HomeUncategorizedಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

ಉತ್ತರ ಕರ್ನಾಟಕಕ್ಕೆ ಅನ್ಯಾಯ?: ಉತ್ತರಿಸಬೇಕಾದವರೇ ಎತ್ತುವ ಪ್ರಶ್ನೆ!

- Advertisement -
- Advertisement -

 ಪಿ.ಕೆ. ಮಲ್ಲನಗೌಡರ್ |

ಹೈದರಾಬಾದ್ ಕರ್ನಾಟಕವನ್ನೂ ಒಳಗೊಂಡ ಇಡೀ ಉತ್ತರ ಕರ್ನಾಟಕ ಹಿಂಉಳಿದಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಈ ಬರಹದ ಉದ್ದೇಶವೆಂದರೆ, ರಾಜಕಾರಣಿಗಳು ಆಗಾಗ ಈ ಅನ್ಯಾಯದ ವಿಷಯ ಎತ್ತುವ ಕುರಿತದ್ದು.
ಸಮಸ್ಯೆ ಎಂದರೆ, ಉತ್ತರ ಕರ್ನಾಟಕದ ಹಿನ್ನಡೆಗೆ ಕಾರಣ ಏನು ಎಂಬ ಜನರ ಪ್ರಶ್ನೆಗೆ ಉತ್ತರಿಸಬೇಕಾದವರೇ ಈ ವಿಷಯವನ್ನುತಮ್ಮ ಸ್ವಹಿತಕ್ಕಾಗಿ ಬಳಸಿಕೊಳ್ಳುತ್ತಿರುವುದು. ಇನ್ನೂ ಒಂದು ಮುಖ್ಯ ಅಂಶವೆಂದರೆ, ಈ ಹಿಂದುಳಿದಿರುವಿಕೆಗೆ ಮುಖ್ಯ ಕಾರಣ ಅವರ ರಾಜಕೀಯ ಇಚ್ಛಾಶಕ್ತಿಯ ಕೊರತೆ!ಸಭಾನಾಯಕನ ಸ್ಥಾನ ಸಿಗದೇ ಹೋದಾಗ, ಧುತ್ತನೇ ಉತ್ತರ ಕರ್ನಾಟಕ ನೆನಪಾಗುತ್ತದೆ. ಸಚಿವ ಸ್ಥಾನ ಮಿಸ್ ಆದಾಗ, ಡಿಸಿಎಂ ಹುದ್ದೆಯ ಮೇಲೆ ಆಸೆ ಚಿಗುರಿದಾಗ ಮತ್ತದೇ ಪ್ರಶ್ನೆ: ಉತ್ತರ ಕರ್ನಾಟಕಕ್ಕೆ ಅನ್ಯಾಯ! ಅನ್ಯಾಯ ಪ್ರಶ್ನಿಸಿ, ನ್ಯಾಯ ಪಡೆಯಬೇಕಾದ ವೇದಿಕೆಯನ್ನೆಂದೂ ಬಳಸಿಕೊಳ್ಳದವರು ಹೀಗೆ ಮಾತಾಡುವುದೇ ಹಾಸ್ಯಾಸ್ಪದವಾಗಿದೆ.

