HomeUncategorizedಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

ಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

- Advertisement -
- Advertisement -

 ಪಿ.ಕೆ. ಮಲ್ಲನಗೌಡರ್ |

ಹೈದರಾಬಾದ್ ಕರ್ನಾಟಕವನ್ನೂ ಒಳಗೊಂಡ ಇಡೀ ಉತ್ತರ ಕರ್ನಾಟಕ ಹಿಂಉಳಿದಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈ ಬರಹದ ಉದ್ದೇಶವೆಂದರೆ, ರಾಜಕಾರಣಿಗಳು ಆಗಾಗ ಈ ಅನ್ಯಾಯದ ವಿಷಯ ಎತ್ತುವ ಕುರಿತದ್ದು.
ಸಮಸ್ಯೆ ಎಂದರೆ, ಉತ್ತರ ಕರ್ನಾಟಕದ ಹಿನ್ನಡೆಗೆ ಕಾರಣ ಏನು ಎಂಬ ಜನರ ಪ್ರಶ್ನೆಗೆ ಉತ್ತರಿಸಬೇಕಾದವರೇ ಈ ವಿಷಯವನ್ನುತಮ್ಮ ಸ್ವಹಿತಕ್ಕಾಗಿ ಬಳಸಿಕೊಳ್ಳುತ್ತಿರುವುದು. ಇನ್ನೂ ಒಂದು ಮುಖ್ಯ ಅಂಶವೆಂದರೆ, ಈ ಹಿಂದುಳಿದಿರುವಿಕೆಗೆ ಮುಖ್ಯ ಕಾರಣ ಅವರ ರಾಜಕೀಯ ಇಚ್ಛಾಶಕ್ತಿಯ ಕೊರತೆ!ಸಭಾನಾಯಕನ ಸ್ಥಾನ ಸಿಗದೇ ಹೋದಾಗ, ಧುತ್ತನೇ ಉತ್ತರ ಕರ್ನಾಟಕ ನೆನಪಾಗುತ್ತದೆ. ಸಚಿವ ಸ್ಥಾನ ಮಿಸ್ ಆದಾಗ, ಡಿಸಿಎಂ ಹುದ್ದೆಯ ಮೇಲೆ ಆಸೆ ಚಿಗುರಿದಾಗ ಮತ್ತದೇ ಪ್ರಶ್ನೆ: ಉತ್ತರ ಕರ್ನಾಟಕಕ್ಕೆ ಅನ್ಯಾಯ! ಅನ್ಯಾಯ ಪ್ರಶ್ನಿಸಿ, ನ್ಯಾಯ ಪಡೆಯಬೇಕಾದ ವೇದಿಕೆಯನ್ನೆಂದೂ ಬಳಸಿಕೊಳ್ಳದವರು ಹೀಗೆ ಮಾತಾಡುವುದೇ ಹಾಸ್ಯಾಸ್ಪದವಾಗಿದೆ.

