿಗೊಂದು ನೆಲೆ ಕಲ್ಪಿಸುವ ಅತ್ಯವಸರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
ಒಟ್ಟಾರೆ ಹೇಳುವುದಾದರೆ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಚುನಾಯಿತ ಪ್ರತಿನಿಧಿಗಳನ್ನೊಳಗೊಂಡ , (ಶಾಸನ ರಚನೆಯ ಅಧಿಕಾರವನ್ನು ಹೊರತುಪಡಿಸಿ ಹಣಕಾಸು, ಕಾರ್ಯ ನಿರ್ವಾಹಕ, ಆಡಳಿತಾತ್ಮಕ ಹೀಗೆ ಎಲ್ಲಾ ಅಧಿಕಾರಗಳನ್ನೊಳಗೊಂಡ) ಸ್ವಾಯತ್ತ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯನ್ನಾಗಿ ಪುನರ್‍ರಚನೆ ಮಾಡುವುದರ ಮೂಲಕ ಮಾತ್ರ ಈ ಭಾಗದ ಸರ್ವಾಂಗೀಣ ಪ್ರಗತಿ ಸಾಧ್ಯ. ಅದುವರೆಗೂ 371ಜೆ ಎಂಬ ಮೂಗಿಗೆ ಸವರಿದ ತುಪ್ಪದ ವಾಸನೆಯಲ್ಲಿಯೇ ತೃಪ್ತಿ ಪಡಬೇಕಷ್ಟೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...