ಅಭಿವೃದ್ಧಿ ಕೆಲಸಗಳಾಗಲು ಸ್ಥಾನಮಾನ ಬೇಕು ನಿಜ, ಆದರೆ ಅದೇ ಎಲ್ಲವೂ ಅಲ್ಲ. ಬಿಡುಗಡೆಯಾದ ಅನುದಾನಗಳ ಸದ್ಬಳಕೆ ಮಾಡದವರು ತಮಗೆ ಸ್ಥಾನ ಸಿಗದೇ ಹೋದಾಗ ಅನ್ಯಾಯದ ಕೂಗು ಎತ್ತಿರೆ ಜನ ಕೂಡ ಸ್ಪಂದಿಸಿಲ್ಲ. ಡಾ. ನಂಜುಂಡಪ್ಪ ಸಮಿತಿಯ ವರದಿಯ ಪರಿಣಾಮವಾಗಿ, 2007ರಿಂದ ದೊರೆಯುತ್ತ ಬಂದ ವಿಶೇಷ ಅನುದಾನದ ಬಳಕೆ ಕಣ್ಣಿಗಂತೂ ಕಾಣುತ್ತಿಲ್ಲ. ಮೇನಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಂದ ಮೇಲೆ ಬಿಜೆಪಿ ‘ಉತ್ತರ ಕರ್ನಾಟಕಕ್ಕೆ ಅನ್ಯಾಯ’ ಎನ್ನುವುದನ್ನು ಬಾಯಿಪಾಠ ಮಾಡಿಕೊಂಡಿದೆ. ಕುಮಾರಸ್ವಾಮಿ ಬಜೆಟ್‍ನಲ್ಲಿ ದಕ್ಷಿಣ ಕರ್ನಾಟಕಕ್ಕೆ ಹೆಚ್ಚಿನ ಯೋಜನೆ ದೊರೆತಿದ್ದೂ ನಿಜ. ಅದನ್ನು ಸದನದಲ್ಲಿ ಎತ್ತಿ ಹೋರಾಡಬೇಕಾದ ನಾಯಕರು, ‘ಪ್ರತ್ಯೇಕ ರಾಜ್ಯ’ ಎಂದು ಆಗಾಗ ಕೂಗು ಹಾಕುವ ಕೆಲವು ಸಮಿತಿಗಳ ಪರ ನಿಲ್ಲುತ್ತ ಬಂದಿದ್ದಾರೆ. ಅಗಸ್ಟ್‍ನಲ್ಲಿ ಬಿಜೆಪಿಯ ಶ್ರೀರಾಮುಲು, ‘ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ನಾಯಕತ್ವ ವಹಿಸಲು ಸಿದ್ಧ’ ಎಂದರು. ತಾವು ಅಧಿಕಾರದಲ್ಲಿದ್ದಾಗ ಈ ಭಾಗದ ನೈಸರ್ಗಿಕ ಸಂಪತ್ತನ್ನೇ ಲೂಟಿ ಹೊಡೆದ ಜನ ಇಲ್ಲಿಗಾದ ಅನ್ಯಾಯದ ಬಗ್ಗೆ ಮಾತಾಡುವುದೇ ಒಂದು ವ್ಯಂಗ್ಯ.
ಅಸಮಾನತೆಗೆ ಹಲವು ಕಾರಣ

ರಾಜ್ಯದಲ್ಲಿನ ಪ್ರಾದೇಶಿಕವಾರು ಅಸಮಾನತೆಗೆ ಹಲವಾರು ಕಾರಣಗಳಿವೆ. ಅನುದಾನ ಬಿಡುಗಡೆಯಲ್ಲಿನ ತಾರತಮ್ಯವಷ್ಟೇ ಅಲ್ಲದೇ, ಈ ಭಾಗದ ರಾಜಕಾರಣಿಗಳಿಚ್ಛಾಶಕ್ತಿಯ ಕೊರತೆಯೂ ಇದಕ್ಕೆ ಕಾರಣವಾಗಿದೆ. ಭೂ ಸುಧಾರಣೆ ಈ ಭಾಗದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗದೇ ಇರುವುದು ಕೂಡ ಇಲ್ಲಿನ ಅಸಮಾನತೆಯ ಮೂಲಗಳಲ್ಲಿ ಒಂದಾಗಿದೆ. ಹಿಂದೆ ಬ್ರಾಹ್ಮಣರ ಹಿಡಿತದಲ್ಲಿದ್ದ ಪಾರಭೂಮಿ ಕ್ರಮೇಣ ಲಿಂಗಾಯತರ ಕೈಗೆ ಬಂತು. ಭೂ ಸುಧಾರಣೆಯ ಸಂದರ್ಭದಲ್ಲಿ ಈ ಭೂಮಿಯ ಹಂಚಿಕೆ ಸರಿಯಾಗಿ ಆಗಲೇ ಇಲ್ಲ.