ಅಭಿವೃದ್ಧಿ ಕೆಲಸಗಳಾಗಲು ಸ್ಥಾನಮಾನ ಬೇಕು ನಿಜ, ಆದರೆ ಅದೇ ಎಲ್ಲವೂ ಅಲ್ಲ. ಬಿಡುಗಡೆಯಾದ ಅನುದಾನಗಳ ಸದ್ಬಳಕೆ ಮಾಡದವರು ತಮಗೆ ಸ್ಥಾನ ಸಿಗದೇ ಹೋದಾಗ ಅನ್ಯಾಯದ ಕೂಗು ಎತ್ತಿರೆ ಜನ ಕೂಡ ಸ್ಪಂದಿಸಿಲ್ಲ. ಡಾ. ನಂಜುಂಡಪ್ಪ ಸಮಿತಿಯ ವರದಿಯ ಪರಿಣಾಮವಾಗಿ, 2007ರಿಂದ ದೊರೆಯುತ್ತ ಬಂದ ವಿಶೇಷ ಅನುದಾನದ ಬಳಕೆ ಕಣ್ಣಿಗಂತೂ ಕಾಣುತ್ತಿಲ್ಲ. ಮೇನಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಂದ ಮೇಲೆ ಬಿಜೆಪಿ ‘ಉತ್ತರ ಕರ್ನಾಟಕಕ್ಕೆ ಅನ್ಯಾಯ’ ಎನ್ನುವುದನ್ನು ಬಾಯಿಪಾಠ ಮಾಡಿಕೊಂಡಿದೆ. ಕುಮಾರಸ್ವಾಮಿ ಬಜೆಟ್‍ನಲ್ಲಿ ದಕ್ಷಿಣ ಕರ್ನಾಟಕಕ್ಕೆ ಹೆಚ್ಚಿನ ಯೋಜನೆ ದೊರೆತಿದ್ದೂ ನಿಜ. ಅದನ್ನು ಸದನದಲ್ಲಿ ಎತ್ತಿ ಹೋರಾಡಬೇಕಾದ ನಾಯಕರು, ‘ಪ್ರತ್ಯೇಕ ರಾಜ್ಯ’ ಎಂದು ಆಗಾಗ ಕೂಗು ಹಾಕುವ ಕೆಲವು ಸಮಿತಿಗಳ ಪರ ನಿಲ್ಲುತ್ತ ಬಂದಿದ್ದಾರೆ. ಅಗಸ್ಟ್‍ನಲ್ಲಿ ಬಿಜೆಪಿಯ ಶ್ರೀರಾಮುಲು, ‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ನಾಯಕತ್ವ ವಹಿಸಲು ಸಿದ್ಧ’ ಎಂದರು. ತಾವು ಅಧಿಕಾರದಲ್ಲಿದ್ದಾಗ ಈ ಭಾಗದ ನೈಸರ್ಗಿಕ ಸಂಪತ್ತನ್ನೇ ಲೂಟಿ ಹೊಡೆದ ಜನ ಇಲ್ಲಿಗಾದ ಅನ್ಯಾಯದ ಬಗ್ಗೆ ಮಾತಾಡುವುದೇ ಒಂದು ವ್ಯಂಗ್ಯ.
ಅಸಮಾನತೆಗೆ ಹಲವು ಕಾರಣ