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ತಯಾರಿಸಿದ ಮಾನವ ಅಭಿವೃದ್ಧಿ ಸೂಚ್ಯಂಕ ವರದಿಯ ಪ್ರಕಾರ, ಪಟ್ಟಿಯ ಕೊನೆಯಲ್ಲಿರುವ 13 ಜಿಲ್ಲೆಗಳ ಪೈಕಿ 11 ಉತ್ತರ ಕರ್ನಾಟಕದ ಭಾಗದಲ್ಲೇ ಇವೆ. ಈ ಅಧ್ಯಯನದ ಪ್ರಕಾರ, ಪರಿಶಿಷ್ಟರು ಹೆಚ್ಚಿರುವ ಜಿಲ್ಲೆಗಳಲ್ಲಿ ಮಾನವ ಅಭಿವೃದ್ಧಿ ಮಟ್ಟ ಕಡಿಮೆ ಪ್ರಮಾಣದಲ್ಲಿದೆ. ಈ ಅಂಶದತ್ತಲೂ ಗಮನ ಹರಿಸಿನೋಡಿದಾಗ ಮಾತ್ರ ಪ್ರಾದೇಶಿಕ ಅಸಮಾನತೆ ಮತ್ತು ಅದಕ್ಕೆ ಪರಿಹಾರದ ಕಾರ್ಯಕ್ರಮಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲು ಸಾಧ್ಯ. ಆರ್ಥಿಕ ತಜ್ಞ ಪ್ರೊ.ಆರ್.ಎಸ್. ದೇಶಪಾಂಡೆ ಹೇಳುವಂತೆ, ‘ಹಿಂದುಳಿದಪ್ರೇಶಗಳ ಅಭಿವೃದ್ಧಿಗೆ ವೆಚ್ಚ ಮಾಡುವ ವಲಯವನ್ನು ಗುರುತಿಸುವ ಲೆಕ್ಕಾಚಾರದಲ್ಲೇ ಎಡವುತ್ತಿದ್ದೇವೆ.ಅದೇ ಹಿನ್ನಡೆಗೆ ಕಾರಣ ಎನಿಸುತ್ತದೆ…..’
ಪ್ರಾದೇಶಿಕ ಅಸಮಾನತೆ ನಿವಾರಣೆಗೆ ದೊಡ್ಡ ಮೊತ್ತದವಿಶೇಷ ಅನುದಾನದ ಅಗತ್ಯವಿದೆ. ಅದಕ್ಕಿಂತ ಮುಖ್ಯವಾಗಿ ಈ ಅನುದಾನವನ್ನು ಯಾವ ವಲಯದಲ್ಲಿ ಎಷ್ಟು ಪ್ರಮಾಣದಲ್ಲಿ ವಿನಿಯೋಗಿಸಬೇಕು ಎಂಬ ಬಗ್ಗೆ ಸ್ಷಷ್ಟ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಬೇಕಿದೆ.
ಸದ್ಯ ಉತ್ತರ ಕರ್ನಾಟಕಕ್ಕೆ ಅನ್ಯಾಯ ಎನ್ನುತ್ತಿರುವ ಅತೃಪ್ತ ಜನಪ್ರತಿನಿಧಿಗಳು, ಮೊದಲು ತಮ್ಮ ಕ್ಷೇತ್ರಗಳತ್ತ ನೋಡಲಿ. ಭೀಕರ ಬರದ ಭೀತಿಯಲ್ಲಿರುವ ಸಂದರ್ಭದಲ್ಲಿ ತಾವೇನು ಮಾಡುತ್ತಿದ್ದೇವೆ ಎಂಬ ಅರಿವು ಅವರಿಗಿರಲಿ. ನರೇಗಾ ಕಾಮಗಾರಿಗೆ ಹರಿದುಬರುವ ಹಣ ಸದುಪಯೋಗವಾಗಿದೆಯೇ, ಕನ್ನಡ ಶಾಲೆಗಳಲ್ಲಿ ಶಿಕ್ಷಕರಿಲ್ಲವೇ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಿತಿಯೇನು- ಇಂತಹ ತಳಮಟ್ಟದ ಸಮಸ್ಯೆಗಳ ಪರಿಹಾರದಲ್ಲಿ ಸಕ್ರಿಯವಾಗಿ ಭಾಗವಹಿಸುವುದನ್ನು ಮೊದಲು ರೂಢಿಸಿಕೊಳ್ಳಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...