ರಾಜ್ಯದಲ್ಲಿನ ಪ್ರಾದೇಶಿಕವಾರು ಅಸಮಾನತೆಗೆ ಹಲವಾರು ಕಾರಣಗಳಿವೆ. ಅನುದಾನ ಬಿಡುಗಡೆಯಲ್ಲಿನ ತಾರತಮ್ಯವಷ್ಟೇ ಅಲ್ಲದೇ, ಈ ಭಾಗದ ರಾಜಕಾರಣಿಗಳಿಚ್ಛಾಶಕ್ತಿಯ ಕೊರತೆಯೂ ಇದಕ್ಕೆ ಕಾರಣವಾಗಿದೆ. ಭೂ ಸುಧಾರಣೆ ಈ ಭಾಗದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗದೇ ಇರುವುದು ಕೂಡ ಇಲ್ಲಿನ ಅಸಮಾನತೆಯ ಮೂಲಗಳಲ್ಲಿ ಒಂದಾಗಿದೆ. ಹಿಂದೆ ಬ್ರಾಹ್ಮಣರ ಹಿಡಿತದಲ್ಲಿದ್ದ ಪಾರಭೂಮಿ ಕ್ರಮೇಣ ಲಿಂಗಾಯತರ ಕೈಗೆ ಬಂತು. ಭೂ ಸುಧಾರಣೆಯ ಸಂದರ್ಭದಲ್ಲಿ ಈ ಭೂಮಿಯ ಹಂಚಿಕೆ ಸರಿಯಾಗಿ ಆಗಲೇ ಇಲ್ಲ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ತಯಾರಿಸಿದ ಮಾನವ ಅಭಿವೃದ್ಧಿ ಸೂಚ್ಯಂಕ ವರದಿಯ ಪ್ರಕಾರ, ಪಟ್ಟಿಯ ಕೊನೆಯಲ್ಲಿರುವ 13 ಜಿಲ್ಲೆಗಳ ಪೈಕಿ 11 ಉತ್ತರ ಕರ್ನಾಟಕದ ಭಾಗದಲ್ಲೇ ಇವೆ. ಈ ಅಧ್ಯಯನದ ಪ್ರಕಾರ, ಪರಿಶಿಷ್ಟರು ಹೆಚ್ಚಿರುವ ಜಿಲ್ಲೆಗಳಲ್ಲಿ ಮಾನವ ಅಭಿವೃದ್ಧಿ ಮಟ್ಟ ಕಡಿಮೆ ಪ್ರಮಾಣದಲ್ಲಿದೆ. ಈ ಅಂಶದತ್ತಲೂ ಗಮನ ಹರಿಸಿನೋಡಿದಾಗ ಮಾತ್ರ ಪ್ರಾದೇಶಿಕ ಅಸಮಾನತೆ ಮತ್ತು ಅದಕ್ಕೆ ಪರಿಹಾರದ ಕಾರ್ಯಕ್ರಮಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲು ಸಾಧ್ಯ. ಆರ್ಥಿಕ ತಜ್ಞ ಪ್ರೊ.ಆರ್.ಎಸ್. ದೇಶಪಾಂಡೆ ಹೇಳುವಂತೆ, ‘ಹಿಂದುಳಿದಪ್ರೇಶಗಳ ಅಭಿವೃದ್ಧಿಗೆ ವೆಚ್ಚ ಮಾಡುವ ವಲಯವನ್ನು ಗುರುತಿಸುವ ಲೆಕ್ಕಾಚಾರದಲ್ಲೇ ಎಡವುತ್ತಿದ್ದೇವೆ.ಅದೇ ಹಿನ್ನಡೆಗೆ ಕಾರಣ ಎನಿಸುತ್ತದೆ…..’
ಪ್ರಾದೇಶಿಕ ಅಸಮಾನತೆ ನಿವಾರಣೆಗೆ ದೊಡ್ಡ ಮೊತ್ತದವಿಶೇಷ ಅನುದಾನದ ಅಗತ್ಯವಿದೆ. ಅದಕ್ಕಿಂತ ಮುಖ್ಯವಾಗಿ ಈ ಅನುದಾನವನ್ನು ಯಾವ ವಲಯದಲ್ಲಿ ಎಷ್ಟು ಪ್ರಮಾಣದಲ್ಲಿ ವಿನಿಯೋಗಿಸಬೇಕು ಎಂಬ ಬಗ್ಗೆ ಸ್ಷಷ್ಟ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಬೇಕಿದೆ.
ಸದ್ಯ ಉತ್ತರ ಕರ್ನಾಟಕಕ್ಕೆ ಅನ್ಯಾಯ ಎನ್ನುತ್ತಿರುವ ಅತೃಪ್ತ ಜನಪ್ರತಿನಿಧಿಗಳು, ಮೊದಲು ತಮ್ಮ ಕ್ಷೇತ್ರಗಳತ್ತ ನೋಡಲಿ. ಭೀಕರ ಬರದ ಭೀತಿಯಲ್ಲಿರುವ ಸಂದರ್ಭದಲ್ಲಿ ತಾವೇನು ಮಾಡುತ್ತಿದ್ದೇವೆ ಎಂಬ ಅರಿವು ಅವರಿಗಿರಲಿ. ನರೇಗಾ ಕಾಮಗಾರಿಗೆ ಹರಿದುಬರುವ ಹಣ ಸದುಪಯೋಗವಾಗಿದೆಯೇ, ಕನ್ನಡ ಶಾಲೆಗಳಲ್ಲಿ ಶಿಕ್ಷಕರಿಲ್ಲವೇ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಿತಿಯೇನು- ಇಂತಹ ತಳಮಟ್ಟದ ಸಮಸ್ಯೆಗಳ ಪರಿಹಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದನ್ನು ಮೊದಲು ರೂಢಿಸಿಕೊಳ್ಳಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...